Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:13 - ಕನ್ನಡ ಸತ್ಯವೇದವು J.V. (BSI)

13 ಫಕ್ಕನೆ ಆ ದೂತನ ಸಂಗಡ ಪರಲೋಕಸೈನ್ಯದವರ ಒಂದು ದೊಡ್ಡ ಗುಂಪು ಕಾಣಿಸಿಕೊಂಡು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13-14 ಫಕ್ಕನೆ ಆ ದೂತನ ಸಂಗಡ ಸ್ವರ್ಗೀಯ ಸೈನ್ಯದವರ ಒಂದು ದೊಡ್ಡ ಗುಂಪು ಕಾಣಿಸಿಕೊಂಡು, “ಮೇಲಣ ಲೋಕಗಳಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ದೇವರೊಲಿದ ಮನುಷ್ಯರೊಳಗೆ ಸಮಾಧಾನ” ಎಂದು ದೇವರನ್ನು ಕೊಂಡಾಡುತ್ತಾ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ತಕ್ಷಣವೇ ಆ ದೂತನ ಸಂಗಡ ಸ್ವರ್ಗದ ದೂತಪರಿವಾರವೊಂದು ಕಾಣಿಸಿಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ತಕ್ಷಣವೇ ಪರಲೋಕದಿಂದ ದೇವದೂತರು ಬಹು ದೊಡ್ಡ ಗುಂಪಾಗಿ ಬಂದು ಮೊದಲನೆಯ ದೇವದೂತನೊಡನೆ ಸೇರಿಕೊಂಡರು. ಅವರೆಲ್ಲರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ತಕ್ಷಣವೇ ಆ ದೂತನ ಸಂಗಡ ಇದ್ದ ಪರಲೋಕ ಸೈನ್ಯದ ಸಮೂಹವು ದೇವರನ್ನು ಕೊಂಡಾಡುತ್ತಾ ಹೀಗೆ ಹೇಳಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಎಗ್ದಮ್, ಸರ್‍ಗಾ ವೈಲ್ಯಾ ದೆವಾಚ್ಯಾ ದುತಾಂಚೊ ತಾಂಡೊ “ದೆವಾಕ್ ಆರಾದನ್” ಕರುಕ್ ಮನುನ್ ಗಿತ್ ಮನ್ತಲೊ ದಿಸ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:13
18 ತಿಳಿವುಗಳ ಹೋಲಿಕೆ  

ಇದಲ್ಲದೆ ಸಿಂಹಾಸನವು ಜೀವಿಗಳು ಹಿರಿಯರು ಇವರ ಸುತ್ತಲು ಬಹು ಮಂದಿ ದೇವದೂತರನ್ನು ಕಂಡೆನು; ಅವರ ಸಂಖ್ಯೆಯು ಕೋಟ್ಯಾನುಕೋಟಿಯಾಗಿಯೂ ಲಕ್ಷೋಪಲಕ್ಷವಾಗಿಯೂ ಇತ್ತು.


ಅದಕ್ಕೆ ಮೀಕಾಯೆಹುವು - ಅದಿರಲಿ, ಯೆಹೋವನ ವಾಕ್ಯವನ್ನು ಕೇಳು. ಯೆಹೋವನು ತನ್ನ ಸಿಂಹಾಸನದ ಮೇಲೆ ಕೂತುಕೊಂಡದ್ದನ್ನೂ ಪರಲೋಕ ಸೈನ್ಯಗಳು ಆತನ ಎಡಬಲಗಡೆಗಳಲ್ಲಿ ನಿಂತದ್ದನ್ನೂ ಕಂಡೆನು.


ಆತನ ಎಲ್ಲಾ ದೂತರೇ, ಆತನನ್ನು ಸ್ತುತಿಸಿರಿ; ಆತನ ಎಲ್ಲಾ ಸೈನ್ಯಗಳೇ, ಆತನನ್ನು ಸ್ತುತಿಸಿರಿ.


ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಡುವ ಊಳಿಗದ ಆತ್ಮಗಳಲ್ಲವೋ?


ನ್ಯಾಯಾಸನದ ಮುಂದೆ ಉರಿಯ ಪ್ರವಾಹವು ಉಕ್ಕಿ ಹರಿದುಬಂತು; ಲಕ್ಷೋಪಲಕ್ಷ ದೂತರು ಆತನನ್ನು ಸೇವಿಸುತ್ತಿದ್ದರು, ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತುಕೊಂಡಿದ್ದರು; ನ್ಯಾಯಸಭೆಯವರು ಕೂತುಕೊಂಡರು, ಪುಸ್ತಕಗಳು ತೆರೆಯಲ್ಪಟ್ಟವು.


ಅದರಂತೆ ಒಬ್ಬ ಪಾಪಿಯು ದೇವರ ಕಡೆಗೆ ತಿರುಗಿಕೊಳ್ಳುವ ವಿಷಯದಲ್ಲಿ ದೇವದೂತರ ಮುಂದೆ ಸಂತೋಷವಾಗುವದೆಂದು ನಿಮಗೆ ಹೇಳುತ್ತೇನೆ ಅಂದನು.


ಭೂಲೋಕದ ಸುಣ್ಣಪಾದಗಳು ಯಾವದರಲ್ಲಿ ನೆಲೆಗೊಂಡವು? ಅದರ ಮೂಲೆಗಲ್ಲನ್ನು ಹಾಕಿದವರು ಯಾರು?


ದೇವರಿಗೆ ಸಹಸ್ರಾರು ಮಾತ್ರವಲ್ಲ, ಲಕ್ಷಾಂತರ ರಥಗಳು ಇವೆ. ಕರ್ತನಾದ ಯೆಹೋವನು ಅವುಗಳ ಸಮೇತವಾಗಿ ಸೀನಾಯಿಬೆಟ್ಟದಲ್ಲಿದ್ದ ಹಾಗೆ ಪವಿತ್ರಾಲಯದಲ್ಲಿದ್ದಾನೆ.


ದೇವರು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ಅನಾದಿಕಾಲದಿಂದ ಮಾಡಿದ ಸಂಕಲ್ಪದ ಮೇರೆಗೆ ತನ್ನ ನಾನಾ ವಿಧವಾದ ಜ್ಞಾನವು ಪರಲೋಕದಲ್ಲಿ ರಾಜತ್ವಗಳಿಗೂ ಅಧಿಕಾರಗಳಿಗೂ ಈಗ ಕ್ರೈಸ್ತ ಸಭೆಯ ಮೂಲಕ ಗೊತ್ತಾಗಬೇಕೆಂಬದನ್ನು ಉದ್ದೇಶಿಸಿದ್ದನು.


ಆ ರಾತ್ರಿ ಅವನು ಕನಸುಕಂಡನು. ಆ ಕನಸಿನಲ್ಲಿ ಒಂದು ನಿಚ್ಚಣಿಗೆ ನೆಲದ ಮೇಲೆ ನಿಂತಿತ್ತು; ಅದರ ತುದಿ ಆಕಾಶವನ್ನು ಮುಟ್ಟಿತ್ತು; ಅದರ ಮೇಲೆ ದೇವದೂತರು ಹತ್ತುತ್ತಾ ಇಳಿಯುತ್ತಾ ಇದ್ದರು.


ಆಮೇಲೆ ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಗಲಾಗಿ ಮಹಿಮೆಯಿಂದ ಕೂಡಿದ ಯೆಹೋವನಿಗೆ ಆತನ ವಾಸಸ್ಥಾನದಲ್ಲಿ ಸ್ತೋತ್ರವಾಗಲಿ ಎಂಬ ಮಹಾಶಬ್ದವು ನನ್ನ ಹಿಂದೆ ಭರಭರನೆ ಕೇಳಿಸಿತು.


ಈ ಸಂಗತಿಗಳನ್ನು ಮುಂತಿಳಿಸುವದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದರೆಂಬದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಿದವು ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರಿಗೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂಬ ಅಪೇಕ್ಷೆ ಉಂಟು.


ಆತನು ನಿಮಗೆ ಗೊತ್ತಾಗುವದಕ್ಕೆ ಗುರುತೇನಂದರೆ - ಬಟ್ಟೆಯಿಂದ ಸುತ್ತಿರುವ ಒಂದು ಕೂಸು ಗೋದಲಿಯಲ್ಲಿ ಮಲಗಿರುವದನ್ನು ಕಾಣುವಿರಿ ಎಂದು ಹೇಳಿದನು.


ಮೇಲಣಲೋಕಗಳಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ಮನುಷ್ಯರೊಳಗೆ ಸಮಾಧಾನ ದೇವರು ಅವರಿಗೆ ಒಲಿಯುತ್ತಾನೆ ಎಂದು ದೇವರನ್ನು ಕೊಂಡಾಡುತ್ತಾ ಹೇಳಿದರು.


ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥವು ಗಂಭೀರವಾದದ್ದೆಂಬದಕ್ಕೆ ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ; ಅದೇನಂದರೆ - ಆತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮ ಸಂಬಂಧವಾಗಿ ಆತನೇ ಎಂದು ಸ್ಥಾಪಿಸಲ್ಪಟ್ಟನು; ದೇವದೂತರಿಗೆ ಕಾಣಿಸಿಕೊಂಡನು; ಅನ್ಯಜನರಲ್ಲಿ ಪ್ರಸಿದ್ಧಿ ಮಾಡಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಪ್ರಭಾವಸ್ಥಾನದಲ್ಲಿ ಸೇರಿಸಲ್ಪಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು