Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 14:30 - ಕನ್ನಡ ಸತ್ಯವೇದವು J.V. (BSI)

30 ಆ ದಿನದಲ್ಲಿ ಯೆಹೋವನು ಇಸ್ರಾಯೇಲ್ಯರನ್ನು ಐಗುಪ್ತ್ಯರ ಕೈಗೆ ತಪ್ಪಿಸಿದನು. ಐಗುಪ್ತ್ಯರು ಸತ್ತು ಸಮುದ್ರತೀರದಲ್ಲಿ ಬಿದ್ದಿರುವದನ್ನು ಇಸ್ರಾಯೇಲ್ಯರು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆ ದಿನದಲ್ಲಿ ಯೆಹೋವನು ಇಸ್ರಾಯೇಲ್ಯರನ್ನು ಐಗುಪ್ತ್ಯರ ಕೈಯಿಂದ ರಕ್ಷಿಸಿದನು. ಐಗುಪ್ತ್ಯರು ಸತ್ತು ಸಮುದ್ರ ತೀರದಲ್ಲಿ ಬಿದ್ದಿರುವುದನ್ನು ಇಸ್ರಾಯೇಲರು ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಆ ದಿನ ಸರ್ವೇಶ್ವರ ಸ್ವಾಮಿ ಇಸ್ರಯೇಲರನ್ನು ಈಜಿಪ್ಟಿನವರ ಕೈಯಿಂದ ರಕ್ಷಿಸಿದರು. ಈಜಿಪ್ಟಿನವರು ಸತ್ತು ಸಮುದ್ರ ತೀರದಲ್ಲಿ ಬಿದ್ದಿರುವುದನ್ನು ಇಸ್ರಯೇಲರು ಕಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆದ್ದರಿಂದ ಆ ದಿನ ಯೆಹೋವನು ಇಸ್ರೇಲರನ್ನು ಈಜಿಪ್ಟಿನವರಿಂದ ರಕ್ಷಿಸಿದನು. ಇಸ್ರೇಲರು ಕೆಂಪುಸಮುದ್ರದ ದಡದಲ್ಲಿ ಬಿದ್ದಿದ್ದ ಈಜಿಪ್ಟಿನವರ ಹೆಣಗಳನ್ನು ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆ ದಿನದಲ್ಲಿ ಯೆಹೋವ ದೇವರು ಈ ಪ್ರಕಾರ ಇಸ್ರಾಯೇಲರನ್ನು ಈಜಿಪ್ಟಿನವರ ಕೈಯಿಂದ ರಕ್ಷಿಸಿದರು. ಇಸ್ರಾಯೇಲರು ಸಮುದ್ರ ತೀರದಲ್ಲಿ ಸತ್ತ ಈಜಿಪ್ಟಿನವರನ್ನು ನೋಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 14:30
17 ತಿಳಿವುಗಳ ಹೋಲಿಕೆ  

ಹಗೆಗಳ ಕೈಯಿಂದ ಅವರನ್ನು ತಪ್ಪಿಸಿದನು; ವೈರಿಹಸ್ತದಿಂದ ಬಿಡಿಸಿದನು.


ಆದರೂ ಆತನು ತನ್ನ ಹೆಸರಿನ ನಿವಿುತ್ತವಾಗಿಯೂ ತನ್ನ ಶೌರ್ಯವನ್ನು ಪ್ರಕಟಿಸುವದಕ್ಕಾಗಿಯೂ ಅವರನ್ನು ರಕ್ಷಿಸಿದನು.


ನೀವು ಸಮಸ್ತವನ್ನು ಮೊದಲೇ ತಿಳಿದವರಾಗಿದ್ದರೂ ನಾನು ಮುಂದಣ ಕೆಲವು ಸಂಗತಿಗಳನ್ನು ನಿಮ್ಮ ಜ್ಞಾಪಕಕ್ಕೆ ತರಬೇಕೆಂದು ಅಪೇಕ್ಷಿಸುತ್ತೇನೆ. ಅವು ಯಾವವಂದರೆ - ಕರ್ತನು ತನ್ನ ಪ್ರಜೆಯನ್ನು ಐಗುಪ್ತ ದೇಶದೊಳಗಿಂದ ಬಿಡಿಸಿದ ತರುವಾಯ ಅವರೊಳಗೆ ನಂಬದೆಹೋದವರನ್ನು ನಾಶಮಾಡಿದನು.


ದುಷ್ಟರಿಗಾಗುವ ಪ್ರತಿದಂಡನೆಯನ್ನು ಭಕ್ತರು ನೋಡಿ ಹರ್ಷಿಸಿ ಅವರ ರಕ್ತದಲ್ಲಿ ಕಾಲಾಡಿಸುವರು.


ನನ್ನ ದೇವರು ಪ್ರಸನ್ನನಾಗಿ ನನಗೆ ಸಹಾಯಮಾಡುವನು; ನನ್ನ ವಿರೋಧಿಗಳಿಗುಂಟಾದ ಶಿಕ್ಷೆಯನ್ನು ನಾನು ನೋಡುವಂತೆ ಮಾಡುವನು.


ಹೀಗೆ ಯೆಹೋವನು ಆ ದಿನದಲ್ಲಿ ಇಸ್ರಾಯೇಲ್ಯರಿಗೆ ಜಯವನ್ನುಂಟುಮಾಡಿದನು. ಯುದ್ಧವು ಬೇತಾವೆನಿನ ಆಚೆಯ ತನಕ ನಡೆಯಿತು.


ಆದರೆ ಮೋಶೆ ಆ ಜನರಿಗೆ - ನೀವು ಅಂಜಬೇಡಿರಿ; ಸುಮ್ಮನೆ ನಿಂತುಕೊಂಡಿದ್ದು ಯೆಹೋವನು ಈ ಹೊತ್ತು ನಿಮ್ಮನ್ನು ರಕ್ಷಿಸುವ ರೀತಿಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದಿಗೂ ನೋಡುವದಿಲ್ಲ.


ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಶ್ರೀಮುಖಸ್ವರೂಪದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ ಪುರಾತನಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು.


ನೀನು ಅದನ್ನು ಕಣ್ಣಾರೆ ಕಂಡು ದುಷ್ಟರಿಗೆ ಪ್ರತಿದಂಡನೆಯುಂಟೆಂಬದಕ್ಕೆ ಸಾಕ್ಷಿಯಾಗಿರುವಿಯಷ್ಟೆ.


ಹೀಗೆ ಯೆಹೋವನು ಹಿಜ್ಕೀಯನನ್ನೂ ಯೆರೂಸಲೇವಿುನವರನ್ನೂ ಅಶ್ಶೂರದ ಅರಸನಾದ ಸನ್ಹೇರೀಬನ ಕೈಗೂ ಸುತ್ತಣ ಎಲ್ಲಾ ಶತ್ರುಗಳ ಕೈಗೂ ಸಿಕ್ಕದಂತೆ ತಪ್ಪಿಸಿ ಕಾಪಾಡುತ್ತಿದ್ದನು.


ಬೇರೆ ಯಾವ ದೇವರಾದರೂ ಮನಶ್ಶೋಧನೆ, ಮಹತ್ಕಾರ್ಯ, ಉತ್ಪಾತ, ಯುದ್ಧ, ಭುಜಪರಾಕ್ರಮ, ಶಿಕ್ಷಾಹಸ್ತ, ಮಹಾಭೀತಿ ಇವುಗಳನ್ನು ಪ್ರಯೋಗಿಸಿ ಒಂದು ಜನಾಂಗವನ್ನು ಮತ್ತೊಂದು ಜನಾಂಗದ ಕೈಯೊಳಗಿಂದ ತಪ್ಪಿಸುವದಕ್ಕೆ ಪ್ರಯತ್ನಿಸಿದ್ದುಂಟೋ? ನಿಮ್ಮ ದೇವರಾದ ಯೆಹೋವನಾದರೋ ಐಗುಪ್ತದೇಶದಲ್ಲಿ ನಿಮಗೋಸ್ಕರ ಇದನ್ನೆಲ್ಲಾ ನಿಮ್ಮ ಕಣ್ಣಿಗೆದುರಾಗಿ ನಡಿಸಿದನಲ್ಲಾ.


ಯೆಹೋವನು ಈ ಹೊತ್ತು ಇಸ್ರಾಯೇಲ್ಯರಿಗೆ ಜಯವನ್ನುಂಟುಮಾಡಿರುವದರಿಂದ ಯಾರನ್ನೂ ಕೊಲ್ಲಬಾರದು ಎಂದು ಹೇಳಿದನು.


ನಿಜವಾಗಿ ಇವರು ನನ್ನ ಜನರು, ನನ್ನ ಮಕ್ಕಳು, ಮೋಸ ಮಾಡಲಾರರು ಎಂದು ಆತನು ಅಂದುಕೊಂಡು ಅವರಿಗೆ ರಕ್ಷಕನಾದನು.


ಆಗ ಆತನ ಜನರು ಪುರಾತನವಾದ ಮೋಶೆಯ ಕಾಲವನ್ನು ಜ್ಞಾಪಕಮಾಡಿಕೊಂಡು ಹೀಗಂದರು - ತನ್ನ ಜನವೆಂಬ ಮಂದೆಯನ್ನು ಕುರುಬರ ಸಹಿತ ಸಮುದ್ರದೊಳಗಿಂದ ಮೇಲಕ್ಕೆ ಬರಮಾಡಿದಾತನು ಎಲ್ಲಿ?


ಐಗುಪ್ತ, ಅಮೋರಿಯ, ಅಮ್ಮೋನಿಯ, ಫಿಲಿಷ್ಟಿಯ, ಚೀದೋನ್ಯ, ಅಮಾಲೇಕ್ಯ, ಮಾವೋನ್ಯ


ಆದರೆ ನಾನು ಯೆಹೂದ ವಂಶದವರಲ್ಲಿ ವಾತ್ಸಲ್ಯವಿಟ್ಟು ಅವರನ್ನು ಉದ್ಧರಿಸುವೆನು; ಬಿಲ್ಲು, ಕತ್ತಿ, ಕಾಳಗ, ಕುದುರೆ, ರಾಹುತ, ಈ ಮೂಲಕದಿಂದಲ್ಲ, ಅವರ ದೇವರಾದ ಯೆಹೋವನ ಬಲದಿಂದಲೇ ಅವರನ್ನು ರಕ್ಷಿಸುವೆನು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು