Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:13 - ಕನ್ನಡ ಸತ್ಯವೇದವು J.V. (BSI)

13 ಆದರೆ ಆ ಸುಂಕದವನು ದೂರದಲ್ಲಿ ನಿಂತು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ಎದೆಯನ್ನು ಬಡುಕೊಳ್ಳುತ್ತಾ - ದೇವರೇ, ಪಾಪಿಯಾದ ನನ್ನನ್ನು ಕರುಣಿಸು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದರೆ ಆ ಸುಂಕದವನು ದೂರದಲ್ಲಿ ನಿಂತು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವುದಕ್ಕೂ ಆಗದೇ, ‘ದೇವರೇ, ಪಾಪಿಯಾದ ನನ್ನನ್ನು ಕರುಣಿಸು’ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸುಂಕವಸೂಲಿಯವನಾದರೋ ದೂರದಲ್ಲೇ ನಿಂತು, ತಲೆಯನ್ನೂ ಮೇಲಕ್ಕೆ ಎತ್ತದೆ, ‘ಓ ದೇವರೇ, ನಾನು ಪಾಪಿ; ನನಗೆ ದಯೆತೋರಿ,’ ಎನ್ನುತ್ತಾ ಎದೆಬಡಿದುಕೊಂಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ಸುಂಕವಸೂಲಿಗಾರನು ಅಲ್ಲಿ ಒಬ್ಬಂಟಿಗನಾಗಿಯೇ ನಿಂತುಕೊಂಡಿದ್ದನು. ಅವನು ಆಕಾಶದ ಕಡೆಗೆ ಕಣ್ಣೆತ್ತಿ ನೋಡದೇ, ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು, ‘ದೇವರೇ, ನನಗೆ ಕರುಣೆತೋರು; ನಾನು ಪಾಪಿಯಾಗಿದ್ದೇನೆ’ ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ಆದರೆ ಸುಂಕದವನು ದೂರದಲ್ಲಿ ನಿಂತು, ಆಕಾಶದ ಕಡೆಗೆ ಕಣ್ಣೆತ್ತಿ ನೋಡುವುದಕ್ಕೂ ಧೈರ್ಯಗೊಳ್ಳದೇ ತನ್ನ ಎದೆಯನ್ನು ಬಡಿದುಕೊಳ್ಳುತ್ತಾ, ‘ದೇವರೇ ಪಾಪಿಯಾದವನು ನಾನೇ ನನ್ನನ್ನು ಕರುಣಿಸು,’ ಎಂದು ಪ್ರಾರ್ಥಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಖರೆ, ತೊ ತೆರ್‍ಗಿ ವಸುಲ್ ಕರ್‍ತಲೊ, ಪಾಪಿ ಮಾನುಸ್, ಧುರುಚ್ ಇಬೆ ರ್‍ಹಾಲೊ, ತೆನಿ ಟಕ್ಲೆ ವೈರ್ ಕರುನ್ ಅಪ್ನಾಚೆ ಡೊಳೆ ಸೈತ್ ಸರ್‍ಗಾಕ್ ಲಾವುಕ್ನಾ, ಅಪ್ನಾಚೆ ಹಿರ್‍ದೆ ಬಡ್ವುನ್ ಘೆಟ್ಲ್ಯಾನ್, ಅನಿ “ದೆವಾ ಮಿಯಾ ಎಕ್ ಪಾಪಿ ಮಾನುಸ್, ಮಾಜಿ ದಯಾ ಕರ್!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:13
45 ತಿಳಿವುಗಳ ಹೋಲಿಕೆ  

ನನ್ನ ದೇವರೇ, ನಾನು ಮನಗುಂದಿದವನಾಗಿದ್ದೇನೆ; ನಿನ್ನ ಕಡೆಗೆ ಮುಖವನ್ನೆತ್ತುವದಕ್ಕೆ ನಾಚಿಕೊಳ್ಳುತ್ತೇನೆ. ನನ್ನ ದೇವರೇ, ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದವು. ನಮ್ಮ ಅಪರಾಧವು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಯಿತು.


ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂಬ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು.


ನಾನಂತೂ - ಯೆಹೋವನೇ, ನಿನ್ನ ಆಜ್ಞೆಯನ್ನು ಮೀರಿ ಪಾಪಮಾಡಿದ್ದೇನೆ; ನನ್ನನ್ನು ಕರುಣಿಸಿ ಸ್ವಸ್ಥಮಾಡು ಅಂದೆನು.


ಈ ನೋಟಕ್ಕಾಗಿ ಕೂಡಿಬಂದಿದ್ದ ಜನರೆಲ್ಲರು ನಡೆದ ಸಂಗತಿಯನ್ನು ನೋಡಿ ಎದೆಬಡುಕೊಳ್ಳುತ್ತಾ ಹಿಂತಿರುಗಿ ಹೋದರು.


ನಾನು ಅವರ ದುಷ್ಕೃತ್ಯಗಳ ವಿಷಯವಾಗಿ ಕ್ಷಮೆಯುಳ್ಳವನಾಗಿರುವೆನು, ಅವರ ಪಾಪಗಳನ್ನು ನನ್ನ ನೆನಪಿಗೆ ಎಂದಿಗೂ ತರುವದಿಲ್ಲ ಎಂದು ಕರ್ತನು ನುಡಿಯುತ್ತಾನೆ.


ಇದನ್ನು ಅವರು ಕೇಳಿ ಹೃದಯದಲ್ಲಿ ಅಲಗುನೆಟ್ಟಂತಾಗಿ ಪೇತ್ರನನ್ನೂ ಉಳಿದ ಅಪೊಸ್ತಲರನ್ನೂ - ಸಹೋದರರೇ, ನಾವೇನು ಮಾಡಬೇಕು ಎಂದು ಕೇಳಲು


ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ದಯೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾಸನದ ಮುಂದೆ ಬರೋಣ.


ಆದರೆ ನಾವು ಪಾಪಿಗಳಾಗಿದ್ದಾಗಲೂ ಕ್ರಿಸ್ತನು ನಮಗೋಸ್ಕರ ಪ್ರಾಣ ಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ಸಿದ್ಧಾಂತಪಡಿಸಿದ್ದಾನೆ.


ಸೀಮೋನ್ ಪೇತ್ರನು ಇದನ್ನು ಕಂಡು ಯೇಸುವಿನ ಮೊಣಕಾಲಿಗೆ ಬಿದ್ದು - ಸ್ವಾಮೀ, ನಾನು ಪಾಪಾತ್ಮನು; ನನ್ನನ್ನು ಬಿಟ್ಟುಹೋಗಬೇಕು ಅಂದನು.


ಆಗ ನಾನು - ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ! ನಾಶವಾದೆನಲ್ಲಾ; ನಾನು ಹೊಲಸು ತುಟಿಯವನು, ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು; ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡವು ಎಂದು ಕೂಗಿಕೊಳ್ಳಲು


ಯೆಹೋವನೇ, ನನ್ನ ಪಾಪವು ಬಹುಘೋರವಾಗಿದೆ; ಆದರೂ ನಿನ್ನ ಹೆಸರಿನ ನಿವಿುತ್ತ ಅದನ್ನು ಕ್ಷವಿುಸು.


ಆದಕಾರಣ [ನಾನು ಆಡಿದ್ದನ್ನು] ತಿರಸ್ಕರಿಸಿ ಧೂಳಿಯಲ್ಲಿಯೂ ಬೂದಿಯಲ್ಲಿಯೂ ಕುಳಿತು ಪಶ್ಚಾತ್ತಾಪಪಡುತ್ತೇನೆ.


ನೀವು ದೇವರ ಚಿತ್ತಾನುಸಾರವಾಗಿ ಪಟ್ಟ ದುಃಖವು ನಿಮಗೆ ಎಂಥ ತಹತಹವನ್ನು ಉಂಟುಮಾಡಿತು ನೋಡಿರಿ. ನೀವು ನಿರ್ದೋಷಿಗಳೆಂದು ಸ್ಥಾಪಿಸುವದಕ್ಕೆ ಎಷ್ಟೋ ಪ್ರಯಾಸಪಟ್ಟಿರಿ, ಎಷ್ಟೋ ಮನೋವ್ಯಥೆಯನ್ನು ಅನುಭವಿಸಿದಿರಿ; ಎಂಥ ಭಯವನ್ನು ಎಂಥ ಹಂಬಲವನ್ನು ತೋರಿಸಿದಿರಿ; ಮಾನಹಾನಿಗಾಗಿ ಎಷ್ಟೋ ರೋಷಪಟ್ಟು ಶಿಕ್ಷೆಮಾಡಿದಿರಿ. ನೀವು ಆ ಕಾರ್ಯಕ್ಕೆ ಸೇರಿದವರಲ್ಲವೆಂಬದನ್ನು ಎಲ್ಲಾ ವಿಧದಲ್ಲಿಯೂ ತೋರಿಸಿದಿರಿ.


ಯೆಹೋವನೇ, ನನ್ನ ಯೌವನದ ತಪ್ಪುಗಳನ್ನೂ ದ್ರೋಹಗಳನ್ನೂ ಮನಸ್ಸಿನಲ್ಲಿಡದೆ ನಿನ್ನ ಕೃಪೆಗೆ ತಕ್ಕಂತೆ ದಯಾಪೂರ್ವಕವಾಗಿ ನನ್ನನ್ನು ನೆನಸು.


ನೀವು ಹೋಗಿ - ನನಗೆ ಯಜ್ಞವು ಬೇಡ, ಕರುಣೆಯೇಬೇಕು ಎಂಬ ಮಾತಿನ ಅರ್ಥವನ್ನು ಕಲಿತುಕೊಳ್ಳಿರಿ. ನಾನು ನೀತಿವಂತರನ್ನು ಕರೆಯುವದಕ್ಕೆ ಬಂದವನಲ್ಲ, ಪಾಪಿಗಳನ್ನು ಕರೆಯುವದಕ್ಕೆ ಬಂದವನು ಅಂದನು.


ನಾನು ನಿನ್ನ ದುಷ್ಕೃತ್ಯಗಳನ್ನೆಲ್ಲಾ ಕ್ಷವಿುಸಿಬಿಟ್ಟ ಮೇಲೆ ನೀನು ಅವುಗಳನ್ನು ಜ್ಞಾಪಕಕ್ಕೆ ತಂದು ನಾಚಿಕೆಪಟ್ಟು ನಿನ್ನ ಅವಮಾನದ ನಿವಿುತ್ತ ಇನ್ನು ಬಾಯಿ ತೆರೆಯದಿರುವಿ. ಇದು ಕರ್ತನಾದ ಯೆಹೋವನ ನುಡಿ.


ಬನ್ನಿರಿ ವಾದಿಸುವ ಎಂದು ಯೆಹೋವನು ಅನ್ನುತ್ತಾನೆ; ನಿಮ್ಮ ಪಾಪಗಳು ಕಡು ಕೆಂಪಾಗಿದ್ದರೂ ಹಿಮದ ಹಾಗೆ ಬಿಳುಪಾಗುವವು; ಕಿರಮಂಜಿಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು.


ಒಂದು ಹಳ್ಳಿಗೆ ಬಂದಾಗ ಹತ್ತು ಮಂದಿ ಕುಷ್ಠರೋಗಿಗಳು ಆತನ ಎದುರಿಗೆ ಬಂದು ದೂರದಲ್ಲಿ ನಿಂತು -


ನಾವು ಪಾಪಾಪರಾಧಗಳನ್ನು ಮಾಡಿ ಕೆಟ್ಟವರಾಗಿ ನಡೆದು ನಿನಗೆ ತಿರುಗಿಬಿದ್ದು ನಿನ್ನ ಆಜ್ಞಾವಿಧಿಗಳನ್ನು ತೊರೆದು


ಇಸ್ರಾಯೇಲೇ, ಯೆಹೋವನನ್ನು ಮುಂಗಾದಿರು; ಯೆಹೋವನು ಕೃಪಾಸಂಪನ್ನನು; ಪೂರ್ಣವಿಮೋಚನೆಯು ಆತನಿಂದಲೇ ದೊರಕುವದು.


ಯೆಹೋವನೇ, ನಿನ್ನ ಕೃಪೆಯು ನನಗೆ ದೊರಕಲಿ; ನಿನ್ನ ನುಡಿಗನುಸಾರವಾಗಿ ರಕ್ಷಣೆಯುಂಟಾಗಲಿ.


ನಮ್ಮ ಪಿತೃಗಳಂತೆ ನಾವೂ ಪಾಪಿಗಳು; ಅಪರಾಧಮಾಡಿದೆವು; ದುಷ್ಟತನವನ್ನು ನಡಿಸಿದೆವು.


ಯಾಕಂದರೆ ಲೆಕ್ಕವಿಲ್ಲದ ಆಪತ್ತುಗಳು ನನ್ನನ್ನು ಸುತ್ತಿಕೊಂಡಿವೆ; ನನ್ನ ಪಾಪಗಳು ನನ್ನನ್ನು ಹಿಂದಟ್ಟಿ ಹಿಡಿದಿರುತ್ತವೆ, ನನಗೆ ದಿಕ್ಕೇ ತೋರುವದಿಲ್ಲ. ಅವು ನನ್ನ ತಲೇ ಕೂದಲುಗಳಿಗಿಂತಲೂ ಹೆಚ್ಚಾಗಿವೆ, ನಾನು ಎದೆಗುಂದಿ ಹೋದೆನು.


ಆಮೋನನ ತಂದೆಯಾದ ಮನಸ್ಸೆಯು ಯೆಹೋವನ ಮುಂದೆ ತನ್ನನ್ನು ತಗ್ಗಿಸಿಕೊಂಡಿದ್ದನಷ್ಟೆ. ಆಮೋನನಾದರೋ ತನ್ನನ್ನು ತಗ್ಗಿಸಿಕೊಳ್ಳದೆ ಮಹಾಪರಾಧಿಯಾದನು.


ಅವನ ದೇವಪ್ರಾರ್ಥನೆಯೂ ಅವನಿಗೆ ದೊರಕಿದ ಸದುತ್ತರವೂ ಅವನು ತನ್ನನ್ನು ತಗ್ಗಿಸಿಕೊಳ್ಳುವದಕ್ಕಿಂತ ಮುಂಚೆ ಮಾಡಿದ ಅಪರಾಧದ್ರೋಹಗಳೂ ಅವನು ಅಲ್ಲಲ್ಲಿ ಪೂಜಾಸ್ಥಳಗಳನ್ನು ಏರ್ಪಡಿಸಿ ಅಶೇರಸ್ತಂಭ ವಿಗ್ರಹ ಇವುಗಳನ್ನು ನಿಲ್ಲಿಸಿದ್ದೂ ದರ್ಶಿಗಳ ಚರಿತ್ರೆಯಲ್ಲಿ ಬರೆದಿರುತ್ತವೆ.


ಆಗ ದಾವೀದನು ನಾತಾನನಿಗೆ - ನಾನು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇನೆ ಎಂದು ಹೇಳಿದನು. ನಾತಾನನು ಅವನಿಗೆ - ಯೆಹೋವನು ನಿನ್ನ ಪಾಪವನ್ನು ಕ್ಷವಿುಸಿದ್ದಾನೆ, ನೀನು ಸಾಯುವದಿಲ್ಲ;


ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, [ನನ್ನ ಕೈಯಿಂದಲೇ] ಇವುಗಳೆಲ್ಲಾ ಉಂಟಾದವು. ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ.


ಮತ್ತು ನೀವು ಪ್ರಾರ್ಥನೆಮಾಡುವಾಗ ಕಪಟಿಗಳ ಹಾಗೆ ಮಾಡಬೇಡಿರಿ. ಜನರು ನೋಡಬೇಕೆಂದು ಅವರು ಸಭಾಮಂದಿರಗಳಲ್ಲಿಯೂ ಬೀದೀಚೌಕಗಳಲ್ಲಿಯೂ ನಿಂತುಕೊಂಡು ಪ್ರಾರ್ಥನೆಮಾಡುವದಕ್ಕೆ ಇಷ್ಟಪಡುತ್ತಾರೆ. ಅವರು ತಮಗೆ ಬರತಕ್ಕ ಫಲವನ್ನು ಹೊಂದಿದ್ದಾಯಿತೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ಫಿಲಿಪ್ಪ, ಬಾರ್ತೊಲೊಮಾಯ, ತೋಮ, ಸುಂಕದ ಮತ್ತಾಯ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ,


ಇದಲ್ಲದೆ ನೀವು ನಿಂತುಕೊಂಡು ಪ್ರಾರ್ಥನೆಮಾಡುವಾಗೆಲ್ಲಾ ಯಾರ ಮೇಲೆ ಏನಾದರೂ ವಿರೋಧವಿದ್ದರೆ ಅದನ್ನು ಅವನಿಗೆ ಕ್ಷವಿುಸಿರಿ; ಕ್ಷವಿುಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ನಿಮಗೆ ಕ್ಷವಿುಸಿಬಿಡುವನು ಅಂದನು.


ಆಮೇಲೆ ಆತನು ಅವರನ್ನು ಬಿಟ್ಟು ಕಲ್ಲೆಸುಗೆಯಷ್ಟು ದೂರ ಹೋಗಿ


ಆ ಮೇಘಸ್ತಂಭವು ಡೇರೆಯ ಬಾಗಲಲ್ಲಿ ನಿಂತದ್ದನ್ನು ಜನರೆಲ್ಲರು ನೋಡಿ ಎದ್ದು ತಮ್ಮ ತಮ್ಮ ಡೇರೆಗಳ ಬಾಗಲಲ್ಲೇ ಅಡ್ಡ ಬೀಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು