Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 14:8 - ಕನ್ನಡ ಸತ್ಯವೇದವು J.V. (BSI)

8 ಯೆಹೋವನು ಐಗುಪ್ತದೇಶದ ಅರಸನಾದ ಫರೋಹನ ಹೃದಯವನ್ನು ಕಠಿಣಪಡಿಸಿದ್ದದರಿಂದ ಅವನು ಇಸ್ರಾಯೇಲ್ಯರನ್ನು ಬೆನ್ನಟ್ಟಿಹೋದನು. ಇಸ್ರಾಯೇಲ್ಯರು ಅಟ್ಟಹಾಸದಿಂದ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನು ಐಗುಪ್ತ ದೇಶದ ಅರಸನಾದ ಫರೋಹನ ಹೃದಯವನ್ನು ಕಠಿಣಪಡಿಸಿದ್ದರಿಂದ ಅವನು ಇಸ್ರಾಯೇಲರನ್ನು ಬೆನ್ನಟ್ಟಿಹೋದನು. ಆದರೆ ಇಸ್ರಾಯೇಲರು ಯುದ್ಧಸನ್ನದ್ಧರಾಗಿ ಹೊರಟು ಬಂದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಈಜಿಪ್ಟ್ ರಾಜ ಫರೋಹನ ಹೃದಯವನ್ನು ಸರ್ವೇಶ್ವರ ಕಠಿಣಪಡಿಸಿದ್ದರಿಂದ ಅವನು ಇಸ್ರಯೇಲರನ್ನು ಬೆನ್ನಟ್ಟಿಹೋದನು. ಇತ್ತ ಅಟ್ಟಹಾಸದಿಂದ ಹೊರಟಿದ್ದರು ಇಸ್ರಯೇಲರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಇಸ್ರೇಲರು ಕ್ರಮಬದ್ಧವಾಗಿ ಹೆಜ್ಜೆಹಾಕುತ್ತಾ ಧೈರ್ಯದಿಂದ ಹೋಗುತ್ತಿದ್ದರು. ಆದರೆ ಈಜಿಪ್ಟಿನ ಅರಸನಾದ ಫರೋಹನ ಹೃದಯವನ್ನು ಯೆಹೋವನು ಕಠಿಣಗೊಳಿಸಿದ್ದರಿಂದ ಅವನು ಇಸ್ರೇಲರನ್ನು ಬೆನ್ನಟ್ಟಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಈಜಿಪ್ಟಿನ ಅರಸನಾದ ಫರೋಹನ ಹೃದಯವನ್ನು ಯೆಹೋವ ದೇವರು ಕಠಿಣ ಮಾಡಿದ್ದರಿಂದ ಅವನು ಇಸ್ರಾಯೇಲರನ್ನು ಹಿಂದಟ್ಟಿದನು. ಆದರೆ ಇಸ್ರಾಯೇಲರು ಧೈರ್ಯದಿಂದ ಹೊರಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 14:8
21 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ ಜನರೇ, ಮತ್ತು ಯೆಹೂದ್ಯ ಮತಾವಲಂಭಿಗಳೇ, ಕೇಳಿರಿ. ನಮ್ಮ ಇಸ್ರಾಯೇಲ್ ಜನರ ದೇವರು ನಮ್ಮ ಪಿತೃಗಳನ್ನು ಆರಿಸಿಕೊಂಡು ನಮ್ಮ ಜನರು ಐಗುಪ್ತದೇಶದಲ್ಲಿ ಪ್ರವಾಸವಾಗಿದ್ದಾಗ ಅವರನ್ನು ವೃದ್ಧಿಗೆ ತಂದು ಭುಜಬಲದಿಂದ ಆ ದೇಶದೊಳಗಿಂದ ಬರಮಾಡಿದನು.


ಮೊದಲನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಅಂದರೆ ಪಸ್ಕಹಬ್ಬದ ಮರುದಿನದಲ್ಲಿ ಇಸ್ರಾಯೇಲ್ಯರು ಐಗುಪ್ತ್ಯರ ಎದುರಿನಲ್ಲೇ ಅಟ್ಟಹಾಸದಿಂದ ರಮ್ಸೇಸಿನಿಂದ ಹೊರಟರು.


ಭುಜಬಲವನ್ನೂ ಶಿಕ್ಷಾಹಸ್ತವನ್ನೂ ಮಹಾಭೀತಿಗಳನ್ನೂ ಮಹತ್ಕಾರ್ಯಗಳನ್ನೂ ಉತ್ಪಾತಗಳನ್ನೂ ಪ್ರಯೋಗಿಸಿ


ನಾನು ಫರೋಹನ ಹೃದಯವನ್ನು ಕಠಿಣಪಡಿಸುವೆನಾದದರಿಂದ ಅವನು ಅವರನ್ನು ಬೆನ್ನಟ್ಟಿ ಬರುವನು; ಆಗ ನಾನು ಫರೋಹನಲ್ಲಿಯೂ ಅವನ ಸೈನ್ಯದಲ್ಲಿಯೂ ಪ್ರಖ್ಯಾತಿಗೊಳ್ಳುವೆನು. ನಾನೇ ಯೆಹೋವನೆಂಬದು ಐಗುಪ್ತ್ಯರಿಗೆ ತಿಳಿದುಬರುವದು ಎಂದು ಹೇಳಿದನು. ಯೆಹೋವನು ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ನಡೆದರು.


ಯೆಹೋವನು ಭುಜಬಲದಿಂದ ನಮ್ಮನ್ನು ಐಗುಪ್ತದೇಶದಿಂದ ಬಿಡಿಸಿದ ಸಂಗತಿಯನ್ನು ನೀವು ಜ್ಞಾಪಕದಲ್ಲಿಟ್ಟುಕೊಳ್ಳುವದಕ್ಕೆ ಈ ಪದ್ಧತಿಯು ಕೈಗೆ ಕಟ್ಟಿಕೊಂಡಿರುವ ದಾರದಂತೆಯೂ ಹುಬ್ಬುಗಳ ನಡುವೆ ಕಟ್ಟಿಕೊಂಡಿರುವ ಜ್ಞಾಪಕಪಟ್ಟಿಯಂತೆಯೂ ಇರುವದು.


ಅದಕ್ಕೆ ಯೆಹೋವನು - ನಾನು ಫರೋಹನಿಗೆ ಮಾಡುವದನ್ನು ನೀನು ಈಗ ನೋಡುವಿ. ಅವನು ನನ್ನ ಭುಜಬಲದಿಂದ ಅವರನ್ನು ಹೋಗಗೊಡಿಸುವನು; ನನ್ನ ಭುಜಬಲದಿಂದ ಪೀಡಿತನಾಗಿ ಅವರನ್ನು ತನ್ನ ದೇಶದಿಂದ ಹೊರಡಿಸುವನು ಅಂದನು.


ನೀನು ಬಹಳವಾಗಿ ಕನಿಕರಿಸಿ ನನ್ನ ಪ್ರಾಣವನ್ನು ಪಾತಾಳತಲದಿಂದ ತಪ್ಪಿಸಿದ್ದೀಯಲ್ಲಾ.


ಆದರೆ ಅವರ ವಿರೋಧಿಗಳು ಹಮ್ಮಿನಿಂದ ತಪ್ಪಾದ ಭಾವನೆ ಮಾಡಿಕೊಂಡು - ಇದು ನಮ್ಮ ಭುಜಬಲದಿಂದಲೇ ಹೊರತು ಯೆಹೋವನಿಂದ ಆಗಲಿಲ್ಲ ಅಂದುಕೊಂಡಾರೆಂದು ನಾನು ಹಿಂದೆಗೆದೆನು ಎಂಬದೇ.


ಆತನು - ಈ ಜನರಿಗೆ ಯುದ್ಧಪ್ರಾಪ್ತವಾದರೆ ಅವರು ಧೈರ್ಯಗೆಟ್ಟು ಐಗುಪ್ತದೇಶಕ್ಕೆ ಹಿಂದಿರುಗಾರು ಅಂದುಕೊಂಡನು. ಇಸ್ರಾಯೇಲ್ಯರು ಯುದ್ಧಸನ್ನದ್ಧರಾಗಿ ಐಗುಪ್ತದೇಶದಿಂದ ಹೊರಟರು.


ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಐಗುಪ್ತದೇಶದಿಂದ ಬಿಡಿಸಿದನಾದದರಿಂದ ಆತನ ನಿಯಮವನ್ನು ಕುರಿತು ನೀವು ಮಾತಾಡಬೇಕೆಂಬದಕ್ಕಾಗಿ ಈ ಆಚಾರವು ನಿಮಗೆ ಕೈಯಲ್ಲಿ ಕಟ್ಟಿಕೊಂಡಿರುವ ದಾರದಂತೆಯೂ ಹುಬ್ಬುಗಳ ನಡುವೆ ಕಟ್ಟಿಕೊಂಡಿರುವ ಜ್ಞಾಪಕಪಟ್ಟಿಯಂತೆಯೂ ಇರುವದು.


ಯೆಹೋವನು ಮೋಶೆಗೆ ಇಂತೆಂದನು - ನೀನು ಐಗುಪ್ತ ದೇಶಕ್ಕೆ ತಿರಿಗಿ ಬಂದಾಗ ನಾನು ನಿನಗೆ ತೋರಿಸಿಕೊಟ್ಟ ಮಹತ್ಕಾರ್ಯಗಳನ್ನೆಲ್ಲಾ ಫರೋಹನ ಮುಂದೆ ಮಾಡಬೇಕು. ಆದರೂ ನಾನು ಅವನ ಹೃದಯವನ್ನು ಕಠಿಣಪಡಿಸುವೆನಾದದರಿಂದ ಅವನು ಜನರನ್ನು ಹೋಗಗೊಡಿಸುವದಿಲ್ಲ.


ಆದರೂ ಯೆಹೋವನು ಮೋಶೆಗೆ ಹೇಳಿದ್ದಂತೆಯೇ ಆಯಿತು; ಯೆಹೋವನು ಫರೋಹನ ಹೃದಯವನ್ನು ಕಠಿಣ ಮಾಡಿದ್ದರಿಂದ ಅವನು ಅವರ ಮಾತಿಗೆ ಕಿವಿಗೊಡದೆಹೋದನು.


ಆದರೂ ಯೆಹೋವನು ಫರೋಹನ ಹೃದಯವನ್ನು ಕಠಿಣಪಡಿಸಿದದರಿಂದ ಅವರಿಗೆ ಅಪ್ಪಣೆ ಕೊಡುವದಕ್ಕೆ ಫರೋಹನು ಒಪ್ಪಲಿಲ್ಲ.


ಶ್ರೇಷ್ಠವಾದ ಆರುನೂರು ರಥಗಳನ್ನೂ ಐಗುಪ್ತದೇಶದ ಎಲ್ಲಾ ರಥಗಳನ್ನೂ ತೆಗೆದುಕೊಂಡು ಹೋದನು. ಆ ಎಲ್ಲಾ ರಥಗಳಲ್ಲಿ ಭಟರಿದ್ದರು.


ನಾನಂತೂ ಐಗುಪ್ತ್ಯರ ಹೃದಯಗಳನ್ನು ಕಠಿಣಪಡಿಸುವೆನಾದದರಿಂದ ಅವರು ಇವರ ಹಿಂದೆ ಸಮುದ್ರದೊಳಗೆ ಹೋಗುವರು; ಆಗ ನಾನು ಫರೋಹನಲ್ಲಿಯೂ ಅವನ ಸಮಸ್ತ ಸೈನ್ಯದಲ್ಲಿಯೂ ರಥಗಳಲ್ಲಿಯೂ ಕುದುರೆಗಳಲ್ಲಿಯೂ ಪ್ರಖ್ಯಾತಿಗೊಳ್ಳುವೆನು.


ನಾವು ಇವರನ್ನು ಹಿಂದಟ್ಟಿ ಹಿಡಿಯುವೆವು, ಅವರ ಸೊತ್ತನ್ನು ಅಪಹರಿಸಿ ಹಂಚಿಕೊಳ್ಳುವೆವು, ಅವರಲ್ಲಿ ನಮ್ಮ ಕೋರಿಕೆಯನ್ನು ತೀರಿಸಿಕೊಳ್ಳುವೆವು, ನಾವು ಕತ್ತಿಯನ್ನು ಹಿರಿದು ಭುಜಬಲದಿಂದ ಅವರನ್ನು ಸಂಹಾರ ಮಾಡುವೆವು ಎಂಬದಾಗಿ ನಮ್ಮ ಶತ್ರುಗಳು ಮಾತಾಡಿಕೊಳ್ಳುತ್ತಿದ್ದರು.


ಅವರ ಮನಸ್ಸನ್ನು ಮಂಕುಮಾಡುವಿ, ಅವರಿಗೆ ನಿನ್ನ ಶಾಪವು ತಗಲಲಿ!


ನೀವು ಐಗುಪ್ತ್ಯರಿಗೆ ದಾಸರಾಗಿರಬಾರದೆಂದು ನಿಮ್ಮನ್ನು ಅವರ ದೇಶದೊಳಗಿಂದ ಬರಮಾಡಿದ ನಿಮ್ಮ ದೇವರಾದ ಯೆಹೋವನು ನಾನೇ; ನಿಮ್ಮನ್ನು ಕುಗ್ಗಿಸಿದ ನೊಗವನ್ನು ಮುರಿದು ನೀವು ನೆಟ್ಟಗೆ ನಿಂತು ನಡೆಯುವಂತೆ ಮಾಡಿದೆನಲ್ಲವೇ.


ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆ ಇಸ್ರಾಯೇಲ್ಯರು ಅವರೆಲ್ಲರನ್ನೂ ಕರುಣೆಯಿಲ್ಲದೆ ಸಂಹರಿಸಿಬಿಡುವ ಹಾಗೆ ಆತನು ತಾನೇ ಆ ಜನರ ಹೃದಯಗಳನ್ನು ಕಠಿಣಪಡಿಸಿ ಯುದ್ಧಕ್ಕೆ ಬರಮಾಡಿದನು.


ನಾನು ಯಾಬೀನನ ಸೇನಾಪತಿಯಾದ ಸೀಸೆರನನ್ನೂ ಅವನ ಸೈನ್ಯರಥಗಳನ್ನೂ ನಿನ್ನ ಬಳಿಗೆ ಕೀಷೋನ್ ಹಳ್ಳಕ್ಕೆ ಎಳೆದುಕೊಂಡು ಬಂದು ನಿನ್ನ ಕೈಗೆ ಒಪ್ಪಿಸುವೆನು ಎಂದು ಆಜ್ಞಾಪಿಸಿದ್ದಾನೆ ಅಂದಳು.


ತನ್ನ ಪ್ರಜೆಯು ಉಲ್ಲಾಸದಿಂದಲೂ ತಾನು ಆರಿಸಿಕೊಂಡವರು ಉತ್ಸಾಹಧ್ವನಿಯಿಂದಲೂ ಹೊರಗೆ ಬರುವಂತೆ ಮಾಡಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು