Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 14:5 - ಕನ್ನಡ ಸತ್ಯವೇದವು J.V. (BSI)

5 ಇಸ್ರಾಯೇಲ್ಯರು ಓಡಿಹೋದರೆಂಬ ವರ್ತಮಾನವು ಫರೋಹನಿಗೆ ತಿಳಿದುಬಂದಾಗ ಅವರ ವಿಷಯದಲ್ಲಿ ಫರೋಹನ ಮನಸ್ಸೂ ಅವನ ಪರಿವಾರದವರ ಮನಸ್ಸೂ ಬೇರೆಯಾಯಿತು. ಅವರು - ಇದೇನು ನಾವು ಮಾಡಿದ್ದು? ನಮಗೆ ದಾಸರಾಗಿದ್ದ ಇಸ್ರಾಯೇಲ್ಯರನ್ನು ಯಾತಕ್ಕೆ ಹೋಗಗೊಡಿಸಿದೆವು ಅಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇಸ್ರಾಯೇಲರು ಓಡಿಹೋದರೆಂಬ ವರ್ತಮಾನವು ಐಗುಪ್ತದ ಅರಸನಾದ ಫರೋಹನಿಗೆ ತಿಳಿದುಬಂದಾಗ, ಅವರ ವಿಷಯದಲ್ಲಿ ಫರೋಹನ ಮತ್ತು ಅವನ ಪರಿವಾರದವರ ಹೃದಯವು ಅವರಿಗೆ ವಿರುದ್ಧವಾಗಿ ಕಠಿಣಗೊಂಡಿತು. ಅವರು, “ಇದೇನು ನಾವು ಮಾಡಿದ್ದು? ನಮಗೆ ದಾಸರಾಗಿದ್ದ ಇಸ್ರಾಯೇಲರನ್ನು ಹೊರಟು ಹೋಗುವುದಕ್ಕೆ ಬಿಟ್ಟೆವಲ್ಲಾ” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇತ್ತ ಫರೋಹನಿಗೆ ಇಸ್ರಯೇಲರು ಓಡಿಹೋದರೆಂಬ ಸುದ್ದಿ ಮುಟ್ಟಿತು. ಅವರ ಬಗ್ಗೆ ಅವನ ಹಾಗು ಅವನ ಪರಿವಾರದವರ ಮನಸ್ಸು ಮಾರ್ಪಟ್ಟಿತು. “ನಮಗೆ ಗುಲಾಮರಾಗಿದ್ದ ಇಸ್ರಯೇಲರನ್ನು ನಾವೇಕೆ ಹೋಗಗೊಟ್ಟೆವು?” ಎಂದು ನೊಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಇಸ್ರೇಲರು ತಪ್ಪಿಸಿಕೊಂಡರೆಂಬ ವರದಿಯನ್ನು ಕೇಳಿದಾಗ, ಫರೋಹನ ಮತ್ತು ಅವನ ಅಧಿಕಾರಿಗಳ ಮನಸ್ಸುಗಳು ಬದಲಾದವು. ಫರೋಹನು, “ಇಸ್ರೇಲರನ್ನು ನಾವು ಯಾಕೆ ಹೋಗಲು ಬಿಟ್ಟೆವು? ಅಯ್ಯೋ, ನಾವೀಗ ನಮ್ಮ ಗುಲಾಮರನ್ನು ಕಳೆದುಕೊಂಡೆವಲ್ಲಾ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಜನರು ಓಡಿಹೋದರೆಂಬ ವಿಷಯ ಈಜಿಪ್ಟಿನ ಅರಸನಿಗೆ ತಿಳಿಯಿತು. ಆಗ ಫರೋಹನ ಮತ್ತು ಅವನ ಸೇವಕರ ಹೃದಯವು ಅವರಿಗೆ ವಿರೋಧವಾಗಿ ತಿರುಗಿಕೊಂಡಿತು. ಅವರು, “ಇಸ್ರಾಯೇಲರು ನಮ್ಮ ಸೇವೆ ಮಾಡುವುದನ್ನು ಬಿಟ್ಟು ಹೋಗಿಬಿಡುವಂತೆ ನಾವು ಏಕೆ ಮಾಡಿದೆವು?” ಎಂದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 14:5
9 ತಿಳಿವುಗಳ ಹೋಲಿಕೆ  

ಆತನು ಆ ದೇಶದವರ ಹೃದಯವನ್ನು ಮಾರ್ಪಡಿಸಿದ್ದರಿಂದ ಅವರು ಆತನ ಜನರನ್ನು ದ್ವೇಷಿಸಿ ಆತನ ಸೇವಕರನ್ನು ಕುಯುಕ್ತಿಯಿಂದ ನಡಿಸಿದರು.


ಐಗುಪ್ತ್ಯರು - ನಾವೆಲ್ಲರು ಸಾಯುತ್ತೇವಲ್ಲಾ ಅಂದುಕೊಂಡು ಇಸ್ರಾಯೇಲ್ಯರನ್ನು ತಮ್ಮ ದೇಶದಿಂದ ತ್ವರೆಯಾಗಿ ಕಳುಹಿಸಿಬಿಡುವದಕ್ಕೆ ಅಪೇಕ್ಷೆಪಟ್ಟು ಅವರನ್ನು ಬಲಾತ್ಕರಿಸಿದರು.


ನಾನು ಫರೋಹನ ಹೃದಯವನ್ನು ಕಠಿಣಪಡಿಸುವೆನಾದದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು; ಆಗ ನಾನು ಫರೋಹನಲ್ಲಿಯೂ ಅವನ ಸೈನ್ಯದಲ್ಲಿಯೂ ಪ್ರಖ್ಯಾತಿಗೊಳ್ಳುವೆನು. ನಾನೇ ಯೆಹೋವನೆಂಬದು ಐಗುಪ್ತ್ಯರಿಗೆ ತಿಳಿದುಬರುವದು ಎಂದು ಹೇಳಿದನು. ಯೆಹೋವನು ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ನಡೆದರು.


ಆಗ ಫರೋಹನು ತನ್ನ ರಥಬಲವನ್ನು ಸಿದ್ಧಪಡಿಸಿಕೊಂಡು ತನ್ನ ಭಟರೊಡನೆ ಹೊರಟನು.


ನಾವು ಇವರನ್ನು ಹಿಂದಟ್ಟಿ ಹಿಡಿಯುವೆವು, ಅವರ ಸೊತ್ತನ್ನು ಅಪಹರಿಸಿ ಹಂಚಿಕೊಳ್ಳುವೆವು, ಅವರಲ್ಲಿ ನಮ್ಮ ಕೋರಿಕೆಯನ್ನು ತೀರಿಸಿಕೊಳ್ಳುವೆವು, ನಾವು ಕತ್ತಿಯನ್ನು ಹಿರಿದು ಭುಜಬಲದಿಂದ ಅವರನ್ನು ಸಂಹಾರ ಮಾಡುವೆವು ಎಂಬದಾಗಿ ನಮ್ಮ ಶತ್ರುಗಳು ಮಾತಾಡಿಕೊಳ್ಳುತ್ತಿದ್ದರು.


ಯಾಕೋಬನು ಓಡಿಹೋದ ವರ್ತಮಾನವು ಮೂರನೆಯ ದಿನದಲ್ಲಿ ಲಾಬನನಿಗೆ ತಿಳಿದುಬರಲು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು