Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 10:9 - ಕನ್ನಡ ಸತ್ಯವೇದವು J.V. (BSI)

9 ಮೋಶೆ ಅವನಿಗೆ - ನಾವು ಯೆಹೋವನಿಗೆ ಜಾತ್ರೆಯನ್ನು ನಡಿಸಬೇಕಾಗಿದೆ; ಆದಕಾರಣ ಹುಡುಗರು, ಮುದುಕರು ಎಲ್ಲರು ಹೋಗುತ್ತೇವೆ; ಗಂಡು ಹೆಣ್ಣು ಮಕ್ಕಳನ್ನೂ ದನಕುರಿಗಳನ್ನೂ ತೆಗೆದುಕೊಂಡು ಹೋಗುತ್ತೇವೆ ಎಂದು ಉತ್ತರ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮೋಶೆ ಅವನಿಗೆ, “ನಾವು ಯೆಹೋವನಿಗೆ ಜಾತ್ರೆಯನ್ನು ಆಚರಿಸಬೇಕಾಗಿದೆ. ಆದಕಾರಣ ಚಿಕ್ಕವರು ಮೊದಲುಗೊಂಡು, ಮುದುಕರವರೆಗೂ ಎಲ್ಲರೂ ಹೋಗುತ್ತೇವೆ; ಗಂಡು ಹೆಣ್ಣುಮಕ್ಕಳನ್ನೂ, ದನಕುರಿಗಳ ಮಂದೆಯನ್ನು ತೆಗೆದುಕೊಂಡು ಹೋಗುತ್ತೇವೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅದಕ್ಕೆ ಮೋಶೆ, “ನಾವು ಸರ್ವೇಶ್ವರ ಸ್ವಾಮಿಗಾಗಿ ಹಬ್ಬವನ್ನು ಆಚರಿಸಬೇಕಾಗಿದೆ. ಆದಕಾರಣ ಚಿಕ್ಕವರು, ಮುದುಕರು ಎಲ್ಲರು ಹೋಗುತ್ತೇವೆ; ಗಂಡುಹೆಣ್ಣು ಮಕ್ಕಳನ್ನೂ ದನಕುರಿಗಳನ್ನೂ ತೆಗೆದುಕೊಂಡು ಹೋಗುತ್ತೇವೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಮೋಶೆಯು, “ಯೌವನಸ್ಥರು, ಮುದುಕರು, ಎಲ್ಲರೂ ಹೋಗುತ್ತೇವೆ. ನಮ್ಮ ಗಂಡು ಹೆಣ್ಣುಮಕ್ಕಳನ್ನೂ ನಮ್ಮ ದನಕುರಿಗಳನ್ನೂ ತೆಗೆದುಕೊಂಡು ಹೋಗುತ್ತೇವೆ. ಯಾಕೆಂದರೆ ಇದು ಯೆಹೋವನ ಜಾತ್ರೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅದಕ್ಕೆ ಮೋಶೆಯು ಅವನಿಗೆ, “ನಮ್ಮ ಚಿಕ್ಕವರನ್ನೂ ವೃದ್ಧರನ್ನೂ ಕರೆದುಕೊಂಡು ಹೋಗುತ್ತೇವೆ. ಇದಲ್ಲದೆ ನಮ್ಮ ಪುತ್ರಪುತ್ರಿಯರನ್ನೂ ನಮ್ಮ ದನಕುರಿಗಳನ್ನೂ ತೆಗೆದುಕೊಂಡು ಹೋಗುತ್ತೇವೆ. ಏಕೆಂದರೆ ನಾವು ಯೆಹೋವ ದೇವರಿಗಾಗಿ ಹಬ್ಬವನ್ನು ಮಾಡಬೇಕು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 10:9
19 ತಿಳಿವುಗಳ ಹೋಲಿಕೆ  

ಬಳಿಕ ಮೋಶೆ ಆರೋನರು ಫರೋಹನ ಸನ್ನಿಧಿಗೆ ಹೋಗಿ - ಇಸ್ರಾಯೇಲ್ಯರ ದೇವರಾದ ಯೆಹೋವನು - ನನ್ನ ಜನರು ನನಗಾಗಿ ಅರಣ್ಯದೊಳಗೆ ಜಾತ್ರೆ ನಡಿಸುವಂತೆ ಅವರಿಗೆ ಅಪ್ಪಣೆ ಕೊಡಬೇಕೆಂದು ಹೇಳಿದ್ದಾನೆ ಅಂದರು.


ಅವರು ನಿನ್ನ ಮಾತಿಗೆ ಕಿವಿಗೊಡುವರು. ನೀನೂ ಇಸ್ರಾಯೇಲ್ಯರ ಹಿರಿಯರೂ ಐಗುಪ್ತದೇಶದ ಅರಸನ ಬಳಿಗೆ ಹೋಗಿ ಅವನಿಗೆ - ಇಬ್ರಿಯರ ದೇವರಾಗಿರುವ ಯೆಹೋವನು ನಮಗೆ ಪ್ರತ್ಯಕ್ಷನಾದನು; ಆದದರಿಂದ ನಾವು ಅರಣ್ಯದಲ್ಲಿ ಮೂರು ದಿನದ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾದ ಯೆಹೋವನಿಗೋಸ್ಕರ ಯಜ್ಞಮಾಡಬೇಕಾಗಿದೆ, ಅಪ್ಪಣೆಯಾಗಬೇಕೆಂದು ಕೇಳಿಕೊಳ್ಳಿರಿ.


ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ ಕರ್ತನಿಗೆ ಮೆಚ್ಚಿಗೆಯಾಗಿರುವ ಬಾಲಶಿಕ್ಷೆಯನ್ನೂ ಬಾಲೋಪದೇಶವನ್ನೂ ಮಾಡುತ್ತಾ ಅವರನ್ನು ಸಾಕಿ ಸಲಹಿರಿ.


ಕಷ್ಟದ ದಿನಗಳೂ ಸಂತೋಷವಿಲ್ಲವೆಂದು ನೀನು ಹೇಳುವ ವರುಷಗಳೂ ಸಮೀಪಿಸುವದರೊಳಗಾಗಿ ಯೌವನದಲ್ಲಿಯೇ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸು .


ನಿನ್ನ ಆದಾಯದಿಂದಲೂ ಬೆಳೆಯ ಪ್ರಥಮಫಲದಿಂದಲೂ ಯೆಹೋವನನ್ನು ಸನ್ಮಾನಿಸು.


ಯೆಹೋವನನ್ನು ಸೇವಿಸುವದು ನಿಮಗೆ ಸರಿಕಾಣದಿದ್ದರೆ ಯಾರನ್ನು ಸೇವಿಸಬೇಕೆಂದಿದ್ದೀರಿ? ಈ ಹೊತ್ತೇ ಆರಿಸಿಕೊಳ್ಳಿರಿ. ನಿಮ್ಮ ಪೂರ್ವಿಕರು [ಯೂಫ್ರೇಟೀಸ್] ನದಿಯ ಆಚೆಯಲ್ಲಿ ಸೇವಿಸುತ್ತಿದ್ದ ದೇವತೆಗಳೋ ಈ ದೇಶದ ಮೂಲನಿವಾಸಿಗಳಾದ ಅಮೋರಿಯರ ದೇವತೆಗಳೋ, ಹೇಳಿರಿ. ನಾನೂ ನನ್ನ ಮನೆಯವರೂ ಯೆಹೋವನನ್ನೇ ಸೇವಿಸುವೆವು ಅಂದನು.


ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ನೀವು ಅದರಲ್ಲಿ ಯಾವ ಉದ್ಯೋಗವನ್ನೂ ನಡಿಸಕೂಡದು. ಆ ದಿನ ಮೊದಲುಗೊಂಡು ಏಳು ದಿನಗಳವರೆಗೆ ಯೆಹೋವನಿಗೆ ಉತ್ಸವವನ್ನು ಆಚರಿಸಬೇಕು.


ಏಳು ದಿವಸ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು; ಏಳನೆಯ ದಿನದಲ್ಲಿ ಯೆಹೋವನ ಘನಕ್ಕಾಗಿ ಹಬ್ಬ ಮಾಡಬೇಕು.


ಅವರು ಅವನಿಗೆ - ಇಬ್ರಿಯರ ದೇವರು ನಮ್ಮನ್ನು ಎದುರುಗೊಂಡನು; ಅಪ್ಪಣೆಯಾದರೆ ನಾವು ಅರಣ್ಯದಲ್ಲಿ ಮೂರು ದಿವಸ ಪ್ರಯಾಣದಷ್ಟು ದೂರ ಹೋಗಿ ನಮ್ಮ ದೇವರಾದ ಯೆಹೋವನಿಗೋಸ್ಕರ ಯಜ್ಞ ಮಾಡಿ ಬರುವೆವು; ಮಾಡದೆ ಹೋದರೆ ಆತನು ನಮ್ಮನ್ನು ವ್ಯಾಧಿಯಿಂದಲೋ ಕತ್ತಿಯಿಂದಲೋ ಸಂಹಾರಮಾಡಾನು ಎಂದು ಹೇಳಿದರು.


ಐಗುಪ್ತದೇಶದ ಮುಖ್ಯಸ್ಥರೆಲ್ಲರೂ ಯೋಸೇಫನ ಮನೆಯವರೆಲ್ಲರೂ ಅಣ್ಣತಮ್ಮಂದಿರೂ ತಂದೆಯ ಮನೆಯವರೆಲ್ಲರೂ ಹೋದರು. ಅವರು ತಮ್ಮ ಹೆಂಡತಿ ಮಕ್ಕಳನ್ನೂ ಕುರಿದನಗಳನ್ನೂ ಮಾತ್ರ ಗೋಷೆನ್ ಸೀಮೆಯಲ್ಲಿ ಬಿಟ್ಟು ಹೋದರು.


ಅದಕ್ಕೆ ಫರೋಹನು - ನೀವು ನಿಮ್ಮ ಮನೆಯವರೆಲ್ಲರನ್ನು ಕರೆದುಕೊಂಡು ಹೋಗುವದಕ್ಕೆ ನಾನು ಎಂದಿಗೂ ಅಪ್ಪಣೆ ಕೊಡುವದಿಲ್ಲ; ನಾನು ಅಪ್ಪಣೆಕೊಟ್ಟರೆ ಯೆಹೋವನ ದಯವು ನಿಮಗುಂಟಾಗಬಹುದು, ಸರಿ. ನೋಡಿಕೊಳ್ಳಿರಿ, ನೀವು ದುರಾಲೋಚನೆ ಮಾಡಿಕೊಂಡವರು.


ಒಂದು ಗೊರಸೆಯನ್ನಾದರೂ ನಾವು ಬಿಟ್ಟು ಹೋಗುವದಕ್ಕಾಗದು; ಆ ಪಶುಗಳಿಂದಲೇ ನಮ್ಮ ದೇವರಾದ ಯೆಹೋವನಿಗೆ ಯಜ್ಞ ಮಾಡಬೇಕಲ್ಲವೇ; ಯಾವ ಪಶುಗಳನ್ನು ಅರ್ಪಿಸಬೇಕೋ ಅದು ನಾವು ಅಲ್ಲಿಗೆ ಸೇರುವದಕ್ಕೆ ಮುಂಚೆ ನಮಗೆ ತಿಳಿಯದು ಅಂದನು.


ನೀವು ಕೇಳಿಕೊಂಡಂತೆ ನಿಮ್ಮ ಕುರಿದನಗಳನ್ನೂ ತೆಗೆದುಕೊಂಡು ಹೋಗಬಹುದು; ಅದಲ್ಲದೆ ನನ್ನ ಹಿತಕ್ಕಾಗಿಯೂ ಪ್ರಾರ್ಥಿಸಿರಿ ಅಂದನು.


ಇಸ್ರಾಯೇಲ್ಯರು ರಮ್ಸೇಸ್ ಪಟ್ಟಣದಿಂದ ಹೊರಟು ಸುಕ್ಕೋತಿಗೆ ಬಂದರು. ಹೆಂಗಸರೂ ಮಕ್ಕಳೂ ಅಲ್ಲದೆ ಅವರ ಕಾಲ್ಬಲವೇ ಸುಮಾರು ಆರು ಲಕ್ಷ ಗಂಡಸರು.


ಅವರೊಂದಿಗೆ ಬಹು ಮಂದಿ ಅನ್ಯರೂ ಹೊರಟುಹೋದರು; ಕುರಿದನ ಮೊದಲಾದ ಪಶುಗಳೂ ಬಹಳವಾಗಿದ್ದವು. ಅವರು ಐಗುಪ್ತದೇಶದಿಂದ ತಂದ ಕಣಕದ ಮುದ್ದೆಯಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿ ಸುಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು