Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:35 - ಕನ್ನಡ ಸತ್ಯವೇದವು J.V. (BSI)

35 ಮತ್ತು ಆತನು - ನಿಮ್ಮನ್ನು ನಾನು ಹಮ್ಮೀಣಿ ಹಸಿಬೆ ಜೋಡುಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ ಎಂದು ಕೇಳಲು ಅವರು ಏನೂ ಇಲ್ಲವೆಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಮತ್ತು ಆತನು, “ನಿಮ್ಮನ್ನು ನಾನು ಹಣ, ಕೈಚೀಲ ಜೋಡುಗಳಿಲ್ಲದೆ ಕಳುಹಿಸಿದಾಗ ನಿಮಗೆ ಏನಾದರೂ ಕೊರತೆಯಾಯಿತೋ?” ಎಂದು ಕೇಳಲು ಅವರು ಏನೂ ಇಲ್ಲವೆಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

35 ಬಳಿಕ ಯೇಸುಸ್ವಾಮಿ, “ನಾನು ನಿಮ್ಮನ್ನು ಬುತ್ತಿ, ಜೋಳಿಗೆ, ಜೋಡು ಒಂದೂ ಇಲ್ಲದೆ ಕಳಿಸಿದಾಗ ನಿಮಗೇನಾದರೂ ಕೊರತೆ ಆಯಿತೇ?” ಎಂದು ಶಿಷ್ಯರನ್ನು ಕೇಳಿದರು. ಅದಕ್ಕೆ ಅವರು, “ಇಲ್ಲ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಬಳಿಕ ಯೇಸು ಅಪೊಸ್ತಲರಿಗೆ, “ಜನರಿಗೆ ಬೋಧಿಸುವುದಕ್ಕೆ ನಾನು ನಿಮ್ಮನ್ನು ಹಣವಿಲ್ಲದೆ, ಚೀಲವಿಲ್ಲದೆ ಮತ್ತು ಪಾದರಕ್ಷೆಗಳಿಲ್ಲದೆ ಕಳುಹಿಸಿದೆನು. ಆದರೆ ನಿಮಗೆ ಏನಾದರೂ ಕೊರತೆ ಆಯಿತೇ?” ಎಂದು ಕೇಳಿದನು. ಅಪೊಸ್ತಲರು, “ಇಲ್ಲ” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ನಂತರ ಯೇಸು ಅವರಿಗೆ, “ನಾನು ನಿಮ್ಮನ್ನು ಹಣದ ಚೀಲ, ಪ್ರಯಾಣದ ಚೀಲ ಮತ್ತು ಪಾದರಕ್ಷೆಗಳಿಲ್ಲದೆ ಕಳುಹಿಸಿದಾಗ ನೀವು ಏನಾದರೂ ಕೊರತೆಪಟ್ಟಿರೋ?” ಎಂದು ಕೇಳಲು, ಶಿಷ್ಯರು, “ಏನೂ ಇಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ತನ್ನಾ ಜೆಜುನ್ ಅಪ್ನಾಚ್ಯಾ ಶಿಸಾಕ್ನಿ “ಮಿಯಾ ತುಮ್ಕಾ, ಪೈಸೆ ಘೆವ್‌ನಸ್ತಾನಾ, ಪಿಸ್ವಿ ಘೆವ್‌ನಸ್ತಾನಾ, ನಾ ಹೊಲ್ಯಾರ್, ಹೊನಾಯಾ ನಸ್ತಾನಾ, ಭಾಯ್ರ್ ಧಾಡುನ್ ದಿಲ್ಲೊ ತನ್ನಾ, ತುಮ್ಕಾ ಕಾಯ್ ತರ್ ಕಮಿ ಪಡಲ್ಲೆ ಕಾಯ್? ನಾ ಕಾಯ್ಬಿ ಕಮಿ ಪಡುಕ್ನಾ” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:35
16 ತಿಳಿವುಗಳ ಹೋಲಿಕೆ  

ಹಣದ ಚೀಲವನ್ನಾಗಲಿ ಹಸಿಬೆಯನ್ನಾಗಲಿ ಕೆರಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ; ದಾರಿಯಲ್ಲಿ ಯಾರಿಗೂ ವಂದಿಸಬೇಡಿರಿ.


ಕಳುಹಿಸುವಾಗ ಅವರಿಗೆ ಹೇಳಿದ್ದೇನಂದರೆ - ದಾರಿಗೆ ಏನೂ ತಕ್ಕೊಂಡು ಹೋಗಬೇಡಿರಿ, ಕೋಲು ಹಸಿಬೆ ಬುತ್ತಿ ಹಣ ಬೇಡ; ಎರಡಂಗಿಗಳಿರಬಾರದು.


ಯೆಹೋವನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ದೇಶದಲ್ಲಿ ವಾಸವಾಗಿದ್ದು ನಂಬಿಕೆಯನ್ನು ಅನುಸರಿಸು.


ಯೆಹೋವನು ನನಗೆ ಕುರುಬನು; ಕೊರತೆಪಡೆನು.


ನನ್ನ ಪಿತೃಗಳಾದ ಅಬ್ರಹಾಮ್ ಇಸಾಕರು ಸೇವಿಸಿದ ದೇವರಾಗಿಯೂ ನನ್ನನ್ನು ಚಿಕ್ಕಂದಿನಿಂದ ಈ ದಿನದವರೆಗೂ ಪರಾಂಬರಿಸುತ್ತಾ ಬಂದ ದೇವರಾಗಿಯೂ


ಆತನು - ಪೇತ್ರನೇ, ನನ್ನ ವಿಷಯದಲ್ಲಿ - ಇವನನ್ನು ಅರಿಯೆನೆಂದು ನೀನು ಮೂರು ಸಾರಿ ಹೇಳುವ ತನಕ ಈಹೊತ್ತು ಕೋಳಿ ಕೂಗುವದಿಲ್ಲವೆಂದು ನಿನಗೆ ಹೇಳುತ್ತೇನೆ ಅಂದನು.


ಅದಕ್ಕೆ ಆತನು - ಈಗಲಾದರೋ ಹಮ್ಮೀಣಿಯಿದ್ದವನು ಅದನ್ನು ತಕ್ಕೊಳ್ಳಲಿ, ಹಸಿಬೆಯಿದ್ದವನು ಅದನ್ನು ತಕ್ಕೊಳ್ಳಲಿ, ಮತ್ತು ಕತ್ತಿಯಿಲ್ಲದವನು ತನ್ನ ಮೇಲಂಗಿಯನ್ನು ಮಾರಿ ಒಂದು ಕತ್ತಿಯನ್ನು ಕೊಂಡುಕೊಳ್ಳಲಿ.


ಫರೋಹನು ಅವನನ್ನು - ನನ್ನ ಬಳಿಯಲ್ಲಿ ನಿನಗೇನು ಕೊರತೆಯಾಯಿತು? ಸ್ವದೇಶಕ್ಕೆ ಹೋಗಬೇಕೆಂದು ಯಾಕೆ ಆಶಿಸುತ್ತೀ ಎಂದು ಕೇಳಲು ಅವನು - ಏನೂ ಕೊರತೆಯಾಗಿರುವದಿಲ್ಲ; ಆದರೂ ನನಗೆ ಹೋಗುವದಕ್ಕೆ ಅಪ್ಪಣೆಯಾಗಬೇಕು ಎಂದು ಉತ್ತರಕೊಟ್ಟನು.


ಬಹಳ ಕೂಡಿಸಿದವನಿಗೆ ಏನೂ ಹೆಚ್ಚಾಗಲಿಲ್ಲ, ಸ್ವಲ್ಪವಾಗಿ ಕೂಡಿಸಿದವನಿಗೆ ಏನೂ ಕಡಿಮೆಯಾಗಲಿಲ್ಲ ಎಂದು ಶಾಸ್ತ್ರದಲ್ಲಿ ಬರೆದಿರುವ ಪ್ರಕಾರವಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು