Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:12 - ಕನ್ನಡ ಸತ್ಯವೇದವು J.V. (BSI)

12 ವಾರಕ್ಕೆ ಎರಡಾವರ್ತಿ ಉಪವಾಸ ಮಾಡುತ್ತೇನೆ; ನಾನು ಸಂಪಾದಿಸುವ ಎಲ್ಲಾದರಲ್ಲಿಯೂ ಹತ್ತರಲ್ಲೊಂದು ಪಾಲು ಕೊಡುತ್ತೇನೆ ಅಂದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ವಾರಕ್ಕೆ ಎರಡಾವರ್ತಿ ಉಪವಾಸಮಾಡುತ್ತೇನೆ; ನಾನು ಸಂಪಾದಿಸಿದ ಎಲ್ಲಾದರಲ್ಲಿಯೂ ಹತ್ತರಲ್ಲೊಂದು ಪಾಲು ಕೊಡುತ್ತೇನೆ’ ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಾನಾದರೋ ವಾರಕ್ಕೆ ಎರಡು ದಿನ ಉಪವಾಸವ್ರತವನ್ನು ಕೈಗೊಳ್ಳುತ್ತೇನೆ; ನನ್ನ ಆದಾಯದಲ್ಲಿ ಹತ್ತನೆಯ ಒಂದು ಪಾಲನ್ನು ನಿಮಗೆ ಸಲ್ಲಿಸುತ್ತೇನೆ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಾನಾದರೋ ವಾರದಲ್ಲಿ ಎರಡಾವರ್ತಿ ಉಪವಾಸ ಮಾಡುತ್ತೇನೆ. ಸಂಪಾದಿಸುವ ಪ್ರತಿಯೊಂದರಲ್ಲಿಯೂ ಹತ್ತನೆಯ ಒಂದು ಭಾಗವನ್ನು ನಿನಗೆ ಕೊಡುತ್ತೇನೆ!’ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ನಾನು ವಾರಕ್ಕೆ ಎರಡು ಸಾರಿ ಉಪವಾಸ ಮಾಡುತ್ತೇನೆ. ನನಗಿರುವ ಎಲ್ಲವುಗಳಲ್ಲಿ ದಶಾಂಶ ಕೊಡುತ್ತೇನೆ,’ ಎಂದು ಹೇಳಿ ತನಗೆ ತಾನೇ ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 “ಮಿಯಾ ವಾರಾತ್ ದೊನ್ ದಿಸ್ ಉಪಾಸ್ ಕರ್‍ತಾ, ಅನಿ ಮಾಜ್ಯಾ ಉತ್ಪನ್ನಾತ್ಲೊ ಧಾತ್ಲೊ ಎಕ್ ವಾಟೊ ತುಕಾ ದಿತಾ”, ಮನುನ್ ಮಾಗ್ನಿ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:12
24 ತಿಳಿವುಗಳ ಹೋಲಿಕೆ  

ಅಯ್ಯೋ ಫರಿಸಾಯರೇ, ನೀವು ಮರುಗ ಸದಾಪು ಮುಂತಾದ ಸಕಲ ಪಲ್ಯಗಳಲ್ಲಿ ಹತ್ತರಲ್ಲೊಂದು ಪಾಲುಕೊಡುತ್ತೀರಿ ಸರಿ; ಆದರೆ ನ್ಯಾಯವನ್ನೂ ದೇವರ ಪ್ರೀತಿಯನ್ನೂ ಒತ್ತಟ್ಟಿಗೆ ಬಿಟ್ಟಿದ್ದೀರಿ; ಇವುಗಳನ್ನು ಮಾಡಬೇಕಾಗಿತ್ತು, ಅವುಗಳನ್ನೂ ಬಿಡಬಾರದು.


ಆಮೇಲೆ ಯೋಹಾನನ ಶಿಷ್ಯರು ಆತನ ಬಳಿಗೆ ಬಂದು - ಫರಿಸಾಯರೂ ನಾವೂ ಉಪವಾಸಮಾಡುತ್ತೇವಲ್ಲ; ನಿನ್ನ ಶಿಷ್ಯರು ಯಾಕೆ ಉಪವಾಸಮಾಡುವದಿಲ್ಲ ಎಂದು ಕೇಳಲು


ನೀವು ನಿಮಗೆ ಅಪ್ಪಣೆಯಾಗಿರುವದನ್ನೆಲ್ಲಾ ಮಾಡಿದ ಮೇಲೆ ನಾವು ಆಳುಗಳು, ಪ್ರಯೋಜನವಿಲ್ಲದವರು, ಮಾಡಬೇಕಾದದ್ದನ್ನೇ ಮಾಡಿದ್ದೇವೆ ಅನ್ನಿರಿ ಎಂದು ಹೇಳಿದನು.


ದೇಹಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನವಾಗಿದೆ, ಭಕ್ತಿಯಾದರೋ ಎಲ್ಲಾ ವಿಧದಲ್ಲಿ ಪ್ರಯೋಜನವಾದದ್ದು; ಅದಕ್ಕೆ ಇಹಪರಗಳಲ್ಲಿಯೂ ಜೀವವಾಗ್ದಾನ ಉಂಟು.


ಜನರು ನೋಡಲಿ ಎಂದು ನಿಮ್ಮ ಧರ್ಮಕಾರ್ಯಗಳನ್ನು ಅವರ ಮುಂದೆ ಮಾಡಬಾರದು, ನೋಡಿರಿ; ಹಾಗೆ ಮಾಡಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯ ಹತ್ತಿರ ನಿಮಗೆ ಫಲದೊರೆಯದು.


ನರಮನುಷ್ಯನು ದೇವರಿಂದ ಕದ್ದುಕೊಳ್ಳಬಹುದೇ? ನೀವೋ ನನ್ನಿಂದ ಕದ್ದುಕೊಳ್ಳುತ್ತಿದ್ದೀರಿ. ನಿನ್ನಿಂದ ಏನು ಕದ್ದುಕೊಂಡಿದ್ದೇವೆ ಎಂದು ಕೇಳುತ್ತೀರೋ? ದಶಮಾಂಶ, ನನಗೋಸ್ಕರ ಪ್ರತ್ಯೇಕಿಸಬೇಕಾದ ಪದಾರ್ಥ, ಇವುಗಳನ್ನೇ.


ಅದು ಪುಣ್ಯಕ್ರಿಯೆಗಳಿಂದ ಉಂಟಾದದ್ದಲ್ಲ; ಆದದರಿಂದ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದವಿಲ್ಲ.


ಇದಲ್ಲದೆ ನಾನು ನನ್ನ ಪಿತೃಗಳಿಂದ ಬಂದ ಸಂಪ್ರದಾಯಗಳಲ್ಲಿ ಬಹು ಅಭಿಮಾನವುಳ್ಳವನಾಗಿ ನನ್ನ ಜನರೊಳಗೆ ಸಮಪ್ರಾಯದವರಾದ ಅನೇಕರಿಗಿಂತ ಯೆಹೂದ್ಯ ಮತಾಚಾರದಲ್ಲಿ ಆಸಕ್ತನಾಗಿದ್ದೆನು.


ಹಾಗಾದರೆ ಹೊಗಳಿಕೊಳ್ಳುವದಕ್ಕೆ ಆಸ್ಪದವೆಲ್ಲಿ? ಅದು ಇಲ್ಲದೆ ಹೋಯಿತು. ಯಾವ ಪ್ರಮಾಣದಿಂದ? ಕರ್ಮಮಾರ್ಗವನ್ನು ಅನುಸರಿಸುವದರಿಂದಲೋ? ಅಲ್ಲ; ವಿಶ್ವಾಸ ಮಾರ್ಗವನ್ನು ಅನುಸರಿಸುವದರಿಂದಲೇ.


ಇದಲ್ಲದೆ ನೀವು ಉಪವಾಸಮಾಡುವಾಗ ಕಪಟಿಗಳಂತೆ ಮುಖವನ್ನು ಸಪ್ಪಗೆ ಮಾಡಿಕೊಳ್ಳಬೇಡಿರಿ. ಅವರು ತಾವು ಉಪವಾಸಿಗಳೆಂದು ಜನರಿಗೆ ತೋರುವದಕ್ಕಾಗಿ ತಮ್ಮ ಮುಖವನ್ನು ವಿಕಾರಮಾಡಿಕೊಳ್ಳುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಮತ್ತು ನೀವು ಪ್ರಾರ್ಥನೆಮಾಡುವಾಗ ಕಪಟಿಗಳ ಹಾಗೆ ಮಾಡಬೇಡಿರಿ. ಜನರು ನೋಡಬೇಕೆಂದು ಅವರು ಸಭಾಮಂದಿರಗಳಲ್ಲಿಯೂ ಬೀದೀಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವದಕ್ಕೆ ಇಷ್ಟಪಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ನೀವು [ನನ್ನ ಕಡೆಗೆ] ಕೈಯೆತ್ತುವಾಗ ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿದರೂ ನಾನು ಕೇಳೆನು, ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ.


ಯೇಹುವು ಅವನನ್ನು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡು ನನ್ನ ಜೊತೆಯಲ್ಲಿ ಬಂದು ಯೆಹೋವನಲ್ಲಿ ನನಗಿರುವ ಆಸಕ್ತಿಯನ್ನು ನೋಡು ಎಂದು ಹೇಳಿ ಅವನನ್ನು ಕೈ ಹಿಡಿದು ತನ್ನ ರಥದಲ್ಲಿ ಕರಕೊಂಡು ಹೋದನು.


ಸೌಲನು ಅವನನ್ನು ಕಂಡು - ಯೆಹೋವನು ನಿನ್ನನ್ನು ಆಶೀರ್ವದಿಸಲಿ; ನಾನು ಆತನ ಅಪ್ಪಣೆಯನ್ನು ನೆರವೇರಿಸಿದೆನು ಅಂದನು.


ದೇವರು ಬಿಳಾಮನಿಗೆ ಎದುರಾಗಿ ಬಂದಾಗ ಬಿಳಾಮನು ಆತನಿಗೆ - ನಾನು ಆ ಏಳು ಯಜ್ಞಪೀಠಗಳನ್ನು ಕಟ್ಟಿಸಿ ಒಂದೊಂದು ಪೀಠದಲ್ಲಿ ಒಂದು ಹೋರಿಯನ್ನೂ ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದ್ದೇನೆ ಎಂದು ಹೇಳಲಾಗಿ


ಇಸ್ರಾಯೇಲ್ಯರು ಪ್ರತ್ಯೇಕಿಸಿ ಯೆಹೋವನಿಗೆ ಸಮರ್ಪಿಸುವ ಹತ್ತನೆಯ ಪಾಲನ್ನೇ ಲೇವಿಯರಿಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದೇನಲ್ಲಾ. ಇವರಿಗೆ ಇಸ್ರಾಯೇಲ್ಯರೊಂದಿಗೆ ಪಾಲು ದೊರೆಯುವದಿಲ್ಲವೆಂದು ನಾನು ಹೇಳಿದ ಮಾತಿಗೆ ಇದೇ ಕಾರಣ.


ನಿಮ್ಮ ನೀತಿಯು ಶಾಸ್ತ್ರಿಗಳ ಮತ್ತು ಫರಿಸಾಯರ ನೀತಿಗಿಂತಲೂ ಹೆಚ್ಚಿನದಾಗದಿದ್ದರೆ ನೀವು ಪರಲೋಕರಾಜ್ಯದಲ್ಲಿ ಸೇರಲಾರಿರಿ ಎಂದು ನಿಮಗೆ ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು