Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 5:1 - ಕನ್ನಡ ಸತ್ಯವೇದವು J.V. (BSI)

1 ಒಂದಾನೊಂದು ದಿವಸ ಜನರು ಒತ್ತಾಗಿ ಬಂದು ಆತನ ಮೇಲೆ ಬಿದ್ದುಕೊಂಡು ದೇವರ ವಾಕ್ಯವನ್ನು ಕೇಳುತ್ತಿರಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಒಮ್ಮೆ ಯೇಸು ಗೆನೆಜರೇತ್ ಸರೋವರದ ದಡದಲ್ಲಿ ನಿಂತಿದ್ದಾಗ ಜನರು ಗುಂಪಾಗಿ ಬಂದು ದೇವರ ವಾಕ್ಯವನ್ನು ಕೇಳುವುದಕ್ಕಾಗಿ ಆತನನ್ನು ಸುತ್ತುವರೆದು ನೂಕಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಒಮ್ಮೆ ಯೇಸುಸ್ವಾಮಿ ಗೆನೆಸರೇತ್ ಎಂಬ ಸರೋವರದ ತೀರದಲ್ಲಿ ನಿಂತಿದ್ದಾಗ, ಜನಸಮೂಹವು ದೇವರ ವಾಕ್ಯವನ್ನು ಕೇಳಲು ನೂಕುನುಗ್ಗಲಾಗಿ ಬಂದು ಅವರನ್ನು ಒತ್ತರಿಸುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೇಸು ಗೆನೆಸರೇತ್ (ಗಲಿಲಾಯ) ಸರೋವರದ ಬಳಿ ನಿಂತುಕೊಂಡಿದ್ದಾಗ, ದೇವರ ವಾಕ್ಯವನ್ನು ಕೇಳಲು ಅನೇಕ ಜನರು ನೂಕಾಡುತ್ತಾ ಆತನ ಸುತ್ತಲೂ ಸೇರಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಒಂದು ದಿನ ಯೇಸು ಗೆನೆಜರೇತ್ ಕೆರೆಯ ಬಳಿಯಲ್ಲಿ ನಿಂತುಕೊಂಡಿದ್ದಾಗ, ಜನರು ದೇವರ ವಾಕ್ಯವನ್ನು ಕೇಳುವುದಕ್ಕಾಗಿ ಅವರ ಸುತ್ತಲೂ ಗುಂಪಾಗಿ ಕೂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಎಕ್ ದಿಸ್ ಜೆಜು ಗೆನಜರೆತ್ ಮನ್ತಲ್ಯಾ ಸಮುಂದರಾಚ್ಯಾ ದಂಡೆಕ್ ಇಬೆ ಹೊತ್ತೊ. ದೆವಾಚಿ ಗೊಸ್ಟಿಯಾ ಆಯ್ಕುಕ್ ಲೊಕಾ ಢಕ್ಲಾ-ಢಕ್ಲಿ ಕರುನ್ ಘೆಯ್ತ್ ಗೊಳಾ ಹೊಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 5:1
21 ತಿಳಿವುಗಳ ಹೋಲಿಕೆ  

ಜನರು ಗುಂಪಾಗಿದ್ದದರಿಂದ ಮೈಮೇಲೆ ಬಿದ್ದು ನೂಕಾರೆಂದು ಆತನು ತನಗೆ ಒಂದು ದೋಣಿಯು ಸಿದ್ಧವಾಗಿರಲಿ ಎಂಬದಾಗಿ ಶಿಷ್ಯರಿಗೆ ಹೇಳಿದನು.


ಅವರು ಸಮುದ್ರವನ್ನು ದಾಟಿ ಗೆನೆಜರೇತ್ ದೇಶದ ದಡಕ್ಕೆ ಮುಟ್ಟಿದರು.


ಅವರು ಸಮುದ್ರವನ್ನು ದಾಟಿ ಗೆನೆಜರೇತ್ ದೇಶದ ದಡಕ್ಕೆ ಮುಟ್ಟಿ ದೋಣಿಯನ್ನು ಕಟ್ಟಿದರು.


ಇದಲ್ಲದೆ ಸ್ನಾನಿಕನಾದ ಯೋಹಾನನ ಕಾಲದಿಂದ ಈವರೆಗೂ ಪರಲೋಕರಾಜ್ಯವು ಬಲಾತ್ಕಾರಕ್ಕೆ ಗುರಿಯಾಗಿರುತ್ತದೆ; ಬಲಾತ್ಕಾರಿಗಳು ನುಗ್ಗಿ ಅದನ್ನು ಸ್ವಾಧೀನ ಮಾಡಿಕೊಳ್ಳುತ್ತಾರೆ.


ಯೊರ್ದನ್ ಹೊಳೆಯ ಪೂರ್ವದಲ್ಲಿ ಕಿನ್ನೆರೋತ್ ಸಮುದ್ರದಿಂದ ಲವಣ ಸಮುದ್ರವೆನಿಸಿಕೊಳ್ಳುವ ಅರಾಬಾ ಸಮುದ್ರದ ಹತ್ತಿರವಿರುವ ಬೇತ್‍ಯೆಷಿಮೋತಿನವರೆಗೂ ದಕ್ಷಿಣದಲ್ಲಿರುವ ಪಿಸ್ಗಾ ಬೆಟ್ಟದ ಬುಡದವರೆಗೂ ಇರುವ ತಗ್ಗಾದ ಪ್ರದೇಶವು ಇವೇ ಅವನ ರಾಜ್ಯ.


ಅದಲ್ಲದೆ ಅರಾಬಾ ಎಂಬ ತಗ್ಗನ್ನೂ ಅವರಿಗೆ ಕೊಟ್ಟೆನು; ಅದರಲ್ಲಿ ಕಿನ್ನೆರೆತ್ ಸಮುದ್ರ ಮೊದಲುಗೊಂಡು ಪಿಸ್ಗಾ ಬೆಟ್ಟದ ಪಶ್ಚಿಮದಲ್ಲಿರುವ ಅರಾಬದ ಸಮುದ್ರವೆನಿಸಿಕೊಳ್ಳುವ ಲವಣ ಸಮುದ್ರದವರೆಗೆ ಯೊರ್ದನ್ ಹೊಳೆಯು ಅವರ [ಪಶ್ಚಿಮ] ಮೇರೆ.


ಅಲ್ಲಿಂದ ಅದು ಅಯಿನಿನ ಮೂಡಲಲ್ಲಿರುವ ರಿಬ್ಲಕ್ಕೆ ಬರಬೇಕು. ತರುವಾಯ ಅದು ಗಟ್ಟಾ ಇಳಿದು ಕಿನ್ನೆರೆತ್ ಸಮುದ್ರದ ಮೂಡಲಲ್ಲಿರುವ ಬೆಟ್ಟಗಳಿಗೆ ಹೋಗಬೇಕು.


ಇಷ್ಟರಲ್ಲಿ ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿಯುವಷ್ಟು ಕೂಡಿಬಂದಿರಲಾಗಿ ಆತನು ಮೊದಲು ತನ್ನ ಶಿಷ್ಯರಿಗೆ ಹೇಳುವದಕ್ಕೆ ತೊಡಗಿದ್ದೇನಂದರೆ - ಫರಿಸಾಯರ ಕಪಟವೆಂಬ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರ್ರಿ.


ಆತನು ಅವನ ಸಂಗಡ ಹೋದನು; ಮತ್ತು ಬಹು ಜನರು ಆತನನ್ನು ನೂಕಿಕೊಂಡು ಹಿಂದೆ ಹೋದರು.


ಆಗ ಯೇಸು - ನನ್ನನ್ನು ಮುಟ್ಟಿದವರಾರು ಎಂದು ಕೇಳಿದನು. ಎಲ್ಲರು - ನಾನಲ್ಲ ನಾನಲ್ಲ ಅನ್ನಲು ಪೇತ್ರನು - ಗುರುವೇ ಎಷ್ಟೋ ಜನರು ನಿನ್ನನ್ನು ಒತ್ತೊತ್ತಿ ಮೈ ಮೇಲೆ ಬೀಳುತ್ತಿದ್ದಾರಲ್ಲಾ ಅಂದನು.


ಯೊರ್ದನ್ ತಗ್ಗಿನಲ್ಲಿರುವ ಬೇತ್‍ಹಾರಾಮ್, ಬೇತ್‍ನಿಮ್ರಾ, ಸುಕ್ಕೋತ್, ಚಾಫೋನ್ ಎಂಬ ಪಟ್ಟಣಗಳು, ಕಿನ್ನೆರೆತ್ ಸಮುದ್ರದ [ದಕ್ಷಿಣದಿಕ್ಕಿನ] ಮೂಲೆಯವರೆಗೆ ವಿಸ್ತರಿಸಿಕೊಂಡಿರುವ ಯೊರ್ದನ್ ಪೂರ್ವಪ್ರದೇಶ ಇವುಗಳೇ.


ಆತನು ತಿರಿಗಿ ಸಮುದ್ರದ ದಡದಲ್ಲಿ ಉಪದೇಶ ಮಾಡುತ್ತಿದ್ದನು. ಬಹುಜನರು ಆತನ ಬಳಿಗೆ ಕೂಡಿ ಬಂದದ್ದರಿಂದ ಆತನು ಸಮುದ್ರದಲ್ಲಿದ್ದ ದೋಣಿಹತ್ತಿ ಕೂತುಕೊಂಡನು;


ಗೆನೇಜರೆತ್ ಕೆರೆಯ ಅಂಚಿನಲ್ಲಿ ನಿಂತಿದ್ದ ಆತನು ಆ ಕೆರೆಯ ದಡದಲ್ಲಿ ಎರಡು ದೋಣಿಗಳನ್ನು ಕಂಡನು. ಬೆಸ್ತರು ಅವುಗಳೊಳಗಿಂದ ಹೊರಗೆ ಬಂದು ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು.


ಒಂದಾನೊಂದು ದಿನದಲ್ಲಿ ಆತನು ತನ್ನ ಶಿಷ್ಯರ ಸಂಗಡ ಒಂದು ದೋಣಿಯನ್ನು ಹತ್ತಿ ಕೆರೆಯ ಆಚೇದಡಕ್ಕೆ ಹೋಗೋಣ ಎಂದು ಅವರಿಗೆ ಹೇಳಲು ಅವರು ದೋಣಿಯನ್ನು ನೀರಿನೊಳಗೆ ನೂಕಿ ಹೊರಟರು.


ಅವರು ಹೋಗುತ್ತಿರುವಾಗ ಆತನಿಗೆ ನಿದ್ರೆ ಹತ್ತಿತು; ಅಷ್ಟರಲ್ಲಿ ಬಿರುಗಾಳಿ ಕೆರೆಯ ಮೇಲೆ ಬರಲು ದೋಣಿಯೊಳಗೆ ನೀರು ತುಂಬಿಕೊಂಡದರಿಂದ ಅವರು ಅಪಾಯಕ್ಕೆ ಗುರಿಯಾದರು.


ಆತನು ಆಗಲಿ ಎಂದು ಅವುಗಳಿಗೆ ಅಪ್ಪಣೆ ಕೊಡಲು ದೆವ್ವಗಳು ಆ ಮನುಷ್ಯನೊಳಗಿಂದ ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು; ಆ ಗುಂಪು ಓಡಿ ಕಡಿದಾದ ಸ್ಥಳದಿಂದ ಕೆರೆಯೊಳಗೆ ಬಿದ್ದು ಉಸುರುಕಟ್ಟಿ ಸತ್ತಿತು.


ಯೋಹಾನನ ಮಾತನ್ನು ಕೇಳಿ ಯೇಸುವನ್ನು ಹಿಂಬಾಲಿಸಿದ ಆ ಇಬ್ಬರಲ್ಲಿ ಸೀಮೋನ್ ಪೇತ್ರನ ತಮ್ಮನಾದ ಅಂದ್ರೆಯನು ಒಬ್ಬನು.


ತರುವಾಯ ಯೇಸು ಗಲಿಲಾಯದ ಸಮುದ್ರದ ಆಚೆಗೆ ಹೋದನು; ಅದಕ್ಕೆ ತಿಬೇರಿಯದ ಸಮುದ್ರವೆಂತಲೂ ಹೇಳುತ್ತಾರೆ.


ಅವರು ಯಾವ ರೀತಿಯಿಂದ ನಡೆದುಕೊಂಡು ಪ್ರಾಣಬಿಟ್ಟರೆಂಬದನ್ನು ಆಲೋಚಿಸಿರಿ; ಅವರ ನಂಬಿಕೆಯನ್ನು ಅನುಸರಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು