Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:52 - ಕನ್ನಡ ಸತ್ಯವೇದವು J.V. (BSI)

52 ಬಳಿಕ ಯೇಸು ತನ್ನನ್ನು ಹಿಡಿಯುವದಕ್ಕೆ ಬಂದ ಮಹಾಯಾಜಕರಿಗೂ ದೇವಾಲಯದ ಕಾವಲಿನ ದಳವಾಯಿಗಳಿಗೂ ಸಭೆಯ ಹಿರಿಯರಿಗೂ - ಕಳ್ಳನನ್ನು ಹಿಡಿಯುವದಕ್ಕೆ ಬಂದಂತೆ ಕತ್ತಿಗಳನ್ನೂ ದೊಣ್ಣೆಗಳನ್ನೂ ತೆಗೆದುಕೊಂಡು ಬಂದಿರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

52 ಬಳಿಕ ಯೇಸು ತನ್ನನ್ನು ಹಿಡಿಯುವುದಕ್ಕೆ ಬಂದ ಮುಖ್ಯಯಾಜಕರಿಗೂ, ದೇವಾಲಯದ ಕಾವಲಿನ ದಳವಾಯಿಗಳಿಗೂ, ಸಭೆಯ ಹಿರಿಯರಿಗೂ, “ದರೋಡೆಗಾರನನ್ನು ಹಿಡಿಯುವುದಕ್ಕೆ ಬಂದಂತೆ ಕತ್ತಿಗಳನ್ನೂ ದೊಣ್ಣೆಗಳನ್ನೂ ತೆಗೆದುಕೊಂಡು ಬಂದಿರುವಿರಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

52 ಅನಂತರ ಯೇಸು ತಮ್ಮನ್ನು ಹಿಡಿಯುವುದಕ್ಕೆ ಬಂದಿದ್ದ ಮುಖ್ಯಯಾಜಕರನ್ನೂ ದೇವಾಲಯದ ಪಹರೆಯ ದಳಪತಿಗಳನ್ನೂ ಪ್ರಮುಖರನ್ನೂ ನೋಡಿ, “ದರೋಡೆಗಾರನನ್ನು ಹಿಡಿಯುವುದಕ್ಕೆ ಬಂದಂತೆ ಖಡ್ಗಗಳನ್ನು ಮತ್ತು ಲಾಠಿಗಳನ್ನು ತೆಗೆದುಕೊಂಡು ಬಂದಿರುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

52 ಯೇಸುವನ್ನು ಬಂಧಿಸಲು ಅಲ್ಲಿಗೆ ಮಹಾಯಾಜಕರು, ಹಿರಿಯ ಯೆಹೂದ್ಯನಾಯಕರು ಮತ್ತು ಯೆಹೂದ್ಯ ಸಿಪಾಯಿಗಳು ಬಂದಿದ್ದರು. ಯೇಸು ಅವರಿಗೆ, “ಖಡ್ಗಗಳನ್ನೂ ದೊಣ್ಣೆಗಳನ್ನೂ ಹಿಡಿದುಕೊಂಡು ಇಲ್ಲಿಗೆ ಬಂದದ್ದೇಕೆ? ನಾನು ಅಪರಾಧಿಯೆಂದು ನೀವು ಭಾವಿಸುತ್ತೀರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

52 ಆಗ ಯೇಸು ತಮ್ಮ ಬಳಿಗೆ ಬಂದಿದ್ದ ಮುಖ್ಯಯಾಜಕರಿಗೂ ದೇವಾಲಯದ ಕಾವಲಾಧಿಕಾರಿಗಳಿಗೂ ಹಿರಿಯರಿಗೂ, “ದಂಗೆಗಾರನನ್ನು ಹಿಡಿಯುವುದಕ್ಕಾಗಿ ಬಂದ ಹಾಗೆ ಖಡ್ಗಗಳಿಂದಲೂ ದೊಣ್ಣೆಗಳಿಂದಲೂ ನೀವು ಹೊರಟು ಬಂದಿರುವಿರೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

52 ತನ್ನಾ ಜೆಜುನ್, ಅಪ್ನಾಕ್ ಧರುನ್ ಘೆವ್ನ್ ಜಾವ್ಕ್ ಯೆಲ್ಲ್ಯಾ, ಮುಖ್ಯ ಯಾಜಕಾಕ್ನಿ, ಅನಿ ದೆವಾಚಿ ಗುಡಿ ರಾಕ್ತಲ್ಯಾ ಅದಿಕಾರ್‍ಯಾಕ್ನಿ, ಅನಿ ಜಾನ್ತ್ಯಾಕ್ನಿ “ಎಕ್ ಚೊರಾಕ್ ಧರುಕ್ ಯೆಲ್ಯಾ ಸರ್ಕೆ, ಕೊಯ್ತೆ, ಅನಿ ಟೊನೆ ಘೆವ್ನ್ ಯೆಲ್ಯಾಶಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:52
10 ತಿಳಿವುಗಳ ಹೋಲಿಕೆ  

ಅವನು ಮಹಾಯಾಜಕರ ಬಳಿಗೂ ಕಾವಲಿನ ದಳವಾಯಿಗಳ ಬಳಿಗೂ ಹೋಗಿ ತಾನು ಯೇಸುವನ್ನು ಹಿಡುಕೊಡುವ ಉಪಾಯವನ್ನು ಕುರಿತು ಅವರ ಸಂಗಡ ಮಾತಾಡಿದನು.


ಆಗ ಅಧಿಪತಿಯು ಓಲೇಕಾರರ ಸಂಗಡ ಹೋಗಿ ಅವರನ್ನು ಕರೆದುಕೊಂಡು ಬಂದನು; ಆದರೆ ತಮಗೆ ಜನರು ಕಲ್ಲೆಸೆದಾರೆಂದು ಹೆದರಿ ಬಲಾತ್ಕಾರ ಮಾಡಲಿಲ್ಲ.


ನಾನು ಇವರ ಸಂಗಡ ಇದ್ದಾಗ ನೀನು ನನಗೆ ಕೊಟ್ಟಿರುವ ನಿನ್ನ ಹೆಸರಿನಲ್ಲಿ ಇವರನ್ನು ಕಾಯುತ್ತಾ ಬಂದೆನು, ಇವರನ್ನು ಕಾಪಾಡಿದೆನು; ಶಾಸ್ತ್ರದ ಮಾತು ನೆರವೇರುವಂತೆ ನಾಶಕ್ಕೆ ಗುರಿಯಾದ ಆ ಮನುಷ್ಯನೇ ಹೊರತು ಇವರಲ್ಲಿ ಮತ್ತಾರೂ ನಾಶವಾಗಲಿಲ್ಲ.


ಅದೇ ಗಳಿಗೆಯಲ್ಲಿ ಯೇಸು ಗುಂಪುಗುಂಪಾಗಿ ಕೂಡಿದ್ದ ಜನರಿಗೆ - ಕಳ್ಳನನ್ನು ಹಿಡಿಯುವದಕ್ಕೆ ಬಂದಂತೆ ಕತ್ತಿಗಳನ್ನೂ ದೊಣ್ಣೆಗಳನ್ನೂ ತೆಗೆದುಕೊಂಡು ನನ್ನನ್ನು ಹಿಡಿಯುವದಕ್ಕೆ ಬಂದಿರಾ? ನಾನು ದಿನಾಲು ದೇವಾಲಯದಲ್ಲಿ ಕೂತುಕೊಂಡು ಬೋಧಿಸುತ್ತಿದ್ದಾಗ ನೀವು ನನ್ನನ್ನು ಹಿಡಿಯಲಿಲ್ಲ;


ಆಗ ಯಾಜಕನಾದ ಯೆಹೋಯಾದಾವನು ಸೇನಾನಿಗಳಾದ ಶತಾಧಿಪತಿಗಳಿಗೆ - ಈಕೆಯನ್ನು ಯೆಹೋವನ ಆಲಯದಲ್ಲಿ ಕೊಲ್ಲಬೇಡಿರಿ; ಎರಡು ಸಾಲು ಸಿಪಾಯಿಗಳು ಈಕೆಯನ್ನು ನಡುವೆ ಮಾಡಿ ಹೊರಗೆ ಕರಕೊಂಡು ಹೋಗಲಿ; ಮತ್ತು ಈಕೆಯನ್ನು ಹಿಂಬಾಲಿಸುವಂಥವರನ್ನು ಕತ್ತಿಯಿಂದ ಕೊಲ್ಲಿರಿ ಎಂದು ಆಜ್ಞಾಪಿಸಿದನು.


ಆತನು ಇನ್ನೂ ಮಾತಾಡುತ್ತಿರಲು ಇಗೋ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಯೂದನು ಬಂದನು; ಮಹಾಯಾಜಕರು ಜನರ ಹಿರಿಯರು ಇವರ ಕಡೆಯಿಂದ ಬಹು ಜನರ ಗುಂಪು ಕತ್ತಿ ದೊಣ್ಣೆಗಳನ್ನು ಹಿಡುಕೊಂಡು ಅವನ ಸಂಗಡ ಬಂತು.


ಯಾಕಂದರೆ - ಆತನು ಅಪರಾಧಿಗಳಲ್ಲಿ ಒಬ್ಬನಂತೆ ಎಣಿಸಲ್ಪಟ್ಟನು ಎಂದು ಬರೆದಿರುವ ಮಾತು ನನ್ನಲ್ಲಿ ನೆರವೇರಬೇಕಾಗಿದೆ ಎಂದು ನಿಮಗೆ ಹೇಳುತ್ತೇನೆ; ನನ್ನ ವಿಷಯವಾದದ್ದು ಕೊನೆಗಾಣಬೇಕು ಎಂದು ಹೇಳಿದನು.


ಆದರೆ ಯೇಸು - ಇಷ್ಟಕ್ಕೇ ಬಿಡಿರಿ ಎಂದು ಹೇಳಿ ಆ ಕಿವಿಯನ್ನು ಮುಟ್ಟಿ ಅವನಿಗೆ ವಾಸಿಮಾಡಿದನು.


ನಾನು ದಿನಾಲು ದೇವಾಲಯದಲ್ಲಿ ನಿಮ್ಮ ಸಂಗಡ ಇದ್ದಾಗ ನೀವು ನನ್ನ ಮೇಲೆ ಕೈಹಾಕಲಿಲ್ಲ; ಆದರೆ ಇದು ನಿಮ್ಮ ಕಾಲ, ಇದು ಅಂಧಕಾರದ ದೊರೆತನ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು