Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:13 - ಕನ್ನಡ ಸತ್ಯವೇದವು J.V. (BSI)

13 ಸ್ವಾವಿುಯು ಆಕೆಯನ್ನು ಕಂಡು ಕನಿಕರಿಸಿ - ಅಳಬೇಡ ಎಂದು ಆಕೆಗೆ ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಕರ್ತನು ಆಕೆಯನ್ನು ಕಂಡು ಕನಿಕರಿಸಿ, “ಅಳಬೇಡ” ಎಂದು ಆಕೆಗೆ ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಪ್ರಭು ಯೇಸು ಆಕೆಯನ್ನು ಕಂಡದ್ದೇ ಕನಿಕರಗೊಂಡು, ‘ಅಳಬೇಡ’ ಎಂದು ಹೇಳಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಪ್ರಭುವು (ಯೇಸು) ಆಕೆಯನ್ನು ಕಂಡು ತನ್ನ ಹೃದಯದಲ್ಲಿ ಮರುಕಗೊಂಡು, “ಅಳಬೇಡ” ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಕರ್ತದೇವರು ಆಕೆಯನ್ನು ಕಂಡು, ಆಕೆಯ ಮೇಲೆ ಕನಿಕರಪಟ್ಟು, “ಅಳಬೇಡ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಜೆಜುನ್ ತಿಕಾ ಬಗಟಲ್ಲ್ಯಾ ತನ್ನಾ, ಜೆಜುಕ್ ತಿಚೊ ಪಾಪ್‍ ದಿಸ್ಲೊ, ಅನಿ ತೆನಿ ತಿಕಾ ರಡುನಕೊ ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:13
36 ತಿಳಿವುಗಳ ಹೋಲಿಕೆ  

ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಶ್ರೀಮುಖಸ್ವರೂಪದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ ಪುರಾತನಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.


ತಂದೆಯು ಮಕ್ಕಳನ್ನು ಕನಿಕರಿಸುವಂತೆ ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕನಿಕರಿಸುತ್ತಾನೆ.


ಯಾಕಂದರೆ ನಮಗಿರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿಯಾದನು, ಪಾಪ ಮಾತ್ರ ಮಾಡಲಿಲ್ಲ.


ಕರ್ತನೇ, ನೀನು ಕನಿಕರವೂ ದಯೆಯೂ ಉಳ್ಳ ದೇವರು; ದೀರ್ಘಶಾಂತನು, ಬಹಳ ಪ್ರೀತಿಯೂ ನಂಬಿಕೆಯೂ ಉಳ್ಳವನು.


ಎಲ್ಲರು ಅಳುತ್ತಾ ಆಕೆಗೋಸ್ಕರ ಎದೆಬಡುಕೊಳ್ಳುತ್ತಾ ಇದ್ದರು. ಯೇಸು - ಅಳಬೇಡಿರಿ, ಆಕೆ ಸತ್ತಿಲ್ಲ, ನಿದ್ದೆಮಾಡುತ್ತಾಳೆ ಅನ್ನಲಾಗಿ


ಯೆಹೋವನು ಇಂತೆನ್ನುತ್ತಾನೆ - ಎಫ್ರಾಯೀಮು ನನಗೆ ಪ್ರಿಯಪುತ್ರನೋ, ಮುದ್ದುಮಗುವೋ, ಏನೋ? ಅವನ ಹೆಸರೆತ್ತಿದಾಗೆಲ್ಲಾ ಅವನನ್ನು ಜ್ಞಾಪಿಸಿಕೊಳ್ಳುತ್ತಲೇ ಬರುತ್ತೇನೆ; ಇದರಿಂದ ನನ್ನ ಕರುಳು ಅವನಿಗಾಗಿ ಮರುಗುತ್ತದಲ್ಲಾ; ಅವನನ್ನು ಕರುಣಿಸೇ ಕರುಣಿಸುವೆನು.


ಕರ್ತನೇ, ನೀನು ಒಳ್ಳೆಯವನೂ ಕ್ಷವಿುಸುವವನೂ ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದೀಯಲ್ಲಾ.


ಆದದರಿಂದ ಆತನು ಎಲ್ಲಾ ವಿಷಯಗಳಲ್ಲಿ ತನ್ನ ಸಹೋದರರಿಗೆ ಸಮಾನನಾಗಬೇಕಾಗಿ ಬಂತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣಮಾಡುವದಕ್ಕಾಗಿ ದೇವರ ಕಾರ್ಯಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾಯಾಜಕನಾದನು.


ಯೇಸು ಆಕೆಯನ್ನು - ಅಮ್ಮಾ, ಯಾಕೆ ಅಳುತ್ತೀ? ಯಾರನ್ನು ಹುಡುಕುತ್ತೀ? ಎಂದು ಕೇಳಲು ಆಕೆ ಆತನನ್ನು ತೋಟಗಾರನೆಂದು ನೆನಸಿ ಆತನಿಗೆ - ಅಯ್ಯಾ, ನೀನು ಆತನನ್ನು ಎತ್ತಿಕೊಂಡು ಹೋಗಿದ್ದರೆ ಎಲ್ಲಿ ಇಟ್ಟಿದ್ದೀ ನನಗೆ ಹೇಳು; ನಾನು ತೆಗೆದುಕೊಂಡು ಹೋಗುತ್ತೇನೆ ಎಂದು ಹೇಳಿದಳು.


ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು - ಈ ಜನರನ್ನು ನೋಡಿ ಕನಿಕರಪಡುತ್ತೇನೆ; ಇವರು ನನ್ನ ಬಳಿಗೆ ಬಂದು ಮೂರು ದಿನವಾಯಿತು; ಇವರಿಗೆ ಊಟಕ್ಕೆ ಏನೂ ಇಲ್ಲ;


ಆಗ ಆತನ ಮನಸ್ಸು ಇಸ್ರಾಯೇಲ್ಯರ ಸಂಕಟದ ನಿವಿುತ್ತ ಬಲು ನೊಂದಿತು.


ಈ ಮರಿಯಳು ಯೇಸುಸ್ವಾವಿುಗೆ ತೈಲವನ್ನು ಹಚ್ಚಿ ಆತನ ಪಾದಗಳನ್ನು ತನ್ನ ತಲೇಕೂದಲಿನಿಂದ ಒರಸಿದವಳು. ಈಕೆಯ ತಮ್ಮನಾದ ಲಾಜರನೇ ಅಸ್ವಸ್ಥನಾಗಿದ್ದನು.


ಸ್ವಾವಿು ಎದ್ದದ್ದು ನಿಜ, ಆತನು ಸೀಮೋನನಿಗೆ ಕಾಣಿಸಿಕೊಂಡನು ಎಂದು ಹೇಳುತ್ತಿದ್ದರು.


ಅಪೊಸ್ತಲರು ಸ್ವಾವಿುಗೆ - ನಮ್ಮ ನಂಬಿಕೆಯನ್ನು ಹೆಚ್ಚಿಸು ಎಂದು ಹೇಳಲು


ಸಂತೋಷಪಡುವವರು ಸಂತೋಷಪಡದವರಂತೆಯೂ, ಕೊಂಡುಕೊಳ್ಳುವವರು ಕೊಂಡದ್ದು ತಮ್ಮದೇ ಎಂದು ಹೇಳದವರಂತೆಯೂ,


ಅವರು ಆಕೆಯನ್ನು - ಅಮ್ಮಾ, ನೀನು ಯಾಕೆ ಅಳುತ್ತೀ ಎಂದು ಕೇಳಲು ಆಕೆ - ನನ್ನ ಸ್ವಾವಿುಯನ್ನು ತೆಗೆದುಕೊಂಡು ಹೋಗಿದ್ದಾರೆ; ಆತನನ್ನು ಎಲ್ಲಿ ಇಟ್ಟಿದ್ದಾರೋ ನನಗೆ ಗೊತ್ತಿಲ್ಲ ಅಂದಳು.


ಆ ಮಾತನ್ನು ಕೇಳಿ ಸ್ವಾವಿುಯು ಅವನಿಗೆ - ಕಪಟಿಗಳು ನೀವು, ನಿಮ್ಮಲ್ಲಿ ಪ್ರತಿಯೊಬ್ಬನೂ ಸಬ್ಬತ್‍ದಿನದಲ್ಲಿ ತನ್ನ ಎತ್ತನ್ನಾಗಲಿ ಕತ್ತೆಯನ್ನಾಗಲಿ ಗೋದಲಿಯಿಂದ ಬಿಚ್ಚಿ ನೀರು ಕುಡಿಸುವದಕ್ಕಾಗಿ ಹಿಡುಕೊಂಡು ಹೋಗುತ್ತಾನಲ್ಲವೇ.


ಇದಾದ ಮೇಲೆ ಸ್ವಾವಿುಯು ಇನ್ನೂ ಎಪ್ಪತ್ತು ಮಂದಿಯನ್ನು ನೇವಿುಸಿ ಅವರನ್ನು ಇಬ್ಬಿಬ್ಬರಾಗಿ


ಅವನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು - ಬರಬೇಕಾದವನು ನೀನೋ, ನಾವು ಬೇರೊಬ್ಬನ ದಾರಿಯನ್ನು ನೋಡಬೇಕೋ ಎಂದು ಸ್ವಾವಿುಗೆ ಹೇಳಿಕಳುಹಿಸಿದನು.


ಸಹೋದರರೇ, ನಿದ್ರೆಹೋಗುವವರ ಗತಿ ಏನೆಂದು ನೀವು ತಿಳಿಯದೆ ಇದ್ದು ನಿರೀಕ್ಷೆಯಿಲ್ಲದವರಾದ ಇತರರಂತೆ ದುಃಖಿಸುವದು ನಮ್ಮ ಮನಸ್ಸಿಗೆ ಒಪ್ಪುವದಿಲ್ಲ.


ಸ್ವಾವಿುಯು ಹಿಂತಿರುಗಿಕೊಂಡು ಪೇತ್ರನನ್ನು ದೃಷ್ಟಿಸಿ ನೋಡಿದನು. ಆಗ ಪೇತ್ರನು - ಈಹೊತ್ತು ಕೋಳಿ ಕೂಗುವದಕ್ಕಿಂತ ಮುಂಚೆ ಮೂರು ಸಾರಿ ನನ್ನ ವಿಷಯವಾಗಿ ಅವನನ್ನು ಅರಿಯೆನೆಂಬದಾಗಿ ಹೇಳುವಿ ಎಂದು ಸ್ವಾವಿು ನುಡಿದ ಮಾತನ್ನು ನೆನಸಿ


ಆತನು ಊರಬಾಗಿಲಿನ ಹತ್ತಿರಕ್ಕೆ ಬಂದಾಗ ಸತ್ತುಹೋಗಿದ್ದ ಒಬ್ಬನನ್ನು ಹೊರಗೆ ತರುತ್ತಿದ್ದರು. ಇವನು ತನ್ನ ತಾಯಿಗೆ ಒಬ್ಬನೇ ಮಗನು; ಆಕೆಯು ಗಂಡಸತ್ತವಳಾಗಿದ್ದಳು. ಆಕೆಯ ಸಂಗಡ ಗ್ರಾಮಸ್ಥರು ಅನೇಕರಿದ್ದರು.


ಚಟ್ಟದ ಹತ್ತಿರಕ್ಕೆ ಹೋಗಿ ಅದನ್ನು ಮುಟ್ಟಲು ಹೊತ್ತುಕೊಂಡವರು ನಿಂತರು. ಆಗ ಆತನು - ಯೌವನಸ್ಥನೇ, ಏಳು ಎಂದು ನಿನಗೆ ಹೇಳುತ್ತೇನೆ ಅಂದನು.


ಆತನು ಒಂದಾನೊಂದು ಸ್ಥಳದಲ್ಲಿ ಪ್ರಾರ್ಥನೆಮಾಡಿ ಮುಗಿಸಿದಾಗ ಆತನ ಶಿಷ್ಯರಲ್ಲಿ ಒಬ್ಬನು ಆತನಿಗೆ - ಸ್ವಾಮೀ, ಯೋಹಾನನು ತನ್ನ ಶಿಷ್ಯರಿಗೆ ಕಲಿಸಿದ ಹಾಗೆ ನಮಗೂ ಪ್ರಾರ್ಥನೆಮಾಡುವದನ್ನು ಕಲಿಸು ಎಂದು ಕೇಳಿದನು.


ಸ್ವಾವಿುಯು ಅವನಿಗೆ - ಫರಿಸಾಯರಾದ ನೀವು ಪಂಚಪಾತ್ರೆ ಬಟ್ಟಲು ಇವುಗಳ ಹೊರ ಭಾಗವನ್ನು ಶುಚಿಮಾಡುತ್ತೀರಿ ಸರಿ; ಆದರೆ ನಿಮ್ಮ ಒಳಭಾಗವು ಸುಲಿಗೆಯಿಂದಲೂ ಕೆಟ್ಟತನದಿಂದಲೂ ತುಂಬಿರುತ್ತದೆ.


ಸ್ವಾವಿು ಹೇಳಿದ್ದೇನಂದರೆ - ಹೊತ್ತುಹೊತ್ತಿಗೆ ಅಶನಕ್ಕೆ ಬೇಕಾದದ್ದನ್ನು ಅಳೆದು ಕೊಡುವದಕ್ಕಾಗಿ ಯಜಮಾನನು ತನ್ನ ಮನೆಯವರ ಮೇಲೆ ನೇವಿುಸಿದ ನಂಬಿಗಸ್ತನೂ ವಿವೇಕಿಯೂ ಆಗಿರುವ ಮನೆವಾರ್ತೆಯವನು ಯಾರು?


ಸ್ವಾವಿುಯು - ಸಾಸಿವೇ ಕಾಳಷ್ಟು ನಂಬಿಕೆ ನಿಮಗಿದ್ದರೆ ನೀವು ಈ ಅತ್ತೀಮರಕ್ಕೆ - ನೀನು ಬೇರು ಸಹಿತ ಕಿತ್ತುಕೊಂಡುಹೋಗಿ ಸಮುದ್ರದಲ್ಲಿ ನಾಟಿಕೋ ಎಂದು ಹೇಳಿದರೂ ಅದು ನಿಮ್ಮ ಮಾತನ್ನು ಕೇಳುವದು.


ಸ್ವಾವಿುಯು ಈ ಸಾಮ್ಯವನ್ನು ಹೇಳಿದ ಮೇಲೆ - ಅನ್ಯಾಯಗಾರನಾದ ಈ ನ್ಯಾಯಾಧಿಪತಿ ಅಂದುಕೊಂಡದ್ದನ್ನು ಆಲೋಚಿಸಿಕೊಳ್ಳಿರಿ.


ಆದರೆ ಜಕ್ಕಾಯನು ನಿಂತುಕೊಂಡು ಸ್ವಾವಿುಗೆ - ಸ್ವಾಮೀ, ನೋಡು, ನನ್ನ ಆಸ್ತಿಯಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ; ಮತ್ತು ನಾನು ಅನ್ಯಾಯವಾಗಿ ಯಾರಿಂದ ಏನಾದರೂ ಎಳಕೊಂಡದ್ದೇಯಾದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ ಎಂದು ಹೇಳಿದನು.


ಒಳಕ್ಕೆ ಹೋಗಿ ನೋಡುವಲ್ಲಿ ಯೇಸು ಸ್ವಾವಿುಯ ದೇಹವು ಕಾಣಲಿಲ್ಲ.


ಯೇಸು ಯೋಹಾನನಿಗಿಂತ ಹೆಚ್ಚು ಶಿಷ್ಯರನ್ನು ಮಾಡಿಕೊಂಡು ಅವರಿಗೆ ದೀಕ್ಷಾಸ್ನಾನಮಾಡಿಸುತ್ತಾನೆಂಬ ಸುದ್ದಿಯನ್ನು ಫರಿಸಾಯರು ಕೇಳಿದರೆಂದು ಕರ್ತನಿಗೆ ತಿಳಿದಾಗ


ಆದರೆ ಅಷ್ಟರೊಳಗೆ ಬೇರೆ ದೋಣಿಗಳು ತಿಬೇರಿಯದಿಂದ ಹೊರಟು ಸ್ವಾವಿುಯು ಸ್ತೋತ್ರಮಾಡಿ ಜನರಿಗೆ ರೊಟ್ಟೀ ಊಟಮಾಡಿಸಿದ ಸ್ಥಳದ ಸಮೀಪಕ್ಕೆ ಬಂದಿದ್ದವು.


ಹೀಗಿರಲಾಗಿ ಅವನ ಅಕ್ಕಂದಿರು - ಸ್ವಾಮೀ, ನಿನ್ನ ಪ್ರಿಯ ವಿುತ್ರನು ಅಸ್ವಸ್ಥನಾಗಿದ್ದಾನೆ ಎಂಬದಾಗಿ ಯೇಸುವಿನ ಬಳಿಗೆ ಹೇಳಿಕಳುಹಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು