Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 10:15 - ಕನ್ನಡ ಸತ್ಯವೇದವು J.V. (BSI)

15 ಅವು ಭೂವಿುಯನ್ನೆಲ್ಲಾ ಮುಚ್ಚಿಕೊಂಡದ್ದರಿಂದ ನೆಲವು ಕಾಣದೆಹೋಯಿತು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿದ್ದ ಎಲ್ಲಾ ಪೈರುಗಳನ್ನೂ ಮರಗಳಲ್ಲಿದ್ದ ಎಲ್ಲಾ ಕಾಯಿಗಳನ್ನೂ ತಿಂದುಬಿಟ್ಟವು. ಐಗುಪ್ತ ದೇಶದಲ್ಲೆಲ್ಲಾ ಮರಗಳಲ್ಲಾಗಲಿ ಅಡವಿಯ ಗಿಡಗಳಲ್ಲಾಗಲಿ ಹಸುರಾದದ್ದು ಒಂದೂ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅವು ಭೂಮಿಯನ್ನೆಲ್ಲಾ ಮುಚ್ಚಿಕೊಂಡಿದ್ದರಿಂದ ನೆಲವು ಕಾಣದೇ ಹೋಯಿತು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿದ್ದ ಎಲ್ಲಾ ಪೈರುಗಳನ್ನೂ, ಮರಗಳಲ್ಲಿದ್ದ ಎಲ್ಲಾ ಕಾಯಿಗಳನ್ನೂ ಅವು ತಿಂದುಬಿಟ್ಟವು. ಐಗುಪ್ತ ದೇಶದಲ್ಲೆಲ್ಲಾ ಮರಗಳಲ್ಲಾಗಲಿ, ಹೊಲದ ಗಿಡಗಳಲ್ಲಾಗಲಿ ಹಸುರಾದದ್ದು ಒಂದೂ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ನೆಲವೆಲ್ಲ ಕರ್ರಗೆ ಕಾಣಿಸುವಷ್ಟು ಅವು ಭೂಮಿಯನ್ನೆಲ್ಲಾ ಆವರಿಸಿಕೊಂಡವು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿದ್ದ ಪಚ್ಚೆ ಪೈರುಗಳನ್ನೂ ಗಿಡಮರ ಕಾಯಿಗಳನ್ನೂ ತಿಂದುಬಿಟ್ಟವು. ಈಜಿಪ್ಟ್ ದೇಶದಲ್ಲೆಲ್ಲಾ ಹಸುರಾದ ಗಿಡಮರಗಳೊಂದೂ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಮಿಡತೆಗಳು ನೆಲವನ್ನು ಮುಚ್ಚಿಕೊಂಡವು; ಇದರಿಂದಾಗಿ ನೆಲವು ಕಾಣದಂತಾಯಿತು. ಆಲಿಕಲ್ಲಿನ ಮಳೆಗೆ ನಾಶವಾಗದೆ ಉಳಿದಿದ್ದ ಎಲ್ಲಾ ಪೈರುಗಳನ್ನೂ ಮರಗಳಲ್ಲಿದ್ದ ಕಾಯಿಗಳನ್ನೂ ಅವು ತಿಂದುಬಿಟ್ಟವು. ಈಜಿಪ್ಟಿನಲ್ಲೆಲ್ಲಾ ಮರಗಳಲ್ಲಾಗಲಿ ಗಿಡಗಳಲ್ಲಾಗಲಿ ಹಸುರಾಗಿದ್ದ ಒಂದಾದರೂ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಏಕೆಂದರೆ ಅವು ಭೂಮಿಯನ್ನೆಲ್ಲಾ ಮುತ್ತಿಕೊಂಡದ್ದರಿಂದ, ಆ ದೇಶದಲ್ಲಿ ಕತ್ತಲಾಯಿತು. ಅವು ಭೂಮಿಯ ಎಲ್ಲಾ ಸೊಪ್ಪನ್ನೂ, ಆಲಿಕಲ್ಲಿನ ಮಳೆಯು ಉಳಿಸಿದ ಎಲ್ಲಾ ಫಲವನ್ನೂ ತಿಂದುಬಿಟ್ಟವು. ಮರಗಳಲ್ಲಾಗಲಿ, ಹೊಲದ ಗಿಡಗಳಲ್ಲಾಗಲಿ ಹಸುರಾದದ್ದು ಈಜಿಪ್ಟ್ ದೇಶದಲ್ಲೆಲ್ಲಿಯೂ ಉಳಿಯಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 10:15
11 ತಿಳಿವುಗಳ ಹೋಲಿಕೆ  

ಅವು ಭೂವಿುಯನ್ನೆಲ್ಲಾ ಮುಚ್ಚಿಕೊಳ್ಳುವವು; ನೆಲವೇ ಕಾಣಿಸದೆ ಹೋಗುವದು. ಆನೆಕಲ್ಲಿನ ಮಳೆಯಿಂದ ನಾಶವಾಗದೆ ಉಳಿದದ್ದೆಲ್ಲವನ್ನು ವಿುಡಿತೆಗಳು ತಿಂದುಬಿಡುವವು; ಹೊಲದಲ್ಲಿರುವ ನಿಮ್ಮ ಎಲ್ಲಾ ಮರಗಳ ಎಲೆಚಿಗುರುಗಳನ್ನೂ ತಿಂದು ಬಿಡುವವು.


ಗುಂಪುವಿುಡತೆ, ಸಣ್ಣವಿುಡತೆ, ದೊಡ್ಡವಿುಡತೆ, ಚೂರಿವಿುಡತೆ, ಅಂತು ನಾನು ನಿಮ್ಮ ಮೇಲೆ ಕಳುಹಿಸಿದ ನನ್ನ ದೊಡ್ಡ ದಂಡು ತಿಂದುಬಿಟ್ಟ ವರುಷಗಳನ್ನು ನಾನು ನಿಮಗೆ ಕಟ್ಟಿಕೊಡುವೆನು.


ಅವರ ಬೆಳೆಗಳನ್ನು ಜಿಟ್ಟೆಹುಳಗಳಿಗೂ ಕಷ್ಟಫಲವನ್ನು ವಿುಡಿತೆಗಳಿಗೂ ಕೊಟ್ಟುಬಿಟ್ಟನು.


ಆಗ ಯೆಹೋವನು ಮೋಶೆಗೆ - ಐಗುಪ್ತದೇಶದ ಮೇಲೆ ನಿನ್ನ ಕೈಚಾಚಿ ವಿುಡಿತೆಗಳನ್ನು ಬರಮಾಡು; ಕಲ್ಲಿನ ಮಳೆಯಿಂದ ನಾಶವಾಗದೆ ಉಳಿದಿರುವ ಪೈರುಗಳನ್ನೆಲ್ಲಾ ವಿುಡಿತೆಗಳು ತಿಂದುಬಿಡಲಿ ಎಂದು ಹೇಳಿದನು.


ಅವು ದೇಶದ ಪೈರುಪಚ್ಚೆಯನ್ನೆಲ್ಲಾ ತಿಂದುಬಿಟ್ಟ ಮೇಲೆ ನಾನು - ಕರ್ತನಾದ ಯೆಹೋವನೇ, ಲಾಲಿಸು, ಕ್ಷವಿುಸು; ಯಾಕೋಬು ಹೇಗೆ ನಿಂತೀತು, ಅದು ಚಿಕ್ಕ ಜನಾಂಗ ಎಂದು ವಿಜ್ಞಾಪಿಸಲು


ಅವನು ಬೆಯೋರನ ಮಗನಾದ ಬಿಳಾಮನನ್ನು ಕರಿಸುವದಕ್ಕೆ ಸ್ವಜನರ ದೇಶಕ್ಕೆ ಯೂಫ್ರೇಟೀಸ್ ನದಿಯ ತೀರದಲ್ಲಿರುವ ಪೆತೋರೂರಿಗೆ ದೂತರನ್ನು ಕಳುಹಿಸಿ ಅವನಿಗೆ - ಚಿತ್ತೈಸಬೇಕು; ಒಂದು ಜನಾಂಗವು ಐಗುಪ್ತದೇಶದಿಂದ ಬಂದಿದೆ; ಅವರು ನೆಲವನ್ನೆಲ್ಲಾ ಮುಚ್ಚಿಕೊಂಡು ನನಗೆದುರಾಗಿ ಇಳಿದಿದ್ದಾರೆ; ಅವರು ನಮಗಿಂತ ಬಲಿಷ್ಠರು.


ವಿುಡತೆಗಳಿಗೆ ಅರಸನಿಲ್ಲ, ಆದರೂ ಅವೆಲ್ಲಾ ದಂಡುದಂಡಾಗಿ ಹೊರಡುವವು.


ಚೂರಿವಿುಡತೆ ತಿಂದು ವಿುಕ್ಕದ್ದನ್ನು ಗುಂಪುವಿುಡತೆ ತಿಂದುಬಿಟ್ಟಿತು; ಗುಂಪುವಿುಡತೆ ತಿಂದು ವಿುಕ್ಕದ್ದನ್ನು ಸಣ್ಣವಿುಡತೆ ತಿಂದುಬಿಟ್ಟಿತು; ಸಣ್ಣವಿುಡತೆ ತಿಂದು ವಿುಕ್ಕದ್ದನ್ನು ದೊಡ್ಡವಿುಡತೆ ತಿಂದುಬಿಟ್ಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು