Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 4:17 - ಕನ್ನಡ ಸತ್ಯವೇದವು J.V. (BSI)

17 ಆಗ ಯೆಶಾಯನೆಂಬ ಪ್ರವಾದಿಯ ಗ್ರಂಥದ ಸುರಳಿಯನ್ನು ಆತನ ಕೈಗೆ ಕೊಡಲಾಗಿ ಆತನು ಆ ಸುರಳಿಯನ್ನು ಬಿಚ್ಚಿ ಮುಂದೆ ಹೇಳುವ ಮಾತು ಬರೆದಿರುವ ಸ್ಥಳವನ್ನು ಕಂಡು ಓದಿದನು; ಆ ಮಾತೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಗ ಯೆಶಾಯನೆಂಬ ಪ್ರವಾದಿಯು ಬರೆದ ಗ್ರಂಥದ ಸುರುಳಿಯನ್ನು ಆತನ ಕೈಗೆ ಕೊಡಲಾಗಿ ಆತನು ಆ ಸುರುಳಿಯನ್ನು ಬಿಚ್ಚಿದಾಗ ಬರೆದಿರುವ ಈ ಭಾಗವನ್ನು ಕಂಡು ಓದಿದನು; ಅಲ್ಲಿ ಹೀಗೆ ಬರೆದಿತ್ತು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಪ್ರವಾದಿ ಯೆಶಾಯನ ಗ್ರಂಥದ ಸುರುಳಿಯನ್ನು ಅವರ ಕೈಗೆ ಕೊಟ್ಟರು. ಅದನ್ನು ಬಿಚ್ಚಿದಾಗ ಈ ಕೆಳಗಿನ ವಚನಗಳು ಯೇಸುವಿನ ಕಣ್ಣಿಗೆ ಬಿದ್ದವು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಪ್ರವಾದಿಯಾದ ಯೆಶಾಯನ ಗ್ರಂಥವನ್ನು ಆತನಿಗೆ ಓದಲು ಕೊಡಲಾಗಿತ್ತು. ಯೇಸು ಆ ಪುಸ್ತಕವನ್ನು ತೆರೆದು ಈ ಭಾಗವನ್ನು ಓದಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೇಸುವಿನ ಕೈಗೆ ಪ್ರವಾದಿ ಯೆಶಾಯನ ಗ್ರಂಥದ ಸುರುಳಿಯನ್ನು ಕೊಟ್ಟರು. ಯೇಸು ಅದನ್ನು ಬಿಚ್ಚಿ, ಅದರಲ್ಲಿ ಬರೆದಿರುವ ಈ ವಾಕ್ಯಗಳನ್ನು ಕಂಡು ಓದಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಇಸಾಯಿಯಾ ಪ್ರವಾದ್ಯಾಚೆ ಪುಸ್ತಕ್ ತೆಕಾ ದಿಲ್ಯಾನಿ, ತೆನಿ ತೆ ಉಗಡ್ಲ್ಯಾನ್, ತನ್ನಾ ತೆಕಾ ಅಶೆ ಮನುನ್ ಲಿವಲ್ಲೆ ವಾಚುಕ್ ಗಾವ್ಲೆ, ತೆ ಕಾಯ್ ಮಟ್ಲ್ಯಾರ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 4:17
9 ತಿಳಿವುಗಳ ಹೋಲಿಕೆ  

ಧರ್ಮಶಾಸ್ತ್ರವು ಪ್ರವಾದಿಗಳ ಗ್ರಂಥವು ಇವುಗಳ ಪಾರಾಯಣವಾದ ಮೇಲೆ ಸಭಾಮಂದಿರದ ಯಜಮಾನರು - ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿ ಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು.


ಆದರೆ ದೇವರು ಅವರಿಗೆ ವಿಮುಖನಾಗಿ ಆಕಾಶದ ನಕ್ಷತ್ರ ಗಣವನ್ನು ಪೂಜಿಸುವದಕ್ಕೆ ಅವರನ್ನು ಒಪ್ಪಿಸಿಬಿಟ್ಟನು. ಪ್ರವಾದಿಗಳ ಗ್ರಂಥದಲ್ಲಿ ಬರೆದಿರುವದೇನಂದರೆ - ಇಸ್ರಾಯೇಲ್ ವಂಶದವರೇ, ನೀವು ಅರಣ್ಯದಲ್ಲಿದ್ದ ನಾಲ್ವತ್ತು ವರುಷ ನನಗೆ ಯಜ್ಞಗಳನ್ನೂ ಬಲಿಗಳನ್ನೂ ಅರ್ಪಿಸುತ್ತಿದ್ದಿರೋ? ಇಲ್ಲವಲ್ಲಾ;


ಯೆರೂಸಲೇವಿುನಲ್ಲಿ ವಾಸವಾಗಿರುವವರೂ ಅವರ ಅಧಿಕಾರಿಗಳೂ ಆತನನ್ನಾಗಲಿ ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ವಾಕ್ಯಗಳನ್ನಾಗಲಿ ಗ್ರಹಿಸದೆ ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ವಾಕ್ಯಗಳನ್ನೇ ನೆರವೇರಿಸಿದರು.


ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳಿಗೆ ಪೀಠವಾಗ ಮಾಡುವ ತನಕ ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು ಎಂಬದಾಗಿ ಕೀರ್ತನಗ್ರಂಥದಲ್ಲಿ ದಾವೀದನೇ ಹೇಳುತ್ತಾನಷ್ಟೆ.


ಹೀಗಿರಲಾಗಿ ಆತನು ತಾನು ಬೆಳೆದ ನಜರೇತಿಗೆ ಬಂದು ತನ್ನ ವಾಡಿಕೆಯ ಪ್ರಕಾರ ಸಬ್ಬತ್‍ದಿನದಲ್ಲಿ ಸಭಾಮಂದಿರಕ್ಕೆ ಹೋಗಿ ಓದುವದಕ್ಕಾಗಿ ಎದ್ದು ನಿಂತನು.


ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವದಕ್ಕೆ ಅಭಿಷೇಕಿಸಿದನು, ಸೆರೆಯವರಿಗೆ ಬಿಡುಗಡೆಯಾಗುವದನ್ನು ಮತ್ತು ಕುರುಡರಿಗೆ ಕಣ್ಣು ಬರುವದನ್ನು ಪ್ರಸಿದ್ಧಿಪಡಿಸುವದಕ್ಕೂ ಮನಮುರಿದವರನ್ನು ಬಿಡಿಸಿ ಕಳುಹಿಸುವದಕ್ಕೂ


ಓದಿದ ಮೇಲೆ ಆತನು ಆ ಸುರಳಿಯನ್ನು ಸುತ್ತಿ ಸಭಾಮಂದಿರದ ಆಳಿನ ಕೈಗೆ ಕೊಟ್ಟು ಕೂತುಕೊಂಡನು. ಅಲ್ಲಿದ್ದವರೆಲ್ಲರ ಕಣ್ಣುಗಳು ಆತನ ಮೇಲೆಯೇ ಬಿದ್ದಿರಲಾಗಿ


ಆದರೆ ಅಬ್ರಹಾಮನು - ಮೋಶೆಯ ಧರ್ಮಶಾಸ್ತ್ರವೂ ಪ್ರವಾದಿಗಳ ಗ್ರಂಥಗಳೂ ಅವರಲ್ಲಿ ಅವೆ; ಅವುಗಳನ್ನು ಕೇಳಲಿ ಅನ್ನಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು