Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 14:4 - ಕನ್ನಡ ಸತ್ಯವೇದವು J.V. (BSI)

4 ನಾನು ಫರೋಹನ ಹೃದಯವನ್ನು ಕಠಿಣಪಡಿಸುವೆನಾದದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು; ಆಗ ನಾನು ಫರೋಹನಲ್ಲಿಯೂ ಅವನ ಸೈನ್ಯದಲ್ಲಿಯೂ ಪ್ರಖ್ಯಾತಿಗೊಳ್ಳುವೆನು. ನಾನೇ ಯೆಹೋವನೆಂಬದು ಐಗುಪ್ತ್ಯರಿಗೆ ತಿಳಿದುಬರುವದು ಎಂದು ಹೇಳಿದನು. ಯೆಹೋವನು ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ನಡೆದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ಫರೋಹನ ಹೃದಯವನ್ನು ಕಠಿಣಪಡಿಸುವೆನು. ಆದುದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು. ಆಗ ನಾನು ಫರೋಹನಲ್ಲಿಯೂ, ಅವನ ಸೈನ್ಯದಲ್ಲಿಯೂ ಮಹಿಮೆಗೊಳ್ಳುವೆನು. ‘ನಾನೇ ಯೆಹೋವನು’ ಎಂದು ಐಗುಪ್ತ್ಯರಿಗೆ ತಿಳಿದು ಬರುವುದು” ಎಂದು ಹೇಳಿದನು. ಯೆಹೋವನು ಆಜ್ಞಾಪಿಸಿದಂತೆಯೇ ಇಸ್ರಾಯೇಲರು ನಡೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಾನು ಫರೋಹನ ಹೃದಯವನ್ನು ಕಠಿಣವಾಗಿಸುವೆನು. ಆದುದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು. ಆಗ ಆ ಫರೋಹನನ್ನೂ ಅವನ ಸೈನ್ಯವನ್ನೂ ಗೆದ್ದು ನಾನು ಪ್ರಖ್ಯಾತಿ ಹೊಂದುವೆನು. ನಾನೇ ಸರ್ವೇಶ್ವರ ಎಂಬುದು ಈಜಿಪ್ಟಿನವರಿಗೆ ಗೊತ್ತಾಗುವುದು.” ಸರ್ವೇಶ್ವರನ ಆಜ್ಞೆಯಂತೆಯೇ ಇಸ್ರಯೇಲರು ನಡೆದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾನು ಫರೋಹನ ಹೃದಯವನ್ನು ಕಠಿಣಪಡಿಸುವುದರಿಂದ ಅವನು ನಿಮ್ಮನ್ನು ಬೆನ್ನಟ್ಟುವನು. ಆದರೆ ನಾನು ಫರೋಹನನ್ನು ಮತ್ತು ಅವನ ಸೈನ್ಯವನ್ನು ಸೋಲಿಸುವೆನು. ಇದು ನನಗೆ ಗೌರವವನ್ನು ತರುವುದು. ಆಗ ನಾನೇ ಯೆಹೋವನೆಂದು ಈಜಿಪ್ಟಿನ ಜನರು ತಿಳಿದುಕೊಳ್ಳುವರು” ಎಂದು ಹೇಳಿದನು. ಇಸ್ರೇಲರು ದೇವರಿಗೆ ವಿಧೇಯರಾಗಿ ಆತನು ಹೇಳಿದ್ದನ್ನು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇದಲ್ಲದೆ ಫರೋಹನು ನಿಮ್ಮನ್ನು ಹಿಂದಟ್ಟುವಂತೆ ನಾನು ಅವನ ಹೃದಯವನ್ನು ಕಠಿಣ ಮಾಡುವೆನು. ಫರೋಹನಲ್ಲಿಯೂ, ಅವನ ಎಲ್ಲಾ ಸೈನ್ಯದಲ್ಲಿಯೂ ನನ್ನನ್ನು ಘನಪಡಿಸಿಕೊಳ್ಳುವೆನು. ಆಗ ನಾನೇ ಯೆಹೋವ ದೇವರೆಂದು ಈಜಿಪ್ಟಿನವರು ತಿಳಿಯುವರು,” ಎಂದು ಹೇಳಿದರು. ಅದರಂತೆಯೇ ಇಸ್ರಾಯೇಲರು ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 14:4
36 ತಿಳಿವುಗಳ ಹೋಲಿಕೆ  

ದೇವರು ಫರೋಹನನ್ನು ಕುರಿತು - ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಖ್ಯಾತಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಉನ್ನತಸ್ಥಾನಕ್ಕೆ ತಂದಿದ್ದೇನೆಂದು ಹೇಳಿದನೆಂಬದಾಗಿ ಶಾಸ್ತ್ರೋಕ್ತಿ ಉಂಟು.


ನಾನು ಐಗುಪ್ತ್ಯರಿಗೆ ವಿರೋಧವಾಗಿ ಕೈಚಾಚಿ ಅವರ ಮಧ್ಯದಿಂದ ಇಸ್ರಾಯೇಲ್ಯರನ್ನು ಹೊರತಂದಾಗ ನಾನು ಯೆಹೋವನೆಂಬದನ್ನು ಐಗುಪ್ತ್ಯರು ತಿಳಿದುಕೊಳ್ಳುವರು ಅಂದನು.


ಆದರೂ ನಾನು ಫರೋಹನ ಮನಸ್ಸಿನಲ್ಲಿ ಹಟವನ್ನು ಹುಟ್ಟಿಸಿ ಐಗುಪ್ತ ದೇಶದಲ್ಲಿ ಅನೇಕ ಸೂಚಕಕಾರ್ಯಗಳನ್ನೂ ಅದ್ಭುತ ಕಾರ್ಯಗಳನ್ನೂ ನಡಿಸಿ ನನ್ನ ಶಕ್ತಿಯನ್ನು ತೋರಿಸುವೆನು.


ಆದರೆ ನಾನು ನಿನ್ನಲ್ಲಿ ನನ್ನ ಶಕ್ತಿಯನ್ನು ತೋರಿಸಿ ನನ್ನ ಹೆಸರನ್ನು ಲೋಕದಲ್ಲೆಲ್ಲಾ ಪ್ರಸಿದ್ಧಿಪಡಿಸಬೇಕೆಂಬ ಉದ್ದೇಶದಿಂದಲೇ ನಿನ್ನನ್ನು ಸಾಯಿಸದೆ ಉಳಿಸಿದೆನು.


ಆದದರಿಂದ ಯೆಹೋವನು ಮತ್ತೆ ಹೇಳುವದೇನಂದರೆ - ನೀನು ನನ್ನನ್ನು ಯೆಹೋವನೆಂದು ತಿಳಿದುಕೊಳ್ಳುವದಕ್ಕಾಗಿ ನನ್ನ [ಸೇವಕನ] ಕೈಯಲ್ಲಿರುವ ಕೋಲಿನಿಂದ ನೈಲ್ ನದಿಯ ನೀರನ್ನು ಹೊಡಿಸುವೆನು; ಆಗ ಅದು ರಕ್ತವಾಗುವದು.


ದೇವರು ಅವರಿಗೆ ಜಡಭಾವವನ್ನು ಅಂದರೆ ಕಾಣದ ಕಣ್ಣುಗಳನ್ನೂ ಕೇಳದ ಕಿವಿಗಳನ್ನೂ ಕೊಟ್ಟನು; ಈ ಭಾವವು ಈ ಹೊತ್ತಿನವರೆಗೂ ಹಾಗೆಯೇ ಅದೆ ಎಂದು ಬರೆದ ಪ್ರಕಾರ ಅವರಿಗೆ ಆಯಿತು.


ಹೌದು, ದೇಶದ ಸಕಲಪ್ರಜೆಗಳು ಅವರನ್ನು ಹೂಳಿಬಿಡುವರು; ಹೀಗೆ ನಾನು ಪ್ರಖ್ಯಾತಿಗೊಳ್ಳುವಾಗ ನನ್ನ ಜನರಿಗೆ ಹೆಸರುವಾಸಿಯಾಗುವದು; ಇದು ಕರ್ತನಾದ ಯೆಹೋವನ ನುಡಿ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆಹಾ, ಚೀದೋನೇ, ನಾನು ನಿನಗೆ ವಿರುದ್ಧವಾಗಿ ನಿನ್ನ ಮಧ್ಯದಲ್ಲಿ ಪ್ರಖ್ಯಾತಿಗೊಳ್ಳುವೆನು; ನಾನು ಈ ಪಟ್ಟಣವನ್ನು ದಂಡಿಸಿ ನನ್ನ ಗೌರವವನ್ನು ಕಾಪಾಡಿಕೊಂಡ ಮೇಲೆ ನಾನೇ ಯೆಹೋವನು ಎಂದು ಎಲ್ಲರಿಗೂ ಗೊತ್ತಾಗುವದು.


ಆದರೂ ನಿಮ್ಮನ್ನು ಐಗುಪ್ತದೇಶದೊಳಗಿಂದ ಪಾರುಮಾಡುವೆನು ಎಂಬದಾಗಿ ಜನಾಂಗಗಳ ಮುಂದೆಯೇ ನನ್ನನ್ನು ಇವರಿಗೆ ಪ್ರಕಟಿಸಿಕೊಂಡೆನಲ್ಲಾ ಎಂದು ಯೋಚಿಸಿ ಅವರ ಸುತ್ತಣ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗದಂತೆ ನನ್ನ ಹೆಸರಿನ ನಿವಿುತ್ತವೇ ಸಹಿಸಿಕೊಂಡೆನು.


ಐಗುಪ್ತ್ಯರು ಗರ್ವಿಗಳಾಗಿ ಅವರನ್ನು ಕುಗ್ಗಿಸಿದಾಗ ನೀನು ಫರೋಹನಲ್ಲಿಯೂ ಅವನ ಸೇವಕರಲ್ಲಿಯೂ ಅವನ ದೇಶದ ಜನರಲ್ಲಿಯೂ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ನಡಿಸಿ ಈಗ ನಿನಗಿರುವ ಕೀರ್ತಿಯನ್ನು ಸ್ಥಾಪಿಸಿದಿ.


ಆತನು ತನ್ನ ಜನರನ್ನು ಅವರ ಕೈಯಿಂದ ಬಿಡಿಸಿ ಆ ಐಗುಪ್ತ್ಯರು ಯಾವ ವಿಷಯದಲ್ಲಿ ಗರ್ವಪಡುತ್ತಿದ್ದರೋ ಆ ವಿಷಯದಲ್ಲಿ ಅವರನ್ನು ತಗ್ಗಿಸಿದ್ದರಿಂದ ಯೆಹೋವನೇ ಎಲ್ಲಾ ದೇವರುಗಳಿಗಿಂತಲೂ ದೊಡ್ಡವನೆಂದು ಈಗ ತಿಳಿದುಕೊಂಡಿದ್ದೇನೆ ಅಂದನು.


ಯೆಹೋವನು ಐಗುಪ್ತದೇಶದ ಅರಸನಾದ ಫರೋಹನ ಹೃದಯವನ್ನು ಕಠಿಣಪಡಿಸಿದ್ದದರಿಂದ ಅವನು ಇಸ್ರಾಯೇಲ್ಯರನ್ನು ಬೆನ್ನಟ್ಟಿಹೋದನು. ಇಸ್ರಾಯೇಲ್ಯರು ಅಟ್ಟಹಾಸದಿಂದ ಹೊರಟರು.


ದೇವರು ಯಾರನ್ನು ಕರುಣಿಸಿದರೂ ಯಾರನ್ನು ಕಠಿಣಪಡಿಸಿದರೂ ಅದೆಲ್ಲವು ಆತನ ಇಷ್ಟಾನುಸಾರವಾಗಿಯೇ ಇದೆ ಎಂಬದು ಇದರಿಂದ ತೋರಿಬರುತ್ತದೆ.


ಆದರೂ ಯೆಹೋವನು ಫರೋಹನ ಹೃದಯವನ್ನು ಕಠಿಣಪಡಿಸಿದದರಿಂದ ಅವರಿಗೆ ಅಪ್ಪಣೆ ಕೊಡುವದಕ್ಕೆ ಫರೋಹನು ಒಪ್ಪಲಿಲ್ಲ.


ಫರೋಹನು ಅದನ್ನು ಕಂಡು - ಇಸ್ರಾಯೇಲ್ಯರಿಗೆ ದಾರಿತಪ್ಪಿತು, ಎಲ್ಲಾ ಕಡೆಯಲ್ಲಿಯೂ ಅರಣ್ಯವು ಅವರನ್ನು ಸುತ್ತಿಕೊಂಡದೆ ಅಂದುಕೊಳ್ಳುವನು.


ಇಸ್ರಾಯೇಲ್ಯರು ಓಡಿಹೋದರೆಂಬ ವರ್ತಮಾನವು ಫರೋಹನಿಗೆ ತಿಳಿದುಬಂದಾಗ ಅವರ ವಿಷಯದಲ್ಲಿ ಫರೋಹನ ಮನಸ್ಸೂ ಅವನ ಪರಿವಾರದವರ ಮನಸ್ಸೂ ಬೇರೆಯಾಯಿತು. ಅವರು - ಇದೇನು ನಾವು ಮಾಡಿದ್ದು? ನಮಗೆ ದಾಸರಾಗಿದ್ದ ಇಸ್ರಾಯೇಲ್ಯರನ್ನು ಯಾತಕ್ಕೆ ಹೋಗಗೊಡಿಸಿದೆವು ಅಂದುಕೊಂಡರು.


ಐಗುಪ್ತ್ಯರೂ ಅಂದರೆ ಫರೋಹನ ಕುದುರೆಗಳೂ ರಥಗಳೂ ರಾಹುತರೂ ಅವರನ್ನು ಬೆನ್ನಟ್ಟುವವರಾಗಿ ಅವರ ಹಿಂದೆಯೇ ಸಮುದ್ರದೊಳಗೆ ಹೋದರು.


ಆತನು ಅವರ ರಥಗಳ ಚಕ್ರಗಳನ್ನು ತೆಗೆದುಬಿಟ್ಟದ್ದರಿಂದ ಐಗುಪ್ತ್ಯರು ಬಹು ಕಷ್ಟದಿಂದ ಹೊಡಕೊಂಡು ಹೋದರು. ಆಗ ಐಗುಪ್ತ್ಯರು - ನಾವು ಇಸ್ರಾಯೇಲ್ಯರ ಮುಂದೆ ನಿಲ್ಲಲಾರೆವು, ಓಡಿಹೋಗೋಣ; ಯೆಹೋವನು ಅವರಿಗೋಸ್ಕರ ನಮಗೆ ವಿರೋಧವಾಗಿ ಯುದ್ಧಮಾಡುತ್ತಾನೆ ಎಂದು ಹೇಳಿಕೊಂಡರು.


ಆಗ ಮೋಶೆ ಆರೋನನಿಗೆ - ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನಂದರೆ - ನಾನು ಪರಿಶುದ್ಧನೆಂಬದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬದೇ ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.


ಐಗುಪ್ತದಲ್ಲಿ ತುಂಬಿದ್ದ ಸೊತ್ತನ್ನೆಲ್ಲಾ ನಾನು ನೀಗಿಸಿ ಆ ದೇಶವನ್ನು ಹಾಳುಪಾಳುಮಾಡಿ ಅಲ್ಲಿನ ಸಕಲ ನಿವಾಸಿಗಳನ್ನು ಸಂಹರಿಸಿದಾಗ ನಾನೇ ಯೆಹೋವನು ಎಂದು ಗೊತ್ತಾಗುವದು.


ನಾನು ನಿಮ್ಮನ್ನು ನನ್ನ ಪ್ರಜೆಯೆಂದು ಆರಿಸಿಕೊಂಡು ನಿಮಗೆ ದೇವರಾಗಿರುವೆನು. ಐಗುಪ್ತ್ಯರು ಮಾಡಿಸುವ ಬಿಟ್ಟೀ ಸೇವೆಯನ್ನು ನಾನು ನಿಮಗೆ ತಪ್ಪಿಸಿದಾಗ ಯೆಹೋವನು ಎಂಬ ನಾನೇ ನಿಮ್ಮ ದೇವರಾಗಿದ್ದೇನೆಂಬದು ನಿಮಗೆ ತಿಳಿದುಬರುವದು.


ಇಸ್ರಾಯೇಲ್ಯರು ತಮ್ಮ ಮಕ್ಕಳಿಗೂ ಮೊಮ್ಮಕ್ಕಳಿಗೂ ನಾನು ಐಗುಪ್ತ್ಯರ ನಡುವೆ ನಡಿಸಿರುವ ಮಹತ್ಕಾರ್ಯಗಳನ್ನು ವಿವರಿಸಿ - ಯೆಹೋವನು ಐಗುಪ್ತ್ಯರನ್ನು ತನಗೆ ಇಷ್ಟಬಂದಂತೆ ಆಡಿಸಿ ಶಿಕ್ಷಿಸಿದನು ಎಂಬದಾಗಿ ತಿಳಿಸುವದಕ್ಕೂ ನಾನು ಫರೋಹನ ಹೃದಯವನ್ನೂ ಅವನ ಪರಿವಾರದವರ ಹೃದಯಗಳನ್ನೂ ಮೊಂಡುಮಾಡಿದ್ದೇನೆ. ಇದಲ್ಲದೆ ಈ ಮಹತ್ಕಾರ್ಯಗಳಿಂದ ನೀವು ನನ್ನನ್ನೇ ಯೆಹೋವನೆಂದು ತಿಳುಕೊಳ್ಳುವಿರಿ.


ಜನರು ತಲೆಬಾಗಿ ನಮಸ್ಕರಿಸಿದರು. ಇಸ್ರಾಯೇಲ್ಯರು ಅಲ್ಲಿಂದ ಹೊರಟು ಯೆಹೋವನು ಮೋಶೆ ಆರೋನರಿಗೆ ಆಜ್ಞಾಪಿಸಿದ ಪ್ರಕಾರವೇ ನಡಿಸಿದರು.


ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಇಸ್ರಾಯೇಲ್ಯರು ಅವರೆಲ್ಲರನ್ನೂ ಕರುಣೆಯಿಲ್ಲದೆ ಸಂಹರಿಸಿಬಿಡುವ ಹಾಗೆ ಆತನು ತಾನೇ ಆ ಜನರ ಹೃದಯಗಳನ್ನು ಕಠಿಣಪಡಿಸಿ ಯುದ್ಧಕ್ಕೆ ಬರಮಾಡಿದನು.


ನಾನು ಯಾಬೀನನ ಸೇನಾಪತಿಯಾದ ಸೀಸೆರನನ್ನೂ ಅವನ ಸೈನ್ಯರಥಗಳನ್ನೂ ನಿನ್ನ ಬಳಿಗೆ ಕೀಷೋನ್ ಹಳ್ಳಕ್ಕೆ ಎಳೆದುಕೊಂಡು ಬಂದು ನಿನ್ನ ಕೈಗೆ ಒಪ್ಪಿಸುವೆನು ಎಂದು ಆಜ್ಞಾಪಿಸಿದ್ದಾನೆ ಅಂದಳು.


ನನ್ನ ಜನರಾದ ಇಸ್ರಾಯೇಲ್ಯರ ಮೇಲೆ ಬಿದ್ದು ಕಾರ್ಮುಗಿಲಿನೋಪಾದಿಯಲ್ಲಿ ದೇಶವನ್ನು ಮುಚ್ಚಿಬಿಡುವಿ; ಗೋಗನೇ, ಜನಾಂಗಗಳ ಕಣ್ಣೆದುರಿಗೆ ನಿನ್ನ ನಾಶನದಿಂದ ನನ್ನ ಗೌರವವನ್ನು ಕಾಪಾಡಿಕೊಂಡು ನಾನೇ ಯೆಹೋವನೆಂದು ಜನಾಂಗಗಳಿಗೆ ಗೋಚರನಾಗುವಂತೆ ನಾನು ನಿನ್ನನ್ನು ಕಾಲಾನುಕಾಲಕ್ಕೆ ನನ್ನ ದೇಶದ ಮೇಲೆ ಬೀಳಮಾಡುವೆನು.


ಹೀಗೆ ನಾನು ನನ್ನ ಮಹಿಮೆಯನ್ನು ತೋರ್ಪಡಿಸಿ ನನ್ನ ಗೌರವವನ್ನು ಕಾಪಾಡಿಕೊಂಡು ಬಹುಜನಾಂಗಳು ನಾನೇ ಯೆಹೋವನು ಎಂದು ತಿಳಿದುಕೊಳ್ಳುವಂತೆ ಅವುಗಳ ಕಣ್ಣೆದುರಿಗೆ ವ್ಯಕ್ತನಾಗುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು