Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 19:43 - ಕನ್ನಡ ಸತ್ಯವೇದವು J.V. (BSI)

43-44 ದೇವರು ನಿನಗೆ ದರ್ಶನಕೊಟ್ಟ ಸಮಯವನ್ನು ನೀನು ತಿಳುಕೊಳ್ಳಲಿಲ್ಲವಾದದರಿಂದ ನಿನ್ನ ವೈರಿಗಳು ಒಡ್ಡುಕಟ್ಟಿ ನಿನ್ನ ಸುತ್ತಲೂ ಮುತ್ತಿಗೆ ಹಾಕಿ ಎಲ್ಲಾ ಕಡೆಗಳಲ್ಲಿಯೂ ನಿನ್ನನ್ನು ಬಂದುಮಾಡಿ ನಿನ್ನನ್ನೂ ನಿನ್ನೊಳಗಿರುವ ನಿನ್ನ ಜನರನ್ನೂ ನಿರ್ಮೂಲಮಾಡಿ ನಿನ್ನಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವ ದಿವಸಗಳು ನಿನ್ನ ಮೇಲೆ ಬರುವವು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43-44 ದೇವರು ನಿನಗೆ ದರ್ಶನಕೊಟ್ಟ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲವಾದ್ದರಿಂದ, ನಿನ್ನ ವೈರಿಗಳು ನಿನ್ನ ಸುತ್ತಲೂ ಒಡ್ದುಕಟ್ಟಿ, ಮುತ್ತಿಗೆ ಹಾಕಿ, ಎಲ್ಲಾ ಕಡೆಗಳಿಂದ ನಿನ್ನನ್ನು ಒಂದುಗೂಡಿಸಿ, ನಿನ್ನನ್ನೂ ನಿನ್ನೊಳಗಿರುವ ನಿನ್ನ ಜನರನ್ನೂ ನಿರ್ಮೂಲಮಾಡಿ, ನಿನ್ನಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವ ದಿನಗಳು ನಿನ್ನ ಮೇಲೆ ಬರುವವು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಕಾಲವು ಬರುವುದು. ಆಗ ಶತ್ರುಗಳು ನಿನ್ನ ಸುತ್ತಲೂ ಆಳ್ವೇಲಿಯೆಬ್ಬಿಸಿ, ಮುತ್ತಿಗೆ ಹಾಕಿ, ಎಲ್ಲೆಡೆಯೂ ನುಗ್ಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ನಿನ್ನ ವೈರಿಗಳು ನಿನ್ನ ಸುತ್ತಲೂ ಗೋಡೆ ಕಟ್ಟಿ ನಿನ್ನನ್ನು ಎಲ್ಲಾ ಕಡೆಗಳಿಂದಲೂ ಮುತ್ತಿಗೆ ಹಾಕಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ನಿನ್ನ ಶತ್ರುಗಳು ನಿನ್ನ ಸುತ್ತಲೂ ಅಡ್ಡಗೋಡೆಯನ್ನು ಕಟ್ಟಿ, ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಬಂಧಿಸುವ ದಿನಗಳು ಬರುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ಕಶ್ಯಾಕ್ ಮಟ್ಲ್ಯಾರ್, ಎಕ್ ಎಳ್ ಯೆತಾ ತುಜೆ ದುಸ್ಮಾನ್ ತುಜ್ಯಾ ಭೊತ್ಯಾನಿ ಯೆವ್ನ್ ಅಡ್ಗೊಲ್ ಘಾಲ್ತ್ಯಾತ್, ಅನಿ ತುಜಿ ರಸ್ತೆ ಸಗ್ಳೆ ಬಂದ್ ಕರ್‍ತ್ಯಾತ್, ಅನಿ ಸಗ್ಳ್ಯಾಕ್ನಾ ತುಕಾ ಬಂದ್ ಕರುನ್ ಸೊಡ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 19:43
15 ತಿಳಿವುಗಳ ಹೋಲಿಕೆ  

ಅವನು ಬೈಲುಭೂವಿುಯಲ್ಲಿನ ನಿನ್ನ ಕುಮಾರ್ತೆಯರನ್ನು ಖಡ್ಗದಿಂದ ಹತಿಸಿ ನಿನಗೆ ವಿರುದ್ಧವಾಗಿ ಒಡ್ಡುಕಟ್ಟಿ ದಿಬ್ಬಹಾಕಿ


ಆ ನಕ್ಷೆಯ ಸುತ್ತುಮುತ್ತಲು ದಿಬ್ಬಹಾಕಿ ಒಡ್ಡುಕಟ್ಟಿ ಪಾಳೆಯಗಳನ್ನು ಮಾಡಿ ಭಿತ್ತಿಭೇದಕಯಂತ್ರಗಳನ್ನು ನಿಲ್ಲಿಸಿ ಅದನ್ನು ಮುತ್ತು.


ಆತನು ಅಶ್ಶೂರದ ಅರಸನನ್ನು ಕುರಿತು - ಅವನು ಪಟ್ಟಣವನ್ನು ಸಮೀಪಿಸುವದಿಲ್ಲ, ಅದಕ್ಕೆ ಬಾಣವನ್ನೆಸೆಯುವದಿಲ್ಲ, ಗುರಾಣಿ ಹಿಡಿದಿರುವವರನ್ನು ಕಳುಹಿಸುವದಿಲ್ಲ, ಅದನ್ನು ಕೆಡವಿಬಿಡುವದಕ್ಕೋಸ್ಕರ ಅದರ ಎದುರಾಗಿ ಮಣ್ಣಿನ ದಿಬ್ಬವನ್ನು ಮಾಡುವದಿಲ್ಲ.


ಅರಸನು ಸಿಟ್ಟುಗೊಂಡು ತನ್ನ ದಂಡುಗಳನ್ನು ಕಳುಹಿಸಿ ಆ ಕೊಲೆಗಾರರನ್ನು ನಾಶಮಾಡಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.


ಇಗೋ, ಒಂದು ಚಿಕ್ಕ ಪಟ್ಟಣ, ಅದರಲ್ಲಿ ಕೊಂಚ ಜನರೇ ಇದ್ದರು; ಒಬ್ಬ ದೊಡ್ಡ ಅರಸು ಅದಕ್ಕೆ ವಿರುದ್ಧವಾಗಿ ಬಂದು ಮುತ್ತಿಗೆಹಾಕಿ ಅಲ್ಲಿ ದೊಡ್ಡ ದಿಬ್ಬಗಳನ್ನು ಹಾಕಿದನು.


ನೀನಾದರೂ ಸಮಾಧಾನಕ್ಕೆ ಬೇಕಾದದ್ದನ್ನು ಇದೇ ದಿನದಲ್ಲಿ ತಿಳಿದುಕೊಂಡರೆ ಎಷ್ಟೋ ಒಳ್ಳೇದು. ಆದರೆ ಈಗ ಅದು ನಿನ್ನ ಕಣ್ಣಿಗೆ ಮರೆಯಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು