Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:37 - ಕನ್ನಡ ಸತ್ಯವೇದವು J.V. (BSI)

37 ಗೆರಸೇನರ ಸುತ್ತಲಿರುವ ಸೀಮೆಯವರಿಗೆಲ್ಲಾ ಮಹಾ ಭಯಹಿಡಿದದ್ದರಿಂದ ಅವರು ಯೇಸುವನ್ನು - ನೀನು ನಮ್ಮನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಗೆರಸೇನರ ಸುತ್ತಲಿರುವ ಸೀಮೆಯವರಿಗೆಲ್ಲಾ ಮಹಾ ಭಯ ಉಂಟಾದದ್ದರಿಂದ ಅವರು ಆತನನ್ನು, ನೀನು ನಮ್ಮನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು. ಆತನು ದೋಣಿಯನ್ನು ಹತ್ತಿ ಹಿಂತಿರುಗಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

37 ಬಹಳವಾಗಿ ದಿಗಿಲುಗೊಂಡಿದ್ದ ಗೇರಸೇನಿನ ಹಾಗೂ ಸುತ್ತಮುತ್ತಲಿನ ಜನರೆಲ್ಲರೂ ತಮ್ಮನ್ನು ಬಿಟ್ಟುಹೋಗಬೇಕೆಂದು ಯೇಸುವನ್ನು ಕೇಳಿಕೊಂಡರು. ಯೇಸು ದೋಣಿ ಹತ್ತಿ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಜನರು ಯೇಸುವಿಗೆ, “ನೀನು ಇಲ್ಲಿಂದ ಹೊರಟುಹೋಗು” ಎಂದು ಕೇಳಿಕೊಂಡರು. ಏಕೆಂದರೆ ಅವರು ಬಹಳ ಭಯಗೊಂಡಿದ್ದರು. ಆದ್ದರಿಂದ ಯೇಸು ದೋಣಿಯನ್ನು ಹತ್ತಿ ಮತ್ತೆ ಗಲಿಲಾಯಕ್ಕೆ ಹಿಂತಿರುಗಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಆಗ ಗೆರಸೇನರ ಸೀಮೆಯ ಸುತ್ತಮುತ್ತಲಿನ ಜನಸಮೂಹವೆಲ್ಲವು, ಬಹಳ ಭಯಹಿಡಿದವರಾದುದರಿಂದ ಅವರು ತಮ್ಮ ಬಳಿಯಿಂದ ಹೊರಟುಹೋಗಬೇಕೆಂದು ಯೇಸುವನ್ನು ಬೇಡಿಕೊಂಡರು. ಯೇಸು ದೋಣಿಯನ್ನು ಹತ್ತಿ ಹಿಂದಿರುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ತನ್ನಾ ತ್ಯಾ ಜಾಗ್ಯಾ ವೈಲಿ ಸಗ್ಳಿ ಲೊಕಾ ಜೆಜುಕ್ ಅಮ್ಚೆ ಗಾಂವ್ ಸೊಡುನ್ ಜಾ ಮನುಕ್‍ಲಾಲಿ, ಕಶ್ಯಾಕ್ ಮಟ್ಲ್ಯಾರ್, ತೆನಿ ಭಿಂಯಾವಲ್ಲ್ಯಾನಿ, ತಸೆ ಮನುನ್ ಜೆಜು ಢೊನಿತ್ ಚಡ್ಲೊ, ಅನಿ ಜಾವ್ಕಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:37
16 ತಿಳಿವುಗಳ ಹೋಲಿಕೆ  

ಮತ್ತು ಅವರ ಬಳಿಗೆ ಹೋಗಿ ವಿನಯವಾಗಿ ಮಾತಾಡಿ ಹೊರಕ್ಕೆ ಕರೆದುಕೊಂಡು ಬಂದು - ನೀವು ಊರನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.


ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ; ನಿಮ್ಮನ್ನು ಅಲಕ್ಷ್ಯಮಾಡುವವನು ನನ್ನನ್ನು ಅಲಕ್ಷ್ಯಮಾಡುವವನಾಗಿದ್ದಾನೆ; ನನ್ನನ್ನು ಅಲಕ್ಷ್ಯಮಾಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಅಲಕ್ಷ್ಯಮಾಡುವವನಾಗಿದ್ದಾನೆ ಅಂದನು.


ಆಗ ಅವರೆಲ್ಲರು ಬೇರೆ ಹಳ್ಳಿಗೆ ಹೋದರು.


ಮತ್ತು ಯಾವ ಊರಿನವರಾದರೂ ನಿಮ್ಮನ್ನು ಸೇರಿಸಿಕೊಳ್ಳದೆ ಹೋದರೆ ಆ ಊರನ್ನು ನೀವು ಬಿಟ್ಟು ಹೊರಡುವಾಗ ನಿಮ್ಮ ಕಾಲಿಗೆ ಹತ್ತಿದ ಧೂಳನ್ನು ಝಾಡಿಸಿ ಬಿಡಿರಿ; ಅದು ಅವರಿಗೆ ವಿರೋಧವಾಗಿ ಸಾಕ್ಷಿಯಾಗಿರಲಿ ಅಂದನು.


ಇವನು ಯೇಸುವನ್ನು ಕಂಡು ಆರ್ಭಟಿಸಿ ಆತನ ಮುಂದೆ ಬಿದ್ದು ಮಹಾಶಬ್ದದಿಂದ - ಯೇಸುವೇ, ಪರಾತ್ಪರನಾದ ದೇವರ ಮಗನೇ, ನನ್ನ ಗೊಡವೆ ನಿನಗೇಕೆ? ನನ್ನನ್ನು ಕಾಡಬೇಡವೆಂತ ನಿನ್ನನ್ನು ಬೇಡಿಕೊಳ್ಳುತ್ತೇನೆ ಅಂದನು.


ಸೀಮೋನ್ ಪೇತ್ರನು ಇದನ್ನು ಕಂಡು ಯೇಸುವಿನ ಮೊಣಕಾಲಿಗೆ ಬಿದ್ದು - ಸ್ವಾಮೀ, ನಾನು ಪಾಪಾತ್ಮನು; ನನ್ನನ್ನು ಬಿಟ್ಟುಹೋಗಬೇಕು ಅಂದನು.


ಅವರು ತಮ್ಮ ಸೀಮೆಯನ್ನು ಬಿಟ್ಟು ಹೋಗಬೇಕೆಂದು ಯೇಸುವನ್ನು ಬೇಡಿಕೊಂಡರು.


ಊರಿನವರೆಲ್ಲರೂ ಯೇಸುವಿನೆದುರಿಗೆ ಹೊರಟುಬಂದು ಆತನನ್ನು ಕಂಡು ತಮ್ಮ ಸೀಮೆಯನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.


ಆಗ ಆ ಸ್ತ್ರೀಯು ಎಲೀಯನಿಗೆ - ದೇವರ ಮನುಷ್ಯನೇ, ನನ್ನ ಗೊಡವೆ ನಿನಗೇಕೆ? ನೀನು ನನ್ನ ಪಾಪವನ್ನು [ದೇವರ] ನೆನಪಿಗೆ ತಂದು ನನ್ನ ಮಗನನ್ನು ಸಾಯಿಸುವದಕ್ಕೆ ಬಂದಿಯೋ ಎನ್ನಲು ಅವನು ಆಕೆಗೆ -


ಅಗಮ್ಯದೇವರಾದ ಯೆಹೋವನ ಮುಂದೆ ಯಾರು ನಿಂತಾರು? ಇನ್ನು ಮೇಲೆ ಈತನು ಹೋಗತಕ್ಕ ಸ್ಥಳವಾವದು ಎಂದು ಮಾತಾಡಿಕೊಂಡು


ಆದರೂ ಈ ಘೋರವಾದ ಅಗ್ನಿಜ್ವಾಲೆಯು ನಮ್ಮನ್ನು ದಹಿಸಿಬಿಟ್ಟೀತು, ಮತ್ತು ನಮ್ಮ ದೇವರಾದ ಯೆಹೋವನ ಸ್ವರವನ್ನು ನಾವು ತಿರಿಗಿ ಕೇಳಿದರೆ ಸತ್ತೇವು.


ನಡೆದ ಸಂಗತಿಯನ್ನು ನೋಡಿದ್ದವರು ಆ ದೆವ್ವಹಿಡಿದಿದ್ದವನಿಗೆ ಬಿಡುಗಡೆಯಾದ ರೀತಿಯನ್ನು ಅವರಿಗೆ ತಿಳಿಸಲು


ಆತನು ದೋಣಿಯನ್ನು ಹತ್ತಿ ಹಿಂತಿರುಗಿ ಹೋದನು. ಹೊರಡುವಾಗ ದೆವ್ವಗಳಿಂದ ಬಿಡುಗಡೆಯಾದ ಆ ಮನುಷ್ಯನು - ನಾನು ನಿನ್ನ ಬಳಿಯಲ್ಲಿಯೇ ಇರುತ್ತೇನೆ ಎಂದು ಆತನನ್ನು ಬೇಡಿಕೊಂಡಾಗ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು