Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:1 - ಕನ್ನಡ ಸತ್ಯವೇದವು J.V. (BSI)

1 ತರುವಾಯ ಆತನು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಊರುಗಳಲ್ಲಿಯೂ ಗ್ರಾಮಗಳಲ್ಲಿಯೂ ಸಂಚರಿಸಿದನು. ಆತನ ಸಂಗಡ ಹನ್ನೆರಡು ಮಂದಿ ಶಿಷ್ಯರೂ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ತರುವಾಯ ಯೇಸು ದೇವರ ರಾಜ್ಯದ ಸುವಾರ್ತೆಯನ್ನು ಸಾರುತ್ತಾ ಊರುಗಳಲ್ಲಿಯೂ ಗ್ರಾಮಗಳಲ್ಲಿಯೂ ಸಂಚರಿಸಿದನು. ಆತನ ಸಂಗಡ ಹನ್ನೆರಡು ಮಂದಿ ಶಿಷ್ಯರೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ತರುವಾಯ ಯೇಸುಸ್ವಾಮಿ ದೇವರ ಸಾಮ್ರಾಜ್ಯದ ಶುಭಸಂದೇಶವನ್ನು ಸಾರುತ್ತಾ ಪಟ್ಟಣಗಳಲ್ಲೂ ಹಳ್ಳಿಗಳಲ್ಲೂ ಸಂಚಾರಮಾಡಿದರು. ಹನ್ನೆರಡು ಮಂದಿ ಶಿಷ್ಯರೂ ಅವರೊಡನೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಮರುದಿನ, ಯೇಸು ಕೆಲವು ನಗರಗಳ ಮತ್ತು ಊರುಗಳ ಮೂಲಕ ಪ್ರಯಾಣ ಮಾಡಿ ಜನರಿಗೆ ಬೋಧಿಸಿದನು ಮತ್ತು ದೇವರ ರಾಜ್ಯದ ಸುವಾರ್ತೆಯನ್ನು ತಿಳಿಸಿದನು. ಹನ್ನೆರಡು ಮಂದಿ ಅಪೊಸ್ತಲರು ಆತನೊಡನೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇದಾದ ಮೇಲೆ, ಯೇಸು ಪ್ರತಿಯೊಂದು ಪಟ್ಟಣಕ್ಕೂ ಹಳ್ಳಿಗೂ ಹೋಗಿ, ದೇವರ ರಾಜ್ಯದ ವಿಷಯ ಪ್ರಚಾರ ಮಾಡುತ್ತಾ ಸುವಾರ್ತೆಯನ್ನು ಸಾರುತ್ತಾ ಇದ್ದರು. ಹನ್ನೆರಡು ಮಂದಿ ಶಿಷ್ಯರು ಅವರೊಂದಿಗೆ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಉಲ್ಲ್ಯಾ ಎಳಾಚ್ಯಾ ಮಾನಾ, ಜೆಜು ಗಾಂವಾತ್ನಿ, ಅನಿ ಬಾರಿಕ್ಲ್ಯಾ ಗಾಂವಾತ್ನಿ ದೆವಾಚ್ಯಾ ರಾಜಾಚಿ ಬರಿ ಖಬರ್ ಸಾಂಗುನ್ಗೆತ್ ಗೆಲೊ, ತೆಚಿ ಬಾರಾ ಶಿಸಾಬಿ ತೆಚ್ಯಾ ವಾಂಗ್ಡಾ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:1
18 ತಿಳಿವುಗಳ ಹೋಲಿಕೆ  

ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ತಿರುಗಾಡಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ, ಪರಲೋಕರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.


ಇದಕ್ಕೆ ಸರಿಯಾಗಿ ಶುಭದ ಸುವಾರ್ತೆಯನ್ನು ಸಾರುವವರ ಪಾದಗಳು ಎಷ್ಟೋ ಅಂದವಾಗಿವೆ ಎಂದು ಬರೆದದೆ. ಆದರೂ ಆ ಶುಭವರ್ತಮಾನಕ್ಕೆ ಎಲ್ಲರೂ ಕಿವಿಗೊಡಲಿಲ್ಲ.


ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನವನ್ನು ನಮ್ಮ ಮಕ್ಕಳಿಗೋಸ್ಕರ ನೆರವೇರಿಸಿದ್ದಾನೆಂಬ ಶುಭಸಮಾಚಾರವನ್ನು ನಾವು ನಿಮಗೆ ಸಾರುವವರಾಗಿದ್ದೇವೆ. ಆತನು ಯೇಸುವನ್ನು ಎಬ್ಬಿಸಿದ್ದರಲ್ಲಿ - ನನಗೆ ನೀನು ಮಗನು, ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ ಎಂದು ಎರಡನೆಯ ಕೀರ್ತನೆಯಲ್ಲಿ ಬರೆದಿರುವ ಮಾತು ನೆರವೇರಿತು.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದದರಿಂದ ಆತನು ಉಪಕಾರಗಳನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣಮಾಡುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವದಷ್ಟೆ.


ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವದಕ್ಕೆ ಅಭಿಷೇಕಿಸಿದನು, ಸೆರೆಯವರಿಗೆ ಬಿಡುಗಡೆಯಾಗುವದನ್ನು ಮತ್ತು ಕುರುಡರಿಗೆ ಕಣ್ಣು ಬರುವದನ್ನು ಪ್ರಸಿದ್ಧಿಪಡಿಸುವದಕ್ಕೂ ಮನಮುರಿದವರನ್ನು ಬಿಡಿಸಿ ಕಳುಹಿಸುವದಕ್ಕೂ


ಬಳಿಕ ಆತನು ಗಲಿಲಾಯದಲ್ಲೆಲ್ಲಾ ಹೋಗಿ ಅವರ ಸಭಾಮಂದಿರಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ದೆವ್ವಗಳನ್ನು ಬಿಡಿಸುತ್ತಾ ಇದ್ದನು.


ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಹೇಳಬೇಕಾದದ್ದನ್ನು ಹೇಳಿ ಮುಗಿಸಿದ ಬಳಿಕ ಅಲ್ಲಿಯವರ ಊರುಗಳಲ್ಲಿ ಉಪದೇಶಮಾಡುವದಕ್ಕೂ ಸುವಾರ್ತೆಯನ್ನು ಸಾರುವದಕ್ಕೂ ಅಲ್ಲಿಂದ ಹೊರಟನು.


ಯೇಸು ಎಲ್ಲಾ ಊರುಗಳನ್ನೂ ಹಳ್ಳಿಪಳ್ಳಿಗಳನ್ನೂ ಸುತ್ತಿಕೊಂಡು ಅವರ ಸಭಾಮಂದಿರಗಳಲ್ಲಿ ಉಪದೇಶಮಾಡುತ್ತಾ ಪರಲೋಕರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.


ಆ ಬಾಲಕನು ಬೆಳೆದು ಆತ್ಮದಲ್ಲಿ ಬಲವುಳ್ಳವನಾದನು ಮತ್ತು ಇಸ್ರಾಯೇಲ್ ಜನರಿಗೆ ತನ್ನನ್ನು ತೋರ್ಪಡಿಸಿಕೊಳ್ಳುವ ದಿನದವರೆಗೆ ಅರಣ್ಯ ಪ್ರದೇಶಗಳಲ್ಲಿ ಇದ್ದನು.


ಆಗ ಅವರು ಹೊರಟುಹೋಗಿ ಎಲ್ಲೆಲ್ಲಿಯೂ ಸುವಾರ್ತೆಯನ್ನು ಸಾರುತ್ತಾ ರೋಗಿಗಳಿಗೆ ವಾಸಿಮಾಡುತ್ತಾ ಗ್ರಾಮಗಳಲ್ಲೆಲ್ಲಾ ಸಂಚರಿಸಿದರು.


ಆ ದಿವಸಗಳೊಳಗೆ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಉಪದೇಶಮಾಡುತ್ತಾ ಸುವಾರ್ತೆಯನ್ನು ಸಾರುತ್ತಿರಲಾಗಿ ಮಹಾಯಾಜಕರೂ ಶಾಸ್ತ್ರಿಗಳೂ ಸಭೆಯ ಹಿರಿಯರನ್ನು ಕೂಡಿಕೊಂಡು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು