Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:34 - ಕನ್ನಡ ಸತ್ಯವೇದವು J.V. (BSI)

34 ಸಿಮೆಯೋನನು ಅವರನ್ನು ಆಶೀರ್ವದಿಸಿ ತಾಯಿಯಾದ ಮರಿಯಳಿಗೆ - ಇಗೋ, ಈತನು ಇಸ್ರಾಯೇಲ್ ಜನರಲ್ಲಿ ಅನೇಕರು ಬೀಳುವದಕ್ಕೂ ಅನೇಕರು ಏಳುವದಕ್ಕೂ ಕಾರಣನಾಗಿರುವನು; ಮತ್ತು ಜನರು ಎದುರು ಮಾತಾಡುವದಕ್ಕೆ ಗುರುತಾಗಿರುವನು; ಹೀಗೆ ಬಹುಜನರ ಅಂತರಂಗದ ವಿಚಾರಗಳು ಬೈಲಿಗೆ ಬಂದಾವು; ಇದಕ್ಕೆ ಈತನು ಹುಟ್ಟಿದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಸಿಮೆಯೋನನು ಅವರನ್ನು ಆಶೀರ್ವದಿಸಿ ತಾಯಿಯಾದ ಮರಿಯಳಿಗೆ, “ಇಗೋ, ಈತನು ಇಸ್ರಾಯೇಲ್ ಜನರಲ್ಲಿ ಅನೇಕರು ಬೀಳುವುದಕ್ಕೂ, ಅನೇಕರು ಏಳುವುದಕ್ಕೂ ಕಾರಣನಾಗಿರುವನು ಮತ್ತು ಜನರು ವಿರೋಧಿಸಿ ಮಾತನಾಡುವುದಕ್ಕೂ ಗುರುತಾಗಿರುವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಅವರನ್ನು ಸಿಮೆಯೋನನು ಆಶೀರ್ವದಿಸಿದನು. ತಾಯಿ ಮರಿಯಳಿಗೆ, “ಇಗೋ, ಈ ಮಗು ಇಸ್ರಯೇಲರಲ್ಲಿ ಅನೇಕರ ಉನ್ನತಿಗೂ ಅನೇಕರ ಅವನತಿಗೂ ಕಾರಣನಾಗುವನು. ಅನೇಕರು ಪ್ರತಿಭಟಿಸುವ ದೈವಸಂಕೇತವಾಗುವನು. ಇದರಿಂದ ಅನೇಕರ ಹೃದಯದಾಳದ ಭಾವನೆಗಳು ಬಯಲಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಬಳಿಕ ಸಿಮೆಯೋನನು ಅವರನ್ನು ಆಶೀರ್ವದಿಸಿ ಮರಿಯಳಿಗೆ, “ಈ ಮಗುವಿನ ನಿಮಿತ್ತ ಯೆಹೂದ್ಯರಲ್ಲಿ ಅನೇಕರು ಬೀಳುವರು. ಅನೇಕರು ಏಳುವರು. ಕೆಲವರು ಅಂಗೀಕರಿಸರು ಎಂಬುದಕ್ಕೆ ಈತನು ದೇವರಿಂದ ಬಂದ ಗುರುತಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಅನಂತರ ಸಿಮೆಯೋನನು ಅವರನ್ನು ಆಶೀರ್ವದಿಸಿ, ಶಿಶುವಿನ ತಾಯಿ ಮರಿಯಳಿಗೆ, “ಇಗೋ, ಇಸ್ರಾಯೇಲಿನಲ್ಲಿ ಅನೇಕರು ಬೀಳುವುದಕ್ಕೂ ಏಳುವುದಕ್ಕೂ ಈ ಮಗು ನೇಮಕವಾಗಿದೆ, ಜನರು ಎದುರು ಮಾತನಾಡುವುದಕ್ಕೆ ಈ ಮಗು ಗುರುತಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

34 ಸಿಮಾವಾನ್ ತೆಂಕಾ ಆಶಿರ್ವಾದ್ ದಿಲ್ಯಾನ್‍, ಅನಿ ಮರಿಕ್, ಹ್ಯೊ ಪೊರ್ ದೆವಾನ್ ಧಾಡಲ್ಲಿ ಎಕ್ ವಳಕ್ ಹೊತಾ ಇಸ್ರಾಯೆಲಾತ್ಲ್ಯಾ ಸುಮಾರ್ ಲೊಕಾಕ್ನಿ ಪಡುಕ್ ಅನಿ ಉಟುಕ್, ಕಾರನ್ ಹೊತಾ. ಖರೆ ಸುಮಾರ್ ಲೊಕಾ ಹೆಚ್ಯಾ ವಿಶಯಾತ್ ಹುರ್‍ಪಾಟಿ ಬೊಲ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:34
38 ತಿಳಿವುಗಳ ಹೋಲಿಕೆ  

ನಾವಾದರೋ ಶಿಲುಬೆಗೆ ಹಾಕಲ್ಪಟ್ಟವನಾದ ಕ್ರಿಸ್ತನನ್ನು ಪ್ರಚುರಪಡಿಸುತ್ತೇವೆ. ಇಂಥ ಕ್ರಿಸ್ತನ ಸಂಗತಿಯು ಯೆಹೂದ್ಯರಿಗೆ ವಿಘ್ನವೂ ಅನ್ಯಜನರಿಗೆ ಹುಚ್ಚುಮಾತೂ ಆಗಿದೆ;


ಈ ಕಲ್ಲಿನ ಮೇಲೆ ಬೀಳುವವನು ತುಂಡುತುಂಡಾಗುವನು; ಇದು ಯಾರ ಮೇಲೆ ಬೀಳುತ್ತದೋ ಅವನನ್ನು ಪುಡಿಪುಡಿಮಾಡುವದು ಎಂದು ಹೇಳಿದನು.


ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು; ಯೆಹೋವನ ಮಾರ್ಗಗಳು ರುಜುವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಎಡವಿಬೀಳುವರು.


ನೀವು ಕ್ರಿಸ್ತನ ಹೆಸರಿನ ನಿವಿುತ್ತ ನಿಂದೆಗೆ ಗುರಿಯಾದರೆ ಧನ್ಯರೇ; ತೇಜೋಮಯವಾದ ಆತ್ಮನಾಗಿರುವ ದೇವರಾತ್ಮನು ನಿಮ್ಮಲ್ಲಿ ನೆಲೆಗೊಂಡಿದ್ದಾನಲ್ಲಾ.


ಆಶೀರ್ವಾದ ಹೊಂದುವವನಿಗಿಂತ ಆಶೀರ್ವದಿಸುವವನು ದೊಡ್ಡವನು ಎಂಬದು ವಿವಾದವಿಲ್ಲದ ಮಾತಷ್ಟೆ.


ಅದಕ್ಕೆ ಕಾರಣವೇನು? ಅವರು ನಂಬಿಕೆಯನ್ನು ಆಧಾರಮಾಡಿಕೊಳ್ಳದೆ ನೇಮನಿಷ್ಠೆಗಳನ್ನು ಆಧಾರಮಾಡಿಕೊಂಡದ್ದೇ ಕಾರಣ.


ಮತ್ತು ದೇವರ ವಾಕ್ಯವು ಪ್ರಬಲವಾಯಿತು. ಶಿಷ್ಯರ ಸಂಖ್ಯೆಯು ಯೆರೂಸಲೇವಿುನಲ್ಲಿ ಬಹಳವಾಗಿ ಹೆಚ್ಚುತ್ತಾ ಬಂತು. ಯಾಜಕರಲ್ಲಿಯೂ ಬಹುಜನರು ಕ್ರಿಸ್ತನಂಬಿಕೆಗೆ ಒಳಗಾಗುತ್ತಾ ಇದ್ದರು.


ಈ ಮನುಷ್ಯನು ಪೀಡೆಯಂತಿದ್ದು ಲೋಕದಲ್ಲಿ ಎಲ್ಲೆಲ್ಲಿಯೂ ಇರುವ ಎಲ್ಲಾ ಯೆಹೂದ್ಯರಲ್ಲಿ ದಂಗೆಯನ್ನು ಎಬ್ಬಿಸುವವನೆಂತಲೂ ನಜರೇತಿನವರ ಪಾಷಂಡಮತದಲ್ಲಿ ಪ್ರಮುಖನೆಂತಲೂ ಕಂಡೆವು.


ಅವರು ಸಿಕ್ಕದೆ ಹೋದದ್ದರಿಂದ ಆ ಜನರು ಯಾಸೋನನನ್ನೂ ಕೆಲವು ಮಂದಿ ಸಹೋದರರನ್ನೂ ಊರಿನ ಅಧಿಕಾರಿಗಳ ಬಳಿಗೆ ಎಳಕೊಂಡು ಹೋಗಿ - ಲೋಕವನ್ನು ಅಲ್ಲಕಲ್ಲೋಲ ಮಾಡಿದ ಆ ಮನುಷ್ಯರು ಇಲ್ಲಿಗೂ ಬಂದಿದ್ದಾರೆ,


ಆದರೆ ಜನರು ಗುಂಪುಗುಂಪಾಗಿ ಬರುವದನ್ನು ನೋಡಿ ಯೆಹೂದ್ಯರು ಮತಾಭಿಮಾನದಿಂದ ತುಂಬಿದವರಾಗಿ ಪೌಲನು ಹೇಳಿದ ಮಾತುಗಳಿಗೆ ಎದುರ್ಚಂಡಿಸುತ್ತಾ ದೂಷಣೆ ಮಾಡುತ್ತಾ ಇದ್ದರು.


ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ವಿರೋಧವಾಗಿ ಭೂಪತಿಗಳು ಸನ್ನದ್ಧರಾಗಿ ನಿಂತರು, ಅಧಿಕಾರಿಗಳು ಏಕವಾಗಿ ಕೂಡಿಕೊಂಡರು ಎಂದು ಹೇಳಿಸಿದಿಯಲ್ಲವೇ.


ಈ ಮಾತನ್ನು ಹೇಳಿದ್ದರಿಂದ ಆತನು ಸಬ್ಬತ್‍ದಿನವನ್ನು ಅಲಕ್ಷ್ಯಮಾಡಿದ್ದಲ್ಲದೆ ದೇವರನ್ನು ತನ್ನ ತಂದೆ ಎಂದು ಹೇಳಿ ತನ್ನನ್ನು ದೇವರಿಗೆ ಸರಿಗಟ್ಟಿಕೊಂಡನೆಂದು ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಮತ್ತಷ್ಟು ಪ್ರಯತ್ನಮಾಡಿದರು.


ಕೆಟ್ಟದ್ದನ್ನು ಮಾಡುವವರು ಬೆಳಕನ್ನು ಸಹಿಸುವದಿಲ್ಲ, ತಮ್ಮ ಕೃತ್ಯಗಳು ದುಷ್ಕೃತ್ಯಗಳಾಗಿ ತೋರಿಬಂದಾವೆಂದು ಬೆಳಕಿಗೆ ಬರುವದಿಲ್ಲ;


ದೊರೆಯೇ, ಆ ಮೋಸಗಾರನು ಬದುಕಿದ್ದಾಗ ತಾನು ಮೂರು ದಿನದ ಮೇಲೆ ಏಳುತ್ತೇನೆ ಅಂತ ಹೇಳಿದ್ದು ನಮ್ಮ ನೆನಪಿಗೆ ಬಂತು;


ಆತನು ಜನರ ಗುಂಪುಗಳ ಸಂಗಡ ಇನ್ನೂ ಮಾತಾಡುತ್ತಿರುವಾಗ ಆತನ ತಾಯಿಯೂ ಸಹೋದರರೂ ಆತನನ್ನು ಮಾತಾಡಿಸಬೇಕೆಂದು ಹೊರಗೆ ನಿಂತಿದ್ದರು.


ಮನುಷ್ಯಕುಮಾರನು ಬಂದನು, ಅವನು ಅನ್ನಪಾನಗಳನ್ನು ತೆಗೆದುಕೊಳ್ಳುವವನಾಗಿದ್ದಾನೆ; ಅವರು - ಇಗೋ, ಇವನು ಹೊಟ್ಟೆಬಾಕನು, ಕುಡುಕನು, ಭ್ರಷ್ಟರ ಮತ್ತು ಪಾಪಿಷ್ಠರ ಗೆಳೆಯನು ಅನ್ನುತ್ತಾರೆ. ಆದರೆ ಜ್ಞಾನವು ತನ್ನ ಕೆಲಸಗಳಿಂದ ಜ್ಞಾನವೇ ಎಂದು ಗೊತ್ತಾಗುವದು ಅಂದನು.


ಆಹಾ, ನಾನೂ ನನಗೆ ಯೆಹೋವನು ದಯಪಾಲಿಸಿರುವ ಮಕ್ಕಳೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ ಸೇನಾಧೀಶ್ವರನಾದ ಯೆಹೋವನಿಂದುಂಟಾದ ಗುರುತುಗಳಾಗಿಯೂ ಅದ್ಭುತಗಳಾಗಿಯೂ ಇಸ್ರಾಯೇಲ್ಯರ ಮಧ್ಯದಲ್ಲಿದ್ದೇವೆ.


ಅವರು ಮಾಡಿದ್ದ ಕೆಲಸವನ್ನು ಮೋಶೆ ಪರೀಕ್ಷಿಸಲಾಗಿ ಯೆಹೋವನ ಅಪ್ಪಣೆಯಂತೆಯೇ ಅವರು ಎಲ್ಲವನ್ನು ಮಾಡಿ ಮುಗಿಸಿದರೆಂದು ತಿಳುಕೊಂಡು ಅವರನ್ನು ಆಶೀರ್ವದಿಸಿದನು.


ಯೋಸೇಫನು ತನ್ನ ತಂದೆಯಾದ ಯಾಕೋಬನನ್ನು ಕರಕೊಂಡು ಫರೋಹನ ಸನ್ನಿಧಿಯಲ್ಲಿ ನಿಲ್ಲಿಸಲು ಯಾಕೋಬನು ಫರೋಹನನ್ನು ಆಶೀರ್ವದಿಸಿದನು.


ಭೂಮ್ಯಾಕಾಶಗಳನ್ನು ನಿರ್ಮಾಣಮಾಡಿದ ಪರಾತ್ಪರನಾದ ದೇವರ ಆಶೀರ್ವಾದವು ಅಬ್ರಾಮನಿಗೆ ಆಗಲಿ;


ಈ ಮೆಲ್ಕಿಜೆದೇಕನು ಸಾಲೇವಿುನ ಅರಸನೂ ಪರಾತ್ಪರನಾದ ದೇವರ ಯಾಜಕನೂ ಆಗಿದ್ದನು; ರಾಜರನ್ನು ಹೊಡೆದು ಹಿಂತಿರುಗಿ ಬರುತ್ತಿದ್ದ ಅಬ್ರಹಾಮನನ್ನು ಎದುರುಗೊಂಡು ಅವನನ್ನು ಆಶೀರ್ವದಿಸಿದನು;


ಆದರೆ ನಿನ್ನ ಅಭಿಪ್ರಾಯವನ್ನು ನಿನ್ನಿಂದಲೇ ಕೇಳುವದು ನಮಗೆ ಯುಕ್ತವೆಂದು ತೋರುತ್ತದೆ. ಆ ಮತದ ವಿಷಯದಲ್ಲಿ ಜನರು ಎಲ್ಲೆಲ್ಲಿಯೂ ವಿರುದ್ಧವಾಗಿ ಮಾತಾಡುತ್ತಾರೆಂಬದೊಂದೇ ನಮಗೆ ಗೊತ್ತದೆ ಅಂದರು.


ಏಲಿಯು ಎಲ್ಕಾನನಿಗೆ - ನೀನು ಯೆಹೋವನಿಗೆ ಒಪ್ಪಿಸಿಬಿಟ್ಟ ಮಗನಿಗೆ ಬದಲಾಗಿ ಆತನು ಈ ಸ್ತ್ರೀಯಿಂದ ನಿನಗೆ ಬೇರೆ ಮಕ್ಕಳನ್ನು ಕೊಡಲಿ ಎಂದು ಹೇಳಿ ಅವನನ್ನೂ ಅವನ ಹೆಂಡತಿಯನ್ನೂ ಆಶೀರ್ವದಿಸುತ್ತಿದ್ದನು. ಅನಂತರ ಅವರು ತಿರಿಗಿ ಸ್ವಸ್ಥಳಕ್ಕೆ ಹೋಗುತ್ತಿದ್ದರು.


ಇದಲ್ಲದೆ ನಿನ್ನ ಪ್ರಾಣಕ್ಕಂತೂ ಅಲಗು ನಾಟಿದಂತಾಗುವದು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು