Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 6:6 - ಕನ್ನಡ ಸತ್ಯವೇದವು J.V. (BSI)

6 ಮತ್ತೊಂದು ಸಬ್ಬತ್‍ದಿನದಲ್ಲಿ ಆತನು ಸಭಾಮಂದಿರಕ್ಕೆ ಹೋಗಿ ಉಪದೇಶಮಾಡುತ್ತಿದ್ದಾಗ ಅಲ್ಲಿ ಬಲಗೈ ಬತ್ತಿದವನೊಬ್ಬನು ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮತ್ತೊಂದು ಸಬ್ಬತ್ ದಿನದಲ್ಲಿ ಆತನು ಸಭಾಮಂದಿರಕ್ಕೆ ಹೋಗಿ ಉಪದೇಶಮಾಡುತ್ತಿರುವಾಗ, ಅಲ್ಲಿ ಬಲಗೈ ಬತ್ತಿದವನೊಬ್ಬನು ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಮತ್ತೊಂದು ಸಬ್ಬತ್‍ದಿನ ಯೇಸುಸ್ವಾಮಿ ಪ್ರಾರ್ಥನಾಮಂದಿರಕ್ಕೆ ಹೋಗಿ ಉಪದೇಶಮಾಡುತ್ತಿದ್ದರು. ಅಲ್ಲಿ ಬಲಗೈ ಬತ್ತಿಹೋಗಿದ್ದ ಒಬ್ಬಾತ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಮತ್ತೊಂದು ಸಬ್ಬತ್‌ದಿನದಲ್ಲಿ ಯೇಸು ಸಭಾಮಂದಿರಕ್ಕೆ ಹೋಗಿ ಜನರಿಗೆ ಉಪದೇಶಿಸಿದನು. ಬಲಗೈ ಬತ್ತಿಹೋಗಿದ್ದ ಒಬ್ಬ ಮನುಷ್ಯನು ಅಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇನ್ನೊಂದು ಸಬ್ಬತ್ ದಿನದಲ್ಲಿ ಯೇಸು ಸಭಾಮಂದಿರದೊಳಕ್ಕೆ ಪ್ರವೇಶಿಸಿ ಬೋಧಿಸಿದರು, ಅಲ್ಲಿ ಬಲಗೈ ಬತ್ತಿದ ಒಬ್ಬ ಮನುಷ್ಯನಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಅನಿ ಎಕ್ ಸಬ್ಬತಾಚ್ಯಾ ದಿಸಿ ಜೆಜು ಎಕ್ ಸಿನಾಗೊಗಾತ್ ಗೆಲೊ, ಅನಿ ಲೊಕಾಕ್ನಿ ಶಿಕ್ವುಲ್ಯಾನ್. ಥೈ ಉಜ್ವ್ಯಾ ಹಾತಿಕ್ ವಾರೆಮಾರಲ್ಲೊ ಎಕ್ ಮಾನುಸ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 6:6
14 ತಿಳಿವುಗಳ ಹೋಲಿಕೆ  

ಅಲ್ಲಿ ಐದು ಮಂಟಪಗಳಿವೆ; ಇವುಗಳಲ್ಲಿ ಬಹುಮಂದಿ ರೋಗಿಗಳೂ ಕುರುಡರೂ ಕುಂಟರೂ ಮೈಒಣಗಿದವರೂ ಬಿದ್ದುಕೊಂಡಿರುವರು.


ಬಳಿಕ ಆತನು ಗಟ್ಟಾ ಇಳಿದು ಗಲಿಲಾಯಕ್ಕೆ ಸೇರಿದ ಕಪೆರ್ನೌಮೆಂಬ ಊರಿಗೆ ಬಂದನು.


ಹೀಗಿರಲಾಗಿ ಆತನು ತಾನು ಬೆಳೆದ ನಜರೇತಿಗೆ ಬಂದು ತನ್ನ ವಾಡಿಕೆಯ ಪ್ರಕಾರ ಸಬ್ಬತ್‍ದಿನದಲ್ಲಿ ಸಭಾಮಂದಿರಕ್ಕೆ ಹೋಗಿ ಓದುವದಕ್ಕಾಗಿ ಎದ್ದು ನಿಂತನು.


ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ತಿರುಗಾಡಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ, ಪರಲೋಕರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.


ಆ ಫರಿಸಾಯರಲ್ಲಿ ಕೆಲವರು - ಈ ಮನುಷ್ಯನು ದೇವರಿಂದ ಬಂದವನಲ್ಲ; ಅವನು ಸಬ್ಬತ್‍ದಿವಸವನ್ನು ಲಕ್ಷ್ಯಮಾಡುವದಿಲ್ಲವಲ್ಲಾ ಅಂದರು. ಇನ್ನು ಕೆಲವರು - ಇಂಥ ಮಹತ್ತುಗಳನ್ನು ಮಾಡುವದು ಭಕ್ತಿಹೀನನ ಕೈಯಿಂದ ಹೇಗಾದೀತು? ಅಂದರು. ಹೀಗೆ ಅವರಲ್ಲಿ ಭೇದವಾಯಿತು.


ಸಬ್ಬತ್‍ದಿನದಲ್ಲಿ ಸ್ವಸ್ಥಮಾಡುವದು ಸರಿಯೋ? ಸರಿಯಲ್ಲವೋ ಎಂದು ಧರ್ಮೋಪದೇಶಕರನ್ನೂ ಫರಿಸಾಯರನ್ನೂ ಕೇಳಿದನು.


ಒಂದಾನೊಂದು ಸಬ್ಬತ್‍ದಿನದಲ್ಲಿ ಆತನು ಒಂದು ಸಭಾಮಂದಿರದೊಳಗೆ ಉಪದೇಶಮಾಡುತ್ತಾ ಇದ್ದನು.


ಒಂದಾನೊಂದು ಸಬ್ಬತ್‍ದಿನದಲ್ಲಿ ಯೇಸು ಪೈರಿನ ಹೊಲಗಳನ್ನು ಹಾದು ಹೋಗುತ್ತಿರುವಾಗ ಆತನ ಶಿಷ್ಯರು ತೆನೆಗಳನ್ನು ಮುರಿದು ಕೈಗಳಲ್ಲಿ ಹೊಸಗಿಕೊಂಡು ತಿನ್ನುತ್ತಿದ್ದರು.


ಬೇತೇಲಿನ ವೇದಿಯ ಬಳಿಯಲ್ಲಿ ನಿಂತಿದ್ದ ಅರಸನು ಆ ದೇವರ ಮನುಷ್ಯನು ವೇದಿಗೆ ವಿರೋಧವಾಗಿ ನುಡಿದದ್ದನ್ನು ಕೇಳಿ ಕೈಚಾಚಿ - ಅವನನ್ನು ಹಿಡಿಯಿರಿ ಎಂದು ಆಜ್ಞಾಪಿಸಿದನು. ಕೂಡಲೆ ಅವನ ಕೈ ಒಣಗಿಹೋಯಿತು.


ಮಂದೆಯನ್ನು ಕಾಯದೆ ಬಿಟ್ಟುಬಿಟ್ಟ ತರವಲ್ಲದ ಕುರುಬನ ಗತಿಯನ್ನು ಏನುಹೇಳಲಿ! ಖಡ್ಗವು ಅವನ ತೋಳಿಗೂ ಬಲಗಣ್ಣಿಗೂ ತಾಕುವದು; ಅವನ ತೋಳು ತೀರಾ ಒಣಗಿಹೋಗುವದು, ಅವನ ಬಲಗಣ್ಣು ಪೂರಾ ಮೊಬ್ಬಾಗುವದು.


ಮನುಷ್ಯಕುಮಾರನು ಸಬ್ಬತ್‍ದಿನಕ್ಕೆ ಒಡೆಯನಾಗಿದ್ದಾನೆ ಎಂದು ಅವರಿಗೆ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು