Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 12:36 - ಕನ್ನಡ ಸತ್ಯವೇದವು J.V. (BSI)

36 ಯೆಹೋವನು ಅವರ ಮೇಲೆ ಐಗುಪ್ತ್ಯರಲ್ಲಿ ದಯೆಯನ್ನು ಹುಟ್ಟಿಸಿದ್ದರಿಂದ ಅವರು ಕೇಳಿಕೊಂಡದ್ದನ್ನು ಕೊಟ್ಟರು. ಹೀಗೆ ಇಸ್ರಾಯೇಲ್ಯರು ಐಗುಪ್ತ್ಯರ ಸೊತ್ತನ್ನು ಸುಲುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಯೆಹೋವನು ಅವರ ಮೇಲೆ ಐಗುಪ್ತ್ಯರಲ್ಲಿ ದಯೆಯನ್ನು ಹುಟ್ಟಿಸಿದ್ದರಿಂದ ಅವರು ಕೇಳಿಕೊಂಡದ್ದೆಲ್ಲವನ್ನು ಐಗುಪ್ತರು ಕೊಟ್ಟರು. ಹೀಗೆ ಇಸ್ರಾಯೇಲರು ಐಗುಪ್ತ್ಯರ ಸೊತ್ತನ್ನು ಸುಲಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಇಸ್ರಯೇಲರ ಮೇಲೆ ಈಜಿಪ್ಟಿನವರಿಗೆ ದಯೆ ಹುಟ್ಟುವಂತೆ ಮಾಡಿದ್ದರು ಸರ್ವೇಶ್ವರ. ಆದ್ದರಿಂದ ಅವರು ಕೇಳಿಕೊಂಡದ್ದನ್ನು ಈಜಿಪ್ಟಿನವರು ಕೊಟ್ಟುಬಿಟ್ಟರು. ಹೀಗೆ ಇಸ್ರಯೇಲರು ಈಜಿಪ್ಟಿನವರ ಸೊತ್ತನ್ನು ಸುಲಿಗೆ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಈಜಿಪ್ಟಿನವರು ಇಸ್ರೇಲರಿಗೆ ದಯೆ ತೋರಿಸುವಂತೆ ಯೆಹೋವನು ಪ್ರೇರೇಪಿಸಿದ್ದರಿಂದ ಈಜಿಪ್ಟಿನವರು ತಮ್ಮ ಸ್ವತ್ತುಗಳನ್ನು ಇಸ್ರೇಲರಿಗೆ ಕೊಟ್ಟುಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಯೆಹೋವ ದೇವರು ಈಜಿಪ್ಟಿನವರ ಎದುರಿನಲ್ಲಿ ಜನರ ಮೇಲೆ ದಯೆ ತೋರಿಸಿದ್ದರಿಂದ, ಅವರು ಕೇಳಿದ್ದನ್ನು ಕೊಟ್ಟರು. ಹೀಗೆ ಅವರು ಈಜಿಪ್ಟಿನವರ ಸೊತ್ತನ್ನು ಸುಲಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 12:36
11 ತಿಳಿವುಗಳ ಹೋಲಿಕೆ  

ಅಲ್ಲಿ ದೇವರು ಅವನ ಸಂಗಡ ಇದ್ದು ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿಸಿದನು. ಫರೋಹನು ಅವನನ್ನು ಐಗುಪ್ತದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯಾಗಿ ಇಟ್ಟನು.


ಅವರಿಂದ ಬಿಟ್ಟೀಕೆಲಸ ಮಾಡಿಸಿಕೊಂಡ ಜನಾಂಗವನ್ನು ನಾನು ಶಿಕ್ಷಿಸಿದ ನಂತರ ಅವರು ಬಹಳ ಆಸ್ತಿವಂತರಾಗಿ ಆ ದೇಶದಿಂದ ಬಿಡುಗಡೆಯಾಗಿ ಬರುವರು.


ದೇವರು ಕಂಚುಕಿಯರ ಅಧ್ಯಕ್ಷನ ಮನಸ್ಸಿನಲ್ಲಿ ದಾನಿಯೇಲನ ಮೇಲೆ ಕನಿಕರವನ್ನೂ ದಯೆಯನ್ನೂ ಹುಟ್ಟಿಸಿದನು.


ಇಸ್ರಾಯೇಲ್ಯರನ್ನು ಬೆಳ್ಳಿಬಂಗಾರಗಳ ಸಹಿತವಾಗಿ ಹೊರಗೆ ಬರಮಾಡಿದನು; ಅವರ ಕುಲಗಳಲ್ಲಿ ಒಬ್ಬನಾದರೂ ಎಡವುವವನಿರಲಿಲ್ಲ.


ಯೆಹೋವನು ಇಸ್ರಾಯೇಲ್ಯರ ಮೇಲೆ ಐಗುಪ್ತ್ಯರಲ್ಲಿ ದಯೆಯನ್ನು ಹುಟ್ಟಿಸಿದನು. ಇದಲ್ಲದೆ ಐಗುಪ್ತದೇಶದಲ್ಲಿ ಫರೋಹನ ಪ್ರಜಾಪರಿವಾರದವರು ಆ ಮೋಶೆಯನ್ನು ಮಹಾಪುರುಷನೆಂದು ತಿಳಿದುಕೊಂಡರು.


ಆದರೂ ಯೆಹೋವನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕೃಪೆಯನ್ನಿಟ್ಟು ಅವನಿಗೆ ಸೆರೆಯಜಮಾನನ ಬಳಿಯಲ್ಲಿ ದಯೆದೊರಕುವಂತೆ ಮಾಡಿದನು.


ದೇವರನ್ನು ಕೊಂಡಾಡುವವರಾಗಿಯೂ ಜನರೆಲ್ಲರ ದಯವನ್ನು ಹೊಂದುವವರಾಗಿಯೂ ಇದ್ದರು. ಕರ್ತನು ರಕ್ಷಣೆಯ ಮಾರ್ಗದಲ್ಲಿರುವವರನ್ನು ದಿನಾಲು ಅವರ ಮಂಡಲಿಗೆ ಸೇರಿಸುತ್ತಿದ್ದನು.


ಯೆಹೋವನು ಒಬ್ಬನ ನಡತೆಗೆ ಮೆಚ್ಚಿದರೆ ಅವನ ಶತ್ರುಗಳನ್ನೂ ವಿುತ್ರರನ್ನಾಗಿ ಮಾಡುವನು.


ಆದದರಿಂದ ಸ್ತ್ರೀಪುರುಷರೆಲ್ಲರೂ ತಮ್ಮತಮ್ಮ ನೆರೆಹೊರೆಯವರಿಂದ ಬೆಳ್ಳಿಬಂಗಾರದ ಒಡವೆಗಳನ್ನು ಕೇಳಿಕೊಳ್ಳಬೇಕೆಂಬದಾಗಿ ಜನರಿಗೆ ಸ್ಪಷ್ಟವಾಗಿ ಹೇಳು ಅಂದನು.


ಅವರ ನೆರೆಯವರೆಲ್ಲರೂ ಕಾಣಿಕೆಗಳನ್ನು ಕೊಟ್ಟದ್ದಲ್ಲದೆ ಅವರಿಗೆ ಬೆಳ್ಳಿಯ ಸಾಮಾನು, ಬಂಗಾರ, ಸರಕು, ಪಶು, ಶ್ರೇಷ್ಠವಸ್ತು ಇವುಗಳನ್ನೂ ಕೊಟ್ಟು ಸಹಾಯಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು