Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 15:5 - ಕನ್ನಡ ಸತ್ಯವೇದವು J.V. (BSI)

5 ಸಾಗರವು ಅವರನ್ನು ಮುಚ್ಚಿಬಿಟ್ಟಿತು; ಕಲ್ಲಿನಂತೆ ಧಡಲ್ಲೆಂದು ಸಮುದ್ರದ ತಳವನ್ನು ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಳವಾದ ಸಾಗರವು ಅವರನ್ನು ಮುಚ್ಚಿಬಿಟ್ಟಿತು. ಅವರು ಕಲ್ಲಿನಂತೆ ಸಮುದ್ರದ ತಳವನ್ನು ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಮುಚ್ಚಿಬಿಟ್ಟಿತವರನು ಸಮುದ್ರ ಸಾಗರವು ಸೇರಿದರವರು ಕಲ್ಲಿನೋಪಾದಿ ಕಡಲಿನ ತಳವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಸಾಗರವು ಅವರನ್ನು ಮುಚ್ಚಿಕೊಂಡಿತು; ಆಳವಾದ ನೀರಿನಲ್ಲಿ ಅವರು ಬಂಡೆಗಳಂತೆ ಮುಳುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಳವಾದ ಜಲರಾಶಿ ಅವರನ್ನು ಮುಚ್ಚಿಕೊಂಡವು. ಅವರು ಕಲ್ಲಿನಂತೆ ಸಮುದ್ರದ ತಳಕ್ಕೆ ಮುಳುಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 15:5
12 ತಿಳಿವುಗಳ ಹೋಲಿಕೆ  

ನಮ್ಮ ಪಿತೃಗಳು ಸಮುದ್ರ ಮಧ್ಯದಲ್ಲಿ ಒಣನೆಲದಲ್ಲೇ ಹಾದುಹೋಗುವಂತೆ ಅವರ ಮುಂದೆ ಸಮುದ್ರವನ್ನು ಭೇದಿಸಿದಿ. ಅವರನ್ನು ಹಿಂದಟ್ಟುವವರನ್ನು ಕಲ್ಲಿನಂತೆ ಮಹಾಜಲರಾಶಿಯ ತಳದಲ್ಲಿ ಮುಳುಗಿಸಿ ಬಿಟ್ಟಿ.


ಆದರೆ ನೀನು ಉಸುರುಗಾಳಿಯಿಂದ ಊದಲು ಸಮುದ್ರವು ಅವರನ್ನು ಮುಚ್ಚಿತು, ಅವರು ಮಹಾಸಾಗರದೊಳಗೆ ಸೀಸದ ಗುಂಡಿನಂತೆ ಮುಳುಗಿಹೋದರು.


ನೀರು ಮೊದಲಿನಂತೆ ಬಂದು ಆ ರಥಗಳನ್ನೂ ರಾಹುತರನ್ನೂ ಅವರ ಹಿಂದೆ ಸಮುದ್ರದೊಳಗೆ ಹೋಗಿದ್ದ ಫರೋಹನ ಸೈನ್ಯದವರೆಲ್ಲರನ್ನೂ ಮುಣುಗಿಸಿತು. ಅವರಲ್ಲಿ ಒಬ್ಬರಾದರೂ ಉಳಿಯಲಿಲ್ಲ.


ಈಗಲಾದರೋ ನೀನು ಸಮುದ್ರದಿಂದ ಹಾಳಾದಿ. ನಿನ್ನ ಸರಕುಗಳೂ ನಿನ್ನಲ್ಲಿ ಸೇರಿಕೊಂಡಿದ್ದ ಸಕಲ ಜನರೂ ಅಗಾಧಜಲದಲ್ಲಿ ಮುಣುಗಿಹೋದರು.


ಆಗ ಬಲಿಷ್ಠನಾದ ಒಬ್ಬ ದೇವದೂತನು ದೊಡ್ಡ ಬೀಸುವ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರದೊಳಗೆ ಹಾಕಿ - ಮಹಾ ಪಟ್ಟಣವಾದ ಬಾಬೆಲು ಹೀಗೆಯೇ ದಡದಡನೆ ಕೆಡವಲ್ಪಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ.


ಆದರೆ ನನ್ನಲ್ಲಿ ನಂಬಿಕೆಯಿಡುವ ಈ ಚಿಕ್ಕವರಲ್ಲಿ ಒಬ್ಬನಿಗೆ ಯಾವನಾದರೂ ಅಡ್ಡಿಯಾದರೆ ಅಂಥವನ ಕೊರಳಿಗೆ ಬೀಸುವ ಕಲ್ಲು ಕಟ್ಟಿ ಅವನನ್ನು ಆಳವಾದ ಸಮುದ್ರದಲ್ಲಿ ಮುಣುಗಿಸಿಬಿಡುವದು ಅವನಿಗೆ ಹಿತವಾಗುವದು.


ಆತನು ನಮ್ಮ ಕಡೆಗೆ ತಿರುಗಿಕೊಂಡು ನಮ್ಮನ್ನು ಕನಿಕರಿಸುವನು, ನಮ್ಮ ಅಪರಾಧಗಳನ್ನು ಅಣಗಿಸುವನು. [ದೇವರೇ,] ನಿನ್ನ ಜನರ ಪಾಪಗಳನ್ನೆಲ್ಲಾ ಸಮುದ್ರದ ತಳಕ್ಕೆ ಬಿಸಾಟುಬಿಡುವಿ.


ಇಕ್ಕಟ್ಟಿನಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ಆತನು ನನಗೆ ಸದುತ್ತರವನ್ನು ದಯಪಾಲಿಸಿದನು; ಪಾತಾಳದ ಗರ್ಭದೊಳಗಿಂದ ಕೂಗಿಕೊಂಡೆನು, ಆಹಾ, ನನ್ನ ಧ್ವನಿಯನ್ನು ಲಾಲಿಸಿದಿ.


ಗಾಬರಿಯೂ ಹೆದರಿಕೆಯೂ ಅವರನ್ನು ಹಿಡಿದವೆ. ನಿನ್ನ ಭುಜಬಲದ ದೆಸೆಯಿಂದ ಅವರು ಕಲ್ಲಿನಂತೆ ಸ್ತಬ್ಧರಾಗಿದ್ದಾರೆ. ಅಷ್ಟರಲ್ಲಿ ಯೆಹೋವನೇ, ನೀನು ಸಂಪಾದಿಸಿಕೊಂಡ ನಿನ್ನ ಪ್ರಜೆಗಳು ಸಾಗಿಹೋಗಿ ದೇಶವನ್ನು ಸೇರುವರು.


ಜಲರಾಶಿಯು ಅವರ ವಿರೋಧಿಗಳನ್ನು ಮುಚ್ಚಿಬಿಟ್ಟಿತು; ಒಬ್ಬನೂ ಉಳಿಯಲಿಲ್ಲ.


ಜಲನಿಧಿಗಳಾಗಲಿ ನೀರುತುಂಬಿದ ಬುಗ್ಗೆಗಳಾಗಲಿ ಇಲ್ಲದಿರುವಾಗ ನಾನು ಹುಟ್ಟಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು