ವಿಮೋಚನಕಾಂಡ 13:5 - ಕನ್ನಡ ಸತ್ಯವೇದವು J.V. (BSI)5 ಯೆಹೋವನು ನಿಮ್ಮ ಪಿತೃಗಳಿಗೆ ಪ್ರಮಾಣವಾಗಿ ಹೇಳಿದಂತೆ ನಿಮ್ಮನ್ನು ಹಾಲೂ ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರೂ ಹಿತ್ತಿಯರೂ ಅಮೋರಿಯರೂ ಹಿವ್ವಿಯರೂ ಯೆಬೂಸಿಯರೂ ವಾಸವಾಗಿರುವ ದೇಶಕ್ಕೆ ಕರತಂದು, ಅದನ್ನು ನಿಮಗೆ ಕೊಟ್ಟಾಗ ನೀವು ಈ ತಿಂಗಳಲ್ಲಿ ಈ ಆಚಾರವನ್ನು ನಡಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಮಾಡಿ ಹೇಳಿದಂತೆ, ನಿಮ್ಮನ್ನು ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ಕರೆದು ತಂದು ಅದನ್ನು ನಿಮಗೆ ಕೊಟ್ಟಾಗ ನೀವು ಈ ತಿಂಗಳಲ್ಲಿ ಈ ಆಚರಣೆಯನ್ನು ನಡೆಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಸರ್ವೇಶ್ವರ ನಿಮ್ಮ ಪೂರ್ವಜರಿಗೆ ಪ್ರಮಾಣವಾಗಿ ಹೇಳಿದಂತೆ ನಿಮ್ಮನ್ನು ಹಾಲೂ ಜೇನೂ ಹರಿಯುವ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ಕರೆದು ತಂದು ಅದನ್ನು ನಿಮಗೆ ಕೊಟ್ಟಾಗ, ನೀವು ಈ ಆಚರಣೆಯನ್ನು ಈ ತಿಂಗಳಿನಲ್ಲೇ ನಡೆಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆಗ ಯೆಹೋವನು ಒಂದು ವಿಶೇಷ ವಾಗ್ದಾನವನ್ನು ನಿಮ್ಮ ಪೂರ್ವಿಕರಿಗೆ ಮಾಡಿದನು. ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು ಮತ್ತು ಯೆಬೂಸಿಯರು ವಾಸಿಸುವ ಸಮೃದ್ಧಿಕರವಾದ ದೇಶವನ್ನು ನಿಮಗೆ ಕೊಡುವುದಾಗಿ ಯೆಹೋವನು ವಾಗ್ದಾನ ಮಾಡಿದನು. ಆತನು ನಿಮಗೆ ಆ ದೇಶವನ್ನು ಕೊಟ್ಟಾಗ ಪ್ರತಿವರ್ಷದ ಮೊದಲನೆಯ ತಿಂಗಳ ಈ ದಿನವನ್ನು ಆರಾಧನೆಯ ವಿಶೇಷ ದಿನವನ್ನಾಗಿ ಇಟ್ಟುಕೊಳ್ಳಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆದ್ದರಿಂದ ಯೆಹೋವ ದೇವರು ನಿಮ್ಮ ಪಿತೃಗಳಿಗೆ ಪ್ರಮಾಣ ಮಾಡಿದ ಹಾಲೂ ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರ, ಹಿತ್ತಿಯರ, ಅಮೋರಿಯರ, ಹಿವ್ವಿಯರ, ಯೆಬೂಸಿಯರ ದೇಶಕ್ಕೆ ನಿಮ್ಮನ್ನು ಕರೆತಂದು ಅದನ್ನು ನಿಮಗೆ ಕೊಟ್ಟಾಗ ಈ ಹಬ್ಬವನ್ನು ಈ ತಿಂಗಳಲ್ಲಿ ಆಚರಿಸಬೇಕು. ಅಧ್ಯಾಯವನ್ನು ನೋಡಿ |
ಐಗುಪ್ತದೇಶದೊಳಗಿಂದ ಬಂದ ಈ ಜನರೊಳಗೆ ಕೆನಿಜ್ಜೀಯನಾದ ಯೆಫುನ್ನೆಯ ಮಗ ಕಾಲೇಬನೂ ನೂನನ ಮಗನಾದ ಯೆಹೋಶುವನೂ ಇವರಿಬ್ಬರೇ ಹೊರತಾಗಿ ಯಾರೂ ನನ್ನನ್ನು ಪೂರ್ಣಮನಸ್ಸಿನಿಂದ ಅನುಸರಿಸದೆ ಹೋದದರಿಂದ ಅವರೊಳಗೆ ಇಪ್ಪತ್ತು ವರುಷ ಮೊದಲುಗೊಂಡು ಹೆಚ್ಚಾದ ವಯಸ್ಸಿನವರಲ್ಲಿ ಅವರಿಬ್ಬರೇ ಹೊರತಾಗಿ ಒಬ್ಬನಾದರೂ ನಾನು ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಕೊಟ್ಟ ದೇಶವನ್ನು ನೋಡುವದೇ ಇಲ್ಲ ಎಂದು ಖಂಡಿತವಾಗಿ ಹೇಳಿದನು.
ನಿನ್ನ ಸೇವಕರಾದ ಅಬ್ರಹಾಮ್ ಇಸಾಕ್ ಯಾಕೋಬರನ್ನು ನೆನಪಿಗೆ ತಂದುಕೋ. ನೀನು ನಿನ್ನ ಜೀವದಾಣೆ ಪ್ರಮಾಣಮಾಡಿ ಅವರಿಗೆ - ನಾನು ನಿಮ್ಮ ಸಂತತಿಯನ್ನು ಹೆಚ್ಚಿಸಿ ಆಕಾಶದ ನಕ್ಷತ್ರಗಳಷ್ಟು ಅಸಂಖ್ಯವಾಗಿ ಮಾಡುವೆನೆಂದೂ ನಾನು ಸೂಚಿಸಿರುವ ಈ ಪ್ರದೇಶಗಳನ್ನೆಲ್ಲಾ ನಿಮ್ಮ ಸಂತತಿಯವರಿಗೆ ಕೊಡುವೆನೆಂದೂ ಅವರು ಈ ದೇಶವನ್ನು ಶಾಶ್ವತವಾಗಿ ಸ್ವಾಧೀನದಲ್ಲಿಟ್ಟುಕೊಳ್ಳುವರೆಂದೂ ಮಾತುಕೊಡಲಿಲ್ಲವೇ ಅಂದನು.
ನಾನು ನಿಮ್ಮ ದೇವರಾಗಿದ್ದು ಹಾಲೂ ಜೇನೂ ಹರಿಯುವ ದೇಶವನ್ನು ಕೊಡುವದಾಗಿ ನಿಮ್ಮ ಮೂಲಪಿತೃಗಳಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವೆನು ಎಂದು ಹೇಳಿದೆನಷ್ಟೆ; ಆ ನನ್ನ ಮಾತು ಈಗ ಕೈಗೂಡಿದೆ. ನಾನು ಅವರಿಗೆ ವಿಧಿಸಿದ ನಿಬಂಧನವಾಕ್ಯಗಳಿಗೆ ಕಿವಿಗೊಡದವನು ಶಾಪಗ್ರಸ್ತನಾಗಲಿ ಎಂಬದಾಗಿ ಇಸ್ರಾಯೇಲ್ಯರ ದೇವರಾದ ಯೆಹೋವನು ನುಡಿಯುತ್ತಾನೆಂದೇ ಸಾರಬೇಕು. ಆಗ ನಾನು - ಅಪ್ಪಣೆಯಂತಾಗಲಿ, ಯೆಹೋವನೇ, ಎಂದು ಉತ್ತರಕೊಟ್ಟೆನು.