Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:29 - ಕನ್ನಡ ಸತ್ಯವೇದವು J.V. (BSI)

29 ಒಡೆಯನೇ, ನಿನ್ನ ಮಾತು ನೆರವೇರಿತು; ಈಗ ಸಮಾಧಾನದಿಂದ ಹೋಗುವದಕ್ಕೆ ನಿನ್ನ ದಾಸನಿಗೆ ಅಪ್ಪಣೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 “ಕರ್ತನೇ, ನಿನ್ನ ಮಾತು ನೆರವೇರಿತು; ಈಗ ಸಮಾಧಾನದಿಂದ ಹೋಗುವುದಕ್ಕೆ ನಿನ್ನ ದಾಸನಿಗೆ ಅಪ್ಪಣೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 “ನಿನ್ನ ಮಾತು ಸರ್ವೇಶ್ವರಾ, ನೆರವೇರಿತಿಂದು ಇನ್ನು ತೆರಳಬಿಡು ಶಾಂತಿಯಿಂದ ನಿನ್ನ ದಾಸನಾದ ಎನ್ನನ್ನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ಪ್ರಭುವೇ, ನಿನ್ನ ವಾಗ್ದಾನದಂತೆ ಸಮಾಧಾನದಿಂದ ಸಾಯಲು ನಿನ್ನ ದಾಸನಿಗೆ ಅಪ್ಪಣೆಯಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ಸರ್ವೇಶ್ವರರಾದ ಕರ್ತದೇವರೇ, ನಿಮ್ಮ ವಾಗ್ದಾನದ ಪ್ರಕಾರ, ನಿಮ್ಮ ದಾಸನನ್ನು ಸಮಾಧಾನದಿಂದ ಈಗ ಕಳುಹಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

29 “ಸರ್ವೆಸ್ವರಾ ಅತ್ತಾ ತುಜ್ಯಾ ಸೆವಕಾಕ್ ಸಮಾದಾನಾನ್ ಜಾವ್ಕ್ ಸೊಡ್. ತಿಯಾ ಸಾಂಗಟಲ್ಲಿ ಗೊಸ್ಟ್ ತಿಯಾ ಖರಿ ಕರ್‍ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:29
9 ತಿಳಿವುಗಳ ಹೋಲಿಕೆ  

ಪರಲೋಕದಿಂದ ಒಂದು ಶಬ್ದವು ನನಗೆ ಕೇಳಿಸಿತು. ಅದು - ಇಂದಿನಿಂದ ಕರ್ತನ ಭಕ್ತರಾಗಿ ಸಾಯುವವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿತು. ಅದಕ್ಕೆ ಆತ್ಮನು - ಹೌದು, ಅವರು ಧನ್ಯರೇ; ಅವರ ಕಷ್ಟ ತೀರಿತು, ಅವರಿಗೆ ವಿಶ್ರಾಂತಿಯಾಗುವದು; ಅವರ ಸುಕೃತ್ಯಗಳು ಅವರೊಡನೆ ಬರುವವು ಎಂದು ಹೇಳುತ್ತಾನೆ.


ನೀನಂತೂ ಸಮಾಧಾನದೊಡನೆ ಪಿತೃಗಳ ಬಳಿಗೆ ಸೇರುವಿ; ತುಂಬಾ ವೃದ್ಧನಾಗಿ ಉತ್ತರಕ್ರಿಯೆಯನ್ನು ಹೊಂದುವಿ.


ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ;


ಇದಲ್ಲದೆ, ಕರ್ತನು ಕಳುಹಿಸಬೇಕಾದ ಕ್ರಿಸ್ತನನ್ನು ಕಾಣುವದಕ್ಕಿಂತ ಮುಂಚೆ ನೀನು ಸಾಯುವದಿಲ್ಲವೆಂದು ಪವಿತ್ರಾತ್ಮನ ಮೂಲಕ ಅವನಿಗೆ ದೈವೋಕ್ತಿ ಉಂಟಾಗಿತ್ತು.


ಒಳ್ಳೇ ನಡತೆಯುಳ್ಳವನನ್ನು ನೋಡು, ಯಥಾರ್ಥನನ್ನು ಲಕ್ಷಿಸು; ಶಾಂತನಿಗೆ ಸಂತಾನವೃದ್ಧಿ ಆಗುವದು.


ಇಸ್ರಾಯೇಲನು ಯೋಸೇಫನಿಗೆ - ನಾನು ನಿನ್ನ ಮುಖವನ್ನು ಕಂಡು ನೀನು ಇನ್ನೂ ಜೀವದಿಂದಿರುವದನ್ನು ತಿಳುಕೊಂಡದ್ದರಿಂದ ಸಂತೃಪ್ತನಾಗಿ ಸಾಯುವೆನು ಎಂದು ಹೇಳಿದನು.


ಅವನು ಅದನ್ನು ತನ್ನ ಕೈಯಲ್ಲಿ ತಕ್ಕೊಂಡು ದೇವರನ್ನು ಕೊಂಡಾಡಿ -


ಅವರು - ಒಡೆಯನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂನಿವಾಸಿಗಳು ನಮ್ಮನ್ನು ಕೊಂದದ್ದಕ್ಕಾಗಿ ನೀನು ಎಷ್ಟು ಕಾಲದವರೆಗೂ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ? ಎಂದು ಮಹಾಶಬ್ದದಿಂದ ಕೂಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು