Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 24:32 - ಕನ್ನಡ ಸತ್ಯವೇದವು J.V. (BSI)

32 ಆಗ ಅವರು ಒಬ್ಬರಿಗೊಬ್ಬರು - ಆತನು ದಾರಿಯಲ್ಲಿ ನಮ್ಮ ಸಂಗಡ ಮಾತಾಡಿದಾಗಲೂ ಗ್ರಂಥಗಳ ಅರ್ಥವನ್ನು ನಮಗೆ ಬಿಚ್ಚಿ ಹೇಳಿದಾಗಲೂ ನಮ್ಮ ಹೃದಯವು ನಮ್ಮಲ್ಲಿ ಕುದಿಯಿತಲ್ಲವೇ ಎಂದು ಹೇಳಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಆಗ ಅವರು ಒಬ್ಬರಿಗೊಬ್ಬರು, “ಆತನು ದಾರಿಯಲ್ಲಿ ನಮ್ಮ ಸಂಗಡ ಮಾತನಾಡಿದಾಗಲೂ, ಗ್ರಂಥಗಳ ಅರ್ಥವನ್ನು ನಮಗೆ ಬಿಡಿಸಿ ಹೇಳಿದಾಗಲೂ, ನಮ್ಮ ಹೃದಯವು ನಮ್ಮೊಳಗೆ ಕುದಿಯಿತಲ್ಲವೇ?” ಎಂದು ಹೇಳಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಶಿಷ್ಯರು ಒಬ್ಬರಿಗೊಬ್ಚರು ಮಾತನಾಡಿಕೊಳ್ಳುತ್ತಾ, “ದಾರಿಯಲ್ಲಿ ಇವರು ನಮ್ಮ ಸಂಗಡ ಮಾತನಾಡುತ್ತಾ ಪವಿತ್ರಗ್ರಂಥದ ಅರ್ಥವನ್ನು ನಮಗೆ ವಿವರಿಸುತ್ತಾ ಇದ್ದಾಗ ನಮ್ಮ ಹೃದಯ ಕುತೂಹಲದಿಂದ ಕುದಿಯುತ್ತಾ ಇತ್ತಲ್ಲವೆ?” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಅವರಿಬ್ಬರು, “ಯೇಸು ದಾರಿಯಲ್ಲಿ ನಮ್ಮ ಸಂಗಡ ಮಾತಾಡಿದಾಗ ನಮ್ಮಲ್ಲಿ ಬೆಂಕಿ ಉರಿದಂತಾಯಿತಲ್ಲವೇ? ಪವಿತ್ರ ಗ್ರಂಥದ ನಿಜ ಅರ್ಥವನ್ನು ಆತನು ವಿವರಿಸಿದಾಗ, ಬಹಳ ರೋಮಾಂಚಕಾರಿಯಾಗಿರಲಿಲ್ಲವೇ?” ಎಂದು ಮಾತಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಅವರು ಒಬ್ಬರಿಗೊಬ್ಬರು, “ಅವರು ದಾರಿಯಲ್ಲಿ ನಮ್ಮ ಕೂಡ ಮಾತನಾಡುತ್ತಾ, ಪವಿತ್ರ ವೇದವನ್ನು ನಮಗೆ ವಿವರಿಸಿದಾಗ ನಮ್ಮ ಹೃದಯವು ಬೆಂಕಿಯಂತೆ ದಹಿಸಿತಲ್ಲವೇ?” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

32 ತನ್ನಾ ತೆನಿ ಎಕಾಮೆಕಾಕ್ನಿ,“ ವಾಟೆನ್ ಯೆತಾನಾ ತೊ ಅಮ್ಚೆಕ್ಡೆ ಬೊಲುನ್ಗೆತ್ ಪವಿತ್ರ್ ಪುಸ್ತಕಾಚ್ಯಾ ವಿಶಯಾತ್ ಸಾಂಗುನ್ಗೆತ್ ಯೆತಾನಾ, ಅಮ್ಚ್ಯಾ ಭುತ್ತುರುಚ್ ಎಕ್ ಆಗ್ ಪೆಟ್ಲ್ಯಾ ಸರ್ಕೆ ಹೊಯ್ನಶಿ ಕಾಯ್?” ಮನುನ್ ಬೊಲ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 24:32
14 ತಿಳಿವುಗಳ ಹೋಲಿಕೆ  

ಆಮೇಲೆ ಅವರು ಶಾಸ್ತ್ರವಚನಗಳನ್ನು ತಿಳುಕೊಳ್ಳುವಂತೆ ಆತನು ಅವರ ಬುದ್ಧಿಯನ್ನು ತೆರೆದು


ಯಾಕಂದರೆ ದೇವರ ವಾಕ್ಯವು ಸಜೀವವಾದದ್ದು, ಕಾರ್ಯಸಾಧಕವಾದದ್ದು, ಯಾವ ಇಬ್ಬಾಯಿಕತ್ತಿಗಿಂತಲೂ ಹದವಾದದ್ದು, ಪ್ರಾಣಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದು ಆಗಿದೆ.


ಹೊಟ್ಟೆಲ್ಲಿ? ಕಾಳೆಲ್ಲಿ? ನನ್ನ ವಾಕ್ಯವು ಬೆಂಕಿಗೂ ಬಂಡೆಯನ್ನು ಒಡೆದುಬಿಡುವ ಚಮಟಿಗೆಗೂ ಸಮಾನವಾಗಿದೆಯಲ್ಲಾ. ಯೆಹೋವನೇ ಇದನ್ನು ನುಡಿದಿದ್ದಾನೆ.


ನಾನು ಯೆಹೋವನ ವಿಷಯವನ್ನು ಪ್ರಕಟಿಸೆನು, ಆತನ ಹೆಸರಿನಲ್ಲಿ ಇನ್ನು ಮಾತಾಡೆನು ಎಂದುಕೊಂಡರೆ ಉರಿಯುವ ಬೆಂಕಿಯು ನನ್ನ ಎಲುಬುಗಳಲ್ಲಿ ಅಡಕವಾಗಿದೆಯೋ ಎಂಬಂತೆ ನನ್ನ ಹೃದಯದಲ್ಲಿ ಸಂಕಟವಾಗುತ್ತದೆ; ತಡೆದು ತಡೆದು ಆಯಾಸಗೊಂಡಿದ್ದೇನೆ, ಸಹಿಸಲಾರೆ.


ನನ್ನ ಹೃದಯದಲ್ಲಿ ಸಂತಾಪ ಉಕ್ಕಿತು; ನಾನು ಯೋಚಿಸುತ್ತಿರುವಲ್ಲಿ ಬೆಂಕಿಯುರಿಯಿತು. ಆಗ ನಾನು ಬಾಯಿಬಿಟ್ಟು -


ನನಗೆ ದೊರೆತ ನಿನ್ನ ಮಾತುಗಳನ್ನು ಆಹಾರಮಾಡಿಕೊಂಡೆನು, ನಿನ್ನ ನುಡಿಗಳು ನನಗೆ ಹರ್ಷವೂ ಹೃದಯಾನಂದವೂ ಆದವು; ಸೇನಾಧೀಶ್ವರನಾದ ದೇವರೇ, ಯೆಹೋವನೇ, ನಾನು ನಿನ್ನ ಹೆಸರಿನವನಲ್ಲವೇ!


ಕಬ್ಬಿಣವು ಕಬ್ಬಿಣವನ್ನು ಹೇಗೋ ವಿುತ್ರನು ವಿುತ್ರನ ಬುದ್ಧಿಯನ್ನು ಹಾಗೆ ಹರಿತ ಮಾಡುವನು.


ಬದುಕಿಸುವಂಥದು ಆತ್ಮವೇ; ಮಾಂಸವು ಯಾವದಕ್ಕೂ ಬರುವದಿಲ್ಲ. ನಾನು ನಿಮಗೆ ಹೇಳಿರುವ ಮಾತುಗಳೇ ಆತ್ಮವಾಗಿಯೂ ಜೀವವಾಗಿಯೂ ಅವೆ.


ಅವರು ಅವನಿಗೆ ಒಂದು ದಿವಸವನ್ನು ಗೊತ್ತುಮಾಡಲು ಬಹುಮಂದಿ ಅವನ ಬಿಡಾರದಲ್ಲಿ ಅವನ ಬಳಿಗೆ ಬಂದರು. ಅವನು ಬೆಳಗಿನಿಂದ ಸಾಯಂಕಾಲದವರೆಗೂ ದೇವರ ರಾಜ್ಯವನ್ನು ಕುರಿತು ಪ್ರಮಾಣವಾಗಿ ಸಾಕ್ಷಿಹೇಳುತ್ತಾ ಮೋಶೆಯ ಧರ್ಮಶಾಸ್ತ್ರವನ್ನೂ ಪ್ರವಾದಿಗಳ ಗ್ರಂಥಗಳನ್ನೂ ಆಧಾರಮಾಡಿಕೊಂಡು ಯೇಸುವಿನ ವಿಷಯದಲ್ಲಿ ಅವರನ್ನು ಒಡಂಬಡಿಸುತ್ತಾ ಇದ್ದನು.


ಬಳಲಿಹೋದವರನ್ನು ಮಾತುಗಳಿಂದ ಸುಧಾರಿಸುವದಕ್ಕೆ ನಾನು ಬಲ್ಲವನಾಗುವಂತೆ ಕರ್ತನಾದ ಯೆಹೋವನು ಶಿಕ್ಷಿತರ ನಾಲಿಗೆಯನ್ನು ನನಗೆ ದಯಪಾಲಿಸಿದ್ದಾನೆ; ಬೆಳಬೆಳಗೂ ನನ್ನನ್ನು ಎಚ್ಚರಿಸಿ ಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಜಾಗರಗೊಳಿಸುತ್ತಾನೆ.


ನನ್ನ ಧ್ಯಾನದಿಂದ ಆತನಿಗೆ ಮೆಚ್ಚಿಕೆಯಾಗಲಿ; ನಾನಾದರೋ ಯೆಹೋವನಲ್ಲಿ ಆನಂದಿಸುವೆನು.


ತೈಲವೂ ಸುಗಂಧದ್ರವ್ಯಗಳೂ ಹೇಗೋ ವಿುತ್ರನ ಸಂಭಾಷಣೆಯಿಂದ ಅನುಭವಕ್ಕೆ ಬರುವ ಸ್ನೇಹರಸವು ಹಾಗೆ ಮನೋಹರ.


ಆದರೆ ಪ್ರತ್ಯೇಕವಾಗಿ ಆತನು ತನ್ನ ಆಪ್ತಶಿಷ್ಯರಿಗೆ ಎಲ್ಲವನ್ನು ಬಿಚ್ಚಿ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು