Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:12 - ಕನ್ನಡ ಸತ್ಯವೇದವು J.V. (BSI)

12 ಆತನು ಊರಬಾಗಿಲಿನ ಹತ್ತಿರಕ್ಕೆ ಬಂದಾಗ ಸತ್ತುಹೋಗಿದ್ದ ಒಬ್ಬನನ್ನು ಹೊರಗೆ ತರುತ್ತಿದ್ದರು. ಇವನು ತನ್ನ ತಾಯಿಗೆ ಒಬ್ಬನೇ ಮಗನು; ಆಕೆಯು ಗಂಡಸತ್ತವಳಾಗಿದ್ದಳು. ಆಕೆಯ ಸಂಗಡ ಗ್ರಾಮಸ್ಥರು ಅನೇಕರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆತನು ಊರು ಬಾಗಿಲಿನ ಹತ್ತಿರಕ್ಕೆ ಬಂದಾಗ ಸತ್ತುಹೋಗಿದ್ದ ಒಬ್ಬನನ್ನು ಹೊತ್ತುಕೊಂಡು ಹೊರಗೆ ತರುತ್ತಿದ್ದರು. ಅವನು ತನ್ನ ತಾಯಿಗೆ ಒಬ್ಬನೇ ಮಗನಾಗಿದ್ದನು; ಆಕೆಯು ವಿಧವೆಯಾಗಿದ್ದಳು. ಆಕೆಯ ಸಂಗಡ ಊರಿನವರು ಅನೇಕರಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಊರ ಬಾಗಿಲನ್ನು ಸಮೀಪಿಸಿದಾಗ, ಒಂದು ಶವಯಾತ್ರೆಯನ್ನು ಅವರು ಎದುರುಗೊಂಡರು. ಆ ಸತ್ತವನು ತನ್ನ ತಾಯಿಗೆ ಒಬ್ಬನೇ ಮಗ. ಆಕೆಯೋ ವಿಧವೆ. ಜನರ ದೊಡ್ಡ ಗುಂಪೊಂದು ಆಕೆಯೊಡನೆ ಬರುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೇಸು ಊರಬಾಗಿಲಿನ ಬಳಿಗೆ ಬಂದಾಗ, ಸತ್ತುಹೋಗಿದ್ದ ಒಬ್ಬನನ್ನು ಸಮಾಧಿ ಮಾಡುವುದಕ್ಕಾಗಿ ಹೊತ್ತುಕೊಂಡು ಹೋಗುತ್ತಿದ್ದ ಜನರ ಗುಂಪನ್ನು ಕಂಡನು. ವಿಧವೆಯೊಬ್ಬಳ ಒಬ್ಬನೇ ಮಗನು ಸತ್ತುಹೋಗಿದ್ದನು. ಅವನ ಶವವನ್ನು ಹೊತ್ತುಕೊಂಡು ಹೋಗುತ್ತಿದ್ದಾಗ ಊರಿನ ಅನೇಕ ಜನರು ಆಕೆಯೊಡನೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯೇಸು ಪಟ್ಟಣ ದ್ವಾರದ ಸಮೀಪಕ್ಕೆ ಬಂದಾಗ, ಸತ್ತು ಹೋಗಿದ್ದ ಒಬ್ಬನನ್ನು ಹೊತ್ತುಕೊಂಡು ಹೋಗುತ್ತಿದ್ದರು, ಅವನು ತನ್ನ ತಾಯಿಗೆ ಒಬ್ಬನೇ ಮಗನು, ಆಕೆಯು ವಿಧವೆಯಾಗಿದ್ದಳು. ಪಟ್ಟಣದ ಬಹಳ ಜನರು ಆಕೆಯೊಂದಿಗೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಜೆಜು ತ್ಯಾ ಗಾಂವಾಂಚ್ಯಾ ಯೆಶಿತ್ ಪಾವಲ್ಲ್ಯಾ ತನ್ನಾ, ಲೊಕಾ ಎಕಾ ಮಾನ್ಸಾಕ್ ಮಾಟಿ ದಿವ್ಕ್ ಮನುನ್ ಗಾವಾತ್ನಾ ಭಾಯ್ರ್ ಯೆವ್‍ಲಾಗಲ್ಲಿ. ಮರಲ್ಲೊ ಮಾನುಸ್ ಎಕ್ ಘೊಮರಲ್ಲ್ಯಾ ಬಾಯ್ಕೊಮನ್ಸಿಚೊ ಎಕ್ಲೊಚ್ ಲೆಕ್, ಗಾವಾತ್ಲ್ಯಾ ಲೊಕಾಂಚೊ ಮೊಟೊ ತಾಂಡೊ ತಿಚ್ಯಾ ವಾಂಗ್ಡಾ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:12
20 ತಿಳಿವುಗಳ ಹೋಲಿಕೆ  

ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.


ಅವನು ಆಕೆಯನ್ನು ಕೈಕೊಟ್ಟು ಎಬ್ಬಿಸಿ ದೇವಜನರನ್ನೂ ವಿಧವೆಯರನ್ನೂ ಕರೆದು ಜೀವಿತಳಾದ ಆಕೆಯನ್ನು ಅವರೆದುರಿಗೆ ನಿಲ್ಲಿಸಿದನು.


ಪೇತ್ರನು ಎದ್ದು ಅವರ ಜೊತೆಯಲ್ಲಿ ಹೋದನು. ಅವನು ಬಂದ ಕೂಡಲೆ ಅವರು ಅವನನ್ನು ಮೇಲಂತಸ್ತಿಗೆ ಕರೆದುಕೊಂಡು ಹೋದರು. ಅಲ್ಲಿ ವಿಧವೆಯರೆಲ್ಲರು ಅಳುತ್ತಾ ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಒಳಂಗಿಗಳನ್ನೂ ಮೇಲಂಗಿಗಳನ್ನೂ ತೋರಿಸಿದರು.


ಆದದರಿಂದ ಯೆಹೂದ್ಯರಲ್ಲಿ ಅನೇಕರು ಮಾರ್ಥಳ ಮತ್ತು ಮರಿಯಳ ಬಳಿಗೆ ಅವರನ್ನು ತಮ್ಮನ ವಿಷಯದಲ್ಲಿ ಸಂತೈಸಬೇಕೆಂದು ಬಂದಿದ್ದರು.


ಎಲ್ಲರು ಅಳುತ್ತಾ ಆಕೆಗೋಸ್ಕರ ಎದೆಬಡುಕೊಳ್ಳುತ್ತಾ ಇದ್ದರು. ಯೇಸು - ಅಳಬೇಡಿರಿ, ಆಕೆ ಸತ್ತಿಲ್ಲ, ನಿದ್ದೆಮಾಡುತ್ತಾಳೆ ಅನ್ನಲಾಗಿ


ದಾವೀದ ವಂಶದವರಲ್ಲಿಯೂ ಯೆರೂಸಲೇವಿುನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.


ಗತಿಯಿಲ್ಲದವನು ನನ್ನನ್ನು ಹರಸುತ್ತಿದ್ದನು, ವಿಧವೆಯ ಹೃದಯವನ್ನು ಉತ್ಸಾಹಗೊಳಿಸುತ್ತಿದ್ದೆನು.


ಸೇವಕನು ಹುಡುಗನನ್ನು ಅವನ ತಾಯಿಗೆ ತಂದೊಪ್ಪಿಸಿದನು. ಹುಡುಗನು ಮಧ್ಯಾಹ್ನದವರೆಗೂ ತಾಯಿಯ ತೊಡೆಯ ಮೇಲೆಯೇ ಇದ್ದುಕೊಂಡು ಅನಂತರ ಸತ್ತನು.


ಎಲೀಷನು ಆಕೆಗೆ - ನೀನು ಬರುವ ವರುಷ ಇದೇ ಕಾಲದಲ್ಲಿ ಒಬ್ಬ ಮಗನನ್ನು ಅಪ್ಪಿಕೊಂಡಿರುವಿ ಅಂದನು. ಅದಕ್ಕೆ ಆಕೆಯು - ದೇವರ ಮನುಷ್ಯನೇ, ಒಡೆಯನೇ, ಹೀಗೆ ಹೇಳಿ ನಿನ್ನ ದಾಸಿಯನ್ನು ವಂಚಿಸಬೇಡ ಎಂದು ನುಡಿದಳು.


ಅವನ ತಾಯಿಗೆ ಒಪ್ಪಿಸಿ - ಇಗೋ, ನೋಡು; ನಿನ್ನ ಮಗನು ಜೀವಿಸುತ್ತಾನೆ ಅಂದನು.


ಆಗ ಆ ಸ್ತ್ರೀಯು ಎಲೀಯನಿಗೆ - ದೇವರ ಮನುಷ್ಯನೇ, ನನ್ನ ಗೊಡವೆ ನಿನಗೇಕೆ? ನೀನು ನನ್ನ ಪಾಪವನ್ನು [ದೇವರ] ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವದಕ್ಕೆ ಬಂದಿಯೋ ಎನ್ನಲು ಅವನು ಆಕೆಗೆ -


ಆಕೆಯು ಅವನಿಗೆ - ನಿನ್ನ ದೇವರಾದ ಯೆಹೋವನಾಣೆ, ನನ್ನ ಹತ್ತಿರ ರೊಟ್ಟಿಯಿರುವದಿಲ್ಲ. ಮಡಕೆಯಲ್ಲಿ ಒಂದು ಹಿಡಿ ಹಿಟ್ಟು, ಮೊಗೆಯಲ್ಲಿ ಸ್ವಲ್ಪ ಎಣ್ಣೆ ಇವುಗಳ ಹೊರತಾಗಿ ಬೇರೇನೂ ಇರುವದಿಲ್ಲ. ಈಗ ಎರಡು ಕಟ್ಟಿಗೆಗಳನ್ನು ಹೆಕ್ಕಿ ನನಗೋಸ್ಕರವೂ ನನ್ನ ಮಗನಿಗೋಸ್ಕರವೂ ರೊಟ್ಟಿ ಮಾಡುತ್ತೇನೆ. ಅದನ್ನು ತಿಂದ ಮೇಲೆ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ ಎಂದು ಉತ್ತರಕೊಟ್ಟಳು.


ಈಗ ನೋಡು, ಸಂಬಂಧಿಕರೆಲ್ಲಾ ನಿನ್ನ ದಾಸಿಯಾದ ನನಗೆ ವಿರೋಧವಾಗಿ ಎದ್ದು - ತಮ್ಮನನ್ನು ಕೊಂದವನೆಲ್ಲಿ? ಅವನನ್ನು ನಮಗೆ ಒಪ್ಪಿಸು; ತಮ್ಮನ ಪ್ರಾಣಕ್ಕಾಗಿ ಅವನ ಪ್ರಾಣವನ್ನೂ ತೆಗೆದುಬಿಟ್ಟು ನಿನ್ನನ್ನು ಬಾಧ್ಯಸ್ಥನಿಲ್ಲದ ಹಾಗೆ ಮಾಡಿಬಿಡುತ್ತೇವೆ ಅನ್ನುತ್ತಾರೆ. ಹೀಗೆ ಅವರು ನನಗುಳಿದಿರುವ ಒಂದು ಕೆಂಡವನ್ನೂ ಆರಿಸಿಬಿಟ್ಟು ನನ್ನ ಗಂಡನ ಹೆಸರನ್ನೂ ಸಂತಾನವನ್ನೂ ಭೂಲೋಕದ ಮೇಲಣಿಂದ ಅಳಿಸಬೇಕೆಂದಿದ್ದಾರೆ ಎಂದು ಉತ್ತರಕೊಟ್ಟಳು.


ಆ ದೂತನು ಅವನಿಗೆ - ನಿನ್ನ ಹುಡುಗನ ಮೇಲೆ ಕೈಹಾಕಬೇಡ, ಅವನಿಗೆ ಏನೂ ಮಾಡಬೇಡ. ನೀನು ನಿನ್ನ ಒಬ್ಬನೇ ಮಗನನ್ನಾದರೂ ನನಗೆ ಸಮರ್ಪಿಸುವದಕ್ಕೆ ಹಿಂದೆಗೆಯಲಿಲ್ಲವಾದ್ದರಿಂದ ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂಬದು ಈಗ ತೋರಬಂತು ಎಂದು ಹೇಳಿದನು.


ಆಗಲಾತನು - ನಿನಗೆ ಪ್ರಿಯನಾಗಿರುವ ಒಬ್ಬನೇ ಮಗನಾದ ಇಸಾಕನನ್ನು ತೆಗೆದುಕೊಂಡು ಮೊರೀಯ ದೇಶಕ್ಕೆ ಹೋಗಿ ಅಲ್ಲಿ ಅವನನ್ನು ನಾನು ಹೇಳುವ ಒಂದು ಬೆಟ್ಟದ ಮೇಲೆ ಸರ್ವಾಂಗಹೋಮವಾಗಿ ಅರ್ಪಿಸಬೇಕು ಅಂದನು.


ಸ್ವಲ್ಪಕಾಲದ ಮೇಲೆ ಆತನು ನಾಯಿನೆಂಬ ಊರಿಗೆ ಹೋದನು. ಆತನ ಜೊತೆಯಲ್ಲಿ ಆತನ ಶಿಷ್ಯರೂ ಇನ್ನೂ ಅನೇಕ ಜನರೂ ಹೋಗುತ್ತಿದ್ದರು.


ಸ್ವಾವಿುಯು ಆಕೆಯನ್ನು ಕಂಡು ಕನಿಕರಿಸಿ - ಅಳಬೇಡ ಎಂದು ಆಕೆಗೆ ಹೇಳಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು