Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 7:37 - ಕನ್ನಡ ಸತ್ಯವೇದವು J.V. (BSI)

37 ಆಗ ಆ ಊರಲ್ಲಿದ್ದ ದುರಾಚಾರಿಯಾದ ಒಬ್ಬ ಹೆಂಗಸು ಫರಿಸಾಯನ ಮನೆಯಲ್ಲಿ ಆತನು ಊಟಕ್ಕೆ ಒರಗಿದ್ದಾನೆಂದು ಗೊತ್ತುಹಿಡುಕೊಂಡು ಸುಗಂಧತೈಲದ ಭರಣಿಯನ್ನು ತೆಗೆದುಕೊಂಡು ಬಂದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಆಗ ಆ ಊರಿನಲ್ಲಿದ್ದ ದುರಾಚಾರಿಯಾದ ಒಬ್ಬ ಹೆಂಗಸು ಫರಿಸಾಯನ ಮನೆಯಲ್ಲಿ ಆತನು ಊಟಕ್ಕೆ ಬಂದಿದ್ದಾನೆಂದು ತಿಳಿದು ಸುಗಂಧತೈಲದ ಭರಣಿಯನ್ನು ತೆಗೆದುಕೊಂಡು ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಅದೇ ಊರಿನಲ್ಲಿ ಪತಿತೆಯೊಬ್ಬಳು ಇದ್ದಳು. ಆಕೆ, ಫರಿಸಾಯನ ಮನೆಯಲ್ಲಿ ಯೇಸು ಊಟಕ್ಕೆ ಕುಳಿತಿದ್ದಾರೆಂದು ಕೇಳಿ ಒಂದು ಅಮೃತಶಿಲೆಯ ಭರಣಿ ತುಂಬ ಸುಗಂಧ ತೈಲವನ್ನು ತೆಗೆದುಕೊಂಡು ಅಲ್ಲಿಗೆ ಬಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಆ ಊರಿನಲ್ಲಿ ಪಾಪಿಷ್ಠಳಾದ ಒಬ್ಬ ಸ್ತ್ರೀ ಇದ್ದಳು. ಯೇಸುವು ಫರಿಸಾಯನ ಮನೆಯಲ್ಲಿ ಊಟಮಾಡುತ್ತಿದ್ದಾನೆಂದು ಆಕೆಗೆ ತಿಳಿಯಿತು. ಆದ್ದರಿಂದ ಆಕೆ ಭರಣಿಯಲ್ಲಿ ಸ್ವಲ್ಪ ಪರಿಮಳತೈಲವನ್ನು ತೆಗೆದುಕೊಂಡು ಬಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಆ ಪಟ್ಟಣದಲ್ಲಿದ್ದ ಫರಿಸಾಯನ ಮನೆಯಲ್ಲಿ ಯೇಸು ಊಟಕ್ಕೆ ಕುಳಿತುಕೊಂಡಿದ್ದಾರೆಂದು ಒಬ್ಬ ಪಾಪಿ ಸ್ತ್ರೀಯು ತಿಳಿದು, ಸುಗಂಧ ತೈಲದ ಭರಣಿಯನ್ನು ತಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ತ್ಯಾ ಶಾರಾತ್ ಪಾಪಾಚೆ ಜಿವನ್ ಕರ್‍ತಲಿ ಎಕ್ ಬಾಯ್ಕೊಮನುಸ್ ಹೊತ್ತಿ. ಜೆಜು ಫಾರಿಜೆವಾಚ್ಯಾ ಘರಾತ್ ಜೆವ್ನಾಕ್ ಬಸ್ಲಾ ಮನುನ್ ಆಯಿಕ್ಲಿನ್, ತಸೆ ಮನುನ್ ಎಕ್ ಭರ್‍ನಿಬರ್ ಬರಿ ವಾಸ್ ಎತಲೆ ತೆಲ್ ಘೆವ್ನ್ ಯೆಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 7:37
18 ತಿಳಿವುಗಳ ಹೋಲಿಕೆ  

ದೇವರ ಕಡೆಗೆ ತಿರುಗಿಕೊಳ್ಳಿರಿ ಎಂದು ನೀತಿವಂತರನ್ನು ಕರೆಯುವದಕ್ಕೆ ನಾನು ಬಂದವನಲ್ಲ, ಪಾಪಿಗಳನ್ನು ಕರೆಯುವದಕ್ಕೆ ಬಂದವನು ಎಂದು ಅವರಿಗೆ ಉತ್ತರಕೊಟ್ಟನು.


ಅವರಿಬ್ಬರಲ್ಲಿ ತಂದೆಯ ಚಿತ್ತದಂತೆ ನಡೆದವನು ಯಾರು ಎಂದು ಕೇಳಿದ್ದಕ್ಕೆ ಅವರು - ಮೊದಲನೆಯವನೇ ಅಂದರು. ಆಗ ಯೇಸು ಅವರಿಗೆ - ಭ್ರಷ್ಟರೂ ಸೂಳೆಯರೂ ನಿಮಗಿಂತ ಮೊದಲು ದೇವರ ರಾಜ್ಯವನ್ನು ಸೇರುವರು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.


ನೀತಿವಂತನೇ ರಕ್ಷಣೆಹೊಂದುವದು ಕಷ್ಟವಾದರೆ ಭಕ್ತಿಹೀನನೂ ಪಾಪಿಷ್ಠನೂ ನಿಲ್ಲುವದು ಹೇಗೆ?


ಆದರೆ ಅದನ್ನು ಅದರ ಉದ್ದೇಶಕ್ಕೆ ತಕ್ಕ ಹಾಗೆ ಉಪಯೋಗಿಸಬೇಕು; ಅಂದರೆ ಅದು ಅಧರ್ಮಿಗಳು, ಅವಿಧೇಯರು, ಭಕ್ತಿಹೀನರು, ಪಾಪಿಷ್ಠರು, ದೇವಭಕ್ತಿಯಿಲ್ಲದವರು, ಪ್ರಾಪಂಚಿಕರು, ತಂದೆತಾಯಿಗಳನ್ನು ಹೊಡೆಯುವವರು, ನರಹತ್ಯಮಾಡುವವರು, ಜಾರರು, ಪುರುಷಗಾವಿುಗಳು, ನರಚೋರರು, ಸುಳ್ಳುಗಾರರು, ಅಬದ್ಧಪ್ರಮಾಣಿಕರು, ಸ್ವಸ್ಥಬೋಧನೆಗೆ ಪ್ರತಿಕೂಲವಾಗಿ ಬೇರೆ ಏನಾದರೂ ಇದ್ದರೆ ಅದನ್ನು ಮಾಡುವವರು, ಈ ಮೊದಲಾದ ಅನೀತಿವಂತರಿಗಾಗಿ ನೇಮಕವಾಗಿದೆಯೇ ಹೊರತು ನೀತಿವಂತರಿಗೆ ನೇಮಕವಾಗಿಲ್ಲವೆಂದು ತಿಳಿದು ಉಪಯೋಗಿಸಬೇಕು.


ಆದರೆ ಆ ಸುಂಕದವನು ದೂರದಲ್ಲಿ ನಿಂತು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ಎದೆಯನ್ನು ಬಡುಕೊಳ್ಳುತ್ತಾ - ದೇವರೇ, ಪಾಪಿಯಾದ ನನ್ನನ್ನು ಕರುಣಿಸು ಅಂದನು.


ಅದನ್ನು ಕಂಡು ಫರಿಸಾಯರೂ ಅವರಲ್ಲಿದ್ದ ಶಾಸ್ತ್ರಿಗಳೂ ಆತನ ಶಿಷ್ಯರ ಮೇಲೆ ಗುಣುಗುಟ್ಟುತ್ತಾ - ನೀವು ಸುಂಕದವರ ಮತ್ತು ಪಾಪಿಗಳ ಸಂಗಡ ಊಟ ಮಾಡುವದೇಕೆ ಎಂದು ಕೇಳಿದರು.


ಆದರೆ ನಾವು ಪಾಪಿಗಳಾಗಿದ್ದಾಗಲೂ ಕ್ರಿಸ್ತನು ನಮಗೋಸ್ಕರ ಪ್ರಾಣ ಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ಸಿದ್ಧಾಂತಪಡಿಸಿದ್ದಾನೆ.


ಈ ಮರಿಯಳು ಯೇಸುಸ್ವಾವಿುಗೆ ತೈಲವನ್ನು ಹಚ್ಚಿ ಆತನ ಪಾದಗಳನ್ನು ತನ್ನ ತಲೇಕೂದಲಿನಿಂದ ಒರಸಿದವಳು. ಈಕೆಯ ತಮ್ಮನಾದ ಲಾಜರನೇ ಅಸ್ವಸ್ಥನಾಗಿದ್ದನು.


ಕ್ರಿಸ್ತ ಯೇಸು ಪಾಪಿಗಳನ್ನು ರಕ್ಷಿಸುವದಕ್ಕೋಸ್ಕರ ಈ ಲೋಕಕ್ಕೆ ಬಂದನು ಎಂಬ ವಾಕ್ಯವು ನಂಬತಕ್ಕದ್ದಾಗಿಯೂ ಸರ್ವಾಂಗೀಕಾರಕ್ಕೆ ಯೋಗ್ಯವಾದದ್ದಾಗಿಯೂ ಅದೆ; ಆ ಪಾಪಿಗಳಲ್ಲಿ ನಾನೇ ಮುಖ್ಯನು.


ಭಕ್ತಿಹೀನರ ಪ್ರಾರ್ಥನೆಯನ್ನು ದೇವರು ಕೇಳುವದಿಲ್ಲ; ಯಾವನು ಭಕ್ತನಾಗಿದ್ದು ಆತನ ಚಿತ್ತದಂತೆ ನಡೆಯುತ್ತಾನೋ ಅವನ ಪ್ರಾರ್ಥನೆಯನ್ನು ಕೇಳುತ್ತಾನೆಂದು ಬಲ್ಲೆವು.


ಆದಕಾರಣ ಅವರು ಕುರುಡನಾಗಿದ್ದ ಆ ಮನುಷ್ಯನನ್ನು ಎರಡನೆಯ ಸಾರಿ ಕರೆದು - ನೀನು ದೇವರಿಗೆ ಮಾನಬರುವಂತೆ ಹೇಳು; ಆ ಮನುಷ್ಯನು ಭಕ್ತಿಹೀನನೆಂದು ನಾವು ಬಲ್ಲೆವು ಎಂದು ಹೇಳಲು


ಇದನ್ನು ನೋಡಿದವರೆಲ್ಲರು - ಈತನು ಪಾಪಿಯಾಗಿರುವವನ ಬಳಿಯಲ್ಲಿ ಇಳುಕೊಳ್ಳುವದಕ್ಕೆ ಹೋಗಿದ್ದಾನೆ ಎಂದು ಗುಣುಗುಟ್ಟಿದರು.


ಮನುಷ್ಯಕುಮಾರನು ಬಂದಿದ್ದಾನೆ, ಅವನು ಅನ್ನಪಾನಗಳನ್ನು ತೆಗೆದುಕೊಳ್ಳುವವನಾಗಿದ್ದಾನೆ; ನೀವು - ಇಗೋ, ಇವನು ಹೊಟ್ಟೆಬಾಕನು, ಕುಡುಕನು, ಭ್ರಷ್ಟರ ಮತ್ತು ಪಾಪಿಷ್ಠರ ಗೆಳೆಯನು ಅನ್ನುತ್ತೀರಿ.


ಫರಿಸಾಯರಲ್ಲಿ ಒಬ್ಬನು ಆತನನ್ನು ತನ್ನ ಜೊತೆಯಲ್ಲಿ ಊಟಮಾಡಬೇಕೆಂದು ಬೇಡಿಕೊಂಡಾಗ ಆತನು ಆ ಫರಿಸಾಯನ ಮನೆಗೆ ಹೋಗಿ ಊಟಕ್ಕೆ ಒರಗಿಕೊಂಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು