Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 15:15 - ಕನ್ನಡ ಸತ್ಯವೇದವು J.V. (BSI)

15 ಫಿಲಿಷ್ಟಿಯರಿಗೆ ಸಂಕಟವಾಯಿತು; ಎದೋಮ್ಯರ ಕುಲಪತಿಗಳು ಕಳವಳಗೊಂಡರು; ಮೋವಾಬ್ಯರ ಮುಖಂಡರು ಗಡಗಡನೆ ನಡುಗುತ್ತಾರೆ; ಕಾನಾನ್ ದೇಶದವರು ಕರಗಿಹೋದರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಎದೋಮ್ಯರ ಪ್ರಭುಗಳು ದಿಗ್ಭ್ರಮೆಗೊಳ್ಳುವರು; ಮೋವಾಬ್ಯರ ಸೈನಿಕರು ನಡುಗುವರು; ಕಾನಾನಿನ ನಿವಾಸಿಗಳೆಲ್ಲರೂ ಕರಗಿ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಕಳವಳಗೊಂಡರು ಎದೋಮ್ಯರ ಕುಲನಾಯಕರು ಗಡಗಡನೆ ನಡುಗುತ್ತಿಹರು ಮೋವಾಬ್ಯರ ಮುಖಂಡರು. ಕರಗಿ ನೀರಾಗಿ ಹೋದರು ಕಾನಾನ್ ನಾಡಿನವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆಗ ಎದೋಮಿನ ಕುಟುಂಬಗಳು ಭಯಭೀತರಾಗುವರು. ಮೋವಾಬಿನ ನಾಯಕರು ಭಯದಿಂದ ನಡುಗುವರು. ಕಾನಾನಿನ ಜನರು ತಮ್ಮ ಧೈರ್ಯವನ್ನು ಕಳೆದುಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆಗ ಎದೋಮಿನ ಪ್ರಭುಗಳು ದಿಗ್ಭ್ರಮೆಗೊಳ್ಳುವರು; ಕಂಪನವು ಮೋವಾಬಿನ ಬಲಿಷ್ಠರನ್ನು ಹಿಡಿಯುವುದು; ಕಾನಾನಿನ ನಿವಾಸಿಗಳೆಲ್ಲಾ ಕರಗಿ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 15:15
24 ತಿಳಿವುಗಳ ಹೋಲಿಕೆ  

ಯೊರ್ದನಿನ ಪಶ್ಚಿಮದಲ್ಲಿದ್ದ ಎಲ್ಲಾ ಅಮೋರಿಯರ ಅರಸರೂ ಸಮುದ್ರದ ಬಳಿಯಲ್ಲಿದ್ದ ಸರ್ವ ಕಾನಾನ್ ರಾಜರೂ ಯೆಹೋವನು ಇಸ್ರಾಯೇಲ್ಯರ ಮುಂದೆ ಯೊರ್ದನನ್ನು ಬತ್ತಿಸಿ ಅವರನ್ನು ದಾಟಿಸಿದನೆಂದು ಕೇಳಲು ಅವರ ಎದೆಯೊಡೆದು ಹೋಯಿತು. ಇಸ್ರಾಯೇಲ್ಯರ ನಿವಿುತ್ತವಾಗಿ ಅವರಿಗೆ ಧೈರ್ಯವಿಲ್ಲವಾಯಿತು.


ನಮ್ಮ ಎದೆಯೊಡೆದು ಹೋಯಿತು; ನಿಮ್ಮನ್ನು ಎದುರಿಸುವ ಧೈರ್ಯವು ಒಬ್ಬನಲ್ಲಿಯೂ ಇಲ್ಲ. ನಿಮ್ಮ ದೇವರಾದ ಯೆಹೋವನೊಬ್ಬನೇ ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ದೇವರು.


ಆಕೆಯು ಮಾಳಿಗೆಹತ್ತಿ ಅವರ ಬಳಿಗೆ ಬಂದು ಹೇಳಿದ್ದೇನಂದರೆ - ಯೆಹೋವನು ಈ ದೇಶವನ್ನು ನಿಮಗೆ ಕೊಟ್ಟಿರುವದನ್ನು ಬಲ್ಲೆನು. ನಿಮ್ಮ ನಿವಿುತ್ತ ನಮಗೆ ಮಹಾಭೀತಿಯುಂಟಾಗಿದೆ; ದೇಶದ ನಿವಾಸಿಗಳೆಲ್ಲರೂ ಕಂಗೆಟ್ಟುಹೋಗಿದ್ದಾರೆ.


ಸೇಯೀರ್ ದೇಶದಲ್ಲಿ ವಾಸವಾಗಿರುವ ನಿಮ್ಮ ಬಂಧುಗಳಾದ ಏಸಾವನ ವಂಶದವರ ದೇಶವನ್ನು ದಾಟುವದಕ್ಕಿದ್ದೀರಷ್ಟೆ. ಅವರು ನಿಮಗೆ ಅಂಜುವರು; ನೀವು ಅವರ ಸಂಗಡ ಯುದ್ಧಕ್ಕೆ ಹೋಗದೆ ಬಹಳ ಜಾಗರೂಕತೆಯಿಂದಿರಬೇಕು.


ಸ್ಥಳಕುಲನಾಮಗಳ ಪ್ರಕಾರ ಏಸಾವನಿಂದ ಹುಟ್ಟಿದ ಕುಲಪತಿಗಳ ಹೆಸರುಗಳು ಯಾವವಂದರೆ - ತಿಮ್ನಕುಲಪತಿ, ಅಲ್ವಾಕುಲಪತಿ, ಯೆತೇತಕುಲಪತಿ,


ಇಗೋ, ಕೂಷಾನಿನ ಗುಡಾರಗಳು ಸಂಕಟಪಡುತ್ತಿವೆ, ವಿುದ್ಯಾನ್ ದೇಶದ ಡೇರೆಗಳು ನಡುಗುತ್ತಿವೆ.


ನಗರಿಯು ಬರಿದಾಗಿದೆ, ಬಟ್ಟಬರಿದಾಗಿ ಬೀಳುಬಿದ್ದಿದೆ; ಎದೆಯು ನೀರಾಗಿ ಹೋಗಿದೆ, ಮೊಣಕಾಲುಗಳು ಅದರುತ್ತವೆ, ಎಲ್ಲರ ಸೊಂಟಗಳಿಗೂ ವೇದನೆಯಾಗಿದೆ, ಎಲ್ಲರ ಮುಖಗಳೂ ಬಾಡಿವೆ.


ಏಕೆ ನರಳಾಡುತ್ತೀ ಎಂದು ಅವರು ನಿನ್ನನ್ನು ಕೇಳಲು ನೀನು ಅವರಿಗೆ - ದುರ್ವಾರ್ತೆಯ ನಿವಿುತ್ತ ನರಳುತ್ತೇನೆ; ಇಗೋ, ವಿಪತ್ತು ಬಂತು; ಎಲ್ಲರ ಹೃದಯವು ಕರಗಿ ನೀರಾಗುವದು; ಎಲ್ಲರ ಕೈ ಜೋಲು ಬೀಳುವದು, ಎಲ್ಲರ ಮನಸ್ಸು ಕುಂದುವದು, ಎಲ್ಲರ ಮೊಣಕಾಲು ನೀರಿನಂತೆ ಚಂಚಲವಾಗುವದು; ಇಗೋ, ಬಂತು, ಆಯಿತು; ಇದು ಕರ್ತನಾದ ಯೆಹೋವನ ನುಡಿ ಎಂದು ಉತ್ತರಕೊಡು.


ಐಗುಪ್ತದ ವಿಷಯವಾದ ದೈವೋಕ್ತಿ. ಇಗೋ, ಯೆಹೋವನು ವೇಗಮೇಘವಾಹನನಾಗಿ ಐಗುಪ್ತಕ್ಕೆ ಬರುವನು; ಆತನು ಸಮ್ಮುಖನಾದಾಗ ಐಗುಪ್ತದ ವಿಗ್ರಹಗಳು ನಡುಗುವವು. ಐಗುಪ್ತ್ಯರ ಹೃದಯವು ತಮ್ಮೊಳಗೆ ಕರಗಿ ನೀರಾಗುವದು.


ಅದರಿಂದ ಎಲ್ಲರ ಕೈ ಜೋಲುಬೀಳುವದು, ಎಲ್ಲರ ಹೃದಯ ಕರಗಿ ನೀರಾಗುವದು;


ಹೊಗೆಯು [ಗಾಳಿಯಿಂದ] ಹೇಗೋ ಹಾಗೆ ಅವರು ಆತನಿಂದ ಹಾರಿಹೋಗುವರು; ಬೆಂಕಿಯ ಮುಂದೆ ಮೇಣವು ಕರಗಿ ಲಯವಾಗಿ ಹೋಗುವಂತೆ ದೇವರ ಎದುರಿನಲ್ಲಿ ದುಷ್ಟರು ನಾಶವಾಗಿ ಹೋಗುವರು.


ಆಗ ಸಿಂಹಹೃದಯರಾದ ಶೂರರ ಎದೆಯೂ ಕರಗಿ ನೀರಾಗುವದು. ನಿನ್ನ ತಂದೆಯು ರಣವೀರನೆಂದೂ ಅವನ ಸಂಗಡ ಇದ್ದವರು ಪರಾಕ್ರಮಶಾಲಿಗಳೆಂದೂ ಎಲ್ಲಾ ಇಸ್ರಾಯೇಲ್ಯರು ಬಲ್ಲರಷ್ಟೆ.


ಬೆನ್ಯಾಮೀನ್ಯರ ಗಿಬೆಯದಲ್ಲಿ ಕಾವಲಿದ್ದ ಸೌಲನ ಸೈನಿಕರು ಫಿಲಿಷ್ಟಿಯರ ದಂಡು ಕಳವಳಗೊಂಡು ಚದರಿ ಹೋಗುತ್ತಿರುವದನ್ನು ಕಂಡರು.


ನನ್ನ ಜೊತೆಯಲ್ಲಿ ಬಂದಿದ್ದ ಸಹೋದರರು ಜನರನ್ನು ಎದೆಗೆಡಿಸಿದರು. ನಾನಾದರೋ ನನ್ನ ದೇವರಾದ ಯೆಹೋವನನ್ನೇ ಸಂಪೂರ್ಣವಾಗಿ ನಂಬಿಕೊಂಡು ಯಥಾರ್ಥವನ್ನೇ ಹೇಳಿದೆನು.


ಇದಲ್ಲದೆ ಅವರು ಯೆಹೋಶುವನಿಗೆ - ಯೆಹೋವನು ನಿಜವಾಗಿ ಆ ದೇಶವನ್ನೆಲ್ಲಾ ನಮಗೆ ಕೊಟ್ಟಿದ್ದಾನೆ; ಅದರ ನಿವಾಸಿಗಳೆಲ್ಲಾ ನಮ್ಮ ನಿವಿುತ್ತ ಕಂಗೆಟ್ಟು ಹೋಗಿದ್ದಾರೆ ಎಂದು ತಿಳಿಸಿದರು.


ಮತ್ತು - ಯಾವನಾದರೂ ಧೈರ್ಯಕಡಿಮೆಯಾಗಿ ಅಂಜಿಕೊಂಡರೆ ಅವನೂ ಮನೆಗೆ ಹೋಗಲಿ; ಅವನು ದಿಗಿಲುಪಡುವದರಿಂದ ಅವನ ಜೊತೆಗಾರರೂ ದಿಗಿಲು ಪಟ್ಟಾರು ಎಂದು ಹೇಳಬೇಕು.


ಏಸಾವನ ವಂಶಸ್ಥರ ಕುಲಪತಿಗಳು. ಏಸಾವನ ಚೊಚ್ಚಲಮಗನಾದ ಎಲೀಫಜನಿಂದ ಹುಟ್ಟಿದವರು ಯಾರಂದರೆ - ತೇಮಾನ ಕುಲಪತಿ, ಓಮಾರಕುಲಪತಿ, ಚೆಫೋಕುಲಪತಿ, ಕೆನಜ್‍ಕುಲಪತಿ,


ನೋಡಿ ಬೆರಗಾದರು; ತಲ್ಲಣಿಸಿ ಓಡಿ ಹೋದರು.


ದಮಸ್ಕವನ್ನು ಕುರಿತದ್ದು. ಹಮಾತಿಗೂ ಅರ್ಪಾದಿಗೂ ಆಶಾಭಂಗವಾಯಿತು; ಅವು ಅಶುಭಸಮಾಚಾರವನ್ನು ಕೇಳಿ ಕರಗಿಹೋಗಿವೆ; ಸಮುದ್ರಕ್ಕೆ ತಲ್ಲಣಹತ್ತಿದೆ, ಸುಮ್ಮನಿರಲಾರದು.


ಕೋರಹಕುಲಪತಿ, ಗತಾಮಕುಲಪತಿ, ಅಮಾಲೇಕಕುಲಪತಿ ಇವರೇ. ಈ ಕುಲಪತಿಗಳು ಎದೋಮ್ಯರ ದೇಶದಲ್ಲಿ ಆದಾ ಎಂಬಾಕೆಯ ಸಂತತಿಯಲ್ಲಿ ಹುಟ್ಟಿದವರು.


ಆತನು ನಿಂತುಕೊಳ್ಳಲು ಭೂವಿುಯು ಕಂಪಿಸುತ್ತದೆ; ದೃಷ್ಟಿಸಲು ಜನಾಂಗಗಳು ಬೆದರುತ್ತವೆ; ಪುರಾತನ ಪರ್ವತಗಳು ಸೀಳಿಹೋಗುತ್ತವೆ; ಸನಾತನ ಗಿರಿಗಳು ಕುಸಿದುಬೀಳುತ್ತವೆ; ಆತನ ಆಗಮನವು ಅನಾದಿಯಿಂದ ಹೀಗೆಯೇ ಇರುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು