Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 22:63 - ಕನ್ನಡ ಸತ್ಯವೇದವು J.V. (BSI)

63 ಆಮೇಲೆ ಯೇಸುವನ್ನು ಹಿಡಿದವರು ಆತನನ್ನು ಹಾಸ್ಯಮಾಡುತ್ತಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

63-64 ಆ ಮೇಲೆ ಯೇಸುವನ್ನು ಹಿಡಿದವರು ಆತನನ್ನು ಪರಿಹಾಸ್ಯಮಾಡುತ್ತಾ, ಆತನಿಗೆ ಮುಸುಕುಹಾಕಿ ಹೊಡೆದು, “ನಿನ್ನನ್ನು ಹೊಡೆದವನಾರು? ಪ್ರವಾದನೆ ಹೇಳು” ಎಂದು ಆತನನ್ನು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

63 ಯೇಸುಸ್ವಾಮಿಯನ್ನು ಬಂಧಿಸಿ ಹಿಡಿದುಕೊಂಡಿದ್ದವರು ಅವರನ್ನು ಅಣಕಿಸಿದರು, ಹೊಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

63-64 ಕೆಲವು ಜನರು ಯೇಸುವನ್ನು ಹಿಡಿದುಕೊಂಡಿದ್ದರು. ಅವರು ಯೇಸುವಿನ ಮುಖಕ್ಕೆ ಮುಸುಕು ಹಾಕಿ, ಆತನನ್ನು ಹೊಡೆದು, “ನಿನ್ನನ್ನು ಹೊಡೆದವರ್ಯಾರು? ನಮಗೆ ಪ್ರವಾದನೆ ಹೇಳು” ಎಂದು ಗೇಲಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

63 ಯೇಸುವನ್ನು ಕಾಯುತ್ತಿದ್ದ ಜನರು, ಹಾಸ್ಯಮಾಡಿ ಅವರನ್ನು ಹೊಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

63 ಜೆಜುಕ್ ರಾಕುಕ್ ಮನುನ್ ಹೊತ್ತ್ಯಾ ಲೊಕಾನಿ ಜೆಜುನ್ ಎಡ್ಸಡ್ಲ್ಯಾನಿ, ಅನಿ ಮಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 22:63
23 ತಿಳಿವುಗಳ ಹೋಲಿಕೆ  

ಯೇಸು ಈ ಮಾತನ್ನು ಹೇಳಿದಾಗ ಹತ್ತರ ನಿಂತಿದ್ದ ಓಲೇಕಾರರಲ್ಲಿ ಒಬ್ಬನು - ಮಹಾಯಾಜಕನಿಗೆ ಹೀಗೆ ಉತ್ತರಕೊಡುತ್ತೀಯಾ ಎಂದು ಹೇಳಿ ಆತನ ಕೆನ್ನೆಗೆ ಒಂದು ಏಟು ಹಾಕಿದನು.


ಆತನು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವಾತನಿಗೆ ತನ್ನ ಕಾರ್ಯವನ್ನು ಒಪ್ಪಿಸಿದನು.


ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸ್ಥಿರಚಿತ್ತದಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡು ದೇವರ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾಗಿದ್ದಾನೆ.


ವ್ಯೂಹಭರಿತದೇಶವೇ, ನಿನ್ನ ವ್ಯೂಹಗಳನ್ನು ಈಗ ಕೂಡಿಸು; ಆಹಾ, ಶತ್ರುಗಳು ನಮಗೆ ಮುತ್ತಿಗೆ ಹಾಕಿದ್ದಾರೆ; ಇಸ್ರಾಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು.


ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, ಸಂಕಷ್ಟಕ್ಕೊಳಗಾದವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು. ನಾವು ಅವನನ್ನು ಲಕ್ಷ್ಯಕ್ಕೇ ತರಲಿಲ್ಲ.


ಅವನ ಮುಖವು ಸಕಲ ಮನುಷ್ಯರ ಮುಖಕ್ಕಿಂತಲೂ ಅವನ ರೂಪವು ಎಲ್ಲಾ ನರಜನ್ಮದವರ ರೂಪಕ್ಕಿಂತಲೂ ವಿಕಾರವಾಗಿರುವದನ್ನು ನೋಡಿ ಅನೇಕರು ಹೇಗೆ ಅವನಿಂದ ಬೆದರಿ ಬಿದ್ದರೋ


ಮನಃಪೂರ್ವಕವಾಗಿ ತಿರಸ್ಕರಿಸಲ್ಪಟ್ಟವನೂ ಅನ್ಯಜನಾಂಗಕ್ಕೆ ಅಸಹ್ಯನೂ ಜನದೊಡೆಯರ ಸೇವಕನೂ ಆದವನಿಗೆ ಇಸ್ರಾಯೇಲಿನ ವಿಮೋಚಕನೂ ಸದಮಲಸ್ವಾವಿುಯೂ ಆದ ಯೆಹೋವನು ಹೀಗೆ ಹೇಳುತ್ತಾನೆ - ಯೆಹೋವನ ಪ್ರಾಮಾಣಿಕತೆಯನ್ನೂ ಇಸ್ರಾಯೇಲಿನ ಸದಮಲಸ್ವಾವಿುಯು ನಿನ್ನನ್ನು ಪರಿಗ್ರಹಿಸಿರುವದನ್ನೂ ಅರಸರು ನೋಡಿ ಎದ್ದು ನಿಲ್ಲುವರು, ಅಧಿಪತಿಗಳು ಅಡ್ಡಬೀಳುವರು.


ಆಹಾ, ನಮ್ಮ ಆಶೆ ನೆರವೇರಿತು ಅಂದುಕೊಳ್ಳುವದಕ್ಕೆ ಅವರಿಗೆ ಅವಕಾಶವಿರಬಾರದು; ಅವನನ್ನು ನುಂಗಿಬಿಟ್ಟಿದ್ದೇವೆಂದು ಅವರು ಕೊಚ್ಚಿಕೊಳ್ಳಬಾರದು.


ಅವರು ಗರ್ಜಿಸುವ ಉಗ್ರಸಿಂಹಗಳಂತೆ ನನ್ನನ್ನು ನುಂಗುವದಕ್ಕೆ ಬಾಯಿ ತೆರೆದಿದ್ದಾರೆ.


ಹೊರಗೆ ಹೋಗಿ ಬಹು ವ್ಯಥೆಪಟ್ಟು ಅತ್ತನು.


ಅಷ್ಟರೊಳಗೆ ಮಹಾಯಾಜಕನು ಯೇಸುವನ್ನು ಆತನ ಶಿಷ್ಯರ ವಿಷಯವಾಗಿಯೂ ಉಪದೇಶದ ವಿಷಯವಾಗಿಯೂ ವಿಚಾರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು