Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 20:10 - ಕನ್ನಡ ಸತ್ಯವೇದವು J.V. (BSI)

10 ಫಲಕಾಲ ಬಂದಾಗ ದ್ರಾಕ್ಷೆಯತೋಟದ ಹುಟ್ಟುವಳಿಯ ಪಾಲನ್ನು ತೆಗೆದುಕೊಳ್ಳುವದಕ್ಕಾಗಿ ಒಬ್ಬ ಆಳನ್ನು ಒಕ್ಕಲಿಗರ ಬಳಿಗೆ ಕಳುಹಿಸಿದನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿಗೈಲಿ ಕಳುಹಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಫಲಕಾಲ ಬಂದಾಗ ದ್ರಾಕ್ಷಿಯ ತೋಟದ ಪಾಲನ್ನು ತೆಗೆದುಕೊಳ್ಳುವುದಕ್ಕಾಗಿ ಒಬ್ಬ ಆಳನ್ನು ಒಕ್ಕಲಿಗರ ಬಳಿಗೆ ಕಳುಹಿಸಿದನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿಗೈಯಲ್ಲಿ ಕಳುಹಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಫಲಕಾಲ ಬಂದಾಗ ತನಗೆ ಬರಬೇಕಾದ ಪಾಲನ್ನು ತರುವುದಕ್ಕಾಗಿ ಒಬ್ಬ ಸೇವಕನನ್ನು ಕಳುಹಿಸಿದ. ಗೇಣಿದಾರರು ಅವನನ್ನು ಹೊಡೆದು ಬರಿಗೈಯಲ್ಲಿ ಹಿಂದಕ್ಕೆ ಅಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಸ್ವಲ್ಪಕಾಲದ ನಂತರ ದ್ರಾಕ್ಷಿಹಣ್ಣನ್ನು ಕೀಳುವ ಸಮಯ ಬಂತು. ಆದ್ದರಿಂದ ಅವನು ತನ್ನ ಪಾಲಿನ ಹಣ್ಣನ್ನು ತೆಗೆದುಕೊಂಡು ಬರುವುದಕ್ಕಾಗಿ ತನ್ನ ಸೇವಕನನ್ನು ಆ ರೈತರ ಬಳಿಗೆ ಕಳುಹಿಸಿದನು. ಆದರೆ ಆ ರೈತರು ಆ ಸೇವಕನನ್ನು ಹೊಡೆದು ಬರಿಗೈಯಲ್ಲಿ ಕಳುಹಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಫಲದ ಕಾಲ ಬಂದಾಗ ಅವನು ತನಗೆ ಬರಬೇಕಾಗಿದ್ದ ದ್ರಾಕ್ಷಿತೋಟದ ಫಲವನ್ನು ಕೊಡುವಂತೆ ತನ್ನ ಸೇವಕನನ್ನು ಅವರ ಬಳಿಗೆ ಕಳುಹಿಸಿದನು. ಆದರೆ ಆ ಗೇಣಿಗೆದಾರರು ಅವನನ್ನು ಹೊಡೆದು, ಬರಿಗೈಯಲ್ಲಿ ಕಳುಹಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ದರಾಕ್ಷಿ ಗೊಳಾ ಕರ್‍ತಲ್ಲ್ಯಾ ಎಳಾರ್, ತ್ಯಾ ಮಾನ್ಸಾನ್ ಅಪ್ನಾಚೊ ಸುಗ್ಗಿಚೊ ವಾಟೊ ಘೆವ್ನ್ ‍ಯೆ ಮನುನ್ ಅಪ್ನಾಚ್ಯಾ ಎಕ್ಲ್ಯಾ ಗುಲಾಮಾಕ್ ಮಳ್ಯಾಕ್ಡೆ ಧಾಡುನ್ ದಿಲ್ಯಾನ್, ಖರೆ ತ್ಯಾ ಗುತ್ಕೆ ಧರಲ್ಲ್ಯಾನಿ ತ್ಯಾ ಗುಲಾಮಾಕ್ ಮಾರ್ ಘಾಟ್ಲ್ಯಾನಿ, ಅನಿ ಖಾಲಿ ಹಾತಾನಿ ಪರ್ತುನ್ ಧಾಡ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 20:10
32 ತಿಳಿವುಗಳ ಹೋಲಿಕೆ  

ಆಗ ಅವರು ನಿನಗೆ ಅವಿಧೇಯರಾಗಿ ತಿರುಗಿ ಬಿದ್ದು ನಿನ್ನ ಧರ್ಮೋಪದೇಶವನ್ನು ಉಲ್ಲಂಘಿಸಿ ತಮ್ಮನ್ನು ಎಚ್ಚರಿಸುವದಕ್ಕೂ ನಿನ್ನ ಕಡೆಗೆ ತಿರುಗಿಸುವದಕ್ಕೂ ಪ್ರಯತ್ನಿಸುತ್ತಿದ್ದ ನಿನ್ನ ಪ್ರವಾದಿಗಳನ್ನು ಕೊಂದುಹಾಕಿ ನಿನ್ನನ್ನು ಅಸಡ್ಡೆಮಾಡಿದರು.


ಹಾಗೆಯೇ ನನ್ನ ಸಹೋದರರೇ, ನೀವು ಸಹ ಕ್ರಿಸ್ತನ ದೇಹದ ಮೂಲಕವಾಗಿ ಧರ್ಮಶಾಸ್ತ್ರದ ಪಾಲಿಗೆ ಸತ್ತಿರಿ. ದೇವರಿಗೆ ಫಲವಾಗುವದಕ್ಕಾಗಿ ಮತ್ತೊಬ್ಬನನ್ನು ಅಂದರೆ ಸತ್ತು ಜೀವಿತನಾಗಿ ಎದ್ದಾತನನ್ನು ಸೇರಿಕೊಂಡಿರಿ.


ನೀವು ನನ್ನನ್ನು ಆರಿಸಿ ತೆಗೆದುಕೊಂಡಿಲ್ಲ; ನಾನು ನಿಮ್ಮನ್ನು ಆರಿಸಿ ತೆಗೆದುಕೊಂಡೆನು. ನೀವು ಹೊರಟುಹೋಗಿ ಫಲಕೊಡುವವರಾಗಬೇಕೆಂತಲೂ ನೀವು ಕೊಡುವ ಫಲವು ನಿಲ್ಲುವಂಥದಾಗಬೇಕೆಂತಲೂ ನಿಮ್ಮನ್ನು ನೇವಿುಸಿದ್ದೇನೆ. ಹೀಗಿರಲಾಗಿ ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ ಅದನ್ನು ಆತನು ನಿಮಗೆ ಕೊಡುವನು.


ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಕೂಡಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಕೂಡಿಸಿಕೊಳ್ಳುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿಮಗೆ ಮನಸ್ಸಿಲ್ಲದೆ ಹೋಯಿತು.


ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ - ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ ನಿಮ್ಮ ಪಿತೃಗಳಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.


ಪ್ರವಾದಿಯಾದ ಯೆರೆಮೀಯನನ್ನು ಹೊಡೆಯಿಸಿ ಯೆಹೋವನ ಆಲಯಕ್ಕೆ ಸೇರಿದ ಮೇಲಣ ಬೆನ್ಯಾಮೀನ್ ಬಾಗಿಲಲ್ಲಿದ್ದ ಕೋಳಕ್ಕೆ ಹಾಕಿಸಿದನು.


ಮುಂಗಾರು, ಹಿಂಗಾರು ಅಂತು ಸಕಾಲದ ಮಳೆಯನ್ನು ದಯಪಾಲಿಸಿ ಸುಗ್ಗಿಯ ಕ್ಲುಪ್ತವಾರಗಳನ್ನು ನಮಗಾಗಿ ಪ್ರತ್ಯೇಕಪಡಿಸುವ ನಮ್ಮ ದೇವರಾದ ಯೆಹೋವನಲ್ಲಿ ಭಯಭಕ್ತಿಯಿಡೋಣ ಎಂದು ಮನದಲ್ಲಿ ಅಂದುಕೊಳ್ಳುವದಿಲ್ಲ.


ನಾನು ನಿಮ್ಮ ವಂಶದವರನ್ನು ಹೊಡೆದದ್ದು ವ್ಯರ್ಥ, ತಿದ್ದುಪಾಟಾಗಲಿಲ್ಲ; ಸಂಹರಿಸುವ ಸಿಂಹದಂತೆ ನಿಮ್ಮ ಕೈಯ ಕತ್ತಿಯೇ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿದೆ.


ಅವನು ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗಿರುವನು. ಅಂಥ ಮರವು ತಕ್ಕ ಕಾಲದಲ್ಲಿ ಫಲಕೊಡುತ್ತದಲ್ಲಾ; ಅದರ ಎಲೆ ಬಾಡುವದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವದು.


ನೀನು ಅನೇಕವರ್ಷಗಳ ತನಕ ಅವರ ವಿಷಯದಲ್ಲಿ ತಾಳಿಕೊಂಡು ಪ್ರವಾದಿಗಳ ಮುಖಾಂತರ ಮಾತಾಡುತ್ತಿದ್ದ ನಿನ್ನ ಆತ್ಮನಿಂದ ಅವರನ್ನು ಎಷ್ಟು ಎಚ್ಚರಿಸುತ್ತಿದ್ದರೂ ಅವರು ಕಿವಿಗೊಡದೆ ಹೋದ ಮೇಲೆ ನೀನು ಅವರನ್ನು ಅನ್ಯದೇಶಗಳವರ ಕೈಗೆ ಒಪ್ಪಿಸಿಬಿಟ್ಟಿ.


ಆಸನು ಈ ಮಾತುಗಳ ದೆಸೆಯಿಂದ ಬೇಸರಗೊಂಡು ದರ್ಶಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿಡಿಸಿ ಕೋಳಹಾಕಿಸಿದನು. ಇದಲ್ಲದೆ ಜನರಲ್ಲಿ ಕೆಲವರನ್ನು ಪೀಡಿಸಿದನು.


ಯೆಹೋವನು ದರ್ಶಿಗಳೆನಿಸಿಕೊಂಡ ತನ್ನ ಪ್ರವಾದಿಗಳ ಮುಖಾಂತರವಾಗಿ ಇಸ್ರಾಯೇಲ್ಯ ಯೆಹೂದ್ಯರಿಗೆ - ನೀವು ನಿಮ್ಮ ದುರಾಚಾರವನ್ನು ಬಿಟ್ಟು ನಾನು ನಿಮ್ಮ ಪಿತೃಗಳಿಗೂ ನನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ನಿಮಗೂ ಕೊಟ್ಟಂಥ ನನ್ನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಕೈಕೊಂಡು ನಡೆಯಿರಿ ಎಂದು ಖಂಡಿತವಾಗಿ ಹೇಳಿದಾಗ


ಆಗ ಕೆನಾನನ ಮಗನಾದ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಹೋಗಿ ಅವನ ಕೆನ್ನೆಗೆ ಒಂದು ಏಟು ಹಾಕಿ - ಯೆಹೋವನ ಆತ್ಮವು ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತಾಡುವದಕ್ಕೋಸ್ಕರ ಯಾವ ಮಾರ್ಗವಾಗಿ ಬಂದಿತು ಅನ್ನಲು ಮೀಕಾಯೆಹುವು -


ಅದೇನಂದರೆ - ಒಬ್ಬ ಮನುಷ್ಯನು ಒಂದು ದ್ರಾಕ್ಷೆಯ ತೋಟವನ್ನು ಮಾಡಿ ಅದನ್ನು ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬೇರೊಂದು ದೇಶಕ್ಕೆ ಹೋಗಿ ಅಲ್ಲಿ ಬಹುಕಾಲ ಇದ್ದನು.


ಆ ಧಣಿಯು ಬೇರೊಬ್ಬ ಆಳನ್ನು ಕಳುಹಿಸಲಾಗಿ ಅವರು ಅವನನ್ನೂ ಹೊಡೆದು ಅವಮಾನ ಪಡಿಸಿ ಬರಿಗೈಲಿ ಕಳುಹಿಸಿಬಿಟ್ಟರು.


ಆದದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿಸಿ [ಗಡ್ಡದ ಅರ್ಧಭಾಗವನ್ನು] ಬೋಳಿಸಿ ಅವರ ಸೊಂಟದ ಕೆಳಭಾಗದ ನಿಲುವಂಗಿಗಳನ್ನು ಕತ್ತರಿಸಿ ಕಳುಹಿಸಿಬಿಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು