Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:31 - ಕನ್ನಡ ಸತ್ಯವೇದವು J.V. (BSI)

31 ಪಾತಾಳಕ್ಕೆ ಹೋಗಿಬಿಡುವಂತೆ ನಮಗೆ ಆಜ್ಞೆ ಮಾಡಬೇಡವೆಂದು ಅವು ಆತನನ್ನು ಬೇಡಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಪಾತಾಳಕ್ಕೆ ಹೋಗಿಬಿಡುವಂತೆ ನಮಗೆ ಆಜ್ಞೆಮಾಡಬೇಡವೆಂದು ಅವು ಆತನನ್ನು ಬೇಡಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಆ ಪಿಶಾಚಿಗಳು, “ಪಾತಾಳಕ್ಕೆ ಹೋಗಿಬೀಳಿರೆಂದು ನಮಗೆ ಆಜ್ಞೆಮಾಡಬೇಡಿ,” ಎಂದು ಯೇಸುವನ್ನು ಬೇಡಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ತಮ್ಮನ್ನು ಪಾತಾಳಕ್ಕೆ ಕಳುಹಿಸಕೂಡದೆಂದು ಆ ದೆವ್ವಗಳು ಯೇಸುವನ್ನು ಬೇಡಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಅವು ತಮ್ಮನ್ನು ಪಾತಾಳಕ್ಕೆ ಹೋಗುವಂತೆ ಅಪ್ಪಣೆ ಕೊಡಬಾರದೆಂದು ಯೇಸುವನ್ನು ಬೇಡಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

31 ಗಿರ್‍ಯಾನಿ ಅಪ್ನಾಕ್ ಪಾತಾಳಾಕ್ ಧಾಡುನಕ್ಕೊ, ಮನುನ್ ಜೆಜುಕ್ಡೆ ಮಾಗ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:31
14 ತಿಳಿವುಗಳ ಹೋಲಿಕೆ  

ಆಮೇಲೆ ಆತನು ಎಡಗಡೆಯಲ್ಲಿರುವವರಿಗೆ - ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚನಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ನಮಸ್ಕರಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲ್ಪಟ್ಟರು;


ನೀನು ಕಂಡ ಈ ಮೃಗವು ಮೊದಲು ಇತ್ತು, ಈಗ ಇಲ್ಲ, ಮತ್ತು ಅಧೋಲೋಕದಿಂದ ಏರಿಬಂದು ನಾಶಕ್ಕೆ ಹೋಗುವದು. ಭೂನಿವಾಸಿಗಳೊಳಗೆ ಯಾರಾರ ಹೆಸರುಗಳು ಲೋಕಾದಿಯಿಂದ ಜೀವಬಾಧ್ಯರ ಪಟ್ಟಿಯಲ್ಲಿ ಬರೆದಿರುವದಿಲ್ಲವೋ ಅವರು ಈ ಮೃಗವನ್ನು ನೋಡಿ ಇದು ಮೊದಲು ಇತ್ತು, ಈಗ ಇಲ್ಲ, ಇನ್ನು ಮೇಲೆ ಬರುವದು ಎಂದು ತಿಳಿದು ಆಶ್ಚರ್ಯಪಡುವರು.


ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದನಂತರ ಅಧೋಲೋಕದಿಂದ ಬರುವ ಮೃಗವು ಇವರ ಮೇಲೆ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವದು.


ಅಧೋಲೋಕದ ಅಧಿಕಾರಿಯಾದ ದೂತನು ಅವುಗಳನ್ನಾಳುವ ಅರಸನು; ಅವನಿಗೆ ಇಬ್ರಿಯ ಭಾಷೆಯಲ್ಲಿ ಅಬದ್ದೋನನೆಂತಲೂ ಗ್ರೀಕ್ ಭಾಷೆಯಲ್ಲಿ ಅಪೊಲ್ಲುವೋನನೆಂತಲೂ ಹೆಸರುಂಟು.


ಇವನು ಯೇಸುವನ್ನು ಕಂಡು ಆರ್ಭಟಿಸಿ ಆತನ ಮುಂದೆ ಬಿದ್ದು ಮಹಾಶಬ್ದದಿಂದ - ಯೇಸುವೇ, ಪರಾತ್ಪರನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ನನ್ನನ್ನು ಕಾಡಬೇಡವೆಂತ ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.


ಆದರೆ ನಿನ್ನ ಕೈಚಾಚಿ ಅವನ ಅಸ್ತಿಮಾಂಸಗಳನ್ನು ಹೊಡೆ; ಅವನು ನಿನ್ನ ಮುಖದೆದುರಿಗೆ ನಿನ್ನನ್ನು ದೂಷಿಸಲೇ ದೂಷಿಸುವನು ಅಂದನು.


ಆದರೆ ನಿನ್ನ ಕೈನೀಡಿ ಅವನ ಸೊತ್ತನ್ನೆಲ್ಲಾ ಅಳಿಸಿಬಿಡು. ಆಗ ಅವನು ನಿನ್ನ ಎದುರಿಗೆ ನಿನ್ನನ್ನು ದೂಷಿಸಲೇ ದೂಷಿಸುವನು ಅಂದನು.


ಅಲ್ಲಿಯ ಗುಡ್ಡದಲ್ಲಿ ಬಹಳ ಹಂದಿಗಳ ಒಂದು ಹಿಂಡು ಮೇಯುತ್ತಿತ್ತು. ಆ ದೆವ್ವಗಳು - ಆ ಹಂದಿಗಳೊಳಗೆ ಸೇರಿಕೊಳ್ಳುವದಕ್ಕೆ ನಮಗೆ ಅಪ್ಪಣೆಯಾಗಬೇಕೆಂದು ಆತನನ್ನು ಬೇಡಿಕೊಂಡವು.


ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿಕೊಂಡು ಬರುವದಕ್ಕೆ ಯಾರು ಪ್ರೇತಲೋಕಕ್ಕೆ ಇಳಿದುಹೋದಾರು? ಎಂದಾಗಲಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು