Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:14 - ಕನ್ನಡ ಸತ್ಯವೇದವು J.V. (BSI)

14 ಚಟ್ಟದ ಹತ್ತಿರಕ್ಕೆ ಹೋಗಿ ಅದನ್ನು ಮುಟ್ಟಲು ಹೊತ್ತುಕೊಂಡವರು ನಿಂತರು. ಆಗ ಆತನು - ಯೌವನಸ್ಥನೇ, ಏಳು ಎಂದು ನಿನಗೆ ಹೇಳುತ್ತೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಚಟ್ಟದ ಹತ್ತಿರಕ್ಕೆ ಹೋಗಿ ಅದನ್ನು ಮುಟ್ಟಲು ಹೊತ್ತುಕೊಂಡವರು ನಿಂತರು. ಆಗ ಆತನು, “ಯೌವನಸ್ಥನೇ, ಏಳು ಎಂದು ನಿನಗೆ ಹೇಳುತ್ತೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಚಟ್ಟದ ಹತ್ತಿರಕ್ಕೆ ಬಂದು, ಅದನ್ನು ಮುಟ್ಟಿದರು. ಹೊತ್ತುಕೊಂಡು ಹೋಗುತ್ತಿದ್ದವರು ಹಾಗೆಯೇ ನಿಂತರು. ಆಗ ಯೇಸು, “ಯುವಕನೇ, ನಾನು ನಿನಗೆ ಹೇಳುತ್ತೇನೆ, ಎದ್ದೇಳು,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಶವದ ಪೆಟ್ಟಿಗೆಯ ಬಳಿಹೋಗಿ ಅದನ್ನು ಮುಟ್ಟಿದನು. ಆ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗುವವರು ನಿಂತುಕೊಂಡರು. ಯೇಸು ಸತ್ತುಹೋಗಿದ್ದವನಿಗೆ, “ಯೌವನಸ್ಥನೇ, ಎದ್ದೇಳು! ಎಂದು ನಾನು ನಿನಗೆ ಹೇಳುತ್ತೇನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅನಂತರ ಯೇಸು ಬಂದು ಶವದ ಚಟ್ಟವನ್ನು ಮುಟ್ಟಿದಾಗ, ಅದನ್ನು ಹೊತ್ತುಕೊಂಡಿದ್ದವರು ಹಾಗೆಯೇ ನಿಂತರು. ಆಗ ಯೇಸು, “ಯುವಕನೇ, ನಾನು ನಿನಗೆ ಹೇಳುತ್ತೇನೆ, ಎದ್ದೇಳು!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತನ್ನಾ ಜೆಜು ಫಿಡೆ ಗೆಲೊ, ಅನಿ ಮರ್‍ನಾಚ್ಯಾ ಪೆಟಿಕ್ ಅಪಡ್ಲ್ಯಾನ್, ತನ್ನಾ ಪೆಟಿ ವಾವುನ್ ಘೆಟಲ್ಲಿ ಲೊಕಾ ಇಬೆ ರ್‍ಹಾಲಿ, ತನ್ನಾ ಜೆಜುನ್ “ದಾಂಡ್ಗ್ಯಾ ಮಾನ್ಸಾ, ಮಿಯಾ ತುಕಾ ಸಾಂಗ್ತಾ ವೈರ್ ಉಟ್!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:14
20 ತಿಳಿವುಗಳ ಹೋಲಿಕೆ  

ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಸತ್ತವರು ದೇವಕುಮಾರನ ಧ್ವನಿಯನ್ನು ಕೇಳುವ ಕಾಲ ಬರುತ್ತದೆ, ಈಗಲೇ ಬಂದಿದೆ; ಕೇಳಿದವರು ಬದುಕುವರು.


ಯೇಸು ಆಕೆಗೆ - ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ; ನನ್ನನ್ನು ನಂಬುವವನು ಸತ್ತರೂ ಬದುಕುವನು;


ಹುಡುಗನ ಮೇಲೆ ಮೂರು ಸಾರಿ ಬೋರ್ಲಬಿದ್ದು - ನನ್ನ ದೇವರಾದ ಯೆಹೋವನೇ, ಈ ಹುಡುಗನ ಪ್ರಾಣವು ತಿರಿಗಿ ಬರುವಂತೆ ಮಾಡು ಎಂಬದಾಗಿ ಆತನಿಗೆ ಮೊರೆಯಿಟ್ಟನು.


ನಾನು ನಿನ್ನನ್ನು ಅನೇಕ ಜನಾಂಗಗಳಿಗೆ ಮೂಲಪಿತೃವಾಗಿ ನೇವಿುಸಿದ್ದೇನೆಂದು ಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ಅಬ್ರಹಾಮನು ನಮ್ಮೆಲ್ಲರಿಗೂ ದೇವರ ಸನ್ನಿಧಿಯಲ್ಲಿ ಮೂಲ ಪಿತೃವಾಗಿದ್ದಾನೆ. ದೇವರು ಸತ್ತವರನ್ನು ಬದುಕಿಸುವವನಾಗಿಯೂ ಇಲ್ಲದ್ದನ್ನು ಇರುವದಾಗಿ ಕರೆಯುವವನಾಗಿಯೂ ಇದ್ದಾನೆಂದು ಅಬ್ರಹಾಮನು ನಂಬಿದನು.


ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನು ಸಹ ತನಗೆ ಬೇಕಾದವರನ್ನು ಬದುಕಿಸುತ್ತಾನೆಂದು ತಿಳುಕೊಳ್ಳಿರಿ.


ಮೃತರಾದ ನಿನ್ನ ಜನರು ಬದುಕುವರು, ನನ್ನವರ ಹೆಣಗಳು ಜೀವದಿಂದೇಳುವವು, ಮಣ್ಣಿನಲ್ಲಿ ಪವಳಿಸಿರುವವರೇ, ಎಚ್ಚತ್ತು ಹರ್ಷಧ್ವನಿಗೈಯಿರಿ! [ಯೆಹೋವನೇ,] ನೀನು ಸುರಿಯುವ ಇಬ್ಬನಿಯು ಜ್ಯೋತಿರ್ಮಯವಾದದ್ದು, ಭೂವಿುಯು ಸತ್ತವರನ್ನು ಹೊರಪಡಿಸುವದು.


ಆತನು ನುಡಿದ ಮಾತ್ರಕ್ಕೆ ಸಮಸ್ತವೂ ಉಂಟಾಯಿತು; ಆತನು ಆಜ್ಞಾಪಿಸುತ್ತಲೇ ಸರ್ವವೂ ಸ್ಥಾಪನೆಯಾಯಿತು.


ಒಬ್ಬ ಮನುಷ್ಯನು ಸತ್ತು ಪುನಃ ಬದುಕಾನೇ? ಹಾಗಾಗುವದಾದರೆ ನನಗೆ ಬಿಡುಗಡೆಯಾಗುವವರೆಗೆ ನನ್ನ ವಾಯಿದೆಯ ದಿನಗಳಲ್ಲೆಲ್ಲಾ ಕಾದುಕೊಂಡಿರುವೆನು;


ಮನುಷ್ಯರು ಮಲಗಿಕೊಂಡು ಏಳದೇ ಇರುವರು; ಆಕಾಶವು ಅಳಿದುಹೋಗುವ ತನಕ ಅವರು ನಿದ್ರೆತಿಳಿಯುವದಿಲ್ಲ, ಎಬ್ಬಿಸಲ್ಪಡುವದಿಲ್ಲ.


ಆ ಜನರು ರಹಸ್ಯವಾಗಿ ನಡಿಸುವ ಕೆಲಸಗಳನ್ನು ಕುರಿತು ಮಾತಾಡುವದಾದರೂ ನಾಚಿಕೆಗೆ ಕಾರಣವಾಗಿದೆ.


ಯೆಹೋವನು ಅವನ ಪ್ರಾರ್ಥನೆಯನ್ನು ಕೇಳಿದದರಿಂದ ಹುಡುಗನ ಪ್ರಾಣವು ತಿರಿಗಿ ಬಂದು ಅವನು ಉಜ್ಜೀವಿಸಿದನು. ಎಲೀಯನು ಆ ಹುಡುಗನನ್ನು ಅಲ್ಲಿಂದ ಕೆಳಗೆ ತೆಗೆದುಕೊಂಡುಹೋಗಿ


ತಲಿಥಾ ಕೂಮ್ ಅಂದನು. ಆ ಮಾತಿಗೆ - ಅಮ್ಮಣ್ಣೀ, ಏಳನ್ನುತ್ತೇನೆ ಎಂದರ್ಥ.


ಸ್ವಾವಿುಯು ಆಕೆಯನ್ನು ಕಂಡು ಕನಿಕರಿಸಿ - ಅಳಬೇಡ ಎಂದು ಆಕೆಗೆ ಹೇಳಿ


ಅನ್ನುತ್ತಲೇ ಸತ್ತಿದ್ದವನು ಎದ್ದು ಕೂತುಕೊಂಡು ಮಾತಾಡುವದಕ್ಕೆ ತೊಡಗಿದನು. ಯೇಸು ಅವನನ್ನು ಅವನ ತಾಯಿಗೆ ಕೊಟ್ಟನು.


ಈ ವಾರ್ತೆಯು ಯೂದಾಯದಲ್ಲಿಯೂ ಸುತ್ತಲಿರುವ ಎಲ್ಲಾ ಪ್ರಾಂತ್ಯದಲ್ಲಿಯೂ ಹಬ್ಬಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು