Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 16:7 - ಕನ್ನಡ ಸತ್ಯವೇದವು J.V. (BSI)

7 ಹೊತ್ತಾರೆಯಲ್ಲಿಯೂ ಆತನ ಮಹಿಮೆಯು ನಿಮಗೆ ಕಾಣಬರುವದು. ನೀವು ಯೆಹೋವನ ಮೇಲೆ ಗುಣುಗುಟ್ಟುವ ಮಾತುಗಳು ಆತನಿಗೆ ಕೇಳಿಸಿದವು; ನಮ್ಮ ಮೇಲೆ ನೀವು ಗುಣುಗುಟ್ಟುವದೇನು? ನಾವು ಎಷ್ಟು ಮಾತ್ರದವರು ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮುಂಜಾನೆಯಲ್ಲಿ ಯೆಹೋವನ ಮಹಿಮೆಯು ನಿಮಗೆ ಕಾಣಿಸುವುದು, ಏಕೆಂದರೆ ನೀವು ಯೆಹೋವನಿಗೆ ವಿರೋಧವಾಗಿ ಗುಣುಗುಟ್ಟಿದ್ದನ್ನು ಆತನು ಕೇಳಿದ್ದಾನೆ. ನಮ್ಮ ಮೇಲೆ ನೀವು ಗುಣುಗುಟ್ಟುವುದೇನು? ನಾವು ಎಷ್ಟು ಮಾತ್ರದವರು?” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಬೆಳಿಗ್ಗೆಯೂ ಸ್ವಾಮಿಯ ತೇಜಸ್ಸು ನಿಮಗೆ ಕಾಣಬರುವುದು. ನೀವು ಸರ್ವೇಶ್ವರನ ವಿರುದ್ಧ ಗೊಣಗುಟ್ಟಿದ ಮಾತುಗಳು ಅವರಿಗೆ ಕೇಳಿಸಿವೆ. ನಾವು ಎಷ್ಟು ಮಾತ್ರದವರು ನೀವು ನಮ್ಮ ವಿರುದ್ಧ ಗೊಣಗುಟ್ಟಲು?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಾಳೆ ಬೆಳಿಗ್ಗೆ ನೀವು ಯೆಹೋವನ ಮಹಿಮೆಯನ್ನು ನೋಡುವಿರಿ. ನೀವು ಯೆಹೋವನ ಮೇಲೆ ಗುಣುಗುಟ್ಟಿದ್ದೀರಿ. ಆತನು ನಿಮ್ಮ ಗುಣುಗುಟ್ಟುವಿಕೆಯನ್ನು ಕೇಳಿದ್ದಾನೆ; ಆತನೇ ನಿಮಗೆ ಸಹಾಯ ಮಾಡುವನು. ನಮ್ಮ ಮೇಲೆ ನೀವು ಗುಣುಗುಟ್ಟುತ್ತಾ ಬರಲು ನಾವೆಷ್ಟರವರು? ನಿಮ್ಮನ್ನು ಈಜಿಪ್ಟಿನಿಂದ ಕರೆತಂದವನು ಯೆಹೋವನೇ. ಆತನೇ ನಿಮ್ಮ ಅಗತ್ಯತೆಗಳನ್ನು ಪೂರೈಸುವನು” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಬೆಳಿಗ್ಗೆ ಯೆಹೋವ ದೇವರ ಮಹಿಮೆಯನ್ನು ನೋಡುವಿರಿ. ಏಕೆಂದರೆ ಯೆಹೋವ ದೇವರಿಗೆ ವಿರೋಧವಾಗಿ ನೀವು ಗೊಣಗುಟ್ಟಿದ್ದನ್ನು ಅವರು ಕೇಳಿದ್ದಾರೆ. ನಮಗೆ ವಿರೋಧವಾಗಿ ನೀವು ಗೊಣಗುಟ್ಟುವ ಹಾಗೆ ನಾವು ಯಾರು?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 16:7
17 ತಿಳಿವುಗಳ ಹೋಲಿಕೆ  

ಯೆಹೋವನ ಮಹಿಮೆಯು ಗೋಚರವಾಗುವದು, ಎಲ್ಲಾ ಮನುಷ್ಯರೂ ಒಟ್ಟಿಗೆ ಅದನ್ನು ಕಾಣುವರು, ಯೆಹೋವನ ಬಾಯೇ ಇದನ್ನು ನುಡಿದಿದೆ ಎಂದು ಒಬ್ಬನು ಕೂಗುತ್ತಾನೆ.


ನೀನೂ ನಿನ್ನ ಸಮೂಹದವರೆಲ್ಲರೂ ಯೆಹೋವನಿಗೆ ವಿರೋಧವಾಗಿ ಕೂಡಿಕೊಂಡವರು; ಆರೋನನಿಗೆ ವಿರೋಧವಾಗಿ ಗುಣಗುಟ್ಟುವದೇನು ಎಂದು ಹೇಳಿದನು.


ಯೇಸು ಆಕೆಗೆ - ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವಿ ಎಂದು ನಾನು ನಿನಗೆ ಹೇಳಲಿಲ್ಲವೇ ಎಂದು ಉತ್ತರಕೊಟ್ಟನು.


ಯೇಸು ಅದನ್ನು ಕೇಳಿ - ಈ ರೋಗವು ಮರಣಕ್ಕಾಗಿ ಬಂದದ್ದಲ್ಲ; ಇದರಿಂದ ದೇವಕುಮಾರನಿಗೆ ಮಹಿಮೆ ಉಂಟಾಗುವಂತೆ ದೇವರ ಮಹಿಮೆಗೋಸ್ಕರ ಬಂದದ್ದು ಅಂದನು.


ಅದು ಸಮೃದ್ಧಿಯಾಗಿ ಹೂಬಿಟ್ಟು ಉತ್ಸಾಹ ಧ್ವನಿಮಾಡುವಷ್ಟು ಉಲ್ಲಾಸಿಸುವದು; ಲೆಬನೋನಿನ ಮಹಿಮೆಯೂ ಕರ್ಮೆಲಿನ ಮತ್ತು ಶಾರೋನಿನ ವೈಭವವೂ ಅದಕ್ಕೆ ದೊರೆಯುವವು; ಇವೆಲ್ಲಾ ಯೆಹೋವನ ಮಹಿಮೆಯನ್ನೂ ನಮ್ಮ ದೇವರ ವೈಭವವನ್ನೂ ಕಾಣುವವು.


ಆಗ ಮೇಘವು ದೇವದರ್ಶನದ ಗುಡಾರವನ್ನು ಮುಚ್ಚಿತು; ಯೆಹೋವನ ತೇಜಸ್ಸು ಗುಡಾರವನ್ನು ತುಂಬಿತು.


ಆರೋನನು ಇಸ್ರಾಯೇಲ್ಯರ ಸಮೂಹಕ್ಕೆಲ್ಲಾ ಈ ಮಾತುಗಳನ್ನು ತಿಳಿಸುತ್ತಿರುವಾಗ ಅವರು ಅರಣ್ಯದ ಕಡೆಗೆ ನೋಡಲಾಗಿ ಮೇಘದಲ್ಲಿ ಯೆಹೋವನ ತೇಜಸ್ಸು ಅವರಿಗೆ ಕಾಣಿಸಿತು.


ಸಮೂಹದವರೆಲ್ಲರೂ ಹೀಗೆ ಮೋಶೆ ಆರೋನರಿಗೆ ವಿರೋಧವಾಗಿ ಕೂಡಿದ್ದಾಗ ದೇವದರ್ಶನದ ಗುಡಾರದ ಕಡೆಗೆ ನೋಡಲಾಗಿ ಆಹಾ, ಮೇಘವು ಅದನ್ನು ಮುಚ್ಚಿಕೊಂಡಿತು, ಮತ್ತು ಯೆಹೋವನ ತೇಜಸ್ಸು ಹೊಳೆಯಿತು.


ಆದರೆ ಜನಸಮೂಹದವರೆಲ್ಲರೂ [ಕೇಳಲೊಲ್ಲದೆ] ಅವರನ್ನು ಕಲ್ಲೆಸೆದು ಕೊಲ್ಲಬೇಕೆಂದು ಹೇಳಿಕೊಳ್ಳುತ್ತಿರಲಾಗಿ ಯೆಹೋವನ ತೇಜಸ್ಸು ದೇವದರ್ಶನದ ಗುಡಾರದಲ್ಲಿ ಹೊಳೆದು ಇಸ್ರಾಯೇಲ್ಯರೆಲ್ಲರಿಗೂ ಕಾಣಿಸಿತು.


ಯೆಹೋವನ ತೇಜಸ್ಸು ಸೀನಾಯಿ ಬೆಟ್ಟದ ಮೇಲೆ ನಿಂತಿತು, ಮತ್ತು ಆ ಮೇಘವು ಆರು ದಿನಗಳವರೆಗೂ ಬೆಟ್ಟವನ್ನು ಮುಚ್ಚಿಕೊಂಡಿತ್ತು. ಏಳನೆಯ ದಿನದಲ್ಲಿ ಯೆಹೋವನು ಮೇಘದೊಳಗಿಂದ ಕೂಗಿ ಮೋಶೆಯನ್ನು ಕರೆದನು.


ಅವರಿಗೆ ಇಸ್ರಾಯೇಲ್ಯರ ದೇವರ ದರ್ಶನವಾಯಿತು. ಆಕಾಶಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟು ಆತನ ಪಾದಪೀಠವಾಗಿತ್ತು.


ನೀವು ಮಾಡಬೇಕೆಂದು ಯೆಹೋವನು ಆಜ್ಞಾಪಿಸಿದ್ದು ಇದೇ; ಅದರಂತೆ ನಡೆದರೆ ಯೆಹೋವನ ಮಹಿಮೆ ನಿಮಗೆ ಪ್ರತ್ಯಕ್ಷವಾಗುವದು ಎಂದು ಹೇಳಿದನು.


ಇಸ್ರಾಯೇಲ್ಯರ ಗುಣುಗುಟ್ಟುವಿಕೆಯು ನನಗೆ ಕೇಳಿಸಿತು. ನೀನು ಅವರಿಗೆ - ಸಾಯಂಕಾಲದಲ್ಲಿ ಮಾಂಸವನ್ನೂ ಹೊತ್ತಾರೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ತಿನ್ನುವಿರಿ; ಇದರಿಂದ ನಾನು ನಿಮ್ಮ ದೇವರಾದ ಯೆಹೋವನೆಂಬದು ನಿಮಗೆ ಗೊತ್ತಾಗುವದೆಂದು ಹೇಳಬೇಕು ಎಂಬದೇ.


ಮೋಶೆ - ಯೆಹೋವನು ಸಾಯಂಕಾಲದ ಹೊತ್ತಿನಲ್ಲಿ ನಿಮಗೆ ಮಾಂಸಾಹಾರವನ್ನೂ ಹೊತ್ತಾರೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನೀವು ಗುಣುಗುಟ್ಟುವ ಮಾತುಗಳು ಯೆಹೋವನಿಗೆ ಕೇಳಿಸಿದವು; ಆ ಗುಣುಗುಟ್ಟುವಿಕೆ ಯೆಹೋವನಿಗೇ ಹೊರತು ನಮಗಲ್ಲ; ನಾವು ಎಷ್ಟು ಮಾತ್ರದವರು ಎಂದನು.


ನಾನು ಯಾರನ್ನು ಮೆಚ್ಚಿದ್ದೇನೋ ಅವನ ಕೋಲು ಚಿಗುರುವುದು. ಇಸ್ರಾಯೇಲ್ಯರು ನಿವ್ಮಿುಬ್ಬರಿಗೆ ವಿರೋಧವಾಗಿ ಮಾಡುವ ಗುಣುಗುಟ್ಟುವಿಕೆಯು ನನಗೆ ಇನ್ನು ಕೇಳಿಸದಂತೆ ಹೀಗೆ ನಿಲ್ಲಿಸಿಬಿಡುತ್ತೇನೆ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು