Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 21:1 - ಕನ್ನಡ ಸತ್ಯವೇದವು J.V. (BSI)

1 ಯೇಸು ತಲೆಯೆತ್ತಿ ನೋಡಿ ಐಶ್ವರ್ಯವಂತರು ಕಾಣಿಕೆಗಳನ್ನು ಬೊಕ್ಕಸದಲ್ಲಿ ಹಾಕುವದನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೇಸು ತಲೆಯೆತ್ತಿ ನೋಡಿ ಐಶ್ವರ್ಯವಂತರು ಕಾಣಿಕೆಗಳನ್ನು ಕಾಣಿಕೆಯ ಪೆಟ್ಟಿಗೆಯಲ್ಲಿ ಹಾಕುವುದನ್ನು ಕಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ದೇವಾಲಯದ ಕಾಣಿಕೆಯ ಪೆಟ್ಟಿಗೆಯಲ್ಲಿ ಧನವಂತರು ತಮ್ಮ ಕಾಣಿಕೆಯನ್ನು ಹಾಕುತ್ತಿದ್ದುದನ್ನು ಯೇಸುಸ್ವಾಮಿ ಗಮನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಕೆಲವು ಐಶ್ವರ್ಯವಂತರು ದೇವಾಲಯದ ಹಣದ ಪೆಟ್ಟಿಗೆಯಲ್ಲಿ ದೇವರಿಗಾಗಿ ತಮ್ಮ ಕಾಣಿಕೆಗಳನ್ನು ಹಾಕುವುದನ್ನು ಯೇಸು ಗಮನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೇಸು ಗಮನಿಸುತ್ತಿರುವಾಗ, ಐಶ್ವರ್ಯವಂತರು ತಮ್ಮ ಕಾಣಿಕೆಗಳನ್ನು ದೇವಾಲಯದ ಕಾಣಿಕೆ ಪೆಟ್ಟಿಗೆಯಲ್ಲಿ ಹಾಕುವುದನ್ನು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಜೆಜುನ್ ಭೊತ್ಯಾನಿ ಬಗಟ್ಲ್ಯಾನ್, ತನ್ನಾ ಸಾವ್ಕಾರ್ ಲೊಕಾ ಅಪ್ನಾಚಿ ಕಾನಿಕ್ ದೆವಾಚ್ಯಾ ಗುಡಿಚ್ಯಾ ಕಾನಿಕಾಚ್ಯಾ ಡಬ್ಬ್ಯಾತ್ ಘಾಲುಲಾಗಲ್ಲಿ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 21:1
12 ತಿಳಿವುಗಳ ಹೋಲಿಕೆ  

ಯೇಸು ದೇವಾಲಯದೊಳಗೆ ಕಾಣಿಕೆಯ ಪೆಟ್ಟಿಗೆಗಳು ಇರುವ ಅಂಗಳದಲ್ಲಿ ಉಪದೇಶಮಾಡುತ್ತಿರುವಾಗ ಈ ಮಾತುಗಳನ್ನು ಹೇಳಿದನು. ಆತನ ಕಾಲ ಇನ್ನೂ ಬಾರದೆ ಇದ್ದ ಕಾರಣ ಯಾರೂ ಆತನನ್ನು ಹಿಡಿಯಲಿಲ್ಲ.


ಮಹಾಯಾಜಕರು ಆ ಹಣವನ್ನು ತೆಗೆದುಕೊಂಡು ಅದು ಜೀವಹತ್ಯಕ್ಕೆ ಕೊಟ್ಟ ಕ್ರಯವಾದ್ದರಿಂದ ಅದನ್ನು ಕಾಣಿಕೇಪೆಟ್ಟಿಗೆಯಲ್ಲಿ ಹಾಕಬಾರದು ಎಂದರು.


ದೇವಾಲಯದ ಎಲ್ಲಾ ಚಿಕ್ಕ ದೊಡ್ಡ ಸಾಮಾನುಗಳನ್ನೂ ಯೆಹೋವನ ಮಂದಿರದ ಭಂಡಾರ, ಅರಸನ ಮತ್ತು ಅವನ ಸರದಾರರ ಭಂಡಾರ ಇವುಗಳ ದ್ರವ್ಯವನ್ನೂ ಬಾಬೆಲಿಗೆ ಒಯ್ದನು.


ಆಮೇಲೆ ಉಗ್ರಾಣಗಳನ್ನು ನೋಡುವದಕ್ಕೋಸ್ಕರ ಯಾಜಕನಾದ ಶೆಲೆಮ್ಯ, ಲೇಖಕನಾದ ಚಾದೋಕ್, ಲೇವಿಕುಲದವನಾದ ಪೆದಾಯ ಇವರನ್ನೂ ಇವರ ಸಹಾಯಕ್ಕಾಗಿ ಜಕ್ಕೂರನ ಮಗನೂ ಮತ್ತನ್ಯನ ಮೊಮ್ಮಗನೂ ಆದ ಹಾನಾನನನ್ನೂ ನೇವಿುಸಿದೆನು; ಇವರೆಲ್ಲರೂ ನಂಬಿಗಸ್ತರೆಂದು ಹೆಸರುಗೊಂಡವರು. ತಮ್ಮ ಸಹೋದರರಿಗೆ ಸಿಕ್ಕತಕ್ಕದ್ದನ್ನು ಹಂಚಿಕೊಡುವದು ಇವರ ಕರ್ತವ್ಯ.


ಇದಲ್ಲದೆ ಯೆಹೋವನು ಮುಂತಿಳಿಸಿದ ಪ್ರಕಾರ ಅವನು ಯೆಹೋವನ ಆಲಯದ ಮತ್ತು ಅರಮನೆಯ ಭಂಡಾರಗಳಲ್ಲಿದ್ದ ಎಲ್ಲಾ ದ್ರವ್ಯವನ್ನು ತೆಗೆದುಕೊಂಡುಹೋದನು. ಇಸ್ರಾಯೇಲ್ಯರ ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕಾಗಿ ಮಾಡಿಸಿದ್ದ ಬಂಗಾರದ ಎಲ್ಲಾ ಸಾಮಾನುಗಳನ್ನು ಮುರಿದುಬಿಟ್ಟನು.


ಎಲ್ಲಾ ಬೆಳ್ಳಿಬಂಗಾರವೂ ತಾಮ್ರ ಕಬ್ಬಿಣಗಳ ಪಾತ್ರೆಗಳೂ ಯೆಹೋವನ ಮೀಸಲಾಗಿದ್ದು ಆತನ ಭಂಡಾರಕ್ಕೆ ಸೇರತಕ್ಕವುಗಳು ಅಂದನು.


ಯೆಹೋವನ ಆಲಯದ ಮತ್ತು ಅರಮನೆಯ ಎಲ್ಲಾ ದ್ರವ್ಯವನ್ನೂ ಸೊಲೊಮೋನನು ಮಾಡಿಸಿದ ಬಂಗಾರದ ಗುರಾಣಿಗಳನ್ನೂ ತೆಗೆದುಕೊಂಡು ಹೋದನು.


ಇಸ್ರಾಯೇಲ್ಯರು ಪಟ್ಟಣವನ್ನೂ ಅದರಲ್ಲಿರುವದೆಲ್ಲವನ್ನೂ ಬೆಂಕಿಯಿಂದ ಸುಟ್ಟರು. ಆದರೆ ಬೆಳ್ಳಿಬಂಗಾರವನ್ನೂ ತಾಮ್ರ ಕಬ್ಬಿಣಗಳ ಪಾತ್ರೆಗಳನ್ನೂ ಯೆಹೋವನ ಆಲಯದ ಭಂಡಾರಕ್ಕೆ ಕೊಟ್ಟರು.


ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು ಬಂದು ಅದರ ಮುಚ್ಚಳದಲ್ಲಿ ತೂತುಮಾಡಿ ಅದನ್ನು ಯೆಹೋವನ ಆಲಯದ ಬಾಗಲಿನ ಬಲಗಡೆಯಲ್ಲಿ ಯಜ್ಞವೇದಿಯ ಹತ್ತಿರ ಇಟ್ಟನು. ದ್ವಾರಪಾಲಕರಾದ ಯಾಜಕರು ಯೆಹೋವನ ಆಲಯಕ್ಕೆ ತರಲ್ಪಟ್ಟ ಹಣವನ್ನೆಲ್ಲಾ ಅದರಲ್ಲಿಯೇ ಹಾಕಿಸುತ್ತಿದ್ದರು.


ಅವರು ವಿಧವೆಯರ ಮನೆಗಳನ್ನು ನುಂಗಿ ನಟನೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ; ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು