Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 2:4 - ಕನ್ನಡ ಸತ್ಯವೇದವು J.V. (BSI)

4-5 ಯೋಸೇಫನು ಸಹ ತಾನು ದಾವೀದನ ಮನೆತನದವನೂ ಗೋತ್ರದವನೂ ಆಗಿದ್ದದರಿಂದ ಹೆಸರು ಬರಸಿಕೊಳ್ಳುವದಕ್ಕಾಗಿ ತನಗೆ ನಿಶ್ಚಿತಾರ್ಥವಾಗಿದ್ದ ಮರಿಯಳ ಸಂಗಡ ಗಲಿಲಾಯಸೀಮೆಯ ನಜರೇತ್ ಎಂಬ ಊರಿನಿಂದ ಹೊರಟು ಯೂದಾಯದಲ್ಲಿರುವ ಬೇತ್ಲೆಹೇಮೆಂಬ ದಾವೀದನೂರಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4-5 ಯೋಸೇಫನು ಸಹ ತಾನು ದಾವೀದನ ಮನೆತನದವನೂ, ಗೋತ್ರದವನೂ ಆಗಿದ್ದದರಿಂದ ಹೆಸರು ನೊಂದಾಯಿಸಿಕೊಳ್ಳುವುದಕ್ಕಾಗಿ ತನಗೆ ನಿಶ್ಚಿತಾರ್ಥವಾಗಿದ್ದ ಹಾಗೂ ಗರ್ಭವತಿಯಾಗಿದ್ದ ಮರಿಯಳ ಸಂಗಡ ಗಲಿಲಾಯ ಸೀಮೆಯ ನಜರೇತ್ ಎಂಬ ಊರಿನಿಂದ ಹೊರಟು ಯೂದಾಯದಲ್ಲಿರುವ ಬೇತ್ಲೆಹೇಮೆಂಬ ದಾವೀದನೂರಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಜೋಸೆಫನು ದಾವೀದನ ಮನೆತನದವನು ಹಾಗೂ ಗೋತ್ರದವನು. ಆದುದರಿಂದ ಅವನೂ ಗಲಿಲೇಯ ಪ್ರಾಂತ್ಯದ ನಜರೇತ್ ಎಂಬ ಊರಿನಿಂದ ಹೊರಟು ಜುದೇಯ ನಾಡಿನ ಬೆತ್ಲೆಹೇಮೆಂಬ ದಾವೀದನ ಊರಿಗೆಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದ್ದರಿಂದ ಯೋಸೇಫನು ಗಲಿಲಾಯದಲ್ಲಿನ ನಜರೇತ್ ಎಂಬ ಊರಿನಿಂದ ಹೊರಟು ಜುದೇಯದಲ್ಲಿನ ಬೆತ್ಲೆಹೇಮ್ ಎಂಬ ಊರಿಗೆ ಹೋದನು. ಯೋಸೇಫನು ದಾವೀದನ ಮನೆತನದವನಾಗಿದ್ದುದರಿಂದ ದಾವೀದನ ಊರಾದ ಬೆತ್ಲೆಹೇಮಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೋಸೇಫನು ದಾವೀದನ ಕುಟುಂಬದವನೂ ವಂಶದವನೂ ಆಗಿದ್ದರಿಂದ, ಅವನು ಸಹ ಗಲಿಲಾಯ ಪ್ರಾಂತದ ನಜರೇತೆಂಬ ಪಟ್ಟಣದಿಂದ ಯೂದಾಯ ಪ್ರಾಂತದ ಬೇತ್ಲೆಹೇಮ್ ಎಂಬ ದಾವೀದನ ಪಟ್ಟಣಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತೆಚೆಸಾಟ್ನಿ ಜುಜೆಬಿ ಗಾಲಿಲಿಯಾಚ್ಯಾ ನಜರೆತ್ ಮನ್ತಲ್ಯಾ ಗಾವಾತ್ನಾ, ದಾವಿದ್ ರಾಜಾಚ್ಯಾ ಉಪಾಜಲ್ಲ್ಯಾ ಗಾವಾಕ್, ಜುದೆಯಾಚ್ಯಾ ಬೆತ್ಲೆಹೆಮಾಕ್ ಗೆಲೊ.ತೊ ದಾವಿದಾಚ್ಯಾ ಘರಾನ್ಯಾಚೊ, ತಸೆ ಮನುನ್ ತೊ ಥೈ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 2:4
24 ತಿಳಿವುಗಳ ಹೋಲಿಕೆ  

ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು; ಆತನ ಹೊರಡೋಣದ ಮೂಲವು ಪುರಾತನವೂ ಅನಾದಿಯೂ ಆದದ್ದು.


ಇನ್ನೂ ಕೆಲವರು - ಕ್ರಿಸ್ತನು ಗಲಿಲಾಯದಿಂದ ಬರುವದು ಹೇಗೆ? ದಾವೀದನ ಸಂತಾನದಿಂದಲೂ ದಾವೀದನು ಇದ್ದ ಬೇತ್ಲೆಹೇಮೆಂಬ ಗ್ರಾಮದಿಂದಲೂ ಕ್ರಿಸ್ತನು ಬರುವನು ಎಂಬದಾಗಿ ಶಾಸ್ತ್ರದಲ್ಲಿ ಉಂಟಲ್ಲವೇ ಎಂದು ಹೇಳಿದರು.


ಯೆಹೋವನು ಸಮುವೇಲನಿಗೆ - ನಾನು ಸೌಲನನ್ನು ಇಸ್ರಾಯೇಲ್ಯರ ಅರಸನಾಗಿರುವದಕ್ಕೆ ಅಯೋಗ್ಯನೆಂದು ತಳ್ಳಿ ಬಿಟ್ಟೆನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇವಿುನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ ಎಂದು ಹೇಳಿದನು.


ಹೀಗಿರಲಾಗಿ ಆತನು ತಾನು ಬೆಳೆದ ನಜರೇತಿಗೆ ಬಂದು ತನ್ನ ವಾಡಿಕೆಯ ಪ್ರಕಾರ ಸಬ್ಬತ್‍ದಿನದಲ್ಲಿ ಸಭಾಮಂದಿರಕ್ಕೆ ಹೋಗಿ ಓದುವದಕ್ಕಾಗಿ ಎದ್ದು ನಿಂತನು.


ಮತ್ತು ನಜರೇತೆಂಬ ಊರಿಗೆ ಬಂದು ಅಲ್ಲಿ ಮನೆಮಾಡಿಕೊಂಡು ಇದ್ದನು. ಇದರಿಂದ - ನಜರಾಯನೆಂಬ ಹೆಸರು ಆತನಿಗೆ ಬರುವದು ಎಂಬದಾಗಿ ಪ್ರವಾದಿಗಳಿಂದ ಹೇಳಿಸಿರುವ ಮಾತು ನೆರವೇರಿತು.


ನಿನ್ನ ತಂದೆಯು ನನ್ನನ್ನು ಕುರಿತು ವಿಚಾರಮಾಡಿದರೆ ನೀನು - ದಾವೀದನು ತನ್ನ ಊರಾದ ಬೇತ್ಲೆಹೇವಿುಗೆ ಹೋಗಿ ಬರುವದಕ್ಕೆ ಅಪ್ಪಣೆಯಾಗಬೇಕೆಂದು ನನ್ನನ್ನು ಬಹಳವಾಗಿ ಬೇಡಿಕೊಂಡನು; ಅವನ ಗೋತ್ರದವರು ಅಲ್ಲಿ ವಾರ್ಷಿಕಯಜ್ಞ ಮಾಡುತ್ತಾರಂತೆ ಎಂದು ಹೇಳು.


ನೆರೆಹೊರೆಯ ಹೆಂಗಸರು ನೊವೊವಿುಗೆ ಒಬ್ಬ ಮಗನು ಹುಟ್ಟಿದ್ದಾನೆಂದು ಹೇಳಿ ಅವನಿಗೆ ಓಬೇದನೆಂದು ಹೆಸರಿಟ್ಟರು. ಇವನೇ ಇಷಯನಿಗೆ ತಂದೆಯೂ ದಾವೀದನಿಗೆ ಅಜ್ಜನೂ ಆದನು.


ಇದಕ್ಕೆ ನೀವು ಸಾಕ್ಷಿಗಳು ಎಂದು ಹೇಳಿದ್ದಕ್ಕೆ ಊರುಬಾಗಲಲ್ಲಿ ಕೂಡಿದ್ದ ಹಿರಿಯರೂ ಎಲ್ಲಾ ಜನರೂ - ಹೌದು, ನಾವು ಸಾಕ್ಷಿಗಳು; ಯೆಹೋವನು ಇಸ್ರಾಯೇಲನ ಮನೆಯನ್ನು ಕಟ್ಟಿದ ರಾಹೇಲ್, ಲೇಯಾ ಎಂಬ ಸ್ತ್ರೀಯರನ್ನು ಹೇಗೋ ಹಾಗೆಯೇ ನಿನ್ನ ಮನೆಗೆ ಬರುವ ಈ ಸ್ತ್ರೀಯನ್ನೂ ಅಭಿವೃದ್ಧಿಪಡಿಸಲಿ. ಎಫ್ರಾತದಲ್ಲಿ ಸತ್ಕಾರ್ಯವನ್ನು ಮಾಡು; ಬೇತ್ಲೆಹೇವಿುನಲ್ಲಿ ಘನವಂತನಾಗು.


ಆಗ ಬೋವಜನು ಬೇತ್ಲೆಹೇವಿುನಿಂದ ಹೊಲಕ್ಕೆ ಬಂದು ಕೊಯ್ಯುವವರಿಗೆ - ಯೆಹೋವನು ನಿಮ್ಮ ಸಂಗಡ ಇರಲಿ ಅಂದನು. ಅವರು - ಯೆಹೋವನು ನಿನ್ನನ್ನು ಆಶೀರ್ವದಿಸಲಿ ಎಂದು ಹರಸಿದರು.


ನತಾನಯೇಲನು - ಒಳ್ಳೇದೇನಾದರೂ ನಜರೇತಿನಿಂದ ಬರುವದುಂಟೇ? ಅಂದಾಗ ಫಿಲಿಪ್ಪನು - ಬಂದು ನೋಡು ಅಂದನು.


ಸೌಲನು ಅವನನ್ನು - ಹುಡುಗನೇ, ನೀನು ಯಾರ ಮಗನೆಂದು ಕೇಳಿದ್ದಕ್ಕೆ ಅವನು - ನಾನು ಬೇತ್ಲೆಹೇವಿುನವನೂ ನಿನ್ನ ಸೇವಕನೂ ಆದ ಇಷಯನ ಮಗನು ಎಂದು ಉತ್ತರಕೊಟ್ಟನು.


ಯೆಹೂದದ ಬೇತ್ಲೆಹೇಮ್ ಊರಿನ ಎಫ್ರಾತ್ಯನಾದ ಇಷಯನೆಂಬವನು ಸೌಲನ ಕಾಲದಲ್ಲಿ ಬಹು ವೃದ್ಧನಾಗಿದ್ದನು. ಇವನ ಎಂಟು ಮಂದಿ ಮಕ್ಕಳಲ್ಲಿ ದಾವೀದನೆಂಬವನು ಒಬ್ಬನು.


ಯೆಹೋವನು ಹೇಳಿದಂತೆಯೇ ಸಮುವೇಲನು ಬೇತ್ಲೆಹೇವಿುಗೆ ಹೋದನು. ಆ ಊರಿನ ಹಿರಿಯರು ನಡುಗುತ್ತಾ ಬಂದು ಅವನನ್ನು ಎದುರುಗೊಂಡು ನಿನ್ನ ಆಗಮನವು ನಮಗೆ ಶುಭಕರವಾಗಿದೆಯೇ ಎಂದು ಕೇಳಲು ಅವನು -


ಹಾಗೆಯೇ ಪ್ರಯಾಣ ಮಾಡಿಕೊಂಡು ಅವರಿಬ್ಬರೂ ಬೇತ್ಲೆಹೇವಿುಗೆ ಬಂದು ಊರೊಳಕ್ಕೆ ಹೋದಾಗ ಅಲ್ಲೆಲ್ಲಾ ಗದ್ದಲವಾಯಿತು. ಸ್ತ್ರೀಯರು - ಈಕೆಯು ನೊವೊವಿುಯಲ್ಲವೋ ಎಂದು ಮಾತಾಡತೊಡಗಲು


ನಾನು ಪದ್ದನ್ಅರಾವಿುನಿಂದ ಬರುತ್ತಿರಲು ಕಾನಾನ್‍ದೇಶದಲ್ಲಿ ಎಫ್ರಾತನ್ನು ಸೇರುವದಕ್ಕೆ ಇನ್ನೂ ಸ್ವಲ್ಪ ದೂರವಿದ್ದಾಗ ರಾಹೇಲಳು ದಾರಿಯಲ್ಲೇ ಸತ್ತು ನನ್ನನ್ನು ಅಗಲಿಹೋದಳು. ಬೇತ್ಲೆಹೇಮೆಂಬ ಎಫ್ರಾತಿಗೆ ಹೋಗುವ ಮಾರ್ಗದಲ್ಲಿ ಆಕೆಗೆ ಸಮಾಧಿ ಮಾಡಿದೆನು ಎಂದು ಹೇಳಿದನು.


ಬೇತ್ಲೆಹೇಮೆಂಬ ಎಫ್ರಾತಿಗೆ ಹೋಗುವ ದಾರಿಯಲ್ಲಿ ಆಕೆಗೆ ಸಮಾಧಿಮಾಡಿದರು.


ಅವನು ಇದನ್ನು ಆಲೋಚಿಸುತ್ತಿರುವಾಗ ಕರ್ತನ ದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು - ಎಲೈ ಯೋಸೇಫನೇ, ದಾವೀದನ ವಂಶದವನೇ, ನಿನ್ನ ಹೆಂಡತಿಯಾದ ಮರಿಯಳನ್ನು ಸೇರಿಸಿಕೊಳ್ಳುವದಕ್ಕೆ ಅಂಜಬೇಡ. ಆಕೆಯ ಗರ್ಭವು ಪವಿತ್ರಾತ್ಮದಿಂದಲೇ ಆದದ್ದು.


ಆಗ ಎಲ್ಲರೂ ಖಾನೆಷುಮಾರಿ ಬರಸಿಕೊಳ್ಳುವದಕ್ಕಾಗಿ ತಮ್ಮತಮ್ಮ ಊರುಗಳಿಗೆ ಹೊರಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು