Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:25 - ಕನ್ನಡ ಸತ್ಯವೇದವು J.V. (BSI)

25 ಆ ಕಾಲದಲ್ಲಿ ಯೆರೂಸಲೇವಿುನಲ್ಲಿ ಸಿಮೆಯೋನನೆಂಬ ಒಬ್ಬ ಮನುಷ್ಯನಿದ್ದನು. ಈ ಮನುಷ್ಯನು ನೀತಿವಂತನೂ ದೇವಭಕ್ತನೂ ಆಗಿದ್ದು ಇಸ್ರಾಯೇಲ್ ಜನರನ್ನು ಸಂತೈಸುವವನು ಯಾವಾಗ ಬಂದಾನೆಂದು ಹಾರೈಸುತ್ತಿದ್ದನು; ಮತ್ತು ಪವಿತ್ರಾತ್ಮಪ್ರೇರಿತನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆ ಕಾಲದಲ್ಲಿ ಯೆರೂಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬ ಮನುಷ್ಯನಿದ್ದನು. ಈ ಮನುಷ್ಯನು ನೀತಿವಂತನೂ ದೇವಭಕ್ತನೂ ಆಗಿದ್ದನು. ಇಸ್ರಾಯೇಲರನ್ನು ಸಂತೈಸುವವನು ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು ಮತ್ತು ಆತನು ಪವಿತ್ರಾತ್ಮಭರಿತನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಆಗ ಜೆರುಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬನು ವಾಸವಾಗಿದ್ದನು. ಸತ್ಪುರುಷನೂ ದೈವಭಕ್ತನೂ ಆದ ಇವನು, ಇಸ್ರಯೇಲ್ ಜನತೆಯ ಉದ್ಧಾರಕ ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು. ಪವಿತ್ರಾತ್ಮ ಇವನಲ್ಲಿ ನೆಲೆಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಸಿಮೆಯೋನನೆಂಬ ಒಬ್ಬ ಮನುಷ್ಯನು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದನು. ಅವನು ಒಳ್ಳೆಯವನಾಗಿದ್ದನು ಮತ್ತು ಬಹಳ ಧಾರ್ಮಿಕನಾಗಿದ್ದನು. ದೇವರು ಇಸ್ರೇಲರಿಗೆ ಸಹಾಯ ಮಾಡುವ ಕಾಲವನ್ನೇ ಸಿಮೆಯೋನನು ಎದುರು ನೋಡುತ್ತಿದ್ದನು. ಅವನು ಪವಿತ್ರಾತ್ಮಭರಿತನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆಗ ಸಿಮೆಯೋನನೆಂಬ ಒಬ್ಬ ಮನುಷ್ಯನು ಯೆರೂಸಲೇಮಿನಲ್ಲಿದ್ದನು. ಅವನು ನೀತಿವಂತನೂ ಭಕ್ತನೂ ಆಗಿದ್ದನು. ಅವನು ಇಸ್ರಾಯೇಲರನ್ನು ಸಂತೈಸುವ ಒಬ್ಬರ ಬರುವಿಕೆಗಾಗಿ ಕಾಯುತ್ತಿದ್ದನು. ಪವಿತ್ರಾತ್ಮ ದೇವರ ಪ್ರಸನ್ನತೆ ಅವನ ಮೇಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತ್ಯಾ ಕಾಲಾತ್ ಸಿಮಾವ್ ಮನ್ತಲೊ ಎಕ್ ಮಾನುಸ್ ಜೆರುಜಲೆಮಾತ್ ಹೊತ್ತೊ.ತೊ ಎಕ್ ಬರೊ ಅನಿ ದೆವಾಚ್ಯಾ ಭಿಂಯಾನ್ ಚಲ್ತಲೊ ಮಾನುಸ್,ತೊ ಇಸ್ರಾಯೆಲಾಚ್ಯಾ ಸುಟ್ಕಾ ಹೊತಲ್ಯಾ ಎಳಾಕ್ ರಾಕುನ್ಗೆತ್ ಹೊತ್ತೊ. ಪವಿತ್ರ್ ಆತ್ಮೊ ತೆಚ್ಯಾ ವಾಂಗ್ಡಾ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:25
22 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ಜನರು - ಆಹಾ, ಈತನೇ ನಮ್ಮ ದೇವರು, ನಮ್ಮನ್ನು ರಕ್ಷಿಸಲಿ ಎಂದು ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ; ಈತನೇ ಯೆಹೋವನು, ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ, ಈತನ ರಕ್ಷಣೆಯಲ್ಲಿ ಆನಂದಿಸಿ ಉಲ್ಲಾಸಪಡುವೆವು ಎಂದು ಹೇಳಿಕೊಳ್ಳುವರು.


ಅವರಿಬ್ಬರೂ ಕರ್ತನ ಎಲ್ಲಾ ಆಜ್ಞೆಗಳನ್ನೂ ನೇಮನಿಷ್ಠೆಗಳನ್ನೂ ಕೈಕೊಂಡು ತಪ್ಪಿಲ್ಲದೆ ನಡಕೊಳ್ಳುತ್ತಾ ದೇವರ ದೃಷ್ಟಿಯಲ್ಲಿ ನೀತಿವಂತರಾಗಿದ್ದರು.


ಆಕೆ ಅದೇ ಗಳಿಗೆಯಲ್ಲಿ ಹತ್ತಿರಕ್ಕೆ ಬಂದು ದೇವರಿಂದಾದ ಉಪಕಾರವನ್ನು ನೆನಸಿ ಕೊಂಡಾಡಿದ್ದಲ್ಲದೆ ಯೆರೂಸಲೇವಿುನ ಬಿಡುಗಡೆಯನ್ನು ಹಾರೈಸುತ್ತಿದ್ದವರೆಲ್ಲರ ಸಂಗಡ ಆತನ ವಿಷಯವಾಗಿ ಮಾತಾಡುವವಳಾದಳು.


ಹೀಗಿರಲಾಗಿ ಅರಿಮಥಾಯದ ಯೋಸೇಫನೆಂಬವನು ಬಂದು ಧೈರ್ಯದಿಂದ ಪಿಲಾತನ ಬಳಿಗೆ ಹೋಗಿ ಯೇಸುವಿನ ದೇಹವನ್ನು ತನಗೆ ಕೊಡಿಸಬೇಕೆಂದು ಬೇಡಿಕೊಂಡನು. ಇವನು ಹಿರೀಸಭೆಯವರಲ್ಲಿ ಘನವಂತನು, ದೇವರ ರಾಜ್ಯವನ್ನು ಎದುರು ನೋಡುತ್ತಿದ್ದವನು.


ಎಲಿಸಬೇತಳು ಮರಿಯಳ ವಂದನೆಯನ್ನು ಕೇಳುತ್ತಲೇ ಆಕೆಯ ಗರ್ಭದಲ್ಲಿದ್ದ ಕೂಸು ಹಾರಾಡಿತು.


ಯಾಕಂದರೆ ಯಾವ ಪ್ರವಾದನೆಯೂ ಎಂದೂ ಮನುಷ್ಯರ ಚಿತ್ತದಿಂದ ಉಂಟಾಗಲಿಲ್ಲ; ಮನುಷ್ಯರು ಪವಿತ್ರಾತ್ಮ ಪ್ರೇರಿತರಾಗಿ ದೇವರಿಂದ ಹೊಂದಿದ್ದನ್ನೇ ಮಾತಾಡಿದರು.


ನನ್ನ ಜನರನ್ನು ಸಂತೈಸಿರಿ, ಸಂತೈಸಿರಿ;


ಇದರ ದೆಸೆಯಿಂದ ದೇವರ ವಿಷಯದಲ್ಲಿಯೂ ಮನುಷ್ಯರ ವಿಷಯದಲ್ಲಿಯೂ ನಾನು ನಿರ್ದೋಷಿ ಎಂದು ಸಾಕ್ಷಿ ಹೇಳುವ ಮನಸ್ಸು ನನಗೆ ಯಾವಾಗಲೂ ಇರಬೇಕೆಂದು ಅಭ್ಯಾಸಮಾಡಿಕೊಳ್ಳುತ್ತೇನೆ.


ಅವರು - ಕೊರ್ನೇಲ್ಯನೆಂಬ ಒಬ್ಬ ಶತಾಧಿಪತಿ ಇದ್ದಾನೆ. ಅವನು ನೀತಿವಂತನೂ ದೇವರಿಗೆ ಭಯಪಡುವವನೂ ಯೆಹೂದ್ಯ ಜನರೆಲ್ಲರಿಂದ ಒಳ್ಳೇ ಹೆಸರು ಹೊಂದಿದವನೂ ಆಗಿದ್ದಾನೆ; ನಿನ್ನನ್ನು ತನ್ನ ಮನೆಗೆ ಕರೇಕಳುಹಿಸಿಕೊಂಡು ನಿನ್ನಿಂದ ಬೋಧನೆಯನ್ನು ಕೇಳಬೇಕೆಂದು ದೇವದೂತನ ಮುಖಾಂತರವಾಗಿ ಅಪ್ಪಣೆ ಹೊಂದಿದನು ಎಂದು ಹೇಳಿದರು.


ಅವನು ಭಕ್ತನೂ ತನ್ನ ಮನೆಯವರೆಲ್ಲರ ಸಹಿತವಾಗಿ ದೇವರಿಗೆ ಭಯಪಡುವವನೂ ಆಗಿದ್ದು ಜನರಿಗೆ ಬಹಳವಾಗಿ ದಾನಧರ್ಮ ಮಾಡುತ್ತಾ ದೇವರಿಗೆ ನಿತ್ಯವೂ ಪ್ರಾರ್ಥನೆ ಮಾಡುತ್ತಾ ಇದ್ದನು.


ಇದಲ್ಲದೆ ಆ ಮಗುವಿನ ತಂದೆಯಾದ ಜಕರೀಯನು ಪವಿತ್ರಾತ್ಮಭರಿತನಾಗಿ ಪ್ರವಾದನವಚನವನ್ನು ನುಡಿದದ್ದೇನಂದರೆ -


ಮನುಷ್ಯನೇ, ಒಳ್ಳೆಯದು ಇಂಥದೇ ಎಂದು ಯೆಹೋವನು ನಿನಗೆ ತೋರಿಸಿದ್ದಾನಷ್ಟೆ; ನ್ಯಾಯವನ್ನು ಆಚರಿಸುವದು, ಕರುಣೆಯಲ್ಲಿ ಆಸಕ್ತನಾಗಿರುವದು, ನಿನ್ನ ದೇವರಿಗೆ ನಮ್ರವಾಗಿ ನಡೆದುಕೊಳ್ಳುವದು, ಇಷ್ಟನ್ನೇ ಹೊರತು ಯೆಹೋವನು ನಿನ್ನಿಂದ ಇನ್ನೇನು ಅಪೇಕ್ಷಿಸುವನು?


ಆಗ ಯೆಹೋವನು - ನನ್ನ ದಾಸನಾದ ಯೋಬನ ಮೇಲೆ ಗಮನವಿಟ್ಟಿಯಾ? ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ ಯಥಾರ್ಥಚಿತ್ತನೂ ಆಗಿದ್ದಾನೆ. ಅವನಿಗೆ ಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಕ್ಕುವದಿಲ್ಲ ಎಂದು ಸೈತಾನನಿಗೆ ಹೇಳಿದನು.


ಊಚ್ ದೇಶದಲ್ಲಿ ಯೋಬನೆಂಬ ಒಬ್ಬ ಮನುಷ್ಯನಿದ್ದನು; ಅವನು ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಕೆಟ್ಟದ್ದನ್ನು ನಿರಾಕರಿಸುತ್ತಾ ನಿರ್ದೋಷಿಯೂ ಯಥಾರ್ಥಚಿತ್ತನೂ ಆಗಿದ್ದನು.


ಅದಕ್ಕೆ ಮೋಶೆ - ನನ್ನ ಗೌರವವನ್ನು ಕಾಪಾಡಬೇಕೆಂದಿದ್ದೀಯೇ? ಯೆಹೋವನ ಅನುಗ್ರಹದಿಂದ ಆತನ ಜನರೆಲ್ಲರೂ ಆತ್ಮೀಯವರಗಳನ್ನು ಹೊಂದಿದವರೂ ಪ್ರವಾದಿಸುವರೂ ಆದರೆ ಎಷ್ಟೋ ಒಳ್ಳೇದು ಅಂದನು.


ನೋಹನ ಚರಿತ್ರೆಯು - ನೋಹನು ನೀತಿವಂತನೂ ತನ್ನ ಕಾಲದವರಲ್ಲಿ ತಪ್ಪಿಲ್ಲದವನೂ ಆಗಿದ್ದನು; ಅವನು ದೇವರೊಂದಿಗೆ ಅನ್ಯೋನ್ಯವಾಗಿ ನಡೆದುಕೊಂಡನು.


ಯೆಹೋವನು ಆ ಮೇಘದಲ್ಲಿ ಇಳಿದು ಬಂದು ಅವನ ಸಂಗಡ ಮಾತಾಡಿ ಅವನಲ್ಲಿದ್ದ ಆತ್ಮೀಯವರಗಳಲ್ಲಿ ಆ ಎಪ್ಪತ್ತು ಮಂದಿ ಹಿರಿಯರಿಗೂ ಪಾಲುಕೊಟ್ಟನು; ಆ ವರಗಳು ಅವರಿಗೆ ದೊರಕಿದಾಗ ಅವರು ಪರವಶರಾಗಿ ಪ್ರವಾದಿಸಿದರು; ಆಮೇಲೆ ಅವರು ತಿರಿಗಿ ಪ್ರವಾದಿಸಲಿಲ್ಲ.


ನಿಮ್ಮ ದೇವರಾದ ಯೆಹೋವನು ನಿಮ್ಮ ಸಹೋದರರಲ್ಲಿ ನನ್ನಂಥ ಪ್ರವಾದಿಯನ್ನು (ನಿಮಗೆ) ಏರ್ಪಡಿಸುವನು; ಅವನಿಗೇ ನೀವು ಕಿವಿಗೊಡಬೇಕು.


ಆಕಾಶದ ಕೆಳಗಿರುವ ಎಲ್ಲಾ ದೇಶದವರೊಳಗಿಂದ ಬಂದ ಸದ್ಭಕ್ತರಾದ ಯೆಹೂದ್ಯರು ಯೆರೂಸಲೇವಿುನಲ್ಲಿ ವಾಸವಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು