Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಲೂಕ 9:51 - ಕನ್ನಡ ಸತ್ಯವೇದವು J.V. (BSI)

51 ಯೇಸು ತಾನು ಪರಲೋಕವನ್ನೇರುವ ದಿವಸಗಳು ತುಂಬುತ್ತಾ ಬರುವಾಗ ಯೆರೂಸಲೇವಿುಗೆ ಹೋಗುವದಕ್ಕೆ ಮನಸ್ಸನ್ನು ದೃಢಮಾಡಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ಯೇಸು ತಾನು ಪರಲೋಕಕ್ಕೆ ಏರಿಹೋಗುವ ದಿನಗಳು ಸಮೀಪಿಸುತ್ತಿರುವಾಗ ಯೆರೂಸಲೇಮಿಗೆ ಹೋಗುವುದಕ್ಕೆ ಮನಸ್ಸನ್ನು ದೃಢಮಾಡಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51 ತಾವು ಸ್ವರ್ಗಾರೋಹಣವಾಗುವ ದಿನಗಳು ಸಮೀಪಿಸಲು ಯೇಸುಸ್ವಾಮಿ ಜೆರುಸಲೇಮಿಗೆ ಅಭಿಮುಖವಾಗಿ ಹೊರಡಲು ನಿರ್ಧರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

51 ಯೇಸು ಮತ್ತೆ ಪರಲೋಕಕ್ಕೆ ಹಿಂತಿರುಗುವ ಸಮಯ ಹತ್ತಿರವಾಗುತ್ತಿತ್ತು. ಆದ್ದರಿಂದ ಆತನು ಜೆರುಸಲೇಮಿಗೆ ಹೋಗಲು ತೀರ್ಮಾನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

51 ಯೇಸು ತಾವು ಸ್ವರ್ಗಕ್ಕೆ ಏರಿಹೋಗುವ ಕಾಲ ಬಂದಾಗ, ಯೆರೂಸಲೇಮಿಗೆ ಹೋಗುವುದಕ್ಕಾಗಿ ತಮ್ಮ ಮನಸ್ಸನ್ನು ದೃಢಮಾಡಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

51 ಜೆಜುಕ್ ಸರ್‍ಗಾಕ್ ಘೆವ್ನ್ ಜಾತಲೊ ಎಳ್ ಜಗ್ಗೊಳ್-ಯೆವ್ನ್ಗೆತ್ ಹೊತ್ತೊ, ಜೆಜುನ್ ಅಪ್ನಾಚೆ ಮನ್ ಘಟ್ ಕರುನ್ ಘೆಟ್ಲ್ಯಾನ್, ಅನಿ ತೊ ಅಪ್ಲಿ ವಾಟ್ ಧರುನ್ ಜೆರುಜಲೆಮಾಕ್ ಜಾವ್‍ಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಲೂಕ 9:51
29 ತಿಳಿವುಗಳ ಹೋಲಿಕೆ  

ಯೇಸುಸ್ವಾವಿುಯು ಅವರ ಕೂಡ ಮಾತಾಡಿದ ಮೇಲೆ ಆಕಾಶಕ್ಕೆ ಒಯ್ಯಲ್ಪಟ್ಟು ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಕರೆದುಕೊಂಡು ಅವರಿಗೆ - ನೋಡಿರಿ, ನಾವು ಯೆರೂಸಲೇವಿುಗೆ ಹೋಗುತ್ತಾ ಇದ್ದೇವೆ; ಮತ್ತು ಮನುಷ್ಯಕುಮಾರನ ವಿಷಯದಲ್ಲಿ ಪ್ರವಾದಿಗಳು ಬರೆದದ್ದೆಲ್ಲಾ ಅವನಲ್ಲಿ ನೆರವೇರುವದು.


ಆತನು ಊರೂರಿಗೂ ಗ್ರಾಮಗ್ರಾಮಕ್ಕೂ ಹೋಗಿ ಉಪದೇಶಮಾಡುತ್ತಾ, ಯೆರೂಸಲೇವಿುಗೆ ಪ್ರಯಾಣಮಾಡುತ್ತಿದ್ದನು.


ಆತನು ಯೆರೂಸಲೇವಿುಗೆ ಪ್ರಯಾಣ ಮಾಡುವಾಗ ಸಮಾರ್ಯ ಗಲಿಲಾಯ ಸೀಮೆಗಳ ನಡುವೆ ಹಾದುಹೋದನು.


ಆತನು ಪರಲೋಕಕ್ಕೆ ಹೋಗಿ ದೇವರ ಬಲಗಡೆಯಲ್ಲಿದ್ದಾನೆ; ದೇವದೂತರೂ ಅಧಿಕಾರಿಗಳೂ ಮಹತ್ವಗಳೂ ಆತನ ಸ್ವಾಧೀನವಾಗಿವೆ.


ನಂಬಿಕೆಯನ್ನು ಹುಟ್ಟಿಸುವವನೂ ಪೂರೈಸುವವನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸ್ಥಿರಚಿತ್ತದಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅವಮಾನವನ್ನು ಅಲಕ್ಷ್ಯಮಾಡಿ ಶಿಲುಬೆಯ ಮರಣವನ್ನು ಸಹಿಸಿಕೊಂಡು ದೇವರ ಸಿಂಹಾಸನದ ಬಲಗಡೆಯಲ್ಲಿ ಆಸನಾರೂಢನಾಗಿದ್ದಾನೆ.


ಯೇಸು ಸದಾಕಾಲವೂ ಮೆಲ್ಕಿಜೆದೇಕನ ತರಹದ ಮಹಾಯಾಜಕನಾಗಿದ್ದು ನಮಗೋಸ್ಕರ ಮುಂದಾಗಿ ಹೋಗಿ ಆ ಸಾನ್ನಿಧ್ಯವನ್ನು ಪ್ರವೇಶಿಸಿದ್ದಾನೆ.


ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥವು ಗಂಭೀರವಾದದ್ದೆಂಬದಕ್ಕೆ ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ; ಅದೇನಂದರೆ - ಆತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು; ಆತ್ಮ ಸಂಬಂಧವಾಗಿ ಆತನೇ ಎಂದು ಸ್ಥಾಪಿಸಲ್ಪಟ್ಟನು; ದೇವದೂತರಿಗೆ ಕಾಣಿಸಿಕೊಂಡನು; ಅನ್ಯಜನರಲ್ಲಿ ಪ್ರಸಿದ್ಧಿ ಮಾಡಲ್ಪಟ್ಟನು; ಲೋಕದಲ್ಲಿ ನಂಬಲ್ಪಟ್ಟನು; ಪ್ರಭಾವಸ್ಥಾನದಲ್ಲಿ ಸೇರಿಸಲ್ಪಟ್ಟನು.


ಆತನ ಬಲಾತಿಶಯವು ಎಷ್ಟು ಮಹತ್ತಾದದ್ದೆಂಬದು ಕ್ರಿಸ್ತನಲ್ಲಿ ತೋರಿಬಂದಿದೆ. ಹೇಗಂದರೆ ಆತನು ಸತ್ತಿದ್ದ ಕ್ರಿಸ್ತನನ್ನು ಬದುಕಿಸಿ


ಈ ಮಾತುಗಳನ್ನು ಹೇಳಿದ ಬಳಿಕ ಅವರು ನೋಡುತ್ತಾ ಇದ್ದ ಹಾಗೆ ಆತನು ಏರಿಸಲ್ಪಟ್ಟನು; ಮೋಡವು ಆತನನ್ನು ಕವಿದುಕೊಂಡದ್ದರಿಂದ ಅವರ ಕಣ್ಣಿಗೆ ಮರೆಯಾದನು.


ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಪವಿತ್ರಾತ್ಮನ ಮೂಲಕ ಆಜ್ಞೆಕೊಟ್ಟು ಮೇಲಣ ಲೋಕವನ್ನೇರಿದ ದಿನದವರೆಗೆ ವಿವರಿಸಿದೆನಷ್ಟೆ.


ಇನ್ನು ನಾನು ಲೋಕದಲ್ಲಿ ಇರುವದಿಲ್ಲ, ಇವರು ಲೋಕದಲ್ಲಿ ಇರುತ್ತಾರೆ, ನಾನು ನಿನ್ನ ಬಳಿಗೆ ಬರುತ್ತೇನೆ. ಪವಿತ್ರನಾದ ತಂದೆಯೇ, ನಾವು ಒಂದಾಗಿರುವ ಹಾಗೆ ಇವರೂ ಒಂದಾಗಿರಬೇಕೆಂದು ನೀನು ನನಗೆ ಕೊಟ್ಟ ನಿನ್ನ ಹೆಸರಿನಲ್ಲಿ ಇವರನ್ನು ಕಾಯಬೇಕು.


ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ; ಇನ್ನು ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ ಅಂದನು.


ಆದರೆ ಈಗ ನಾನು ನನ್ನನ್ನು ಕಳುಹಿಸಿಕೊಟ್ಟಾತನ ಬಳಿಗೆ ಹೋಗುತ್ತೇನೆ. ನೀನು ಎಲ್ಲಿಗೆ ಹೋಗುತ್ತೀ ಎಂದು ನಿಮ್ಮಲ್ಲಿ ಒಬ್ಬನಾದರೂ ನನ್ನನ್ನು ಕೇಳುವದಿಲ್ಲ;


ಪಸ್ಕಹಬ್ಬದ ಮುಂದೆ ಯೇಸು ತಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗಬೇಕಾದ ಕಾಲ ಬಂತೆಂದು ತಿಳುಕೊಂಡು ಲೋಕದಲ್ಲಿರುವ ತನ್ನವರನ್ನು ಪ್ರೀತಿಸಿ ಪರಿಪೂರ್ಣವಾಗಿ ಅವರನ್ನು ಪ್ರೀತಿಸುತ್ತಾ ಬಂದನು.


ಹಾಗಾದರೆ ಮನುಷ್ಯಕುಮಾರನು ತಾನು ಮೊದಲು ಇದ್ದಲ್ಲಿಗೆ ಏರಿಹೋಗುವದನ್ನು ನೀವು ನೋಡಿದರೆ ಏನನ್ನುವಿರಿ?


ಆಶೀರ್ವದಿಸುತ್ತಿರುವಾಗ ಆತನು ಅವರನ್ನು ಬಿಟ್ಟು [ಪರಲೋಕಕ್ಕೆ ಒಯ್ಯಲ್ಪಟ್ಟನು].


ಆತನು ಈ ಮಾತುಗಳನ್ನು ಹೇಳಿದ ಮೇಲೆ ಗಟ್ಟಾ ಹತ್ತಿ ಯೆರೂಸಲೇವಿುಗೆ ಮುಂದೆ ಮುಂದೆ ಹೋದನು.


ಅವರು ಈ ಮಾತುಗಳನ್ನು ಕೇಳುತ್ತಿರಲಾಗಿ ಯೇಸು ತಾನು ಯೆರೂಸಲೇವಿುಗೆ ಸಮೀಪವಾಗಿದ್ದದರಿಂದಲೂ ದೇವರ ರಾಜ್ಯವು ಕೂಡಲೆ ಪ್ರತ್ಯಕ್ಷವಾಗುವ ಹಾಗಿದೆ ಎಂದು ಅವರು ಭಾವಿಸಿದ್ದದರಿಂದಲೂ ಇನ್ನೂ ಒಂದು ಸಾಮ್ಯವನ್ನು ಹೇಳಿದನು.


ಆದರೆ ನಾನು ಹೊಂದತಕ್ಕ ದೀಕ್ಷಾಸ್ನಾನ ಒಂದುಂಟು. ಅದು ನೆರವೇರುವ ತನಕ ನಾನು ಎಷ್ಟೋ ಬಿಕ್ಕಟ್ಟಿನಲ್ಲಿದ್ದೇನೆ.


ಅವರು ಮಾತಾಡುತ್ತಾ ಮುಂದೆ ಹೋಗುತ್ತಿರುವಾಗ ಫಕ್ಕನೆ ಅಗ್ನಿಮಯವಾದ ರಥರಥಾಶ್ವಗಳು ನಡುವೆ ಬಂದು ಅವರನ್ನು ವಿಂಗಡಿಸಿದವು. ಎಲೀಯನು ಸುಳಿಗಾಳಿಯ ಮುಖಾಂತರವಾಗಿ ಪರಲೋಕಕ್ಕೆ ಹೋದನು.


ದೇವರು ಕ್ರಿಸ್ತನ ಮೂಲಕವಾಗಿ ನಮ್ಮನ್ನು ಮೇಲಕ್ಕೆ ಕರೆದು ನಮ್ಮ ಮುಂದೆ ಇಟ್ಟಿರುವ ಬಿರುದನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ.


ಅವರು ದಾರಿಯಲ್ಲಿ ಹೋಗುತ್ತಿರುವಾಗ ಯಾವನೋ ಒಬ್ಬನು ಯೇಸುವಿಗೆ - ನೀನು ಎಲ್ಲಿಗೆ ಹೋದರೂ ನಾನು ನಿನ್ನ ಹಿಂದೆ ಬರುತ್ತೇನೆ ಎಂದು ಹೇಳಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು