Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:44 - ಕನ್ನಡ ಸತ್ಯವೇದವು J.V. (BSI)

44 ಯೇಸು ಮಾಡಿದ ಎಲ್ಲಾ ಕಾರ್ಯಗಳಿಗೆ ಎಲ್ಲರು ಆಶ್ಚರ್ಯಪಡುತ್ತಿರಲಾಗಿ ಆತನು ತನ್ನ ಶಿಷ್ಯರಿಗೆ - ನೀವಂತೂ ಈ ಮಾತುಗಳನ್ನು ನಿಮ್ಮ ಮನಸ್ಸಿನಲ್ಲಿ ಇಟ್ಟುಕೊಳ್ಳಿರಿ; ಯಾಕಂದರೆ ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

44 “ನೀವಂತೂ ಈ ಮಾತುಗಳನ್ನು ನಿಮ್ಮ ಮನಸ್ಸಿನಲ್ಲಿ ಇಟ್ಟುಕೊಳ್ಳಿರಿ, ಏಕೆಂದರೆ ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

44 “ಈ ನನ್ನ ಮಾತು ನಿಮ್ಮ ಕಿವಿಗೆ ಇಳಿಯಲಿ. ಅದೇನೆಂದರೆ: “ನರಪುತ್ರನು ಜನರ ವಶಕ್ಕೆ ಒಪ್ಪಿಸಲ್ಪಡಲಿದ್ದಾನೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

44 “ಮನುಷ್ಯಕುಮಾರನನ್ನು ಕೆಲವರ ವಶಕ್ಕೆ ಒಪ್ಪಿಸಲಾಗುವುದು. ನೀವು ಇದನ್ನು ಮರೆಯಕೂಡದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

44 “ಈ ಮಾತುಗಳನ್ನು ಆಳವಾಗಿ ಗ್ರಹಿಸಿಕೊಳ್ಳಿರಿ: ಏಕೆಂದರೆ ಮನುಷ್ಯಪುತ್ರನಾದ ನಾನು ಮನುಷ್ಯರ ಕೈವಶವಾಗುವೆನು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

44 “ಮಿಯಾ ತುಮ್ಕಾ ಸಾಂಗ್ತಲೆ ಯಾದ್ ಥವ್ನ್ ಘೆವಾ, ಮಾನ್ಸಾಚ್ಯಾ ಲೆಕಾಕ್ ಮಾನ್ಸಾಂಚ್ಯಾ ಅದಿಕಾರಾತ್ ದಿವ್ನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:44
26 ತಿಳಿವುಗಳ ಹೋಲಿಕೆ  

ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ ಭವಿಷ್ಯದ್‍ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿಸಿ ಕೊಂದಿರಿ.


ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಮಹಾಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕೃತನಾಗಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕಾಗಿದೆ ಎಂದು ಹೇಳಿದನು.


ಆದದರಿಂದ ನಾವು ಕೇಳಿದ ಸಂಗತಿಗಳಿಗೆ ತಪ್ಪಿಹೋದೇವೆಂದು ಭಯಪಟ್ಟು ಅವುಗಳಿಗೆ ಹೆಚ್ಚಾಗಿ ಲಕ್ಷ್ಯಕೊಡುವವರಾಗಿರಬೇಕು.


ಆದರೆ ಮರಿಯಳು ಆ ಮಾತುಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿಟ್ಟುಕೊಂಡು ಯೋಚಿಸುತ್ತಿದ್ದಳು.


ಅದಕ್ಕೆ ಯೇಸು - ಮೇಲಣಿಂದ ನಿನಗೆ ಕೊಡಲ್ಪಡದಿದ್ದರೆ ನನ್ನ ಮೇಲೆ ನಿನಗೆ ಯಾವ ಅಧಿಕಾರವೂ ಇರುತ್ತಿರಲಿಲ್ಲ. ಆದಕಾರಣ ನನ್ನನ್ನು ನಿನಗೆ ಒಪ್ಪಿಸಿದವನಿಗೆ ಹೆಚ್ಚಿನ ಪಾಪ ಉಂಟು ಅಂದನು.


ಆ ಕಾಲ ಬಂದಾಗ ಆತನು ನಮಗೆ ಇಂಥಿಂಥದನ್ನು ಹೇಳಿದನಲ್ಲಾ ಎಂದು ನೀವು ನೆನಪಿಗೆ ತರುವಂತೆ ನಿಮ್ಮ ಸಂಗಡ ಈ ಮಾತುಗಳನ್ನು ಆಡಿದ್ದೇನೆ. ನಾನು ನಿಮ್ಮ ಸಂಗಡ ಇದ್ದದರಿಂದ ಮೊದಲು ಇವುಗಳನ್ನು ನಿಮಗೆ ಹೇಳಲಿಲ್ಲ.


ತರುವಾಯ ಆತನು - ನಾನು ಇನ್ನೂ ನಿಮ್ಮ ಸಂಗಡ ಇದ್ದಾಗ ಇದೆಲ್ಲಾ ನಿಮಗೆ ತಿಳಿಸಲಿಲ್ಲವೇ? ನನ್ನ ವಿಷಯವಾಗಿ ಮೋಶೆಯ ಧರ್ಮಶಾಸ್ತ್ರದಲ್ಲಿಯೂ ಪ್ರವಾದಿಗಳ ಗ್ರಂಥಗಳಲ್ಲಿಯೂ ಕೀರ್ತನೆಗಳಲ್ಲಿಯೂ ಬರೆದಿರುವದೆಲ್ಲಾ ನೆರವೇರುವದು ಅಗತ್ಯವೆಂದು ನಿಮಗೆ ಹೇಳಲಿಲ್ಲವೇ ಅಂದನು.


ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಅವರಿಗೆ - ನೋಡಿರಿ, ನಾವು ಯೆರೂಸಲೇವಿುಗೆ ಹೋಗುತ್ತಾ ಇದ್ದೇವೆ; ಮತ್ತು ಮನುಷ್ಯಕುಮಾರನ ವಿಷಯದಲ್ಲಿ ಪ್ರವಾದಿಗಳು ಬರೆದದ್ದೆಲ್ಲಾ ಅವನಲ್ಲಿ ನೆರವೇರುವದು.


ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ಅಧೀನನಾಗಿದ್ದನು. ಆತನ ತಾಯಿಯು ಈ ಸಂಗತಿಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿ ಇಟ್ಟುಕೊಂಡಳು.


ಕೇಳಿದವರೆಲ್ಲರೂ - ಆಹಾ, ಈ ಕೂಸು ಎಂಥವನಾಗುವನೋ ಎಂದು ಈ ಸಂಗತಿಗಳನ್ನು ಮನಸ್ಸಿನಲ್ಲಿಟ್ಟುಕೊಂಡರು ಮತ್ತು ಕರ್ತನ ಹಸ್ತವು ಅದರ ಮೇಲೆ ಇತ್ತು.


ಯಾಕಂದರೆ ಆತನು ತನ್ನ ಶಿಷ್ಯರಿಗೆ ಉಪದೇಶಮಾಡುತ್ತಾ - ಮನುಷ್ಯಕುಮಾರನು ಜನರ ಕೈಗೆ ಒಪ್ಪಿಸಲ್ಪಡುತ್ತಾನೆ; ಅವರು ಅವನನ್ನು ಕೊಲ್ಲುವರು; ಕೊಂದ ಮೂರು ದಿನದ ಮೇಲೆ ಆತನು ಜೀವಿತನಾಗಿ ಎದ್ದು ಬರುವನೆಂದು ಹೇಳಿದನು.


ಇದಲ್ಲದೆ ಆತನು - ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ ಹಿರಿಯರಿಂದಲೂ ಮಹಾಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕೃತವಾಗಿ ಕೊಲ್ಲಲ್ಪಟ್ಟು ಮೂರು ದಿನದ ಮೇಲೆ ಜೀವಿತನಾಗಿ ಎದ್ದು ಬರಬೇಕಾಗಿದೆ ಎಂದು ಉಪದೇಶಮಾಡುವದಕ್ಕೆ ಪ್ರಾರಂಭಮಾಡಿದನು.


ಎರಡು ದಿವಸಗಳಾದ ಮೇಲೆ ಪಸ್ಕಹಬ್ಬ ಬರುತ್ತದೆಂದು ಬಲ್ಲಿರಿ; ಆಗ ಮನುಷ್ಯಕುಮಾರನನ್ನು ಶಿಲುಬೆಗೆ ಹಾಕುವದಕ್ಕೆ ಒಪ್ಪಿಸಿಕೊಡೋಣವಾಗುವದು ಎಂದು ಹೇಳಿದನು.


ಅಂದಿನಿಂದ ಯೇಸು ಕ್ರಿಸ್ತನು ತಾನು ಯೆರೂಸಲೇವಿುಗೆ ಹೋಗಿ ಅಲ್ಲಿ ಹಿರಿಯರಿಂದಲೂ ಮಹಾಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕೆಂದು ತನ್ನ ಶಿಷ್ಯರಿಗೆ ತಿಳಿಸುವದಕ್ಕೆ ಪ್ರಾರಂಭಮಾಡಿದನು.


ಅದಕ್ಕೆ ದಾವೀದನು - ನಾನು ಬಲು ಇಕ್ಕಟ್ಟಿನಲ್ಲಿರುತ್ತೇನೆ. ಯೆಹೋವನ ಕೈಯಲ್ಲಿ ಬೀಳುತ್ತೇನೆ; ಆತನು ಕೃಪಾಪೂರ್ಣನು. ಮನುಷ್ಯರ ಕೈಯಲ್ಲಿ ಬೀಳಲೊಲ್ಲೆನು ಎಂದು ಹೇಳಿದನು.


ಯೇಸು - ಈಗ ನಂಬುತ್ತೀರೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು