Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:1 - ಕನ್ನಡ ಸತ್ಯವೇದವು J.V. (BSI)

1 ಯೇಸು ಪವಿತ್ರಾತ್ಮಭರಿತನಾಗಿ ಯೊರ್ದನ್‍ಹೊಳೆಯಿಂದ ಹಿಂತಿರುಗಿ ದೇವರಾತ್ಮನಿಂದ ನಾಲ್ವತ್ತು ದಿವಸ ಅಡವಿಯಲ್ಲಿ ನಡಿಸಲ್ಪಡುತ್ತಾ ಸೈತಾನನಿಂದ ಶೋಧಿಸಲ್ಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೇಸು ಪವಿತ್ರಾತ್ಮಭರಿತನಾಗಿ ಯೊರ್ದನ್ ಹೊಳೆಯಿಂದ ಹಿಂತಿರುಗಿ ಬಂದು ದೇವರಾತ್ಮನಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯೇಸುಸ್ವಾಮಿ ಪವಿತ್ರಾತ್ಮಭರಿತರಾಗಿ ಜೋರ್ಡನ್ ನದಿತೀರದಿಂದ ಹಿಂದಿರುಗಿದ ಮೇಲೆ ಅದೇ ಆತ್ಮದಿಂದ ಪ್ರೇರಿತರಾಗಿ ಬೆಂಗಾಡು ಪ್ರದೇಶಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೇಸುವು ಜೋರ್ಡನ್ ನದಿಯಿಂದ ಹಿಂತಿರುಗಿದನು. ಆತನು ಪವಿತ್ರಾತ್ಮಭರಿತನಾಗಿದ್ದನು. ಪವಿತ್ರಾತ್ಮನು ಯೇಸುವನ್ನು ಅಡವಿಗೆ ನಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೇಸು ಪವಿತ್ರಾತ್ಮಭರಿತರಾಗಿ, ಯೊರ್ದನ್ ನದಿ ತೀರದಿಂದ ಹಿಂದಿರುಗಿ ಬಂದು, ದೇವರಾತ್ಮರಿಂದ ಅರಣ್ಯದೊಳಕ್ಕೆ ಮಾರ್ಗದರ್ಶನ ಹೊಂದಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಜೆಜು ಪವಿತ್ರ್ ಆತ್ಮ್ಯಾನ್ ಭರುನ್ ಜೊರ್ದಾನ್ ನ್ಹಯಿಕ್ನಾ ಪರ್‍ತುನ್ ಯೆಲೊ,ಅನಿ ಪವಿತ್ರ್ ಆತ್ಮ್ಯಾನ್ ಜೆಜುಕ್ ಹಾಳ್ ಜಾಗ್ಯಾಕ್ ಘೆವ್ನ್ ಗೆಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:1
19 ತಿಳಿವುಗಳ ಹೋಲಿಕೆ  

ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದದರಿಂದ ಆತನು ಉಪಕಾರಗಳನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣಮಾಡುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವದಷ್ಟೆ.


ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವದಕ್ಕೆ ಅಭಿಷೇಕಿಸಿದನು, ಸೆರೆಯವರಿಗೆ ಬಿಡುಗಡೆಯಾಗುವದನ್ನು ಮತ್ತು ಕುರುಡರಿಗೆ ಕಣ್ಣು ಬರುವದನ್ನು ಪ್ರಸಿದ್ಧಿಪಡಿಸುವದಕ್ಕೂ ಮನಮುರಿದವರನ್ನು ಬಿಡಿಸಿ ಕಳುಹಿಸುವದಕ್ಕೂ


ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವದಕ್ಕೂ ಸೆರೆಯವರಿಗೆ ಬಿಡುಗಡೆಯಾಗುವದನ್ನು, ಬಂದಿಗಳಿಗೆ [ಕದ] ತೆರೆಯುವದನ್ನು ಪ್ರಸಿದ್ಧಿಪಡಿಸುವದಕ್ಕೂ


ಹೇಗಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮವರವನ್ನು ಅಳತೆಮಾಡದೆ ಅನುಗ್ರಹಿಸುವದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.


ಇದಲ್ಲದೆ ಯೋಹಾನನು ಸಾಕ್ಷಿಕೊಟ್ಟು ಹೇಳಿದ್ದೇನಂದರೆ - ದೇವರಾತ್ಮವು ಪಾರಿವಾಳದಂತೆ ಆಕಾಶದಿಂದ ಇಳಿಯುವದನ್ನು ನೋಡಿದೆನು. ಅದು ಆತನ ಮೇಲೆ ನೆಲೆಗೊಂಡಿತು.


ಯೇಸು ಸ್ನಾನಮಾಡಿಸಿಕೊಂಡ ಕೂಡಲೆ ನೀರಿನಿಂದ ಮೇಲಕ್ಕೆ ಬರಲು ಇಗೋ, ಆತನಿಗೆ ಆಕಾಶವು ತೆರೆಯಿತು; ಮತ್ತು ದೇವರ ಆತ್ಮ ಪಾರಿವಾಳದ ಹಾಗೆ ಇಳಿದು ತನ್ನ ಮೇಲೆ ಬರುವದನ್ನು ಕಂಡನು.


ದೇವರಾತ್ಮವು ನನ್ನನ್ನು ಎತ್ತಿಕೊಂಡು ಹೋಯಿತು. ನಾನು ಯೆಹೋವನ ಹಸ್ತಸ್ಪರ್ಶದಿಂದ ತುಂಬಾ ಪರವಶನಾಗಿದ್ದು ವ್ಯಥೆಗೊಳ್ಳುತ್ತಾ ಮನಸ್ತಾಪಪಡುತ್ತಾ ನಡೆದೆನು.


ತರುವಾಯ ಯೇಸು ಪವಿತ್ರಾತ್ಮನ ಶಕ್ತಿಯಿಂದ ಕೂಡಿದವನಾಗಿ ತಿರಿಗಿ ಗಲಿಲಾಯಕ್ಕೆ ಹೋದನು; ಆತನ ಸುದ್ದಿಯು ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಹಬ್ಬಿಕೊಂಡಿತು.


ಅವರು ನೀರನ್ನು ಬಿಟ್ಟು ಮೇಲಕ್ಕೆ ಬಂದಾಗ ಕರ್ತನ ಆತ್ಮ ಫಿಲಿಪ್ಪನನ್ನು ಎತ್ತಿಕೊಂಡುಹೋಗಲಾಗಿ ಕಂಚುಕಿಯು ಸಂತೋಷವುಳ್ಳವನಾಗಿ ತನ್ನ ದಾರಿಯನ್ನು ಹಿಡಿದು ಅವನನ್ನು ಕಾಣಲೇ ಇಲ್ಲ.


ತರುವಾಯ ತಾನೊಬ್ಬನಾಗಿ ಅರಣ್ಯದೊಳಗೆ ಒಂದು ದಿವಸದ ಪ್ರಯಾಣದಷ್ಟು ದೂರ ಹೋಗಿ ಒಂದು ಜಾಲೀಗಿಡದ ಕೆಳಗೆ ಕೂತುಕೊಂಡು ಮರಣವನ್ನು ಅಪೇಕ್ಷಿಸಿದನು. ಅವನು - ಯೆಹೋವನೇ, ನನಗೆ ಸಾಕಾಯಿತು; ನನ್ನ ಪ್ರಾಣವನ್ನು ತೆಗೆದುಬಿಡು; ನಾನು ನನ್ನ ಪಿತೃಗಳಿಗಿಂತ ಉತ್ತಮನಲ್ಲ ಎಂದು ದೇವರನ್ನು ಪ್ರಾರ್ಥಿಸಿ


ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಪವಿತ್ರಾತ್ಮನ ಮೂಲಕ ಆಜ್ಞೆಕೊಟ್ಟು ಮೇಲಣ ಲೋಕವನ್ನೇರಿದ ದಿನದವರೆಗೆ ವಿವರಿಸಿದೆನಷ್ಟೆ.


ಇವನು ಪವಿತ್ರಾತ್ಮನ ಪ್ರೇರಣೆಯಿಂದ ದೇವಾಲಯಕ್ಕೆ ಬಂದನು; ಆಗ ತಂದೆತಾಯಿಗಳು ಯೇಸುವೆಂಬ ಮಗುವಿಗೆ ಧರ್ಮಶಾಸ್ತ್ರದಲ್ಲಿ ಹೇಳಿರುವ ಪದ್ಧತಿಯ ಪ್ರಕಾರ ನಡಿಸಬೇಕೆಂದು ಅದನ್ನು ಒಳಕ್ಕೆ ತರಲು


ಅವನು ಯೊರ್ದನ್ ಹೊಳೆಯ ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಜನರಿಗೆ - ನೀವು ಪಾಪ ಪರಿಹಾರಕ್ಕಾಗಿ ದೇವರ ಕಡೆಗೆ ತಿರುಗಿಕೊಂಡು ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಸಾರಿ ಹೇಳುವವನಾದನು.


ನಾನು ನಿನ್ನನ್ನು ಬಿಟ್ಟು ಹೊರಟ ಕೂಡಲೆ ಯೆಹೋವನ ಆತ್ಮವು ನಿನ್ನನ್ನು ನನಗೆ ಗೊತ್ತಿಲ್ಲದ ಬೇರೊಂದು ಸ್ಥಳಕ್ಕೆ ಒಯ್ಯುವದು. ನಾನು ಹೋಗಿ ಅಹಾಬನಿಗೆ ಹೇಳುವಲ್ಲಿ ನೀನು ಅವನಿಗೆ ಸಿಕ್ಕದೆಹೋದರೆ ಅವನು ನನ್ನನ್ನು ಕೊಂದುಹಾಕುವನು. ನಾನು ಬಾಲ್ಯಾರಭ್ಯ ಯೆಹೋವನಲ್ಲಿ ಭಯಭಕ್ತಿಯುಳ್ಳವನಲ್ಲವೇ.


ಇವನು ಸೇಥನ ಮಗನು; ಇವನು ಆದಾಮನ ಮಗನು; ಇವನು ದೇವರ ಮಗನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು