Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:27 - ಕನ್ನಡ ಸತ್ಯವೇದವು J.V. (BSI)

27 ಮೋಶೆಯ ಮತ್ತು ಎಲ್ಲಾ ಪ್ರವಾದಿಗಳ ಗ್ರಂಥಗಳು ಮೊದಲುಗೊಂಡು ಸಮಸ್ತ ಗ್ರಂಥಗಳಲ್ಲಿ ತನ್ನ ವಿಷಯವಾಗಿರುವ ಸೂಚನೆಗಳನ್ನು ಅವರಿಗೆ ವಿವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಮೋಶೆಯ ಮತ್ತು ಎಲ್ಲಾ ಪ್ರವಾದಿಗಳ ಗ್ರಂಥಗಳು ಮೊದಲುಗೊಂಡು ಸಮಸ್ತ ಗ್ರಂಥಗಳಲ್ಲಿ ತನ್ನ ವಿಷಯವಾಗಿರುವ ಸೂಚನೆಗಳನ್ನು ಅವರಿಗೆ ವಿವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅನಂತರ, ಮೋಶೆ ಹಾಗೂ ಪ್ರವಾದಿಗಳೆಲ್ಲರಿಂದ ಆರಂಭಿಸಿ ಎಲ್ಲಾ ಪವಿತ್ರಗ್ರಂಥಗಳಲ್ಲಿ ತಮ್ಮ ವಿಷಯವಾಗಿ ಬರೆದಿರುವುದನ್ನು ಅವರಿಗೆ ವಿವರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಬಳಿಕ ಯೇಸು ತನ್ನ ಬಗ್ಗೆ ಪವಿತ್ರ ಗ್ರಂಥದಲ್ಲಿ ಬರೆದಿರುವ ಪ್ರತಿಯೊಂದನ್ನೂ ವಿವರಿಸತೊಡಗಿದನು. ಯೇಸುವು ಮೋಶೆಯ ಗ್ರಂಥಗಳಿಂದ ಪ್ರಾರಂಭಿಸಿ ಪ್ರವಾದಿಗಳು ತನ್ನ ಬಗ್ಗೆ ಹೇಳಿದ ವಿಷಯಗಳ ಕುರಿತು ವಿವರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಮೋಶೆಯ ಮತ್ತು ಎಲ್ಲಾ ಪ್ರವಾದಿಗಳಿಂದ ಆರಂಭಿಸಿ, ಪವಿತ್ರ ವೇದಗಳಲ್ಲಿ ತನ್ನ ವಿಷಯವಾಗಿ ಬರೆದವುಗಳನ್ನು ಯೇಸು ಅವರಿಗೆ ವಿವರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಅನಿ ಜೆಜುನ್ ಮೊಯ್ಜೆಚ್ಯಾ ಪುಸ್ತಕಾಕ್ನಾ ಧರಲ್ಲೆ ಸಗ್ಳ್ಯಾ ಪ್ರವಾದ್ಯಾನಿ ಅಪ್ನಾಚ್ಯಾ ವಿಶಯಾತ್ ಕಾಯ್-ಕಾಯ್ ಪವಿತ್ರ್ ಪುಸ್ತಕಾತ್ ಲಿವಲ್ಲೆ ಹಾಯ್, ತೆ ಸಗ್ಳೆ ತೆಂಕಾ ಸೊಡ್ಸುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:27
50 ತಿಳಿವುಗಳ ಹೋಲಿಕೆ  

ಇದರಿಂದ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವಳು.


ತರುವಾಯ ಆತನು - ನಾನು ಇನ್ನೂ ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ ಪ್ರವಾದಿಗಳ ಗ್ರಂಥಗಳಲ್ಲಿಯೂ ಕೀರ್ತನೆಗಳಲ್ಲಿಯೂ ಬರೆದಿರುವದೆಲ್ಲಾ ನೆರವೇರುವದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ ಅಂದನು.


ನಿಮ್ಮ ದೇವರಾದ ಯೆಹೋವನು ನಿಮ್ಮ ಸಹೋದರರಲ್ಲಿ ನನ್ನಂಥ ಪ್ರವಾದಿಯನ್ನು (ನಿಮಗೆ) ಏರ್ಪಡಿಸುವನು; ಅವನಿಗೇ ನೀವು ಕಿವಿಗೊಡಬೇಕು.


ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನು, ಸುರಕ್ಷಿತನು; ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.


ಆತನಲ್ಲಿ ನಂಬಿಕೆಯಿಡುವ ಪ್ರತಿಯೊಬ್ಬನು ಆತನ ಹೆಸರಿನ ಮೂಲಕವಾಗಿ ಪಾಪಪರಿಹಾರವನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿಗಳೆಲ್ಲರು ಸಾಕ್ಷಿಹೇಳಿದ್ದಾರೆ ಅಂದನು.


ಶಾಸ್ತ್ರಗಳಿಂದ ನಿತ್ಯಜೀವವು ದೊರೆಯುತ್ತದೆಂದು ನೀವು ನೆನಸಿ ಅವುಗಳನ್ನು ವಿಚಾರಿಸುತ್ತೀರಲ್ಲಾ; ಅವುಗಳೂ ನನ್ನ ವಿಷಯದಲ್ಲಿ ಸಾಕ್ಷಿಕೊಡುವವುಗಳಾಗಿವೆ.


ಫಿಲಿಪ್ಪನು ನತಾನಯೇಲನನ್ನು ಕಂಡುಕೊಂಡು ಅವನಿಗೆ - ಯಾವನ ವಿಷಯವಾಗಿ ಮೋಶೆಯು ಧರ್ಮಶಾಸ್ತ್ರದಲ್ಲಿ ಬರೆದನೋ ಮತ್ತು ಪ್ರವಾದಿಗಳು ಬರೆದರೋ, ಆತನು ನಮಗೆ ಸಿಕ್ಕಿದನು; ಆತನು ಯಾರಂದರೆ ಯೋಸೇಫನ ಮಗನಾದ ನಜರೇತಿನ ಯೇಸು ಎಂದು ಹೇಳಿದನು.


ನೀನು ನನ್ನ ಮಾತನ್ನು ಕೇಳಿದ್ದರಿಂದ ಭೂವಿುಯ ಎಲ್ಲಾ ಜನಾಂಗಗಳಿಗೂ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವದು ಎಂಬದಾಗಿ ಯೆಹೋವನು ತನ್ನಾಣೆಯಿಟ್ಟು ಹೇಳಿದ್ದಾನೆ ಅಂದನು.


ಹೊಡೆಯುವವರಿಗೆ ಬೆನ್ನುಕೊಟ್ಟು ಕೂದಲುಕೀಳುವವರಿಗೆ ಗಡ್ಡವನ್ನು ಒಡ್ಡಿದೆನು; ಉಗುಳಿಸಿಕೊಳ್ಳುವ ಅವಮಾನಕ್ಕೆ ನನ್ನ ಮುಖವನ್ನು ಮರೆಮಾಡಲಿಲ್ಲ.


ಆತನು ಅವರಿಗೆ - ಎಲಾ, ಬುದ್ಧಿಯಿಲ್ಲದವರೇ, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬುವದರಲ್ಲಿ ಮಂದ ಹೃದಯರೇ,


ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಖಡ್ಗವೇ, ನಾನು ನೇವಿುಸಿದ ಕುರುಬನೂ ನನ್ನ ಸಂಗಡಿಗನೂ ಆಗಿರುವವನಿಗೆ ವಿರುದ್ಧವಾಗಿ ಎಚ್ಚರಗೊಳ್ಳು; ಕುರುಬನನ್ನು ಹೊಡೆ, ಕುರಿಗಳು ಚದರಿಹೋಗುವವು; ಮರಿಗಳ ಮೇಲೂ ಕೈಮಾಡಬೇಕೆಂದಿದ್ದೇನೆ.


ನಿನಗೂ ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವದು, ನೀನು ಅದರ ಹಿಮ್ಮಡಿಯನ್ನು ಕಚ್ಚುವಿ. ಎಂದು ಹೇಳಿದನು.


ನೀನು ಪುರಾತನ ಕಾಲದಿಂದಲೂ ನಮ್ಮ ಪಿತೃಗಳಿಗೆ ಪ್ರಮಾಣಮಾಡಿರುವಂತೆ ಯಾಕೋಬನ ವಂಶದವರಿಗೆ ಸತ್ಯಪರನಾಗಿಯೂ ಅಬ್ರಹಾಮನ ವಂಶದವರಿಗೆ ಪ್ರೀತಿಪರನಾಗಿಯೂ ನಡೆಯುವಿ.


ನಾನು ಕಂಡ ರಾತ್ರಿಯ ಕನಸಿನಲ್ಲಿ ಇಗೋ, ಮನುಷ್ಯಕುಮಾರನಂತಿರುವವನು ಆಕಾಶದ ಮೇಘಗಳೊಂದಿಗೆ ಬಂದು ಆ ಮಹಾವೃದ್ಧನನ್ನು ಸಮೀಪಿಸಿದನು, ಅವನನ್ನು ಆತನ ಸನ್ನಿಧಿಗೆ ತಂದರು.


ಯೆಹೋವನು ದಾವೀದನಿಗೆ ಮಾಡಿದ ಪ್ರಮಾಣವು ಸ್ಥಿರವಾಗಿದೆ; ಆತನು ಅದನ್ನು ಬದಲಿಸುವದಿಲ್ಲ - ನಿನ್ನ ಸಂತಾನದವರನ್ನು ನಿನ್ನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು;


ರಾಜದಂಡವನ್ನು ಹಿಡಿಯತಕ್ಕವನು ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವದಿಲ್ಲ, ಮುದ್ರೆಕೋಲು ಅವನ ಪಾದಗಳ ಬಳಿಯಿಂದ ಕದಲುವದಿಲ್ಲ; ಅವನಿಗೆ ಅನ್ಯಜನಗಳೂ ವಿಧೇಯರಾಗಿರುವರು.


ನಿನ್ನ ತಂದೆಯಾದ ಅಬ್ರಹಾಮನು ನನ್ನ ಮಾತನ್ನು ಕೇಳಿ ನಾನು ಹೇಳಿದಂತೆ ಮಾಡಿ ನನ್ನ ಆಜ್ಞಾನೇಮವಿಧಿಗಳನ್ನು ಕೈಕೊಂಡು ನಡೆದದರಿಂದ ನಾನು ಅವನಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಿ


ಆ ಮೋಶೆಯೇ - ದೇವರು ನನ್ನನ್ನು ಏರ್ಪಡಿಸಿದಂತೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮಗೆ ಏರ್ಪಡಿಸಿಕೊಡುವನು ಎಂದು ಇಸ್ರಾಯೇಲ್ ಜನರಿಗೆ ಹೇಳಿದವನು.


ನನ್ನ ಹಿಂಡನ್ನು ಕಾಯಲಿಕ್ಕೆ ಒಬ್ಬನೇ ಕುರುಬನನ್ನು ಏರ್ಪಡಿಸುವೆನು; ನನ್ನ ಸೇವಕನಾದ ದಾವೀದನೆಂಬ ಆ ಕುರುಬನು ಅದನ್ನು ಮೇಯಿಸುವನು; ಹೌದು, ಅದರ ಕುರುಬನಾಗಿ ಅದನ್ನು ಮೇಯಿಸುತ್ತಾ ಬರುವನು.


ನನ್ನ ಸೇವಕನಾದ ಯಾಕೋಬನಿಗೆ ನಾನು ದಯಪಾಲಿಸಿದ ದೇಶದಲ್ಲಿ ಅವರು ವಾಸಿಸುವರು; ಹೌದು, ನಿಮ್ಮ ಪಿತೃಗಳು ವಾಸಿಸಿದ ದೇಶದಲ್ಲಿ ಅವರೂ ಅವರ ಸಂತಾನದವರೂ ತಲತಲಾಂತರವಾಗಿ ವಾಸಿಸುವರು; ನನ್ನ ಸೇವಕನಾದ ದಾವೀದನು ಅವರಿಗೆ ಸದಾ ಪ್ರಭುವಾಗಿರುವನು.


ಇದಲ್ಲದೆ ಸಮುವೇಲನೂ ಅವನ ತರುವಾಯ ಬಂದು ಪ್ರವಾದಿಸಿದ ಎಲ್ಲಾ ಪ್ರವಾದಿಗಳೂ ಸಹ ಈಗಿನ ದಿನಗಳ ವಿಷಯದಲ್ಲಿ ತಿಳಿಸಿದರು.


ಮೋಶೆಯು ಹೇಳಿದ್ದೇನಂದರೆ - ದೇವರಾಗಿರುವ ಕರ್ತನು ನನ್ನನ್ನು ಏರ್ಪಡಿಸಿದಂತೆ ನಿಮ್ಮ ಸಹೋದರರಲ್ಲಿ ಮತ್ತೊಬ್ಬ ಪ್ರವಾದಿಯನ್ನು ನಿಮಗೆ ಏರ್ಪಡಿಸಿಕೊಡುವನು, ಆತನು ನಿಮಗೆ ಹೇಳುವ ಎಲ್ಲಾ ಮಾತುಗಳಿಗೆ ಕಿವಿಗೊಡಬೇಕು;


ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೋ [ದೇವರ] ಧರ್ಮವೆಂಬ ಸೂರ್ಯನು ಸ್ವಸ್ಥತೆಯನ್ನುಂಟುಮಾಡುವ ಕಿರಣಗಳುಳ್ಳವನಾಗಿ ಮೂಡುವನು; ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಹೊರಟು ಬಂದು ಕುಣಿದಾಡುವಿರಿ;


ಆಗ ನಾನು ಅವನಿಗೆ ನಮಸ್ಕಾರಮಾಡಬೇಕೆಂದು ಅವನ ಪಾದಗಳ ಮುಂದೆ ಬೀಳಲು ಅವನು - ಮಾಡಬೇಡ ನೋಡು, ನಾನು ನಿನಗೂ ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೇಳಿರುವ ನಿನ್ನ ಸಹೋದರರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೇ ನಮಸ್ಕಾರಮಾಡು ಅಂದನು. ಯೇಸುವಿನ ವಿಷಯವಾದ ಸಾಕ್ಷಿಯು ಪ್ರವಾದನೆಯ ಆತ್ಮವೇ.


ನೀನು ಆಶೀರ್ವಾದನಿಧಿಯಾಗುವಿ. ನಿನ್ನನ್ನು ಹರಸುವವರನ್ನು ಹರಸುವೆನು; ನಿನ್ನನ್ನು ಶಪಿಸುವವರನ್ನು ಶಪಿಸುವೆನು. ನಿನ್ನ ಮೂಲಕ ಭೂಲೋಕದ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವದು ಎಂದು ಹೇಳಿದನು.


ಅದಕ್ಕನುಗುಣವಾಗಿ ಯೆಹೋವವಿಜಯ ಎಂಬ ಗ್ರಂಥದಲ್ಲಿ - ಸೂಫಕ್ಕೆ ಸೇರಿದ ವಾಹೇಬನ್ನೂ ಅರ್ನೋನ್ ಹೊಳೆಗೆ ಕೂಡುವ ಹಳ್ಳಗಳನ್ನೂ


ನೀವು ಹಿಂದಿರುಗಿ ಬಂದು ಯೆಹೋವನ ಮುಂದೆ ಗೋಳಾಡಿದಾಗ ಆತನು ನಿಮ್ಮ ಮೊರೆಯನ್ನು ಕೇಳಲೂ ಇಲ್ಲ, ರಕ್ಷಿಸಲೂ ಇಲ್ಲ.


ನಿನ್ನ ಅಧಿಕಾರಿಗಳು ದ್ರೋಹಿಗಳೂ ಕಳ್ಳರ ಗೆಳೆಯರೂ ಆಗಿದ್ದಾರೆ; ಪ್ರತಿಯೊಬ್ಬನೂ ಕಾಣಿಕೆಗಳನ್ನು ಆಶಿಸಿ ಲಂಚಗಳನ್ನು ಹುಡುಕುವನು; ಅನಾಥರಿಗೆ ನ್ಯಾಯತೀರಿಸರು; ವಿಧವೆಯರ ವ್ಯಾಜ್ಯವು ಅವರ ಮನಸ್ಸಿಗೆ ಬಾರದು.


ಯಾಕೋಬನ ಮನೆತನದವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಯೆಹೋವನಿಗಾಗಿ ನಾನು ಕಾದುಕೊಂಡು ಎದುರುನೋಡುತ್ತಿರುವೆನು.


ಆದರೆ ಸಂಕಟಪಟ್ಟ ದೇಶಕ್ಕೆ ಅಂಧಕಾರವಿನ್ನಿಲ್ಲ. ಪೂರ್ವಕಾಲದಲ್ಲಿ ಜೆಬುಲೋನ್ ಮತ್ತು ನಫ್ತಾಲಿ ಸೀಮೆಗಳನ್ನು ಆತನು ಅವಮಾನಕ್ಕೆ ಗುರಿಮಾಡಿದನು; ಅನಂತರದಲ್ಲಿ ಯೊರ್ದನಿನ ಆಚೆಯ ಸೀಮೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿಗಿರುವ ಗಲಿಲಾಯ ಸೀಮೆ ಈ ಪ್ರಾಂತವನ್ನೆಲ್ಲಾ ಘನಪಡಿಸಿದ್ದಾನೆ.


ಅವರ ಕತ್ತಿಯು ಅಶ್ಶೂರ ದೇಶವನ್ನು ತಿಂದುಬಿಡುವದು, ನಿಮ್ರೋದ್ ಸೀಮೆಯ ಪ್ರವೇಶಸ್ಥಾನಗಳು ಅವರ ಖಡ್ಗಕ್ಕೆ ತುತ್ತಾಗುವವು; ಅಶ್ಶೂರ್ಯರು ನಮ್ಮ ದೇಶದಲ್ಲಿ ನುಗ್ಗಿ ನಮ್ಮ ಪ್ರಾಂತವನ್ನು ತುಳಿದುಹಾಕುವಾಗ [ಆ ಸಮಾಧಾನಪ್ರದನು] ನಮ್ಮನ್ನು ಅವರ ಕೈಯೊಳಗಿಂದ ಉದ್ಧರಿಸುವನು.


ಆದರೆ ಪ್ರತ್ಯೇಕವಾಗಿ ಆತನು ತನ್ನ ಆಪ್ತಶಿಷ್ಯರಿಗೆ ಎಲ್ಲವನ್ನು ಬಿಚ್ಚಿ ಹೇಳಿದನು.


ಇದಲ್ಲದೆ ನನ್ನನ್ನು ಕಳುಹಿಸಿಕೊಟ್ಟ ತಂದೆಯು ನನ್ನ ವಿಷಯವಾಗಿ ಸಾಕ್ಷಿ ಹೇಳಿದ್ದಾನೆ. ನೀವು ಎಂದಾದರೂ ಆತನ ಧ್ವನಿಯನ್ನು ಕೇಳಿದ್ದೂ ಇಲ್ಲ, ಆತನ ರೂಪವನ್ನು ನೋಡಿದ್ದೂ ಇಲ್ಲ,


ಯೆಶಾಯನು ಆತನ ಮಹಿಮೆಯನ್ನು ನೋಡಿದ್ದರಿಂದ ಆತನ ವಿಷಯದಲ್ಲಿ ಮಾತಾಡುತ್ತಿರುವಾಗ ಆ ಮಾತನ್ನು ನುಡಿದನು.


ಆದರೆ ದೇವರು ತಾನು ನೇವಿುಸಿದ ಕ್ರಿಸ್ತನು ಬಾಧೆಯನ್ನನುಭವಿಸಿ ಸಾಯಬೇಕೆಂಬದಾಗಿ ಎಲ್ಲಾ ಪ್ರವಾದಿಗಳ ಬಾಯಿಂದ ಮುಂಚಿತವಾಗಿ ಹೇಳಿಸಿದ ಮಾತನ್ನು ಹೀಗೆ ನೆರವೇರಿಸಿದನು.


ಫಿಲಿಪ್ಪನು ಉಪದೇಶಿಸುವದಕ್ಕೆ ತೊಡಗಿ ಅದೇ ವಚನವನ್ನು ಆಧಾರ ಮಾಡಿಕೊಂಡು ಅವನಿಗೆ ಯೇಸುವಿನ ವಿಷಯವಾದ ಸುವಾರ್ತೆಯನ್ನು ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು