Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 14:22 - ಕನ್ನಡ ಸತ್ಯವೇದವು J.V. (BSI)

22 ಇಸ್ರಾಯೇಲ್ಯರು ಸಮುದ್ರದ ಮಧ್ಯದಲ್ಲಿ ಒಣನೆಲದಲ್ಲೇ ನಡೆದುಹೋದರು. ನೀರು ಅವರ ಎಡಗಡೆ ಬಲಗಡೆಗಳಲ್ಲಿ ಗೋಡೆಯಂತೆ ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣನೆಲದಲ್ಲಿ ನಡೆದುಹೋದರು. ನೀರು ಅವರ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಂತೆ ನಿಂತುಕೊಂಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಇಸ್ರಯೇಲರು ಸಮುದ್ರದ ಮಧ್ಯದಲ್ಲಿ ಒಣನೆಲದಲ್ಲೇ ನಡೆದುಹೋದರು. ನೀರು ಅವರ ಎಡಗಡೆ ಬಲಗಡೆಗಳಲ್ಲಿ ಗೋಡೆಯಂತೆ ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಇಸ್ರೇಲರು ಒಣನೆಲದ ಮೇಲೆ ಸಮುದ್ರವನ್ನು ದಾಟಿದರು. ನೀರು ಅವರ ಎಡಬಲಗಳಲ್ಲಿ ಗೋಡೆಯಂತೆ ನಿಂತಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಹೀಗೆ ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ನಡೆದುಹೋದರು. ನೀರು ಅವರಿಗೆ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಾಗಿ ನಿಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 14:22
27 ತಿಳಿವುಗಳ ಹೋಲಿಕೆ  

ನಂಬಿಕೆಯಿಂದಲೇ ಇಸ್ರಾಯೇಲ್ಯರು ಕೆಂಪುಸಮುದ್ರವನ್ನು ಒಣಭೂವಿುಯನ್ನು ದಾಟುವಂತೆ ದಾಟಿದರು; ಐಗುಪ್ತದೇಶದವರು ಅದನ್ನು ದಾಟುವದಕ್ಕೆ ಪ್ರಯತ್ನಿಸಿ ಮುಳುಗಿಹೋದರು.


ಸಮುದ್ರವನ್ನು ಒಣನೆಲವಾಗುವಂತೆ ಮಾಡಿದನು; ಜನರು ನದಿಯನ್ನು ಕಾಲಿನಿಂದ ದಾಟಿದರು; ಅದಕ್ಕಾಗಿ ನಾವು ಆತನಲ್ಲಿ ಆನಂದಪಡೋಣ.


ಆತನು ಸಮುದ್ರವನ್ನು ಭೇದಿಸಿ ಅದರ ನೀರನ್ನು ರಾಶಿಯಂತೆ ನಿಲ್ಲಿಸಿ ಅವರನ್ನು ದಾಟಿಸಿದನು.


[ಈ ಜಯಗೀತಕ್ಕೆ ಕಾರಣವೇನಂದರೆ -] ಫರೋಹನ ಕುದುರೆಗಳೂ ರಥಗಳೂ ರಾಹುತರೂ ಸಮುದ್ರದಲ್ಲಿ ಹೊಕ್ಕು ನಡೆಯಲು ಯೆಹೋವನು ಸಮುದ್ರದ ನೀರನ್ನು ಅವರ ಮೇಲೆ ತಿರಿಗಿ ಬರಮಾಡಿ ಮುಳುಗಿಸಿಬಿಟ್ಟನು; ಇಸ್ರಾಯೇಲ್ಯರಾದರೋ ಸಮುದ್ರದ ಮಧ್ಯದೊಳಗೆ ಒಣನೆಲದಲ್ಲಿ ನಡೆದುಹೋದರು.


ಇಸ್ರಾಯೇಲ್ಯರೋ ಸಮುದ್ರದೊಳಗೆ ಒಣನೆಲದಲ್ಲೇ ನಡೆದುಹೋದರು; ನೀರು ಅವರ ಎಡಗಡೆ ಬಲಗಡೆಗಳಲ್ಲಿ ಗೋಡೆಯಂತೆ ನಿಂತಿತ್ತು.


ಸಹೋದರರೇ, ಮುಂದಿನ ಸಂಗತಿಯಲ್ಲಿ ನೀವು ಲಕ್ಷ್ಯವಿಡಬೇಕೆಂದು ನಾನು ಅಪೇಕ್ಷಿಸುತ್ತೇನೆ. ಅದೇನಂದರೆ, ನಮ್ಮ ಪಿತೃಗಳೆಲ್ಲರೂ ಮೇಘದ ನೆರಳಿನಲ್ಲಿದ್ದರು;


ಸಾಗರದ ಅಡಿಯಲ್ಲಿ ಅವರನ್ನು ಕುದುರೆಯು ಮೈದಾನದಲ್ಲಿ ನಡೆಯುವ ಪ್ರಕಾರ ಮುಗ್ಗರಿಸದಂತೆ ನಡೆಯಿಸಿದಾತನು ಎಲ್ಲಿ?


ನಮ್ಮ ಪಿತೃಗಳು ಸಮುದ್ರ ಮಧ್ಯದಲ್ಲಿ ಒಣನೆಲದಲ್ಲೇ ಹಾದುಹೋಗುವಂತೆ ಅವರ ಮುಂದೆ ಸಮುದ್ರವನ್ನು ಭೇದಿಸಿದಿ. ಅವರನ್ನು ಹಿಂದಟ್ಟುವವರನ್ನು ಕಲ್ಲಿನಂತೆ ಮಹಾಜಲರಾಶಿಯ ತಳದಲ್ಲಿ ಮುಳುಗಿಸಿ ಬಿಟ್ಟಿ.


ನೀನು ಸಿಟ್ಟಿನಿಂದ ಮುಸುಗರೆದಾಗ ಸಮುದ್ರದ ನೀರು ಒಡ್ಡಿನಂತಾಯಿತು. ಪ್ರವಾಹವು ಗೋಡೆಯೋಪಾದಿಯಲ್ಲಿ ನಿಂತುಕೊಂಡಿತು. ಸಾಗರ ಗರ್ಭದೊಳಗಣ ಜಲವು ಗಟ್ಟಿಯಾಯಿತು.


ಪೀಹಹೀರೋತಿನಿಂದ ಹೊರಟು ಸಮುದ್ರದ ಮಧ್ಯದಲ್ಲೇ ನಡೆದು ಅರಣ್ಯಕ್ಕೆ ಬಂದರು. ಏತಾವಿುನ ಅರಣ್ಯದಲ್ಲಿ ಮೂರು ದಿನ ಪ್ರಯಾಣಮಾಡಿ ಮಾರಾ ಎಂಬ ಸ್ಥಳದಲ್ಲಿ ಇಳಿದುಕೊಂಡರು.


ನಾನೇ ಅದರ ಸುತ್ತುಮುತ್ತಲು ಅಗ್ನಿಪ್ರಾಕಾರವೂ ಅದರೊಳಗೆ ವೈಭವವೂ ಆಗಿರುವೆನು ಎಂಬದು ಯೆಹೋವನ ನುಡಿ.


ಯೆಹೋವನ ಒಡಂಬಡಿಕೆಯ ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿನ ಮಧ್ಯದಲ್ಲಿ ಒಣನೆಲದ ಮೇಲೆ ನಿಂತಿದ್ದರು. ಅಷ್ಟರಲ್ಲಿ ಇಸ್ರಾಯೇಲ್ಯರೆಲ್ಲರೂ ಒಣನೆಲದ ಮೇಲೆ ನಡೆದು ಹೋದರು. ಈ ಪ್ರಕಾರ ಜನರೆಲ್ಲಾ ಯೊರ್ದನಿನ ಆಚೆಗೆ ಸೇರಿದರು.


ಇಸ್ರಾಯೇಲ್ಯರು ಒಣನೆಲವಾಗಿದ್ದ ಈ ಯೊರ್ದನನ್ನು ದಾಟಿ ಬಂದದ್ದಕ್ಕಾಗಿ ಎಂದು ಹೇಳಿರಿ.


ನಾವು ಕುರಿಗಳನ್ನು ಮೇಯಿಸುವವರಾಗಿ ಅವರೊಡನೆ ಇದ್ದಾಗ ಅವರು ಹಗಲಿರುಳು ನಮಗೆ ಕಾವಲುಗೋಡೆಯಂತಿದ್ದರು.


ಅನಂತರ ಎಲೀಯನು ತನ್ನ ಕಂಬಳಿಯನ್ನು ಮಡಚಿ ಅದರಿಂದ ನೀರನ್ನು ಹೊಡೆಯಲು ನೀರು ಎರಡು ಭಾಗವಾಯಿತು; ಇಬ್ಬರೂ ಒಣನೆಲದ ಮೇಲೆ ದಾಟಿ ಹೋದರು.


ಬುಗ್ಗೆಹಳ್ಳಗಳನ್ನು ಉಕ್ಕಿಸಿದವನು ನೀನು; ಮಹಾನದಿಗಳನ್ನು ಒಣಗಿಸಿಬಿಟ್ಟವನು ನೀನು.


ಇಸ್ರಾಯೇಲ್ಯರನ್ನು ಅದರ ಮಧ್ಯದಲ್ಲಿಯೇ ನಡಿಸಿದನು; ಆತನ ಕೃಪೆಯು ಶಾಶ್ವತವಾದದ್ದು.


ಯಾವನು ಸಮುದ್ರದಲ್ಲಿ ದಾರಿಮಾಡಿ ಜಲಪ್ರವಾಹಗಳಲ್ಲಿ ಮಾರ್ಗವನ್ನು ಏರ್ಪಡಿಸಿದನೋ,


ಅವರ ಮಧ್ಯದಲ್ಲಿ ತನ್ನಪವಿತ್ರಾತ್ಮವನ್ನಿರಿಸಿ ಮೋಶೆಯ ಬಲಗೈಯೊಂದಿಗೆ ತನ್ನ ಘನಹಸ್ತವನ್ನೂ ಮುಂದರಿಸುತ್ತಾ ತನ್ನ ಹೆಸರು ಶಾಶ್ವತವಾಗಿರಬೇಕೆಂದು ಅವರೆದುರಿಗೆ ಜಲರಾಶಿಯನ್ನು ಭೇದಿಸಿ


ಮೇಲಣಿಂದ ಬರುವ ನೀರು ಬಹುದೂರದಲ್ಲಿದ್ದ ಚಾರೆತಾನಿನ ಹತ್ತಿರವಿರುವ ಆದಾಮ್ ಊರಿನ ತನಕ ರಾಶಿಯಾಗಿ ನಿಂತುಕೊಂಡಿತು. ಕೆಳಗಣ ನೀರು ಅರಾಬಾ ತಗ್ಗಿನಲ್ಲಿರುವ ಲವಣ ಸಮುದ್ರಕ್ಕೆ ಹರಿದುಹೋಯಿತು. ಜನರು ಯೆರಿಕೋವಿನ ಎದುರಿನಲ್ಲಿ ಹೊಳೆದಾಟಿದರು.


ಎಲೀಯನ ದೇವರಾದ ಯೆಹೋವನೆಲ್ಲಿ ಅಂದುಕೊಂಡು ಆ ಕಂಬಳಿಯಿಂದ ನೀರನ್ನು ಹೊಡೆಯಲು ಅದು ಎರಡು ಭಾಗವಾಯಿತು; ಅವನು ದಾಟಿಹೋದನು.


ಆತನು ಗದರಿಸಲು ಕೆಂಪು ಸಮುದ್ರವು ಒಣಗಿ ಹೋಯಿತು; ಅಡವಿಯನ್ನೋ ಎಂಬಂತೆ ಸಾಗರವನ್ನು ದಾಟಿಸಿದನು.


ಆತನು ಕೆಂಪುಸಮುದ್ರವನ್ನು ಭೇದಿಸಿದನು; ಆತನ ಕೃಪೆಯು ಶಾಶ್ವತವಾದದ್ದು.


ಆಗ ಯೆಹೋವನು ಐಗುಪ್ತ ಸಮುದ್ರದ ಕೊಲ್ಲಿಯನ್ನು ಸಂಪೂರ್ಣವಾಗಿ ನಾಶನಮಾಡುವನು; ಯೂಫ್ರೇಟೀಸ್ ನದಿಯ ಮೇಲೆ ಕೈ ಝಾಡಿಸಿ ತನ್ನ ಬಿಸಿಗಾಳಿಯಿಂದ ಅದನ್ನು ಏಳು ತೊರೆಗಳನ್ನಾಗಿ ಒಡೆದು ಜನರು ಕೆರ ಮೆಟ್ಟಿ ದಾಟುವಂತೆ ಮಾಡುವನು.


ಇದಲ್ಲದೆ ಇಸ್ರಾಯೇಲ್ಯರು ಐಗುಪ್ತ ದೇಶದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಮಾರ್ಗವು ಹೇಗೆ ಸಿದ್ಧವಾಯಿತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿಕೊಂಡು ಬರುವ ಆತನ ಜನಶೇಷಕ್ಕೆ ರಾಜಮಾರ್ಗವು ಸಿದ್ಧವಾಗುವದು.


ಸಮುದ್ರವನ್ನೂ ಮಹಾಸಾಗರದ ಜಲರಾಶಿಯನ್ನೂ ಬತ್ತಿಸಿ ವಿಮುಕ್ತಜನರು ಹಾದುಹೋಗುವದಕ್ಕೆ ಸಮುದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದ ಬಾಹು ನೀನೇ ಹೌದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು