Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 13:3 - ಕನ್ನಡ ಸತ್ಯವೇದವು J.V. (BSI)

3 ಮೋಶೆ ಇಸ್ರಾಯೇಲ್ಯರಿಗೆ - ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದನಲ್ಲಾ. ಈ ದಿನದಲ್ಲಿ ನೀವು ಹುಳಿಬೆರೆತದ್ದನ್ನು ತಿನ್ನಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮೋಶೆಯು ಇಸ್ರಾಯೇಲರಿಗೆ, “ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದ್ದಾನೆ. ಈ ದಿನದಲ್ಲಿ ನೀವು ಹುಳಿಬೆರೆಸಿದ್ದನ್ನು ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಮೋಶೆ ಇಸ್ರಯೇಲರಿಗೆ, “ಗುಲಾಮತನದಲ್ಲಿದ್ದು ಈಜಿಪ್ಟ್ ದೇಶದಿಂದ ಬಿಡುಗಡೆಯಾದ ಈ ದಿನವನ್ನು ನೀವು ಸ್ಮರಿಸಬೇಕು. ಈ ದಿನದಲ್ಲೇ ಸರ್ವೇಶ್ವರ ಸ್ವಾಮಿ ತಮ್ಮ ಭುಜಬಲ ಪ್ರಯೋಗಿಸಿ ನಿಮ್ಮನ್ನು ಅಲ್ಲಿಂದ ವಿಮೋಚಿಸಿದರು. ಈ ದಿನದಂದು ನೀವು ಹುಳಿಬೆರತದ್ದನ್ನು ತಿನ್ನಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಮೋಶೆಯು ಜನರಿಗೆ, “ನೀವು ಈಜಿಪ್ಟಿನ ಗುಲಾಮತನದಿಂದ ಬಿಡುಗಡೆಯಾದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಆದರೆ ಈ ದಿನದಲ್ಲಿ ಯೆಹೋವನು ತನ್ನ ಮಹಾಶಕ್ತಿಯಿಂದ ನಿಮ್ಮನ್ನು ಸ್ವತಂತ್ರರನ್ನಾಗಿ ಮಾಡಿದನು. ನೀವು ಹುಳಿಯಿರುವ ರೊಟ್ಟಿಯನ್ನು ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಮೋಶೆಯು ಜನರಿಗೆ, “ನೀವು ಈಜಿಪ್ಟಿನ ದಾಸತ್ವದಿಂದ ಹೊರಬಂದ ಈ ದಿನವನ್ನು ಜ್ಞಾಪಕಮಾಡಿಕೊಳ್ಳಿರಿ. ಏಕೆಂದರೆ ಯೆಹೋವ ದೇವರು ನಿಮ್ಮನ್ನು ತಮ್ಮ ಭುಜಬಲದಿಂದ ಅಲ್ಲಿಂದ ಹೊರಗೆ ಬರಮಾಡಿದ್ದಾರೆ. ಹೀಗಿರುವುದರಿಂದ ಈ ದಿನ ನೀವು ಹುಳಿರೊಟ್ಟಿಯನ್ನು ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 13:3
58 ತಿಳಿವುಗಳ ಹೋಲಿಕೆ  

ನೀವೇ ಐಗುಪ್ತದೇಶದಲ್ಲಿ ದಾಸರಾಗಿದ್ದಾಗ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡಿಸಿದನೆಂಬದನ್ನು ನೆನಪುಮಾಡಿಕೊಳ್ಳಿರಿ; ಅದಕ್ಕಾಗಿಯೇ ಇದನ್ನು ಆಜ್ಞಾಪಿಸಿದ್ದೇನೆ.


ಐಗುಪ್ತದೇಶದಲ್ಲಿ ನೀವೂ ದಾಸತ್ವದಲ್ಲಿದ್ದದ್ದನ್ನೂ ನಿಮ್ಮ ದೇವರಾದ ಯೆಹೋವನು ಭುಜಪರಾಕ್ರಮದಿಂದಲೂ ಶಿಕ್ಷಾಹಸ್ತದಿಂದಲೂ ನಿಮ್ಮನ್ನು ಬಿಡುಗಡೆಮಾಡಿದ್ದನ್ನೂ ಜ್ಞಾಪಕಮಾಡಿಕೊಳ್ಳಿರಿ. ನೀವು ಸಬ್ಬತ್ ದಿನವನ್ನು ಆಚರಿಸಬೇಕೆಂಬದನ್ನು ನಿಮ್ಮ ದೇವರಾದ ಯೆಹೋವನು ಇದಕ್ಕಾಗಿಯೇ ಆಜ್ಞಾಪಿಸಿದ್ದಾನೆ.


ನೀನು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ನಿನ್ನನ್ನು ಬಿಡುಗಡೆ ಮಾಡಿದ ಯೆಹೋವನು ಎಂಬ ನಿನ್ನ ದೇವರು ನಾನೇ.


ಐಗುಪ್ತದೇಶದಲ್ಲಿ ದಾಸರಾಗಿದ್ದೇವೆಂಬದನ್ನು ನೀವು ನೆನಪಿಗೆ ತಂದುಕೊಂಡು ಈ ವಿಧಿಗಳನ್ನು ಅನುಸರಿಸಿ ನಡೆಯಬೇಕು.


ನೀನು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ನಿನ್ನನ್ನು ಬಿಡುಗಡೆ ಮಾಡಿದ ಯೆಹೋವನೆಂಬ ನಿನ್ನ ದೇವರು ನಾನೇ.


ಐಗುಪ್ತದೇಶದಲ್ಲಿ ನೀವೇ ದಾಸರಾಗಿರಲು ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡುಗಡೆಮಾಡಿದನೆಂಬದನ್ನು ಜ್ಞಾಪಕಮಾಡಿಕೊಳ್ಳಿರಿ. ಇದಕ್ಕೋಸ್ಕರವಾಗಿಯೇ ನಾನು ಈ ಆಜ್ಞೆಯನ್ನು ನಿಮಗೆ ಈಗ ಕೊಟ್ಟಿದ್ದೇನೆ.


ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮನ್ನು ಬಿಡುಗಡೆ ಮಾಡಿದ ಯೆಹೋವನನ್ನು ಮರೆಯಬಾರದು, ನೋಡಿರಿ.


ಅದರೊಂದಿಗೆ ಹುಳಿಹಾಕಿದ ರೊಟ್ಟಿಯನ್ನು ತಿನ್ನಬಾರದು; ಯಾಕಂದರೆ ನೀವು [ರೊಟ್ಟಿಗೆ ಹುಳಿಹಾಕುವದಕ್ಕೆ ಅವಕಾಶವಿಲ್ಲದೆ] ಅವಸರದಿಂದ ಐಗುಪ್ತದೇಶವನ್ನು ಬಿಟ್ಟುಬಂದಿರಿ. ಐಗುಪ್ತದೇಶದಿಂದ ನಿಮಗೆ ಬಿಡುಗಡೆಯಾದ ದಿನವು ನಿಮ್ಮ ಜೀವಮಾನವೆಲ್ಲಾ ನೆನಪಿನಲ್ಲಿರುವಂತೆ ನೀವು ಕಷ್ಟವನ್ನು ಸೂಚಿಸುವ ಹುಳಿಯಿಲ್ಲದ ರೊಟ್ಟಿಗಳನ್ನು ಏಳು ದಿವಸಗಳವರೆಗೂ ತಿನ್ನಬೇಕು.


ಒಂದು ವೇಳೆ ನೀವು ಮದಿಸಿ ನಿಮ್ಮ ದೇವರಾದ ಯೆಹೋವನನ್ನು ಮರೆತೀರಿ.


ಇನ್ನು ಮೇಲೆ ನಿಮ್ಮ ಮಕ್ಕಳು - ಇದು ಯಾತಕ್ಕೆ ಎಂದು ವಿಚಾರಿಸುವಾಗ ನೀವು ಅವರಿಗೆ - ನಾವು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ಯೆಹೋವನು ಭುಜಬಲದಿಂದ ನಮ್ಮನ್ನು ಬಿಡಿಸಿದನು.


ನಾವು ದಾಸತ್ವದಲ್ಲಿದ್ದ ಐಗುಪ್ತದಿಂದ ನಮ್ಮನ್ನೂ ನಮ್ಮ ಪಿತೃಗಳನ್ನೂ ಹೊರತಂದು ನಮ್ಮೆದುರಿನಲ್ಲಿಯೇ ಮಹತ್ಕಾರ್ಯಗಳನ್ನು ನಡಿಸಿ ನಮ್ಮ ಎಲ್ಲಾ ಪ್ರಯಾಣಗಳಲ್ಲಿಯೂ ದಾಟಿ ಬಂದ ಅನ್ಯಜನಾಂಗಗಳ ಮಧ್ಯದಲ್ಲಿಯೂ ನಮ್ಮನ್ನು ಕಾಪಾಡಿದವನು ನಮ್ಮ ದೇವರಾದ ಯೆಹೋವನೇ ಅಲ್ಲವೇ.


ತರುವಾಯ ಜನರೆಲ್ಲರೂ ಹಾಕಲಿ. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ ಐಗುಪ್ತದೇಶದೊಳಗಿಂದ ಕರತಂದ ನಿಮ್ಮ ದೇವರಾದ ಯೆಹೋವನ ಆಶ್ರಯದಿಂದ ಅವನು ನಿಮ್ಮನ್ನು ತಪ್ಪಿಸಬೇಕೆಂದಿದ್ದದರಿಂದ ಅವನನ್ನು ಕಲ್ಲೆಸೆದು ಕೊಲ್ಲಲೇಬೇಕು.


ನೀವೇ ಐಗುಪ್ತದೇಶದಲ್ಲಿ ದಾಸರಾಗಿದ್ದದ್ದು ಜ್ಞಾಪಕದಲ್ಲಿರಬೇಕು; ಅದಕ್ಕಾಗಿಯೇ ಇದನ್ನು ನಿಮಗೆ ಆಜ್ಞಾಪಿಸಿದ್ದೇನೆ.


ಯೆಹೋವನು ಆ ರಾತ್ರಿಯಲ್ಲಿಯೇ ಅವರನ್ನು ಐಗುಪ್ತದೇಶದಿಂದ ಹೊರಗೆ ಬರಮಾಡಿದ್ದರಿಂದ ಅವರು ಈ ರಾತ್ರಿಯಲ್ಲಿ ಆತನ ಘನಕ್ಕಾಗಿ ಜಾಗರಣೆಯನ್ನು ಮಾಡಬೇಕು. ಇಸ್ರಾಯೇಲ್ಯರೆಲ್ಲರೂ ತಲತಲಾಂತರಕ್ಕೂ ಯೆಹೋವನಿಗೆ ಈ ಜಾಗರಣೆಯನ್ನು ಮಾಡಬೇಕು.


ಆ ಪ್ರವಾದಿಗೆ ಅಥವಾ ಆ ಕನಸುಕಂಡವನಿಗೆ ಮರಣ ಶಿಕ್ಷೆಯಾಗಬೇಕು. ದಾಸತ್ವದಲ್ಲಿದ್ದ ನಿಮ್ಮನ್ನು ಬಿಡುಗಡೆಮಾಡಿ ಐಗುಪ್ತದೇಶದೊಳಗಿಂದ ಕರತಂದ ನಿಮ್ಮ ದೇವರಾದ ಯೆಹೋವನಿಗೆ ವಿರೋಧವಾಗಿ ಅವನು ದ್ರೋಹದ ಮಾತುಗಳನ್ನಾಡಿ ನಿಮ್ಮ ದೇವರಾದ ಯೆಹೋವನು ಹೇಳಿದ ಮಾರ್ಗದಿಂದ ನಿಮ್ಮನ್ನು ತಪ್ಪಿಸಬೇಕೆಂದಿದ್ದನಲ್ಲಾ. ಅವನನ್ನು ಕೊಲ್ಲಿಸಿ ಆ ದುಷ್ಟತ್ವವನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.


ಬೇರೆ ಯಾವ ದೇವರಾದರೂ ಮನಶ್ಶೋಧನೆ, ಮಹತ್ಕಾರ್ಯ, ಉತ್ಪಾತ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಮಹಾಭೀತಿ ಇವುಗಳನ್ನು ಪ್ರಯೋಗಿಸಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯೊಳಗಿಂದ ತಪ್ಪಿಸುವದಕ್ಕೆ ಪ್ರಯತ್ನಿಸಿದ್ದುಂಟೋ? ನಿಮ್ಮ ದೇವರಾದ ಯೆಹೋವನಾದರೋ ಐಗುಪ್ತದೇಶದಲ್ಲಿ ನಿಮಗೋಸ್ಕರ ಇದನ್ನೆಲ್ಲಾ ನಿಮ್ಮ ಕಣ್ಣಿಗೆದುರಾಗಿ ನಡಿಸಿದನಲ್ಲಾ.


ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಜಾತ್ರೆ ಒಂದು. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದ ನೇಮಕವಾದ ಕಾಲದಲ್ಲಿ ಏಳು ದಿವಸವೂ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಆ ಮಾಸದಲ್ಲೇ ಐಗುಪ್ತದೇಶದಿಂದ ಹೊರಟುಬಂದಿರಲ್ಲಾ. ಒಬ್ಬನೂ ಕೈಯಲ್ಲಿ ಕಾಣಿಕೆಯಿಲ್ಲದೆ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಕೂಡದು.


ಸಬ್ಬತ್ ದಿನವನ್ನು ದೇವರ ದಿನವೆಂದು ಆಚರಣೆಗೆ ತರುವದಕ್ಕೆ ಜ್ಞಾಪಕದಲ್ಲಿಟ್ಟುಕೊಳ್ಳಬೇಕು.


ಆ ಏಳು ದಿನಗಳೂ ನಿಮ್ಮ ಮನೆಗಳಲ್ಲಿ ಹುಳಿಯಿಟ್ಟೇ ಇರಕೂಡದು. ಹುಳಿ ಬೆರಸಿದ್ದನ್ನು ತಿನ್ನುವವನು ಪರದೇಶದವನಾಗಲಿ ಸ್ವದೇಶದವನಾಗಲಿ ಇಸ್ರಾಯೇಲ್ ಜನರೊಳಗಿಂದ ತೆಗೆದುಹಾಕಲ್ಪಡಬೇಕು.


ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ಭೋಜನಮಾಡಬೇಕು; ಅದನ್ನು ಬೆಂಕಿಯಲ್ಲಿ ಸುಟ್ಟು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಪಲ್ಯಗಳ ಸಂಗಡ ಊಟಮಾಡಬೇಕು.


ಅದಕ್ಕೆ ಯೆಹೋವನು - ನಾನು ಫರೋಹನಿಗೆ ಮಾಡುವದನ್ನು ನೀನು ಈಗ ನೋಡುವಿ. ಅವನು ನನ್ನ ಭುಜಬಲದಿಂದ ಅವರನ್ನು ಹೋಗಗೊಡಿಸುವನು; ನನ್ನ ಭುಜಬಲದಿಂದ ಪೀಡಿತನಾಗಿ ಅವರನ್ನು ತನ್ನ ದೇಶದಿಂದ ಹೊರಡಿಸುವನು ಅಂದನು.


ಆದಕಾರಣ ನಾನು ಕೈಚಾಚಿ ಐಗುಪ್ತದೇಶದ ಮಧ್ಯದಲ್ಲಿ ಮಹತ್ಕಾರ್ಯಗಳನ್ನು ಮಾಡಿ ಅದನ್ನು ನಾನಾ ವಿಧವಾಗಿ ಬಾಧಿಸುವೆನು; ಆಮೇಲೆ ಅರಸನು ನಿಮ್ಮನ್ನು ಬಿಡುವನು.


ಏಳು ದಿವಸ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನೆಲ್ಲಾ ನಿಮ್ಮ ಮನೆಗಳೊಳಗಿಂದ ತೆಗೆದುಬಿಡಬೇಕು. ಆ ದಿವಸ ಮೊದಲುಗೊಂಡು ಏಳು ದಿವಸಗಳೊಳಗೆ ಯಾವನಾದರೂ ಹುಳಿಬೆರಸಿದ್ದನ್ನು ತಿಂದರೆ ಅವನು ಇಸ್ರಾಯೇಲ್ಯರಿಂದ ತೆಗೆದು ಹಾಕಲ್ಪಡಬೇಕು.


ಆತನ ಸೇವಕನಾದ ಅಬ್ರಹಾಮನ ಸಂತತಿಯವರೇ, ಆತನು ಆರಿಸಿಕೊಂಡ ಯಾಕೋಬನ ವಂಶದವರೇ,


ನಂಬುವವರಾದ ನಮ್ಮಲ್ಲಿ ಆತನು ಸಾಧಿಸುವ ಪರಾಕ್ರಮವು ಎಷ್ಟು ಅತಿಶಯವಾದದ್ದೆಂಬದನ್ನೂ ನೀವು ತಿಳುಕೊಳ್ಳುವಂತೆ ಅನುಗ್ರಹಿಸಲಿ.


ಇದು ನಿಮಗೋಸ್ಕರವಾಗಿರುವ ನನ್ನ ದೇಹ; ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಹೀಗೆ ಮಾಡಿರಿ ಅಂದನು.


ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೆ ಸರಳತೆ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯನ್ನೇ ತೆಗೆದುಕೊಂಡು ಹಬ್ಬವನ್ನು ಆಚರಿಸೋಣ.


ಬಳಿಕ ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಮುರಿದು ಅವರಿಗೆ ಕೊಟ್ಟು - ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ; ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಹೀಗೆ ಮಾಡಿರಿ ಅಂದನು.


ಐಗುಪ್ತ್ಯರು ಗರ್ವಿಗಳಾಗಿ ಅವರನ್ನು ಕುಗ್ಗಿಸಿದಾಗ ನೀನು ಫರೋಹನಲ್ಲಿಯೂ ಅವನ ಸೇವಕರಲ್ಲಿಯೂ ಅವನ ದೇಶದ ಜನರಲ್ಲಿಯೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ನಡಿಸಿ ಈಗ ನಿನಗಿರುವ ಕೀರ್ತಿಯನ್ನು ಸ್ಥಾಪಿಸಿದಿ.


ಆತನ ಸೇವಕನಾದ ಇಸ್ರಾಯೇಲನ ಸಂತತಿಯವರೇ, ಆತನು ಆರಿಸಿಕೊಂಡ ಯಾಕೋಬನ ವಂಶದವರೇ,


ಆ ಮನೆಯೊಳಕ್ಕೆ ಹೋಗುವಾಗ ಶುಭವಾಗಲಿ ಅನ್ನಿರಿ.


ನಾನು ಮಾಡಿದ ವಾಗ್ದಾನವನ್ನು ನೆನಸಿಕೊಂಡೆನು. ಆದದರಿಂದ ನೀನು ಇಸ್ರಾಯೇಲ್ಯರಿಗೆ [ನನ್ನ ಹೆಸರಿನಲ್ಲಿ] ಹೇಳಬೇಕಾದದ್ದೇನಂದರೆ - ನಾನು ಯೆಹೋವನು; ಐಗುಪ್ತ್ಯರು ನಿಮ್ಮಿಂದ ಮಾಡಿಸುವ ಬಿಟ್ಟೀಕೆಲಸಗಳನ್ನು ನಾನು ತಪ್ಪಿಸಿ ಅವರಲ್ಲಿ ನಿಮಗಿರುವ ದಾಸತ್ವವನ್ನು ತೊಲಗಿಸಿ ನನ್ನ ಕೈ ಚಾಚಿ ಅವರಿಗೆ ಮಹಾಶಿಕ್ಷೆಗಳನ್ನು ವಿಧಿಸಿ ನಿಮ್ಮನ್ನು ರಕ್ಷಿಸುವೆನು.


ಫರೋಹನು ನಿಮ್ಮ ಮಾತನ್ನು ಕೇಳುವದಿಲ್ಲ; ಆಗ ನಾನು ಐಗುಪ್ತದೇಶದವರನ್ನು ಬಾಧಿಸಿ ಅವರಿಗೆ ಮಹಾಶಿಕ್ಷೆಗಳನ್ನು ವಿಧಿಸಿ ನನ್ನ ಜನರಾಗಿರುವ ಇಸ್ರಾಯೇಲ್ಯರ ಸೈನ್ಯವನ್ನೆಲ್ಲಾ ಐಗುಪ್ತದೇಶದಿಂದ ಹೊರ ತರುವೆನು.


ಈ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದ್ದರಿಂದ ನೀವೂ ನಿಮ್ಮ ಸಂತತಿಯವರೂ ಈ ದಿನವನ್ನು ಆಚರಣೆಗೆ ತರಬೇಕು; ಇದು ಶಾಶ್ವತವಾದ ನಿಯಮ.


ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಐಗುಪ್ತದೇಶದಿಂದ ಬಿಡಿಸಿದನಾದದರಿಂದ ಆತನ ನಿಯಮವನ್ನು ಕುರಿತು ನೀವು ಮಾತಾಡಬೇಕೆಂಬದಕ್ಕಾಗಿ ಈ ಆಚಾರವು ನಿಮಗೆ ಕೈಯಲ್ಲಿ ಕಟ್ಟಿಕೊಂಡಿರುವ ದಾರದಂತೆಯೂ ಹುಬ್ಬುಗಳ ನಡುವೆ ಕಟ್ಟಿಕೊಂಡಿರುವ ಜ್ಞಾಪಕಪಟ್ಟಿಯಂತೆಯೂ ಇರುವದು.


ಯೆಹೋವನು ನಿಮ್ಮನ್ನು ಪ್ರೀತಿಸಿ ತಾನು ನಿಮ್ಮ ಪಿತೃಗಳಿಗೆ ಮಾಡಿದ ಪ್ರಮಾಣವನ್ನು ನೆರವೇರಿಸಬೇಕೆಂದು ಐಗುಪ್ತ್ಯರ ಅರಸನಾದ ಫರೋಹನ ಕೈಕೆಳಗೆ ದಾಸರಾಗಿದ್ದ ನಿಮ್ಮನ್ನು ಬಿಡುಗಡೆ ಮಾಡಿ ತನ್ನ ಭುಜಬಲವನ್ನು ಪ್ರಯೋಗಿಸಿ ಆ ದೇಶದೊಳಗಿಂದ ಬರಮಾಡಿದನು.


ನಿನ್ನ ಪ್ರಜೆಗಳಾದ ಇಸ್ರಾಯೇಲ್ಯರಿಗೆ ಸೇರದವನಾದ ಇಂಥ ಒಬ್ಬ ಪರದೇಶಿಯು ನಿನ್ನ ನಾಮಕ್ಕೋಸ್ಕರ ದೂರದೇಶದಿಂದ ಬಂದು ಈ ಆಲಯದ ಮುಂದೆ ನಿಂತು ನಿನ್ನನ್ನು ಪ್ರಾರ್ಥಿಸುವದಾದರೆ


ಇಸ್ರಾಯೇಲ್ಯರು ಐಗುಪ್ತ ದೇಶವನ್ನೂ ಯಾಕೋಬನ ಮನೆತನದವರು ಅನ್ಯಭಾಷೆಯ ಜನಾಂಗವನ್ನೂ ಬಿಟ್ಟ ಮೇಲೆ


ಇಸ್ರಾಯೇಲ್ಯರನ್ನು ಅವರ ಮಧ್ಯದಿಂದ ಹೊರತಂದನು; ಆತನ ಕೃಪೆಯು ಶಾಶ್ವತವಾದದ್ದು.


ನಿನ್ನ ಸಂತತಿಯವರು ನಾಲ್ಕನೆಯ ತಲಾಂತರದಲ್ಲಿ ಇಲ್ಲಿಗೆ ತಿರಿಗಿಬರುವರು; ಅಮೋರಿಯರ ಅಪರಾಧವು ಇನ್ನೂ ಪೂರ್ಣಸ್ಥಿತಿಗೆ ಬರಲಿಲ್ಲ ಎಂದು ಹೇಳಿದನು.


ನಾನು ನಿಮ್ಮನ್ನು ನನ್ನ ಪ್ರಜೆಯೆಂದು ಆರಿಸಿಕೊಂಡು ನಿಮಗೆ ದೇವರಾಗಿರುವೆನು. ಐಗುಪ್ತ್ಯರು ಮಾಡಿಸುವ ಬಿಟ್ಟೀ ಸೇವೆಯನ್ನು ನಾನು ನಿಮಗೆ ತಪ್ಪಿಸಿದಾಗ ಯೆಹೋವನು ಎಂಬ ನಾನೇ ನಿಮ್ಮ ದೇವರಾಗಿದ್ದೇನೆಂಬದು ನಿಮಗೆ ತಿಳಿದುಬರುವದು.


ಎಲ್ಲಾ ಮಾಸಗಳಲ್ಲಿ ಇದೇ ನಿಮಗೆ ಆದಿಮಾಸವಾಗಿರಬೇಕು, ಇದೇ ನಿಮಗೆ ಪ್ರತಿ ವರುಷದ ಮೊದಲನೆಯ ತಿಂಗಳಾಗಿರಬೇಕು.


ನಾನೂರಮೂವತ್ತು ವರುಷಗಳು ಕಳೆದನಂತರ ಅದೇ ದಿವಸದಲ್ಲಿ ಯೆಹೋವನ ಸೈನ್ಯಗಳೆಲ್ಲಾ ಐಗುಪ್ತದೇಶವನ್ನು ಬಿಟ್ಟು ಹೊರಟುಹೋದವು.


ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಜಾತ್ರೆಯನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರ ಮಾಸದ ನೇಮಕವಾದ ಕಾಲದಲ್ಲಿ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ನೀವು ಚೈತ್ರ ಮಾಸದಲ್ಲಿಯೇ ಐಗುಪ್ತದೇಶದಿಂದ ಬಿಡುಗಡೆಯಾಗಿ ಬಂದಿರಲ್ಲಾ.


ನೀವು ಅವರಿಗೆ - ನಾವು ಐಗುಪ್ತದೇಶದಲ್ಲಿ ಫರೋಹನಿಗೆ ದಾಸರಾಗಿದ್ದಾಗ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡುಗಡೆ ಮಾಡಿದನು;


ನೀನು ಐಗುಪ್ತದೇಶದಿಂದ ಕರಕೊಂಡು ಬಂದ ನಿನ್ನ ಜನರು ಕೆಟ್ಟುಹೋದರು; ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಅವರು ಬೇಗನೆ ಬಿಟ್ಟುಹೋಗಿ ತಮಗೆ ಲೋಹವಿಗ್ರಹವನ್ನು ಮಾಡಿಸಿಕೊಂಡಿದ್ದಾರೆ ಎಂದು ಹೇಳಿದನು.


ಒಡಹುಟ್ಟಿದ ಅಣ್ಣತಮ್ಮಂದಿರಾಗಲಿ ಮಗನಾಗಲಿ ಮಗಳಾಗಲಿ ಪ್ರಾಣಪ್ರಿಯಳಾದ ಹೆಂಡತಿಯಾಗಲಿ ಆಪ್ತವಿುತ್ರನಾಗಲಿ ನಿಮಗಾದರೂ ನಿಮ್ಮ ಪಿತೃಗಳಿಗಾದರೂ ಗೊತ್ತಿಲ್ಲದ ಇತರ ದೇವರುಗಳನ್ನು ಸೂಚಿಸಿ -


ಇದನ್ನು ಇಸ್ರಾಯೇಲ್ಯರೆಲ್ಲರೂ ಕೇಳಿ ಭಯಪಟ್ಟು ಅಂಥ ದುಷ್ಕಾರ್ಯವನ್ನು ಅಲ್ಲಿಂದ ಮುಂದೆ ಮಾಡದೆ ಇರುವರು.


ನೀವು ಚೈತ್ರಮಾಸದಲ್ಲಿ ಪಸ್ಕ ಹಬ್ಬವನ್ನು ನಿಮ್ಮ ದೇವರಾದ ಯೆಹೋವನಿಗೋಸ್ಕರ ಆಚರಿಸಬೇಕು. ಆ ಮಾಸದಲ್ಲಿಯೇ ರಾತ್ರಿಕಾಲದಲ್ಲಿ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಐಗುಪ್ತದೇಶದಿಂದ ಬಿಡಿಸಿದನಲ್ಲವೇ.


ಭುಜಬಲವನ್ನೂ ಶಿಕ್ಷಾಹಸ್ತವನ್ನೂ ಮಹಾಭೀತಿಗಳನ್ನೂ ಮಹತ್ಕಾರ್ಯಗಳನ್ನೂ ಉತ್ಪಾತಗಳನ್ನೂ ಪ್ರಯೋಗಿಸಿ


ತಮ್ಮ ಪಿತೃಗಳನ್ನು ಐಗುಪ್ತದಿಂದ ಕರತಂದ ದೇವರಾದ ಯೆಹೋವನನ್ನು ಬಿಟ್ಟು ಅನ್ಯದೇವತೆಗಳನ್ನು ಅಂದರೆ ತಮ್ಮ ಸುತ್ತಣ ಜನಾಂಗಗಳ ದೇವರುಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಯೆಹೋವನನ್ನು ರೇಗಿಸಿದರು.


ಆತನು ಅವರ ಬಳಿಗೆ ಒಬ್ಬ ಪ್ರವಾದಿಯನ್ನು ಕಳುಹಿಸಿದನು. ಅವನು ಬಂದು ಅವರಿಗೆ - ಇಸ್ರಾಯೇಲ್ಯರ ದೇವರಾದ ಯೆಹೋವನ ಮಾತನ್ನು ಕೇಳಿರಿ; ಆತನು ಹೇಳುವದೇನಂದರೆ - ನೀವು ದಾಸತ್ವದಲ್ಲಿದ್ದ ಐಗುಪ್ತದಿಂದ ನಿಮ್ಮನ್ನು ಕರತಂದೆನು.


ಅವರು ನಿನ್ನ ಸೇವಕರೂ ನೀನು ನಿನ್ನ ಮಹಾಶಕ್ತಿಭುಜಪರಾಕ್ರಮಗಳಿಂದ ವಿಮೋಚಿಸಿದ ನಿನ್ನ ಪ್ರಜೆಗಳೂ ಆಗಿರುತ್ತಾರಲ್ಲಾ.


ನೀತಿನ್ಯಾಯಗಳು ನಿನ್ನ ಸಿಂಹಾಸನದ ಅಸ್ತಿವಾರವು; ನಿನ್ನ ಸಾನ್ನಿಧ್ಯದೂತರು ಪ್ರೀತಿಸತ್ಯತೆಗಳೇ.


ತನ್ನ ಭುಜಬಲ, ಶಿಕ್ಷಾಹಸ್ತ ಇವುಗಳಿಂದ ಅವರನ್ನು ಬಿಡಿಸಿದನು; ಆತನ ಕೃಪೆಯು ಶಾಶ್ವತವಾದದ್ದು.


ಇಸ್ರಾಯೇಲ್ಯರ ದೇವರಾದ ಯೆಹೋವನು ಇಂತೆನ್ನುತ್ತಾನೆ - ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮ ಪಿತೃಗಳನ್ನು ನಾನು ಅಲ್ಲಿಂದ ಕರತಂದಾಗ -


ಕರ್ತನೇ, ನಮ್ಮ ದೇವರೇ, ಭುಜಪರಾಕ್ರಮವನ್ನು ತೋರಿಸಿ ನಿನ್ನ ಜನರನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ ಇಂದಿನವರೆಗೂ ಪ್ರಸಿದ್ಧವಾಗಿರುವ ಹೆಸರನ್ನು ಪಡೆದುಕೊಂಡವನೇ, ಈಗ ಚಿತ್ತೈಸು. ನಾವು ಪಾಪಮಾಡಿ ಕೆಟ್ಟವರಾಗಿ ನಡೆದಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು