Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 18:9 - ಕನ್ನಡ ಸತ್ಯವೇದವು J.V. (BSI)

9 ಇದಲ್ಲದೆ ತಾವೇ ನೀತಿವಂತರೆಂದು ತಮ್ಮಲ್ಲಿ ಭರವಸವಿಟ್ಟುಕೊಂಡು ಉಳಿದವರನ್ನು ಉದಾಸೀನಮಾಡುವಂಥ ಕೆಲವರಿಗೆ ಒಂದು ಸಾಮ್ಯವನ್ನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಇದಲ್ಲದೆ ತಾವೇ ನೀತಿವಂತರೆಂದು ತಮ್ಮಲ್ಲಿ ಭರವಸವಿಟ್ಟುಕೊಂಡು ಉಳಿದವರನ್ನು ತಿರಸ್ಕಾರ ಮಾಡುವಂತಹ ಕೆಲವರಿಗೆ ಒಂದು ಸಾಮ್ಯವನ್ನು ಯೇಸು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಕೆಲವರು ತಾವೇ ಸತ್ಪುರುಷರು ಎಂದುಕೊಂಡು ಇತರರನ್ನು ತುಚ್ಛವಾಗಿ ಕಾಣುತ್ತಿದ್ದರು. ಅಂಥವರನ್ನು ಉದ್ದೇಶಿಸಿ ಯೇಸುಸ್ವಾಮಿ ಈ ಸಾಮತಿಯನ್ನು ಹೇಳಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅಲ್ಲಿ ಕೆಲವರು ತಾವೇ ಬಹಳ ಒಳ್ಳೆಯವರೆಂದು ಭಾವಿಸಿಕೊಂಡಿದ್ದರು. ಈ ಜನರು ತಾವು ಬೇರೆಯವರಿಗಿಂತ ಉತ್ತಮರೋ ಎಂಬಂತೆ ವರ್ತಿಸುತ್ತಿದ್ದರು. ಯೇಸು ಅವರಿಗೆ ಈ ಸಾಮ್ಯದ ಮೂಲಕ ಉಪದೇಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ತಾವು ನೀತಿವಂತರೆಂದು ತಮ್ಮಲ್ಲಿಯೇ ಭರವಸೆಯನ್ನಿಟ್ಟುಕೊಂಡು ಬೇರೆಯವರನ್ನು ಅಸಡ್ಡೆ ಮಾಡಿದ ಕೆಲವರಿಗೆ, ಯೇಸು ಈ ಸಾಮ್ಯವನ್ನು ಹೇಳಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಅಪ್ನಿ ಬರೆ, ಅನಿ ಹುರಲ್ಲಿ ಸಗ್ಳಿ ಲೊಕಾ ವಾಯ್ಟ್ ಮನುನ್ ಯವ್ಜುನ್ಗೆತ್ ರ್‍ಹಾತಲ್ಯಾ ಲೊಕಾಕ್ನಿ ಜೆಜುನ್, ಹಿ, ಕಾನಿ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 18:9
22 ತಿಳಿವುಗಳ ಹೋಲಿಕೆ  

ಆಗ ಆತನು ಅವರಿಗೆ ಹೇಳಿದ್ದೇನಂದರೆ - ಮನುಷ್ಯರ ಮುಂದೆ ನೀತಿವಂತರೆಂದು ತೋರಿಸಿಕೊಳ್ಳುವವರು ನೀವು; ಆದರೆ ದೇವರು ನಿಮ್ಮ ಹೃದಯಗಳನ್ನು ತಿಳುಕೊಂಡಿದ್ದಾನೆ. ಮನುಷ್ಯರಲ್ಲಿ ಶ್ರೇಷ್ಠವೆನಿಸಿಕೊಳ್ಳುವಂಥದು ದೇವರ ದೃಷ್ಟಿಯಲ್ಲಿ ಅಸಹ್ಯವಾಗಿದೆ.


ತಮ್ಮ ಕೊಳೆಯನ್ನು ತೊಳಕೊಳ್ಳದೆ ತಾವೇ ಶುದ್ಧರೆಂದು ಎಣಿಸಿಕೊಳ್ಳುವ ಬೇರೊಂದು ತರದವರುಂಟು.


ಹತ್ತಿರ ಬರಬೇಡ, ನಾನು ಮಡಿವಂತನು, ನೀನು ಸೇರತಕ್ಕವನಲ್ಲ ಎನ್ನುತ್ತಾ ಅಂತು ಪ್ರತಿನಿತ್ಯವೂ ಮುಖದೆದುರಿಗೆ ನನ್ನನ್ನು ಕೆಣಕುತ್ತಾ ನನ್ನ ಮೂಗಿಗೆ ದಿನವೆಲ್ಲಾ ಉರಿಯುವ ಬೆಂಕಿಯ ಹೊಗೆಯಾಗಿದ್ದಾರೆ.


ಅವರು ದೇವರಿಂದ ದೊರಕುವ ನೀತಿಯನ್ನರಿಯದೆ ಸ್ವನೀತಿಯನ್ನೇ ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.


ತಿನ್ನದವನೇ, ನಿನ್ನ ಸಹೋದರನ ವಿಷಯವಾಗಿ ನೀನು ತೀರ್ಪುಮಾಡುವದೇನು? ತಿನ್ನುವವನೇ, ನಿನ್ನ ಸಹೋದರನನ್ನು ನೀನು ಹೀನೈಸುವದೇನು? ನಾವೆಲ್ಲರೂ ದೇವರ ನ್ಯಾಯಾಸನದ ಮುಂದೆ ನಿಲ್ಲಬೇಕಲ್ಲಾ.


ಆದರೆ ಆತನನ್ನು ಊಟಕ್ಕೆ ಕರೆದ ಫರಿಸಾಯನು ಇದನ್ನು ಕಂಡು - ಇವಳು ದುರಾಚಾರಿ; ಇವನು ಪ್ರವಾದಿಯಾಗಿದ್ದರೆ ತನ್ನನ್ನು ಮುಟ್ಟಿದ ಈ ಹೆಂಗಸು ಇಂಥವಳೆಂದು ತಿಳುಕೊಳ್ಳುತ್ತಿದ್ದನು ಅಂದುಕೊಂಡನು.


ಮೊದಲು ನಾನು ಧರ್ಮಶಾಸ್ತ್ರವಿಲ್ಲದವನಾಗಿದ್ದು ಜೀವದಿಂದಿದ್ದೆನು. ಆಜ್ಞೆಯು ಬಂದಾಗ ಪಾಪಕ್ಕೆ ಜೀವ ಬಂತು, ನಾನು ಸತ್ತೆನು.


ಇದನ್ನು ನೋಡಿದವರೆಲ್ಲರು - ಈತನು ಪಾಪಿಯಾಗಿರುವವನ ಬಳಿಯಲ್ಲಿ ಇಳುಕೊಳ್ಳುವದಕ್ಕೆ ಹೋಗಿದ್ದಾನೆ ಎಂದು ಗುಣುಗುಟ್ಟಿದರು.


ಫರಿಸಾಯನು ನಿಂತುಕೊಂಡು ಪ್ರಾರ್ಥಿಸುವಾಗ ತನ್ನೊಳಗೆ - ದೇವರೇ, ಸುಲುಕೊಳ್ಳುವವರೂ ಅನ್ಯಾಯಗಾರರೂ ಹಾದರಮಾಡುವವರೂ ಆಗಿರುವ ಉಳಿದ ಜನರಂತೆ ನಾನಲ್ಲ, ಈ ಸುಂಕದವನಂತೆಯೂ ಅಲ್ಲ; ಆದದರಿಂದ ನಿನಗೆ ಸ್ತೋತ್ರಮಾಡುತ್ತೇನೆ.


ಆತನು - ನೀನು ಹೋಗು, ನಾನು ನಿನ್ನನ್ನು ದೂರಕ್ಕೆ ಅನ್ಯಜನರ ಬಳಿಗೆ ಕಳುಹಿಸುತ್ತೇನೆಂದು ಹೇಳಿದನು.


ಈ ಮಾತಿಗೆ ಅವರು - ನೀನು ಕೇವಲ ಪಾಪದಲ್ಲಿ ಹುಟ್ಟಿದವನು, ನಮಗೆ ಉಪದೇಶಮಾಡುತ್ತೀಯೋ ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.


ಅದಕ್ಕೆ ಅವರು ಅವನನ್ನು ಬೈದು - ನೀನು ಆ ಮನುಷ್ಯನ ಶಿಷ್ಯ; ನಾವು ಮೋಶೆಯ ಶಿಷ್ಯರು;


ಅದಕ್ಕೆ ಯೆಹೂದ್ಯರು - ನೀನು ಸಮಾರ್ಯನೂ ದೆವ್ವಹಿಡಿದವನೂ ಆಗಿದ್ದೀ ಎಂದು ನಾವು ಹೇಳುವದು ಸರಿಯಲ್ಲವೋ ಎಂದು ಹೇಳಲು


ಆತನ ಬಳಿಗೆ ಬರುತ್ತಾ ಇರಲು ಫರಿಸಾಯರೂ ಶಾಸ್ತ್ರಿಗಳೂ - ಇವನು ಪಾಪಿಗಳನ್ನು ಸೇರಿಸಿಕೊಂಡು ಅವರ ಜೊತೆಯಲ್ಲಿ ಊಟಮಾಡುತ್ತಾನೆ ಎಂದು ಹೇಳಿಕೊಂಡು ಗುಣುಗುಟ್ಟುತ್ತಿದ್ದರು.


ಆದರೆ ಅವನು ತನ್ನನ್ನು ನೀತಿವಂತನೆಂದು ತೋರಿಸಿಕೊಳ್ಳುವದಕ್ಕೆ ಅಪೇಕ್ಷಿಸಿ - ನನ್ನ ನೆರೆಯವನು ಯಾರು ಎಂದು ಯೇಸುವನ್ನು ಕೇಳಲು


ಯೆಹೋವನ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! ನನ್ನ ಹೆಸರಿನ ನಿವಿುತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು - ಯೆಹೋವನು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ ಎಂದು ಹೇಳಿದ್ದಾರಲ್ಲಾ; ಅವರಿಗಂತು ಅವಮಾನವಾಗುವದು.


ತಿನ್ನುವವನು ತಿನ್ನದವನನ್ನು ಹೀನೈಸಬಾರದು; ತಿನ್ನದವನು ತಿನ್ನುವವನನ್ನು ದೋಷಿಯೆಂದು ಎಣಿಸಬಾರದು. ದೇವರು ಇಬ್ಬರನ್ನೂ ಸೇರಿಸಿಕೊಂಡಿದ್ದಾನಲ್ಲಾ.


ಏಳನೆಯ ದಿನದಲ್ಲಿ ಯಾಜಕನು ನೋಡುವಾಗ ಆ ದದ್ದು ಹರಡಿಕೊಳ್ಳದೆ ಇದ್ದರೆ ಮತ್ತು ಅದು ಇರುವ ಕಡೆ ಹಳದಿ ಬಣ್ಣದ ಕೂದಲು ಇಲ್ಲದಿದ್ದರೆ ಮತ್ತು ಅದು ವಿುಕ್ಕ ಚರ್ಮಕ್ಕಿಂತ ತಗ್ಗಾಗಿ ತೋರದೆಹೋದರೆ ಅವನು ಕ್ಷೌರ ಮಾಡಿಸಿಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು