Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 14:13 - ಕನ್ನಡ ಸತ್ಯವೇದವು J.V. (BSI)

13 ಆದರೆ ಮೋಶೆ ಆ ಜನರಿಗೆ - ನೀವು ಅಂಜಬೇಡಿರಿ; ಸುಮ್ಮನೆ ನಿಂತುಕೊಂಡಿದ್ದು ಯೆಹೋವನು ಈ ಹೊತ್ತು ನಿಮ್ಮನ್ನು ರಕ್ಷಿಸುವ ರೀತಿಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದಿಗೂ ನೋಡುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆದರೆ ಮೋಶೆ ಆ ಜನರಿಗೆ, “ನೀವು ಅಂಜಬೇಡಿರಿ. ಸುಮ್ಮನೆ ನಿಂತುಕೊಂಡಿದ್ದು ಯೆಹೋವನು ಈ ಹೊತ್ತು ನಿಮ್ಮನ್ನು ರಕ್ಷಿಸುವ ರೀತಿಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದಿಗೂ ನೋಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅದಕ್ಕೆ ಮೋಶೆ ಆ ಜನರಿಗೆ, “ಅಂಜಬೇಡಿ, ಸುಮ್ಮನಿರಿ, ಈ ದಿನ ಸರ್ವೇಶ್ವರ ನಿಮ್ಮನ್ನು ಹೇಗೆ ರಕ್ಷಿಸುತ್ತಾರೆಂದು ನೋಡಿ! ಈ ದಿನ ನೀವು ನೋಡುವ ಈಜಿಪ್ಟಿನವರನ್ನು ಇನ್ನೆಂದಿಗೂ ನೋಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆದರೆ ಮೋಶೆ ಆ ಜನರಿಗೆ, “ಭಯಪಡಬೇಡಿರಿ! ಓಡಿಹೋಗಬೇಡಿರಿ! ಇಲ್ಲೇ ಇದ್ದು ಯೆಹೋವನು ಈ ದಿನ ನಿಮ್ಮನ್ನು ರಕ್ಷಿಸುವುದನ್ನು ನೋಡಿರಿ. ಈ ದಿನದ ನಂತರ ನೀವು ಇನ್ನೆಂದಿಗೂ ಈ ಈಜಿಪ್ಟಿನವರನ್ನು ನೋಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಅದಕ್ಕೆ ಮೋಶೆಯು ಜನರಿಗೆ, “ನೀವು ಭಯಪಡಬೇಡಿರಿ, ದೃಢವಾಗಿ ನಿಲ್ಲಿರಿ. ಯೆಹೋವ ದೇವರು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಈಜಿಪ್ಟಿನವರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 14:13
36 ತಿಳಿವುಗಳ ಹೋಲಿಕೆ  

ಈ ಸಾರಿ ನೀವು ಯುದ್ಧಮಾಡುವದು ಅವಶ್ಯವಿಲ್ಲ. ಯೆಹೂದ್ಯರೇ, ಯೆರೂಸಲೇವಿುನವರೇ, ಸುಮ್ಮನೆ ನಿಂತುಕೊಂಡು ಯೆಹೋವನು ನಿಮಗೋಸ್ಕರ ನಡಿಸುವ ರಕ್ಷಣಾಕಾರ್ಯವನ್ನು ನೋಡಿರಿ; ಹೆದರಬೇಡಿರಿ, ಕಳವಳಗೊಳ್ಳಬೇಡಿರಿ. ನಾಳೆ ಅವರೆದುರಿಗೆ ಹೊರಡಿರಿ, ಯೆಹೋವನು ನಿಮ್ಮ ಸಂಗಡ ಇರುವನು ಎಂದು ಹೇಳಿದನು.


ಅವನು - ಎಲ್ಲಾ ಯೆಹೂದ್ಯರೇ, ಯೆರೂಸಲೇವಿುನವರೇ, ಅರಸನಾದ ಯೆಹೋಷಾಫಾಟನೇ, ಯೆಹೋವನು ಹೇಳುವದನ್ನು ಕೇಳಿರಿ! ಈ ಮಹಾಸಮೂಹದ ನಿವಿುತ್ತವಾಗಿ ಕಳವಳಗೊಳ್ಳಬೇಡಿರಿ, ಹೆದರಬೇಡಿರಿ, ಯುದ್ಧವು ನಿಮ್ಮದಲ್ಲ, ದೇವರದೇ.


ಆ ದಿನದಲ್ಲಿ ಯೆಹೋವನು ಇಸ್ರಾಯೇಲ್ಯರನ್ನು ಐಗುಪ್ತ್ಯರ ಕೈಗೆ ತಪ್ಪಿಸಿದನು. ಐಗುಪ್ತ್ಯರು ಸತ್ತು ಸಮುದ್ರತೀರದಲ್ಲಿ ಬಿದ್ದಿರುವದನ್ನು ಇಸ್ರಾಯೇಲ್ಯರು ಕಂಡರು.


ಆಗ ಎಲೀಷನು ಅವನಿಗೆ - ಹೆದರಬೇಡ; ಅವರ ಕಡೆಯಲ್ಲಿರುವವರಿಗಿಂತಲೂ ನಮ್ಮ ಕಡೆಯಲ್ಲಿರುವವರು ಹೆಚ್ಚಾಗಿದ್ದಾರೆ ಎಂದು ಹೇಳಿ -


ಭಯಭ್ರಾಂತಹೃದಯರಿಗೆ - ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ದೈವಿಕ ಪ್ರತಿಫಲವನ್ನು ಕೊಡುವದಕ್ಕೂ ಬರುವನು; ತಾನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಹೇಳಿರಿ.


ಯೆಹೋವನ ರಕ್ಷಣಕಾರ್ಯವನ್ನು ಎದುರುನೋಡುತ್ತಾ ಶಾಂತವಾಗಿ ಕಾದುಕೊಂಡಿರುವದು ಒಳ್ಳೇದು.


ನಾನಾದರೋ ನೀನು ಐಗುಪ್ತದೇಶದಲ್ಲಿದ್ದ ಕಾಲದಿಂದ ಯೆಹೋವನೆಂಬ ನಿನ್ನ ದೇವರಾಗಿದ್ದೇನೆ. ನನ್ನ ಹೊರತು ಯಾವ ದೇವರೂ ನಿನಗೆ ಗೊತ್ತಿಲ್ಲ, ನನ್ನ ವಿನಹ ಯಾವ ರಕ್ಷಕನೂ ಇಲ್ಲ.


ನಿನ್ನ ಪ್ರಜೆಯ ರಕ್ಷಣೆಗೆ, ನಿನ್ನ ಅಭಿಷಿಕ್ತನ ಉದ್ಧಾರಕ್ಕೆ ಹೊರಟಿದ್ದೀ; ತಲೆಯನ್ನು ಕುತ್ತಿಗೆಯ ಬುಡದವರೆಗೆ ಹೊಡೆದುಹಾಕಿದ ಹಾಗೆ ತಳಾದಿಯು ಬೈಲಾಗುವಷ್ಟರ ಮಟ್ಟಿಗೆ ನೀನು ದುಷ್ಟನ ಮನೆಯನ್ನು ಹೊಡೆದಿದ್ದೀ. ಸೆಲಾ.


ನಾನೇ, ನಾನೇ ಯೆಹೋವನು; ನಾನು ಹೊರತು ಯಾವ ರಕ್ಷಕನೂ ಇಲ್ಲ.


ಹೀಗಿರುವದರಿಂದ ಯೆಹೋವನಿಗೆ ತಿರುಗಿಬೀಳಬೇಡಿರಿ. ಅದಲ್ಲದೆ ಆ ದೇಶದ ಜನರಿಗೆ ದಿಗಿಲುಪಡಬೇಡಿರಿ; ನಾವು ಅವರನ್ನು ನುಂಗಿ ಪುಷ್ಟಿಯಾಗುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟನು; ನಮ್ಮ ಕಡೆ ಯೆಹೋವನು ಇದ್ದಾನೆ. ಅವರಿಗೆ ಭಯಪಡಬೇಡಿರಿ ಅಂದರು.


ಯೆಹೋವನೇ, ನಿನ್ನಿಂದುಂಟಾಗುವ ರಕ್ಷಣೆಯು ಯಾವಾಗ ಆಗುವದೋ ಎಂದು ನಿರೀಕ್ಷಿಸಿಕೊಂಡಿದ್ದೇನೆ.


ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಜಾತ್ರೆಯ ಗದ್ದಲದಿಂದಲೂ ಮೋಸವಾಯಿತು; ನಿಜನಿಜವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಯೆಹೋವನಲ್ಲಿ ನೆಲೆಗೊಂಡಿದೆ.


ಐಗುಪ್ತದೇಶದಲ್ಲಿ ನಮ್ಮ ಪಿತೃಗಳಿಗಿದ್ದ ಕಷ್ಟವನ್ನು ನೋಡಿದಿ; ಕೆಂಪುಸಮುದ್ರದ ಬಳಿಯಲ್ಲಿ ಅವರು ಮೊರೆಯಿಟ್ಟಾಗ ನೀನು ಲಾಲಿಸಿದಿ.


ಈ ಸಂಗತಿಗಳು ನಡೆದ ಮೇಲೆ ಅಬ್ರಾಮನಿಗೆ ದರ್ಶನದಲ್ಲಿ ಯೆಹೋವನ ವಾಕ್ಯವುಂಟಾಯಿತು; ಏನಂದರೆ- ಅಬ್ರಾಮನೇ, ಭಯಪಡಬೇಡ, ನಾನು ನಿನಗೆ ಗುರಾಣಿಯಾಗಿದ್ದೇನೆ; ನಿನಗೋಸ್ಕರ ಅತ್ಯಧಿಕ ಬಹುಮಾನವು ಇಟ್ಟದೆ ಎಂಬುದೇ.


ರಕ್ಷಣೆಯು ಯೆಹೋವನಿಂದಲೇ ಉಂಟಾಗುವದು. [ಯೆಹೋವನೇ,] ನಿನ್ನ ಆಶೀರ್ವಾದವು ನಿನ್ನ ಪ್ರಜೆಯ ಮೇಲೆ ಇರಲಿ. ಸೆಲಾ.


ಸ್ಥಿರಚಿತ್ತನನ್ನು ಶಾಂತಿಯಲ್ಲಿ ನೆಲೆಗೊಳಿಸಿ ಕಾಯುವಿ; ಅವನಿಗೆ ನಿನ್ನಲ್ಲಿ ಭರವಸವಿದೆ.


ಆಗ ದೂತನು ಆ ಹೆಂಗಸರಿಗೆ - ನೀವು ಹೆದರಬೇಡಿರಿ; ಶಿಲುಬೆಗೆ ಹಾಕಲ್ಪಟ್ಟಿದ್ದ ಯೇಸುವನ್ನು ಹುಡುಕುತ್ತೀರೆಂದು ಬಲ್ಲೆನು; ಆತನು ಇಲ್ಲಿ ಇಲ್ಲ;


ಇಸ್ರಾಯೇಲ್ಯರ ಸದಮಲಸ್ವಾವಿುಯಾಗಿರುವ ಕರ್ತನಾದ ಯೆಹೋವನು - ನೀವು ತಿರುಗಿಕೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗುವದು; ಶಾಂತರಾಗಿ ಭರವಸದಿಂದಿರುವದೇ ನಿಮಗೆ ಬಲ ಎಂದು ಹೇಳಿದ್ದರೂ ನೀವು ಒಪ್ಪಿಕೊಂಡಿಲ್ಲ.


ಆ ವೀರರು ಹೊಲದ ಮಧ್ಯದಲ್ಲೇ ನಿಂತುಕೊಂಡು ಫಿಲಿಷ್ಟಿಯರನ್ನು ಕೊಂದು ಹೊಲವನ್ನು ಕಾಪಾಡಿದರು. ಹೀಗೆ ಯೆಹೋವನು ಅವರಿಗೆ ಮಹಾ ಜಯವನ್ನುಂಟುಮಾಡಿದನು.


ಯೆಹೋವನೇ, ನಿನಗೆ ನದಿಗಳ ಮೇಲೆ ರೌದ್ರವೋ? ಹೊಳೆಗಳಿಗೆ ಸಿಟ್ಟುಗೊಂಡಿದ್ದೀಯಾ? ಸಮುದ್ರದ ಮೇಲೆ ಕೋಪವೋ? ಏಕೆ ನಿನ್ನ ಅಶ್ವಗಳ ಮೇಲೆ ಆರೂಢನಾಗಿ ನಿನ್ನ ಜಯರಥಗಳಲ್ಲಿ ಆಸೀನನಾಗಿ ಬರುತ್ತಿದ್ದೀ?


ಇಸ್ರಾಯೇಲೇ, ನೀನು ನಿನ್ನ ಬೆಂಬಲವಾದ ನನಗೆ ತಿರುಗಿಬಿದ್ದದರಿಂದ ನಾಶವಾಗಿದ್ದಿ.


ಆತನು - ನಾನು ದೇವರು, ನಿನ್ನ ತಂದೆ ಆರಾಧಿಸಿದ ದೇವರು; ನೀನು ಗಟ್ಟಾ ಇಳಿದು ಹೆದರದೆ ಐಗುಪ್ತ ದೇಶಕ್ಕೆ ಹೋಗು; ಅಲ್ಲಿ ನಿನ್ನಿಂದ ಮಹಾಜನಾಂಗವುಂಟಾಗುವಂತೆ ಮಾಡುವೆನು.


ಅದಕ್ಕೆ ಮೋಶೆ - ಭಯಪಡಬೇಡಿರಿ. ದೇವರು ನಿಮ್ಮನ್ನು ಪರೀಕ್ಷಿಸಬೇಕೆಂತಲೂ ತನಗೆ ಭಯಪಟ್ಟು ನೀವು ಪಾಪವನ್ನು ಮಾಡದೆ ಇರಬೇಕೆಂತಲೂ ಬಂದಿದ್ದಾನೆ ಅಂದನು.


ಯೆಹೋವನು ಈ ಹೊತ್ತು ಇಸ್ರಾಯೇಲ್ಯರಿಗೆ ಜಯವನ್ನುಂಟುಮಾಡಿರುವದರಿಂದ ಯಾರನ್ನೂ ಕೊಲ್ಲಬಾರದು ಎಂದು ಹೇಳಿದನು.


ಈಗ ಯೆಹೋವನು ನಿಮ್ಮ ಕಣ್ಣುಮುಂದೆ ಮಾಡುವ ಮಹತ್ಕಾರ್ಯವನ್ನು ಹತ್ತಿರ ಬಂದು ನೋಡಿರಿ.


ಅವನಿಗೆ ಈ ಪ್ರಕಾರ ಹೇಳಬೇಕು - ಜಾಗರೂಕನಾಗಿ ಸುಮ್ಮನಿರು, ಭಯಪಡಬೇಡ! ರೆಚೀನ ಅರಾಮ್ಯರು ರೆಮಲ್ಯನ ಮಗ ಇವರ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟುಗೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.


ಆ ರಾತ್ರಿ ಯೆಹೋವನು ಅವನಿಗೆ ಕಾಣಿಸಿಕೊಂಡು - ನಾನು ನಿನ್ನ ತಂದೆಯಾದ ಅಬ್ರಹಾಮನ ದೇವರು; ನೀನು ಭಯಪಡಬೇಡ; ನಾನು ನಿನ್ನ ಬಳಿಯಲ್ಲಿದ್ದೇನೆ; ನನ್ನ ಸೇವಕನಾದ ಅಬ್ರಹಾಮನ ನಿವಿುತ್ತ ನಿನ್ನನ್ನು ಆಶೀರ್ವದಿಸಿ ನಿನ್ನ ಸಂತತಿಯನ್ನು ಹೆಚ್ಚಿಸುವೆನು ಎಂದು ಹೇಳಲಾಗಿ


ಆಹಾ, ಆತನು ತನ್ನ ವೈರಿಗಳ ಶಿರಸ್ಸುಗಳನ್ನೂ ಸ್ವೇಚ್ಫೆಯಿಂದ ಪಾಪದಲ್ಲಿ ಪ್ರವರ್ತಿಸುವವರ ತುಂಬುಗೂದಲಿನ ತಲೆಗಳನ್ನೂ ಒಡೆದು ಬಿಡುವನು.


ಆತನು ಸುರಕ್ಷಿತವಾಗಿ ನಡಿಸಿದ್ದರಿಂದ ಅವರು ಅಂಜಲಿಲ್ಲ; ಅವರ ಶತ್ರುಗಳನ್ನು ಸಮುದ್ರವು ಮುಚ್ಚಿಬಿಟ್ಟಿತು.


ನೀನು ಅದನ್ನು ಕಣ್ಣಾರೆ ಕಂಡು ದುಷ್ಟರಿಗೆ ಪ್ರತಿದಂಡನೆಯುಂಟೆಂಬದಕ್ಕೆ ಸಾಕ್ಷಿಯಾಗಿರುವಿಯಷ್ಟೆ.


ಆದರೆ ನಾನು ಯೆಹೂದ ವಂಶದವರಲ್ಲಿ ವಾತ್ಸಲ್ಯವಿಟ್ಟು ಅವರನ್ನು ಉದ್ಧರಿಸುವೆನು; ಬಿಲ್ಲು, ಕತ್ತಿ, ಕಾಳಗ, ಕುದುರೆ, ರಾಹುತ, ಈ ಮೂಲಕದಿಂದಲ್ಲ, ಅವರ ದೇವರಾದ ಯೆಹೋವನ ಬಲದಿಂದಲೇ ಅವರನ್ನು ರಕ್ಷಿಸುವೆನು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು