ವಿಮೋಚನಕಾಂಡ 13:14 - ಕನ್ನಡ ಸತ್ಯವೇದವು J.V. (BSI)14 ಇನ್ನು ಮೇಲೆ ನಿಮ್ಮ ಮಕ್ಕಳು - ಇದು ಯಾತಕ್ಕೆ ಎಂದು ವಿಚಾರಿಸುವಾಗ ನೀವು ಅವರಿಗೆ - ನಾವು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ಯೆಹೋವನು ಭುಜಬಲದಿಂದ ನಮ್ಮನ್ನು ಬಿಡಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಮುಂದೆ ನಿಮ್ಮ ಮಕ್ಕಳು, ‘ಇದರ ಅರ್ಥ ಏನು?’ ಎಂದು ನಿಮ್ಮನ್ನು ವಿಚಾರಿಸುವಾಗ ನೀವು ಅವರಿಗೆ, ‘ನಾವು ದಾಸತ್ವದಲ್ಲಿದ್ದ ಐಗುಪ್ತ ದೇಶದಿಂದ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಇನ್ನು ಮುಂದೆ ನಿಮ್ಮ ಮಕ್ಕಳು, ಇದರ ಅರ್ಥವೇನೆಂದು ವಿಚಾರಿಸುವಾಗ ನೀವು ಅವರಿಗೆ, ‘ನಾವು ಗುಲಾಮತನದಲ್ಲಿದ್ದಾಗ ಸರ್ವೇಶ್ವರ ತಮ್ಮ ಭುಜಬಲವನ್ನು ಪ್ರದರ್ಶಿಸಿ ಈಜಿಪ್ಟಿನಿಂದ ನಮ್ಮನ್ನು ಬಿಡುಗಡೆ ಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 “ಮುಂದಿನ ಕಾಲದಲ್ಲಿ ನಿಮ್ಮ ಮಕ್ಕಳು, ‘ನೀವು ಹೀಗೇಕೆ ಮಾಡುತ್ತೀರಿ?’ ಎಂದು ಕೇಳುವಾಗ ನೀವು, ‘ಯೆಹೋವನು ನಮ್ಮನ್ನು ಈಜಿಪ್ಟಿನಿಂದ ತನ್ನ ಮಹಾಶಕ್ತಿಯಿಂದ ರಕ್ಷಿಸಿದನು. ನಾವು ಅಲ್ಲಿ ಗುಲಾಮರಾಗಿದ್ದೆವು, ಆದರೆ ಯೆಹೋವನು ನಮ್ಮನ್ನು ಇಲ್ಲಿಗೆ ಕರೆದುಕೊಂಡು ಬಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 “ಮುಂದೆ ಬರುವ ಕಾಲದಲ್ಲಿ ನಿಮ್ಮ ಪುತ್ರರು ನಿಮಗೆ, ‘ಇದರ ಅರ್ಥವೇನು?’ ಎಂದು ಕೇಳುವಾಗ, ನೀವು ಅವರಿಗೆ, ‘ಯೆಹೋವ ದೇವರು ತಮ್ಮ ಭುಜಬಲದಿಂದ ನಮ್ಮನ್ನು ಈಜಿಪ್ಟಿನ ದಾಸತ್ವದೊಳಗಿಂದ ಹೊರಗೆ ಬರಮಾಡಿದ್ದಾರೆ. ಅಧ್ಯಾಯವನ್ನು ನೋಡಿ |
ಇಸ್ರಾಯೇಲ್ಯರು ತಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ನಾನು ಐಗುಪ್ತ್ಯರ ನಡುವೆ ನಡಿಸಿರುವ ಮಹತ್ಕಾರ್ಯಗಳನ್ನು ವಿವರಿಸಿ - ಯೆಹೋವನು ಐಗುಪ್ತ್ಯರನ್ನು ತನಗೆ ಇಷ್ಟಬಂದಂತೆ ಆಡಿಸಿ ಶಿಕ್ಷಿಸಿದನು ಎಂಬದಾಗಿ ತಿಳಿಸುವದಕ್ಕೂ ನಾನು ಫರೋಹನ ಹೃದಯವನ್ನೂ ಅವನ ಪರಿವಾರದವರ ಹೃದಯಗಳನ್ನೂ ಮೊಂಡುಮಾಡಿದ್ದೇನೆ. ಇದಲ್ಲದೆ ಈ ಮಹತ್ಕಾರ್ಯಗಳಿಂದ ನೀವು ನನ್ನನ್ನೇ ಯೆಹೋವನೆಂದು ತಿಳುಕೊಳ್ಳುವಿರಿ.