ವಿಮೋಚನಕಾಂಡ 10:21 - ಕನ್ನಡ ಸತ್ಯವೇದವು J.V. (BSI)21 ತರುವಾಯ ಯೆಹೋವನು ಮೋಶೆಗೆ - ಆಕಾಶಕ್ಕೆ ನಿನ್ನ ಕೈ ಚಾಚು; ಆಗ ಐಗುಪ್ತದೇಶದಲ್ಲೆಲ್ಲಾ ಕತ್ತಲುಂಟಾಗುವದು; ಆ ಕತ್ತಲಿನಿಂದ ಜನರು ತಡವರಿಸುತ್ತಾ ನಡೆಯುವರೆಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ತರುವಾಯ ಯೆಹೋವನು ಮೋಶೆಗೆ, “ಆಕಾಶಕ್ಕೆ ನಿನ್ನ ಕೈಯನ್ನು ಚಾಚು. ಆಗ ಐಗುಪ್ತ ದೇಶದಲ್ಲೆಲ್ಲಾ ಕತ್ತಲು ಉಂಟಾಗುವುದು. ಆ ಕತ್ತಲೆಯಿಂದಾಗಿ ಜನರು ತಡವರಿಸುತ್ತಾ ನಡೆಯುವರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆ ಬಳಿಕ ಸರ್ವೇಶ್ವರ ಮೋಶೆಗೆ, “ಆಕಾಶದತ್ತ ನಿನ್ನ ಕೈಚಾಚು. ಆಗ ಈಜಿಪ್ಟ್ ದೇಶದಲ್ಲೆಲ್ಲಾ ಕತ್ತಲೆಯುಂಟಾಗುವುದು. ಜನರು ತಡವರಿಸಿ ನಡೆಯಬೇಕಾಗುವಷ್ಟು ಕತ್ತಲೆ ಉಂಟಾಗುವುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಬಳಿಕ ಯೆಹೋವನು ಮೋಶೆಗೆ, “ನಿನ್ನ ಕೈಯನ್ನು ಆಕಾಶದ ಕಡೆಗೆ ಚಾಚು. ಆಗ ಕಾರ್ಗತ್ತಲೆಯು ಈಜಿಪ್ಟನ್ನು ಆವರಿಸುವುದು. ಆ ಕಾರ್ಗತ್ತಲೆಯಿಂದ ಜನರು ತಡವರಿಸುತ್ತಾ ನಡೆಯುವರು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆಗ ಯೆಹೋವ ದೇವರು ಮೋಶೆಗೆ, “ಈಜಿಪ್ಟ್ ದೇಶದಲ್ಲಿ ಕತ್ತಲೆ ಕವಿದು ಗಾಡಾಂಧಕಾರವಾಗುವಂತೆ ನಿನ್ನ ಕೈಯನ್ನು ಆಕಾಶದ ಕಡೆಗೆ ಚಾಚು,” ಎಂದರು. ಅಧ್ಯಾಯವನ್ನು ನೋಡಿ |
ಯೆಹೋವನು ಮೋಶೆಯ ಸಂಗಡ ಮಾತಾಡಿ - ನೀನು ಆರೋನನಿಗೆ - ನಿನ್ನ ಕೊಲನ್ನು ತೆಗೆದುಕೊಂಡು ಐಗುಪ್ತ ದೇಶದಲ್ಲಿರುವ ಹೊಳೆ ಕಾಲುವೆ ಕೆರೆ ಕೊಳ ಮೊದಲಾದ ನೀರಿರುವ ಎಲ್ಲಾ ಸ್ಥಳಗಳ ಮೇಲೆ ಅದನ್ನು ಚಾಚು ಎಂದು ಹೇಳಬೇಕು; ಅವನು ಚಾಚುವಾಗ ಆ ನೀರೆಲ್ಲಾ ರಕ್ತವಾಗುವದು; ಐಗುಪ್ತ ದೇಶದಲ್ಲೆಲ್ಲಾ ಮರದ ಪಾತ್ರೆಗಳಲ್ಲಿಯೂ ಕಲ್ಲಿನ ಪಾತ್ರೆಗಳಲ್ಲಿಯೂ ಇರುವ ನೀರೂ ರಕ್ತವಾಗುವದು ಅಂದನು.