Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 8:41 - ಕನ್ನಡ ಸತ್ಯವೇದವು J.V. (BSI)

41-42 ಆಗ ಸಭಾಮಂದಿರದ ಅಧಿಕಾರಿಯಾದ ಯಾಯೀರನೆಂಬ ಒಬ್ಬ ಮನುಷ್ಯನು ಬಂದು ಯೇಸುವಿನ ಪಾದಗಳಿಗೆ ಬಿದ್ದನು. ಹೆಚ್ಚು ಕಡಿಮೆ ಹನ್ನೆರಡು ವರುಷದವಳಾದ ಅವನ ಒಬ್ಬಳೇ ಮಗಳು ಸಾಯುವವಳಾಗಿದ್ದ ಕಾರಣ ಆತನನ್ನು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು. ಆತನು ಹೋಗುತ್ತಿರುವಲ್ಲಿ ಜನರು ಗುಂಪುಗುಂಪಾಗಿ ಆತನನ್ನು ಇರಿಕಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41-42 ಆಗ ಸಭಾಮಂದಿರದ ಅಧಿಕಾರಿಯಾದ ಯಾಯೀರನೆಂಬ ಒಬ್ಬ ಮನುಷ್ಯನು ಬಂದು ಯೇಸುವಿನ ಪಾದಗಳಿಗೆ ಅಡ್ಡಬಿದ್ದನು. ಏಕೆಂದರೆ ಹೆಚ್ಚುಕಡಿಮೆ ಹನ್ನೆರಡು ವರ್ಷದವಳಾದ ಅವನ ಒಬ್ಬಳೇ ಮಗಳು ಸಾಯುವ ಸ್ಥಿತಿಯಲ್ಲಿದ್ದ ಕಾರಣ ಆತನನ್ನು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು. ಯೇಸು ಹೋಗುತ್ತಿರುವಲ್ಲಿ ಜನಸಮೂಹವು ಸುತ್ತಲಿನಿಂದಲೂ ಆತನನ್ನು ನೂಕಾಡುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಅಷ್ಟರಲ್ಲಿ ಪ್ರಾರ್ಥನಾಮಂದಿರದ ಅಧಿಕಾರಿ ಯಾಯೀರನೆಂಬವನು ಅಲ್ಲಿಗೆ ಬಂದು, ಯೇಸುವಿನ ಪಾದಕ್ಕೆರಗಿ, ತನ್ನ ಮನೆಗೆ ಬರಬೇಕೆಂದು ವಿನಂತಿಸಿದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ಯಾಯಿರನೆಂಬ ಒಬ್ಬ ಮನುಷ್ಯನು ಯೇಸುವಿನ ಬಳಿಗೆ ಬಂದನು. ಅವನು ಸಭಾಮಂದಿರದ ಅಧಿಕಾರಿಯಾಗಿದ್ದನು. ಅವನು ಯೇಸುವಿನ ಪಾದಗಳಿಗೆ ಅಡ್ಡಬಿದ್ದು ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಆಗ ಸಭಾಮಂದಿರದ ಅಧಿಕಾರಿಯಾಗಿದ್ದ, ಯಾಯೀರನೆಂಬವನು ಬಂದು ಯೇಸುವಿನ ಪಾದಗಳ ಮುಂದೆ ಅಡ್ಡಬಿದ್ದು, ತನ್ನ ಮನೆಗೆ ಬರಬೇಕೆಂದು ಬೇಡಿಕೊಂಡನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

41 ತನ್ನಾ ಜಾಯಿರ್ ಮನ್ತಲೊ ಎಕ್ ಮಾನುಸ್ ಯೆಲೊ, ತೊ ಥೈತ್ಲ್ಯಾ ಸಿನಾಗೊಗಾಚೊ ಅದಿಕಾರಿ ಹೊವ್ನ್ ಹೊತ್ತೊ; ತೊ ಎಗ್ದಮ್ ಜೆಜುಚ್ಯಾ ಪಾಂಯಾತ್ ಪಡ್ಲೊ, ಅನಿ ಜೆಜುಕ್ ಅಪ್ನಾಚ್ಯಾ ಘರಾಕ್ಡೆ ಯೆ, ಮನುನ್ ಮಾಗುಕ್‍ಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 8:41
15 ತಿಳಿವುಗಳ ಹೋಲಿಕೆ  

ಸಭಾಮಂದಿರದ ಅಧ್ಯಕ್ಷನಾದ ಕ್ರಿಸ್ಪನು ತನ್ನ ಮನೆಯವರೆಲ್ಲರ ಸಹಿತ ಕರ್ತನಲ್ಲಿ ನಂಬಿಕೆಯಿಟ್ಟನು. ಮತ್ತು ಕೊರಿಂಥದವರಲ್ಲಿ ಅನೇಕರು ಕೇಳಿ ನಂಬಿ ದೀಕ್ಷಾಸ್ನಾನ ಮಾಡಿಸಿಕೊಂಡರು.


ಧರ್ಮಶಾಸ್ತ್ರವು ಪ್ರವಾದಿಗಳ ಗ್ರಂಥವು ಇವುಗಳ ಪಾರಾಯಣವಾದ ಮೇಲೆ ಸಭಾಮಂದಿರದ ಯಜಮಾನರು - ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿ ಮಾತೇನಾದರೂ ನಿಮಗಿದ್ದರೆ ಹೇಳಿರಿ ಎಂದು ಅವರಿಗೆ ಹೇಳಿ ಕಳುಹಿಸಿದರು.


ಆದರೆ ಆ ಸಭಾಮಂದಿರದ ಅಧಿಕಾರಿಯು ನಡೆದ ಸಂಗತಿಯನ್ನು ನೋಡಿ ಸಬ್ಬತ್‍ದಿನದಲ್ಲಿ ಯೇಸು ಸ್ವಸ್ಥಮಾಡಿದನಲ್ಲಾ ಎಂದು ರೋಷಗೊಂಡು ಜನರಿಗೆ - ಕೆಲಸಮಾಡುವದಕ್ಕೆ ಆರು ದಿವಸಗಳು ಅವೆಯಷ್ಟೆ; ಆ ದಿವಸಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ, ಸಬ್ಬತ್‍ದಿನದಲ್ಲಿ ಮಾತ್ರ ಬೇಡ ಎಂದು ಹೇಳಿದನು.


ಆತನು ಇನ್ನೂ ಮಾತಾಡುತ್ತಿರುವಲ್ಲಿ ಸಭಾಮಂದಿರದ ಅಧಿಕಾರಿಯ ಕಡೆಯವನೊಬ್ಬನು ಬಂದು - ನಿನ್ನ ಮಗಳು ಸತ್ತಳು; ಗುರುವಿಗೆ ತೊಂದರೆ ಕೊಡಬೇಡ ಅಂದನು.


ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತುನಾಲ್ಕು ಮಂದಿ ಹಿರಿಯರೂ ಯಜ್ಞದ ಕುರಿಯಾದಾತನ ಪಾದಕ್ಕೆ ಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ, ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು.


ಆಗ ಜನರೆಲ್ಲರು ಸಭಾಮಂದಿರದ ಅಧ್ಯಕ್ಷನಾದ ಸೋಸ್ಥೆನನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆಯೇ ಹೊಡೆದರು. ಗಲ್ಲಿಯೋನನು ಅವುಗಳಲ್ಲಿ ಒಂದನ್ನೂ ಲಕ್ಷ್ಯಕ್ಕೆ ತರಲಿಲ್ಲ.


ಯೊಪ್ಪಕ್ಕೆ ಲುದ್ದವು ಹತ್ತಿರವಾಗಿರಲಾಗಿ ಪೇತ್ರನು ಅಲ್ಲಿ ಇದ್ದಾನೆಂದು ಶಿಷ್ಯರು ಕೇಳಿ ಇಬ್ಬರು ಮನುಷ್ಯರನ್ನು ಅವನ ಬಳಿಗೆ ಕಳುಹಿಸಿ - ತಡಮಾಡದೆ ನಮ್ಮ ತನಕ ಬರಬೇಕೆಂದು ಬೇಡಿಕೊಂಡರು.


ಯೇಸುವಿನ ಪಾದಗಳಿಗೆ ಅಡ್ಡ ಬಿದ್ದು ಆತನಿಗೆ ಉಪಕಾರಸ್ತುತಿಮಾಡಿದನು. ಅವನು ಸಮಾರ್ಯದವನು.


ಸೀಮೋನ್ ಪೇತ್ರನು ಇದನ್ನು ಕಂಡು ಯೇಸುವಿನ ಮೊಣಕಾಲಿಗೆ ಬಿದ್ದು - ಸ್ವಾಮೀ, ನಾನು ಪಾಪಾತ್ಮನು; ನನ್ನನ್ನು ಬಿಟ್ಟುಹೋಗಬೇಕು ಅಂದನು.


ಮತ್ತು ಮಾರ್ಥಳು ಯೇಸುವಿಗೆ - ಸ್ವಾಮೀ, ನೀನು ಇಲ್ಲಿ ಇರುತ್ತಿದ್ದರೆ ನನ್ನ ತಮ್ಮನು ಸಾಯುತ್ತಿರಲಿಲ್ಲ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು