Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:15 - ಕನ್ನಡ ಸತ್ಯವೇದವು J.V. (BSI)

15 ಏಳು ದಿವಸ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನೆಲ್ಲಾ ನಿಮ್ಮ ಮನೆಗಳೊಳಗಿಂದ ತೆಗೆದುಬಿಡಬೇಕು. ಆ ದಿವಸ ಮೊದಲುಗೊಂಡು ಏಳು ದಿವಸಗಳೊಳಗೆ ಯಾವನಾದರೂ ಹುಳಿಬೆರಸಿದ್ದನ್ನು ತಿಂದರೆ ಅವನು ಇಸ್ರಾಯೇಲ್ಯರಿಂದ ತೆಗೆದು ಹಾಕಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “‘ಏಳು ದಿನಗಳವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಬಿಡಬೇಕು. ಏಕೆಂದರೆ ಮೊದಲನೆಯ ದಿನದಿಂದ ಏಳನೆಯ ದಿನದವರೆಗೆ ಹುಳಿರೊಟ್ಟಿಯನ್ನು ತಿನ್ನುವವನು ಇಸ್ರಾಯೇಲಿನೊಳಗಿಂದ ತೆಗೆದುಹಾಕಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಏಳು ದಿವಸ ನೀವು ಹುಳಿರಹಿತ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲೇ ಹುಳಿಹಿಟ್ಟನ್ನೆಲ್ಲಾ ನಿಮ್ಮ ಮನೆಗಳಿಂದ ತೆಗೆದುಬಿಡಬೇಕು. ಆ ಏಳು ದಿನಗಳಲ್ಲಿ ಯಾವನಾದರೂ ಹುಳಿಬೆರಸಿದ್ದನ್ನು ತಿಂದರೆ ಅವನನ್ನು ಇಸ್ರಯೇಲರಿಂದ ಬಹಿಷ್ಕರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಈ ಹಬ್ಬದಲ್ಲಿ ನೀವು ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿವಸ ತಿನ್ನುವಿರಿ. ಹಬ್ಬದ ಪ್ರಥಮ ದಿನದಲ್ಲಿ ನೀವು ನಿಮ್ಮ ಮನೆಯಿಂದ ಎಲ್ಲಾ ಹುಳಿಯನ್ನು ತೆಗೆದುಹಾಕುವಿರಿ. ಈ ಹಬ್ಬದ ಏಳು ದಿನಗಳಲ್ಲಿ ಯಾವುದೇ ಹುಳಿಯನ್ನು ತಿನ್ನಬಾರದು. ಯಾವನಾದರೂ ಹುಳಿಯನ್ನು ತಿಂದರೆ, ನೀವು ಅವನನ್ನು ಇಸ್ರೇಲಿನಿಂದ ಬಹಿಷ್ಕರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಏಳು ದಿನಗಳವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು. ಏಕೆಂದರೆ ಮೊದಲನೆಯ ದಿನದಿಂದ ಏಳನೆಯ ದಿನದವರೆಗೆ ಹುಳಿರೊಟ್ಟಿ ತಿನ್ನುವವರನ್ನು ಇಸ್ರಾಯೇಲಿನೊಳಗಿಂದ ಬಹಿಷ್ಕರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:15
28 ತಿಳಿವುಗಳ ಹೋಲಿಕೆ  

ಅದರೊಂದಿಗೆ ಹುಳಿಹಾಕಿದ ರೊಟ್ಟಿಯನ್ನು ತಿನ್ನಬಾರದು; ಯಾಕಂದರೆ ನೀವು [ರೊಟ್ಟಿಗೆ ಹುಳಿಹಾಕುವದಕ್ಕೆ ಅವಕಾಶವಿಲ್ಲದೆ] ಅವಸರದಿಂದ ಐಗುಪ್ತದೇಶವನ್ನು ಬಿಟ್ಟುಬಂದಿರಿ. ಐಗುಪ್ತದೇಶದಿಂದ ನಿಮಗೆ ಬಿಡುಗಡೆಯಾದ ದಿನವು ನಿಮ್ಮ ಜೀವಮಾನವೆಲ್ಲಾ ನೆನಪಿನಲ್ಲಿರುವಂತೆ ನೀವು ಕಷ್ಟವನ್ನು ಸೂಚಿಸುವ ಹುಳಿಯಿಲ್ಲದ ರೊಟ್ಟಿಗಳನ್ನು ಏಳು ದಿವಸಗಳವರೆಗೂ ತಿನ್ನಬೇಕು.


ಸುನ್ನತಿ ಮಾಡಿಸಿಕೊಳ್ಳದ ಗಂಡಸು ನನ್ನ ಒಡಂಬಡಿಕೆಯನ್ನು ಮೀರಿದವನಾದ ಕಾರಣ ಅವನು ಕುಲದಿಂದ ತೆಗೆದುಹಾಕಲ್ಪಡಬೇಕು ಎಂದು ಹೇಳಿದನು.


ಆದರೆ ಯಾವನಾದರೂ ಶುದ್ಧನಾಗಿಯೂ ಪ್ರಯಾಣಮಾಡದೆಯೂ ಇದ್ದು ಪಸ್ಕಹಬ್ಬವನ್ನು ಆಚರಿಸದೆ ತಪ್ಪಿದರೆ ಅವನು ತನ್ನ ಕುಲದಿಂದ ತೆಗೆದುಹಾಕಲ್ಪಡಬೇಕು. ಅವನು ಯೆಹೋವನಿಂದ ನೇವಿುತವಾದ ಯಜ್ಞವನ್ನು ಗೊತ್ತಾದ ಕಾಲದಲ್ಲಿ ಸಮರ್ಪಿಸದೆ ಹೋದದರಿಂದ ತನ್ನ ದೋಷಫಲವನ್ನು ಅನುಭವಿಸಬೇಕು.


ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಜಾತ್ರೆಯನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರ ಮಾಸದ ನೇಮಕವಾದ ಕಾಲದಲ್ಲಿ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ನೀವು ಚೈತ್ರ ಮಾಸದಲ್ಲಿಯೇ ಐಗುಪ್ತದೇಶದಿಂದ ಬಿಡುಗಡೆಯಾಗಿ ಬಂದಿರಲ್ಲಾ.


ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಜಾತ್ರೆ ಒಂದು. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದ ನೇಮಕವಾದ ಕಾಲದಲ್ಲಿ ಏಳು ದಿವಸವೂ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಆ ಮಾಸದಲ್ಲೇ ಐಗುಪ್ತದೇಶದಿಂದ ಹೊರಟುಬಂದಿರಲ್ಲಾ. ಒಬ್ಬನೂ ಕೈಯಲ್ಲಿ ಕಾಣಿಕೆಯಿಲ್ಲದೆ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಕೂಡದು.


ಆರು ದಿವಸ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು; ಏಳನೆಯ ದಿನದಲ್ಲಿ ನಿಮ್ಮ ದೇವರಾದ ಯೆಹೋವನ ಘನಕ್ಕಾಗಿ ಸಭೆಕೂಡಬೇಕು; ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡಿಸಕೂಡದು.


ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಜಾತ್ರೆ ಪ್ರಾರಂಭವಾಗುವದು; ಏಳು ದಿನಗಳವರೆಗೂ ಹುಳಿಯಿಲ್ಲದ ರೊಟ್ಟಿಗಳನ್ನು ಊಟಮಾಡಬೇಕು.


ನನಗೆ ಯಜ್ಞವನ್ನು ಮಾಡುವಾಗ ಆ ಯಜ್ಞಪಶುವಿನ ರಕ್ತದೊಡನೆ ಹುಳಿಹಿಟ್ಟನ್ನು ಸಮರ್ಪಿಸಕೂಡದು. ಪಸ್ಕದಲ್ಲಿ ನೀವು ಸಮರ್ಪಿಸಿದ ಯಜ್ಞಮಾಂಸವನ್ನು ಮರುದಿನದವರೆಗೂ ಉಳಿಸಬಾರದು.


ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ಭೋಜನಮಾಡಬೇಕು; ಅದನ್ನು ಬೆಂಕಿಯಲ್ಲಿ ಸುಟ್ಟು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಪಲ್ಯಗಳ ಸಂಗಡ ಊಟಮಾಡಬೇಕು.


ನಿಮ್ಮನ್ನು ಕಳವಳಪಡಿಸುವವರು ಅಂಗಚ್ಫೇದನೆಯನ್ನಾದರೂ ಮಾಡಿಕೊಂಡರೆ ವಾಸಿ.


ಇದು ಯೆಹೂದ್ಯರಿಗೆ ಮೆಚ್ಚಿಕೆಯಾಗಿದೆ ಎಂದು ನೋಡಿ ಅಷ್ಟಕ್ಕೆ ನಿಲ್ಲದೆ ಪೇತ್ರನನ್ನೂ ಹಿಡಿಸಿದನು. ಆ ಕಾಲದಲ್ಲಿ ಹುಳಿಯಿಲ್ಲದ ರೊಟ್ಟಿಯ ಹಬ್ಬ ನಡೆಯುತ್ತಿತ್ತು.


ಇಷ್ಟರಲ್ಲಿ ಸಾವಿರಾರು ಜನರು ಒಬ್ಬರನ್ನೊಬ್ಬರು ತುಳಿಯುವಷ್ಟು ಕೂಡಿಬಂದಿರಲಾಗಿ ಆತನು ಮೊದಲು ತನ್ನ ಶಿಷ್ಯರಿಗೆ ಹೇಳುವದಕ್ಕೆ ತೊಡಗಿದ್ದೇನಂದರೆ - ಫರಿಸಾಯರ ಕಪಟವೆಂಬ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರ್ರಿ.


ಆಗ ಅವರು ರೊಟ್ಟಿಯ ಹುಳಿ ಹಿಟ್ಟನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಆತನು ತಮಗೆ ಹೇಳಲಿಲ್ಲ, ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಹೇಳಿದನು ಎಂಬದಾಗಿ ತಿಳುಕೊಂಡರು.


ಇಂಥ ಕೆಲಸವನ್ನು ನಡಿಸಿದ ಪ್ರತಿಯೊಬ್ಬನ ಕುಟುಂಬದಲ್ಲಿ ಎಬ್ಬಿಸುವವರಾಗಾಲಿ ಉತ್ತರ ಕೊಡುವವರಾಗಾಲಿ ಎಲ್ಲರನ್ನೂ ಯೆಹೋವನು ಯಾಕೋಬಿನ ಗುಡಾರಗಳೊಳಗಿಂದ ನಿರ್ಮೂಲಮಾಡುವನು; ಸೇನಾಧೀಶ್ವರ ಯೆಹೋವನಿಗೆ ನೈವೇದ್ಯ ತಂದರ್ಪಿಸುವವನನ್ನೂ ಕಡಿದುಬಿಡುವನು.


ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ಯಾವ ಊರಲ್ಲಿಯಾದರೂ ಪಸ್ಕದ ಪಶುವನ್ನು ವಧಿಸದೆ


ಯಾಕಂದರೆ ಪ್ರತಿದೇಹಿಗೂ ರಕ್ತವೇ ಪ್ರಾಣಾಧಾರವು. ಆದಕಾರಣ ನಾನು ಇಸ್ರಾಯೇಲ್ಯರಿಗೆ - ಪ್ರತಿ ಪ್ರಾಣಿಗೂ ರಕ್ತವೇ ಪ್ರಾಣಾಧಾರವಾದದರಿಂದ ನೀವು ಯಾವ ವಿಧವಾದ ಪ್ರಾಣಿಯ ರಕ್ತವನ್ನೂ ಉಣ್ಣಬಾರದು; ರಕ್ತಭೋಜನ ಮಾಡಿದವನಿಗೆ ಬಹಿಷ್ಕಾರವಾಗಬೇಕೆಂದು ಆಜ್ಞಾಪಿಸಿದ್ದೇನೆ.


ಇದಲ್ಲದೆ ಇಸ್ರಾಯೇಲ್ಯರಲ್ಲಿಯಾಗಲಿ ಅವರ ನಡುವೆ ಇಳುಕೊಂಡಿರುವ ಅನ್ಯದೇಶದವರಲ್ಲಿಯಾಗಲಿ ಯಾವನಾದರೂ ರಕ್ತಭೋಜನಮಾಡಿದರೆ ನಾನು ಆತನ ಮೇಲೆ ಉಗ್ರವಾದ ಕೋಪವನ್ನು ಮಾಡಿ ಅವನನ್ನು ಕುಲದಿಂದ ತೆಗೆದುಹಾಕುವೆನು.


ಆದಕಾರಣ ನೀವು ಸಬ್ಬತ್ ದಿನವನ್ನು ದೇವರ ದಿನವೆಂದು ಭಾವಿಸಿ ಆಚರಿಸಬೇಕು. ಅದನ್ನು ಅಪರಿಶುದ್ಧವಾದದ್ದೆಂದು ಎಣಿಸಿ ನಡೆದವನಿಗೆ ಮರಣಶಿಕ್ಷೆಯಾಗಬೇಕು. ಆ ದಿನದಲ್ಲಿ ಕೆಲಸವೇನಾದರೂ ಮಾಡುವವನು ತನ್ನ ಕುಲದಿಂದ ತೆಗೆದುಹಾಕಲ್ಪಡಬೇಕು.


ಹಬ್ಬದ ದಿವಸಗಳನ್ನು ತೀರಿಸಿಕೊಂಡು ಹಿಂತಿರುಗಿ ಬರುವಾಗ ಬಾಲಕನಾದ ಯೇಸು ಯೆರೂಸಲೇವಿುನಲ್ಲಿಯೇ ಉಳುಕೊಂಡನು.


ಇದರಂತೆ ತೈಲವನ್ನು ಮಾಡುವವನಾಗಲಿ ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನಾಗಲಿ ತನ್ನ ಕುಲದಿಂದ ತೆಗೆದುಹಾಕಲ್ಪಡಬೇಕು.


ಯೆರೂಸಲೇವಿುನಲ್ಲಿ ಕೂಡಿಬಂದ ಇಸ್ರಾಯೇಲ್ಯರು ಏಳು ದಿನಗಳವರೆಗೂ ಮಹಾ ಸಂತೋಷದಿಂದ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುತ್ತಾ ಇದ್ದರು. ಲೇವಿಯರೂ ಯಾಜಕರೂ ಮಹಾವಾದ್ಯದೊಡನೆ ಯೆಹೋವನನ್ನು ಪ್ರತಿದಿನವೂ ಕೀರ್ತಿಸುತ್ತಾ ಇದ್ದರು.


ಇದಲ್ಲದೆ ಇಸ್ರಾಯೇಲ್‍ದೇವರ ಆಲಯವನ್ನು ಕಟ್ಟುವದರಲ್ಲಿ ಅಶ್ಶೂರದ ಅರಸನು ತಮಗೆ ಸಹಾಯ ಮಾಡುವಂತೆ ಯೆಹೋವನು ಅವನ ಮನಸ್ಸನ್ನು ತಿರುಗಿಸಿ ತಮಗೆ ಸಂತೋಷವನ್ನು ಉಂಟುಮಾಡಿದ್ದಾನೆ ಎಂದು ಹರ್ಷಿಸುತ್ತಾ ಏಳು ದಿವಸಗಳವರೆಗೂ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯನ್ನು ಆಚರಿಸಿದರು.


ಮೋಶೆ ಇಸ್ರಾಯೇಲ್ಯರಿಗೆ - ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದನಲ್ಲಾ. ಈ ದಿನದಲ್ಲಿ ನೀವು ಹುಳಿಬೆರೆತದ್ದನ್ನು ತಿನ್ನಕೂಡದು.


ಸುವಾಸನೆಗೋಸ್ಕರ ಅಂಥದನ್ನು ಮಾಡಿಕೊಳ್ಳುವವನು ತನ್ನ ಕುಲದಿಂದ ತೆಗೆದುಹಾಕಲ್ಪಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು