Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:27 - ಕನ್ನಡ ಸತ್ಯವೇದವು J.V. (BSI)

27 ಇವನು ಪವಿತ್ರಾತ್ಮನ ಪ್ರೇರಣೆಯಿಂದ ದೇವಾಲಯಕ್ಕೆ ಬಂದನು; ಆಗ ತಂದೆತಾಯಿಗಳು ಯೇಸುವೆಂಬ ಮಗುವಿಗೆ ಧರ್ಮಶಾಸ್ತ್ರದಲ್ಲಿ ಹೇಳಿರುವ ಪದ್ಧತಿಯ ಪ್ರಕಾರ ನಡಿಸಬೇಕೆಂದು ಅದನ್ನು ಒಳಕ್ಕೆ ತರಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಇವನು ಪವಿತ್ರಾತ್ಮನ ಪ್ರೇರಣೆಯಿಂದ ದೇವಾಲಯಕ್ಕೆ ಬಂದನು. ಆಗ ತಂದೆತಾಯಿಗಳು ಮಗುವಾದ ಯೇಸುವನ್ನು ಧರ್ಮಶಾಸ್ತ್ರದಲ್ಲಿ ಹೇಳಿರುವ ಪದ್ಧತಿಯ ಪ್ರಕಾರ ನಡೆಸಬೇಕೆಂದು ಮಗುವನ್ನು ಒಳಕ್ಕೆ ತರಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆ ಪವಿತ್ರಾತ್ಮರಿಂದ ಪ್ರೇರಿತನಾಗಿ ಅವನು ಮಹಾದೇವಾಲಯಕ್ಕೆ ಬಂದನು. ಧರ್ಮಶಾಸ್ತ್ರದ ವಿಧಿಯನ್ನು ಪೂರೈಸಲು ಬಾಲಯೇಸುವನ್ನು ತಂದೆತಾಯಿಗಳು ದೇವಾಲಯಕ್ಕೆ ತಂದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಸಿಮೆಯೋನನು ಪವಿತ್ರಾತ್ಮನ ಪ್ರೇರಣೆಯಿಂದ ದೇವಾಲಯಕ್ಕೆ ಬಂದನು. ಯೆಹೂದ್ಯರ ಧರ್ಮಶಾಸ್ತ್ರದ ವಿಧಿಗಳನ್ನು ಪೂರೈಸಲು ಮರಿಯಳು ಮತ್ತು ಯೋಸೇಫನು ದೇವಾಲಯಕ್ಕೆ ಹೋದರು. ಅವರು ಮಗು ಯೇಸುವನ್ನು ದೇವಾಲಯಕ್ಕೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅವನು ಪವಿತ್ರಾತ್ಮ ಪ್ರೇರಣೆಯಿಂದ ದೇವಾಲಯದ ಅಂಗಳದೊಳಗೆ ಬಂದನು, ಆಗ ನಿಯಮವನ್ನು ಪೂರೈಸಲು ತಂದೆತಾಯಿಗಳು ಶಿಶು ಯೇಸುವನ್ನು ಒಳಗೆ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಖಾಯ್ದ್ಯಾತ್ ಸಾಂಗಲ್ಲ್ಯಾ ಸರ್ಕೆ ಪೊರಾಕ್ ದೆವಾಕ್ ಭೆಟ್ವುಕ್ ಮನುನ್, ತೆಚೆ ಬಾಯ್-ಬಾಬಾ ದೆವಾಚ್ಯಾ ಗುಡಿತ್ ಭೆಟ್ವುಕ್ ಜೆಜುಕ್ ಘೆವ್ನ್ ಯೆಲ್ಲ್ಯಾನಿ. ತನ್ನಾಚ್ ಪವಿತ್ರ್ ಆತ್ಮ್ಯಾಚ್ಯಾ ಬಳಾನ್ ಸಿಮಿಯಾವ್ ದೆವಾಚ್ಯಾ ಗುಡಿಕ್ಡೆ ಯೆಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:27
15 ತಿಳಿವುಗಳ ಹೋಲಿಕೆ  

ಪೇತ್ರನು ಆ ದರ್ಶನದ ವಿಷಯದಲ್ಲಿ ಆಲೋಚನೆ ಮಾಡುತ್ತಿರಲು ದೇವರಾತ್ಮನು ಅವನಿಗೆ - ಅಗೋ, ಇಬ್ಬರು ಮನುಷ್ಯರು ನಿನ್ನನ್ನು ವಿಚಾರಿಸುತ್ತಾರೆ;


ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ಅಧೀನನಾಗಿದ್ದನು. ಆತನ ತಾಯಿಯು ಈ ಸಂಗತಿಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿ ಇಟ್ಟುಕೊಂಡಳು.


ತಂದೆತಾಯಿಗಳು ಆತನನ್ನು ಕಂಡು ಬೆರಗಾದರು; ಮತ್ತು ಆತನ ತಾಯಿಯು - ಕಂದಾ, ನೀನು ನಮಗೆ ಯಾಕೆ ಹೀಗೆ ಮಾಡಿದಿ? ನಿನ್ನ ತಂದೆಯೂ ನಾನೂ ಎಷ್ಟೋ ತಳಮಳಗೊಂಡು ನಿನ್ನನ್ನು ಹುಡುಕಿ ಬಂದೆವಲ್ಲಾ ಎಂದು ಹೇಳಲು


ಆತನ ತಂದೆತಾಯಿಗಳು ಪ್ರತಿವರುಷವೂ ಪಸ್ಕಹಬ್ಬದ ಜಾತ್ರೆಗೆ ಯೆರೂಸಲೇವಿುಗೆ ಹೋಗುತ್ತಿದ್ದರು.


ಆಗ ಅವನು ದೇವರಾತ್ಮವಶನಾದ ನನ್ನನ್ನು ಎತ್ತಿಕೊಂಡು ಅಡವಿಗೆ ಹೋದನು. ಅಲ್ಲಿ ನಾನು ರಕ್ತವರ್ಣದ ಮೃಗದ ಮೇಲೆ ಕೂತಿದ್ದ ಒಬ್ಬ ಸ್ತ್ರೀಯನ್ನು ಕಂಡೆನು; ಆ ಮೃಗದ ಮೈಮೇಲೆಲ್ಲಾ ದೇವದೂಷಣೆಯ ಹೆಸರುಗಳು ತುಂಬಿದ್ದವು.


ನಾನು ಕರ್ತನ ದಿನದಲ್ಲಿ ದೇವರಾತ್ಮವಶನಾಗಿ ನನ್ನ ಹಿಂದುಗಡೆ ತುತೂರಿಯ ಶಬ್ದದಂತಿರುವ ಮಹಾ ಶಬ್ದವನ್ನು ಕೇಳಿದೆನು.


ಮೂಸ್ಯಕ್ಕೆ ಎದುರಾಗಿ ಬಂದಾಗ ಬಿಥೂನ್ಯಕ್ಕೆ ಹೋಗುವ ಪ್ರಯತ್ನಮಾಡಿದರು. ಅಲ್ಲಿಯೂ ಯೇಸುವಿನ ಆತ್ಮನು ಅವರನ್ನು ಹೋಗಗೊಡಿಸಲಿಲ್ಲ.


ದೇವರಾತ್ಮನು - ನೀನು ಏನೂ ಭೇದಮಾಡದೆ ಅವರ ಜೊತೆಯಲ್ಲಿ ಹೋಗು ಎಂದು ನನಗೆ ಹೇಳಿದನು. ಈ ಆರು ಮಂದಿ ಸಹೋದರರು ಸಹ ನನ್ನ ಸಂಗಡ ಬಂದರು.


ದೇವರಾತ್ಮನು ಫಿಲಿಪ್ಪನಿಗೆ - ನೀನು ಆ ರಥದ ಹತ್ತಿರ ಹೋಗಿ ಅದರ ಸಂಗಡಲೇ ನಡೆ ಎಂದು ಹೇಳಿದನು.


ಯೇಸು ಪವಿತ್ರಾತ್ಮಭರಿತನಾಗಿ ಯೊರ್ದನ್‍ಹೊಳೆಯಿಂದ ಹಿಂತಿರುಗಿ ದೇವರಾತ್ಮನಿಂದ ನಾಲ್ವತ್ತು ದಿವಸ ಅಡವಿಯಲ್ಲಿ ನಡಿಸಲ್ಪಡುತ್ತಾ ಸೈತಾನನಿಂದ ಶೋಧಿಸಲ್ಪಟ್ಟನು.


ಬಳಿಕ ಮೋಶೆಯ ನೇಮದ ಪ್ರಕಾರ ಅವರ ಸೂತಕ ಕಳೆಯುವದಕ್ಕೆ ತಕ್ಕಷ್ಟು ದಿವಸಗಳು ತುಂಬಲು ಅವರು ಆ ಕೂಸನ್ನು ಯೆರೂಸಲೇವಿುಗೆ ತೆಗೆದುಕೊಂಡು ಹೋದರು.


ಆಗ ಯೇಸು ಸೈತಾನನಿಂದ ಶೋಧಿಸಲ್ಪಡುವದಕ್ಕಾಗಿ ಆತ್ಮನು ಆತನನ್ನು ಅಡವಿಗೆ ಒಯ್ದನು.


ಆಮೇಲೆ ನಾನು ಕ್ರಯಪತ್ರವನ್ನು, ಅಂದರೆ ಚಕ್ಕುಬಂದಿಷರತ್ತುಗಳಿಂದೊಡಗೂಡಿ ಮುಚ್ಚಿದ್ದ ಪತ್ರವನ್ನೂ ಮುಚ್ಚಳದ ಪತ್ರವನ್ನೂ ತೆಗೆದುಕೊಂಡು


ಅವನು ಅದನ್ನು ತನ್ನ ಕೈಯಲ್ಲಿ ತಕ್ಕೊಂಡು ದೇವರನ್ನು ಕೊಂಡಾಡಿ -


ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಾಧೀನರಾದವರನ್ನು ವಿಮೋಚಿಸಬೇಕೆಂತಲೂ ಪುತ್ರರ ಪದವಿಯನ್ನು ನಮಗೆ ದೊರಕಿಸಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ ಧರ್ಮಶಾಸ್ತ್ರಧೀನನಾಗಿಯೂ ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು