Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 23:43 - ಕನ್ನಡ ಸತ್ಯವೇದವು J.V. (BSI)

43 ಅದಕ್ಕೆ ಯೇಸು - ಈಹೊತ್ತೇ ನನ್ನ ಸಂಗಡ ಪರದೈಸಿನಲ್ಲಿರುವಿ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಅದಕ್ಕೆ ಯೇಸು, “ಈ ಹೊತ್ತೇ ನೀನು ನನ್ನ ಸಂಗಡ ಪರದೈಸಿನಲ್ಲಿರುವಿ ಎಂದು ನಿನಗೆ ಸತ್ಯವಾಗಿ ಹೇಳುತ್ತೇನೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಅವನಿಗೆ ಯೇಸು, “ಇಂದೇ ನೀನು ನನ್ನೊಡನೆ ಪರಂಧಾಮದಲ್ಲಿರುವೆ ಎಂದು ನಿಶ್ಚಯವಾಗಿ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಆಗ ಯೇಸು ಅವನಿಗೆ, “ಕೇಳು! ನಾನು ಸತ್ಯವನ್ನೇ ಹೇಳುತ್ತೇನೆ. ಈ ದಿನವೇ ನೀನು ನನ್ನ ಸಂಗಡ ಪರದೈಸಿನಲ್ಲಿರುವಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಆಗ ಯೇಸು ಅವನಿಗೆ, “ಈ ದಿನವೇ ನೀನು ನನ್ನ ಸಂಗಡ ಪರದೈಸಿನಲ್ಲಿರುವೆ ಎಂದು ನಾನು ನಿನಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

43 ಜೆಜುನ್ ತೆಕಾ “ಮಿಯಾ ತುಕಾ ಖರೆಚ್ ಸಾಂಗ್ತಾ ಆಜುಚ್ ತಿಯಾ ಮಾಜೆ ವಾಂಗ್ಡಾ, ವೈಕುಂಟಾತ್ ರ್‍ಹಾತೆ!” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 23:43
22 ತಿಳಿವುಗಳ ಹೋಲಿಕೆ  

ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನಲ್ಲಿರುವ ಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.


ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ; ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.


ಮನುಷ್ಯಕುಮಾರನು ಕೆಟ್ಟುಹೋಗಿರುವದನ್ನು ಹುಡುಕಿ ರಕ್ಷಿಸುವದಕ್ಕೆ ಬಂದನು ಎಂದು ಹೇಳಿದನು.


[ಹೀಗಿರುವಲ್ಲಿ] ಯೆಹೋವನ ಸನ್ನಿಧಿಯಲ್ಲಿ ನನ್ನ ದ್ರೋಹವನ್ನು ಒಪ್ಪಿಕೊಳ್ಳುವೆನು ಅಂದುಕೊಂಡು ನನ್ನ ಪಾಪವನ್ನು ಮರೆಮಾಡದೆ ನಿನಗೆ ನನ್ನ ದೋಷವನ್ನು ತಿಳಿಸಿದೆನು. ನೀನು ನನ್ನ ಅಪರಾಧಪಾಪಗಳನ್ನು ಪರಿಹರಿಸಿಬಿಟ್ಟಿ. ಸೆಲಾ.


ನಾನು ಹೋಗಿ ನಿಮಗೆ ಸ್ಥಳವನ್ನು ಸಿದ್ಧಮಾಡಿದ ಮೇಲೆ ತಿರಿಗಿ ಬಂದು ನಿಮ್ಮನ್ನು ಕರಕೊಂಡು ಹೋಗಿ ನನ್ನ ಬಳಿಗೆ ಸೇರಿಸಿಕೊಳ್ಳುವೆನು; ಯಾಕಂದರೆ ನಾನಿರುವ ಸ್ಥಳದಲ್ಲಿ ನೀವು ಸಹ ಇರಬೇಕು.


ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.


ತಂದೆಯೇ, ನೀನು ಯಾರನ್ನು ನನಗೆ ಕೊಟ್ಟಿಯೋ ಅವರು ನಾನಿರುವ ಸ್ಥಳದಲ್ಲಿ ನನ್ನ ಕೂಡ ಇದ್ದುಕೊಂಡು ಲೋಕವು ಹುಟ್ಟುವದಕ್ಕಿಂತ ಮುಂಚೆಯೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ನೋಡಬೇಕೆಂದು ಇಚ್ಫೈಸುತ್ತೇನೆ.


ಈ ಎರಡರ ನಡುವೆ ಸಿಕ್ಕಿಕೊಂಡಿದ್ದೇನೆ; ಇಲ್ಲಿಂದ ಹೋಗಿಬಿಟ್ಟು ಕ್ರಿಸ್ತನ ಜೊತೆಯಲ್ಲಿರಬೇಕೆಂಬದೇ ನನ್ನ ಅಭಿಲಾಷೆ, ಅದು ಉತ್ತಮೋತ್ತಮ;


ಇದನ್ನು ಆಲೋಚಿಸಿ ನಾವು ಧೈರ್ಯವುಳ್ಳವರಾಗಿದ್ದು ದೇಹವನ್ನು ಬಿಟ್ಟು ಕರ್ತನ ಬಳಿಯಲ್ಲಿರುವದೇ ಉತ್ತಮವೆಂದು ಎಣಿಸುತ್ತೇವೆ.


ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವಾಸ್ತ್ಯದವರಲ್ಲಿ ಉಳಿದವರ ಅಪರಾಧವನ್ನು ಕ್ಷವಿುಸುವವನೂ ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ; ಹೌದು, ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ, ಕರುಣೆಯೇ ಆತನಿಗೆ ಇಷ್ಟ.


ಆಗ ಅವರು ಬೇಡುವದರೊಳಗೆ ಸದುತ್ತರವನ್ನು ದಯಪಾಲಿಸುವೆನು; ಅವರು ಹೇಳುತ್ತಿರುವಾಗಲೇ ಕೇಳುವೆನು.


ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.


ಯೇಸುವೇ, ನೀನು ನಿನ್ನ ರಾಜ್ಯವನ್ನು ಪಡೆದವನಾಗಿ ಬರುವಾಗ ನನ್ನನ್ನು ನೆನಸಿಕೋ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು