Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 17:2 - ಕನ್ನಡ ಸತ್ಯವೇದವು J.V. (BSI)

2 ಕುಡಿಯುವದಕ್ಕೆ ನೀರಿಲ್ಲದ ಕಾರಣ ಜನರು ಮೋಶೆಯ ಸಂಗಡ ವಾದಿಸುತ್ತಾ - ನಮಗೆ ಕುಡಿಯುವದಕ್ಕೆ ನೀರು ದೊರಕಿಸಿಕೊಡಬೇಕು ಎಂದು ಹೇಳಿದಾಗ ಮೋಶೆ - ನೀವು ನನ್ನ ಸಂಗಡ ವಾದಿಸುವದೇನು? ಯೆಹೋವನನ್ನು ಯಾಕೆ ಪರೀಕ್ಷಿಸುತ್ತೀರಿ ಎಂದು ಅವರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆದಕಾರಣ ಜನರು ಮೋಶೆಯ ಮೇಲೆ ಗುಣುಗುಟ್ಟುತ್ತಾ, “ನಮಗೆ ಕುಡಿಯುವುದಕ್ಕೆ ನೀರು ದೊರಕಿಸಿಕೊಡಬೇಕು” ಎಂದು ಗದ್ದಲವೆಬ್ಬಿಸಲು, ಮೋಶೆಯು ಅವರಿಗೆ, “ನನ್ನ ಸಂಗಡ ಏಕೆ ಜಗಳವಾಡುತ್ತೀರಿ? ಯೆಹೋವನನ್ನು ಏಕೆ ಪರೀಕ್ಷಿಸುತ್ತೀರಿ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅಲ್ಲಿ ಕುಡಿಯುವುದಕ್ಕೆ ನೀರಿರಲಿಲ್ಲ. ಜನರು ಮೋಶೆಯ ಸಂಗಡ ಜಗಳವಾಡುತ್ತಾ, “ನಮಗೆ ಕುಡಿಯುವುದಕ್ಕೆ ನೀರು ತೋರಿಸಬೇಕು,” ಎಂದು ಹೇಳಿದರು. ಆಗ ಮೋಶೆ, “ನೀವು ನನ್ನ ಸಂಗಡ ವಾದಿಸುವುದೇಕೆ? ಸರ್ವೇಶ್ವರನನ್ನು ಏಕೆ ಪರೀಕ್ಷಿಸುತ್ತೀರಿ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆದ್ದರಿಂದ ಅವರು ಮೋಶೆಗೆ ವಿರುದ್ಧವಾಗಿ ದಂಗೆ ಎದ್ದು ಅವನೊಡನೆ ವಾಗ್ವಾದ ಮಾಡತೊಡಗಿದರು. “ನಮಗೆ ಕುಡಿಯಲು ನೀರು ಕೊಡು” ಎಂದು ಅವರು ಕೇಳಿದರು. ಮೋಶೆ ಅವರಿಗೆ, “ನೀವು ಯಾಕೆ ನನಗೆ ವಿರುದ್ಧವಾಗಿ ದಂಗೆಯೆದ್ದಿರಿ? ನೀವು ಯಾಕೆ ಯೆಹೋವನನ್ನು ಪರೀಕ್ಷಿಸುತ್ತಿದ್ದೀರಿ? ಯೆಹೋವನು ನಮ್ಮೊಡನೆ ಇಲ್ಲವೆಂದು ನೀವು ಭಾವಿಸುತ್ತೀರೋ?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆದಕಾರಣ ಜನರು ಮೋಶೆಯ ಸಂಗಡ ವಿವಾದ ಮಾಡಿ, “ನಮಗೆ ಕುಡಿಯುವುದಕ್ಕೆ ನೀರು ಕೊಡು,” ಎಂದರು. ಮೋಶೆಯು ಅವರಿಗೆ, “ಏಕೆ ನನ್ನ ಸಂಗಡ ವಿವಾದ ಮಾಡುತ್ತೀರಿ? ಯೆಹೋವ ದೇವರನ್ನು ಏಕೆ ಪರೀಕ್ಷಿಸುತ್ತೀರಿ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 17:2
32 ತಿಳಿವುಗಳ ಹೋಲಿಕೆ  

ಅವರಲ್ಲಿ ಕೆಲವರು ಕರ್ತನನ್ನು ಪರೀಕ್ಷಿಸಿ ಸರ್ಪಗಳಿಂದ ನಾಶವಾದರು; ನಾವು ಪರೀಕ್ಷಿಸದೆ ಇರೋಣ.


ಆತನನ್ನು ಪದೇಪದೇ ಪರೀಕ್ಷಿಸಿ ಇಸ್ರಾಯೇಲ್ಯರ ಸದಮಲಸ್ವಾವಿುಯನ್ನು ಕರಕರೆಗೊಳಿಸಿದರು.


ಅವರು ಇಷ್ಟಭೋಜನವನ್ನು ಕೇಳಿಕೊಳ್ಳುವಲ್ಲಿ ಸಂಶಯಾತ್ಮರಾಗಿ ದೇವರನ್ನು ಪರೀಕ್ಷಿಸಿದರು.


ನೀವು ಮಸ್ಸದಲ್ಲಿ ನಿಮ್ಮ ದೇವರಾದ ಯೆಹೋವನನ್ನು ಪರೀಕ್ಷಿಸಿದಂತೆ ಇನ್ನು ಮುಂದೆ ಮಾಡಬೇಡಿರಿ.


ಅವರು ಅರಣ್ಯದಲ್ಲಿ ನನ್ನನ್ನು ಪರೀಕ್ಷಿಸಿ ಶೋಧಿಸಿ ನಾಲ್ವತ್ತು ವರುಷ ನಾನು ನಡಿಸುತ್ತಿದ್ದ ಕೃತ್ಯಗಳನ್ನು ನೋಡಿದರು.


ಆಗ ಆಹಾಜನು, ನಾನು ಕೇಳಿಕೊಳ್ಳುವದೇ ಇಲ್ಲ. ಯೆಹೋವನನ್ನು ಪರೀಕ್ಷಿಸುವದಿಲ್ಲ ಅಂದನು.


ಅದಕ್ಕೆ ಯೇಸು - ನಿನ್ನ ದೇವರಾಗಿರುವ ಕರ್ತನನ್ನು ಪರೀಕ್ಷಿಸಬಾರದು ಎಂಬದಾಗಿ ಸಹ ಬರೆದದೆ ಅಂದನು.


ಅಲ್ಲಿ ಅವರು ನನ್ನನ್ನು ಪರೀಕ್ಷಿಸಿದರು; ಅವರು ನನ್ನ ಮಹತ್ಕಾರ್ಯಗಳನ್ನು ನೋಡಿದರೂ ನನ್ನನ್ನು ಶೋಧಿಸಿದರು.


ಆಗ ಅವರು ದೇವರಿಗೂ ಮೋಶೆಗೂ ವಿರೋಧವಾಗಿ ಮಾತಾಡುತ್ತಾ - ನೀವು ನಮ್ಮನ್ನು ಈ ಮರಳುಕಾಡಿನಲ್ಲಿ ಕೊಲ್ಲಬೇಕೆಂದು ಐಗುಪ್ತದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ; ಈ ನಿಸ್ಸಾರವಾದ ಆಹಾರವನ್ನು ತಿಂದು ತಿಂದು ನಮಗೆ ಬೇಸರವಾಯಿತೆಂದು ಹೇಳುವವರಾದರು.


ಹೀಗಿರುವದರಿಂದ ನಮ್ಮ ಪಿತೃಗಳಾಗಲಿ ನಾವಾಗಲಿ ಹೊರಲಾರದ ನೊಗವನ್ನು ನೀವು ಶಿಷ್ಯರ ಹೆಗಲಿನ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವದು ಯಾಕೆ?


ಆಗ ಪೇತ್ರನು ಆಕೆಗೆ - ನೀವಿಬ್ಬರೂ ಕರ್ತನ ಆತ್ಮನನ್ನು ಪರೀಕ್ಷಿಸುವದಕ್ಕೆ ಯಾಕೆ ಒಡಂಬಟ್ಟಿರಿ? ಅಗೋ, ನಿನ್ನ ಗಂಡನನ್ನು ಹೂಣಿಟ್ಟವರು ಬಂದು ಬಾಗಿಲಿನಲ್ಲಿ ಕಾಲಿಟ್ಟಿದ್ದಾರೆ, ನಿನ್ನನ್ನೂ ಹೊತ್ತುಕೊಂಡು ಹೋಗುವರು ಎಂದು ಹೇಳಿದನು.


ಅದಕ್ಕೆ ಯೇಸು - ನಿನ್ನ ದೇವರಾಗಿರುವ ಕರ್ತನನ್ನು ಪರೀಕ್ಷಿಸಬಾರದೆಂದು ಹೇಳಿಯದೆ ಎಂತ ಉತ್ತರಕೊಟ್ಟನು.


ಈಗ ಅಹಂಕಾರಿಗಳನ್ನು ಧನ್ಯರೆಂದು ಕೊಂಡಾಡಬೇಕಾಗಿ ಬಂತು; ಹೌದು, ದುಷ್ಕರ್ಮಿಗಳು ಏಳಿಗೆಗೆ ಬಂದಿದ್ದಾರೆ, ದೇವರನ್ನು ಪರೀಕ್ಷಿಸಿದರೂ ಸುರಕ್ಷಿತರಾಗಿದ್ದಾರೆ ಅಂದುಕೊಂಡಿದ್ದೀರಲ್ಲಾ.


ಅರಣ್ಯದಲ್ಲಿ ಆಶಾತುರರಾಗಿ ಅಡವಿಯಲ್ಲಿ ದೇವರನ್ನು ಪರೀಕ್ಷಿಸಿದರು.


ಆದರೂ ಅವರು ಪರಾತ್ಪರನಾದ ದೇವರನ್ನು ಪರೀಕ್ಷಿಸಿ ಅವಿಧೇಯರಾದರು. ಆತನ ವಿಧಿಗಳನ್ನು ಕೈಕೊಳ್ಳದೆ


ಈ ಮನುಷ್ಯರೆಲ್ಲರು ಐಗುಪ್ತದೇಶದಲ್ಲಿಯೂ ಅರಣ್ಯದಲ್ಲಿಯೂ ನಾನು ನಡಿಸಿರುವ ಮಹತ್ಕಾರ್ಯಗಳನ್ನೂ ನನ್ನ ಮಹಿಮೆಯನ್ನೂ ನೋಡಿದರೂ ನನ್ನ ಮಾತಿಗೆ ಕಿವಿಗೊಡದೆ ಪದೇಪದೇ ನನ್ನನ್ನು ಪರೀಕ್ಷಿಸಿದದರಿಂದ


ಇಸ್ರಾಯೇಲ್ಯರು - ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ ಎಂದು ಯೆಹೋವನನ್ನು ಅಲ್ಲಿ ಪರೀಕ್ಷಿಸಿದ್ದರಿಂದ ಮೋಶೆ ಆ ಸ್ಥಳಕ್ಕೆ ಮಸ್ಸಾ ಎಂತಲೂ ಅವರು ವಿವಾದ ಮಾಡಿದ್ದರಿಂದ ಮೆರೀಬಾ ಎಂತಲೂ ಹೆಸರಿಟ್ಟನು.


ಅವರಲ್ಲಿ ಕಿರಿಯವನು ತಂದೆಗೆ - ಅಪ್ಪಾ, ಆಸ್ತಿಯಲ್ಲಿ ನನಗೆ ಬರತಕ್ಕ ಪಾಲನ್ನು ಕೊಡು ಎಂದು ಕೇಳಿಕೊಳ್ಳಲು ತಂದೆಯು ಬದುಕನ್ನು ಅವರಿಗೆ ಹಂಚಿಕೊಟ್ಟನು.


ಜನರು - ನಾವೇನು ಕುಡಿಯಬೇಕೆಂದು ಮೋಶೆಯ ಮೇಲೆ ಗುಣುಗುಟ್ಟುತ್ತಿರಲು ಮೋಶೆಯು ಯೆಹೋವನನ್ನು ಪ್ರಾರ್ಥಿಸಿದನು.


ನ್ಯಾಯಸ್ಥಾಪನೆಗೋಸ್ಕರ ನಮಗೊಬ್ಬ ಅರಸನನ್ನು ನೇವಿುಸಿಕೊಡು ಎಂಬ ಮಾತಿಗೆ ಸಮುವೇಲನು ದುಃಖಪಟ್ಟು ಯೆಹೋವನನ್ನು ಪ್ರಾರ್ಥಿಸಲು ಆತನು ಅವನಿಗೆ -


ಇಸ್ರಾಯೇಲ್ಯರೆಲ್ಲರೂ ಮೋಶೆ ಆರೋನರಿಗೆ ವಿರೋಧವಾಗಿ ಗುಣುಗುಟ್ಟಿ - ನಾವು ಐಗುಪ್ತದೇಶದಲ್ಲಿಯೇ ಸತ್ತಿದ್ದರೆ ಎಷ್ಟೋ ಮೇಲಾಗಿತ್ತು; ಈ ಅರಣ್ಯದಲ್ಲಿಯಾದರೂ ಸತ್ತಿದ್ದರೆ ಮೇಲಾಗಿತ್ತು.


ಫರೋಹನೂ ಅವನ ಸೇವಕರೂ ನಮ್ಮನ್ನು ನೋಡಿ ಹೇಸಿಕೊಳ್ಳುವಂತೆ ನೀವು ಮಾಡಿದಿರಿ; ನಮ್ಮನ್ನು ಸಂಹಾರಮಾಡುವದಕ್ಕೆ ಅವರ ಕೈಗೆ ಕತ್ತಿಯನ್ನು ಕೊಟ್ಟ ಹಾಗಾಯಿತು; ಯೆಹೋವನು ನಿಮ್ಮ ತಪ್ಪನ್ನು ವಿಚಾರಿಸಿ ತಕ್ಕ ಶಿಕ್ಷೆಯನ್ನು ವಿಧಿಸಲಿ ಎಂದು ಹೇಳಿದರು.


ಮೋಶೆ - ಯೆಹೋವನು ಸಾಯಂಕಾಲದ ಹೊತ್ತಿನಲ್ಲಿ ನಿಮಗೆ ಮಾಂಸಾಹಾರವನ್ನೂ ಹೊತ್ತಾರೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನೀವು ಗುಣುಗುಟ್ಟುವ ಮಾತುಗಳು ಯೆಹೋವನಿಗೆ ಕೇಳಿಸಿದವು; ಆ ಗುಣುಗುಟ್ಟುವಿಕೆ ಯೆಹೋವನಿಗೇ ಹೊರತು ನಮಗಲ್ಲ; ನಾವು ಎಷ್ಟು ಮಾತ್ರದವರು ಎಂದನು.


ನಿಮ್ಮ ಹಿರಿಯರು ಅರಣ್ಯದಲ್ಲಿರುವ ಮೆರೀಬದಲ್ಲಿ ಮಸ್ಸಾದಿನದಲ್ಲಿ ಮಾಡಿದಂತೆ ನೀವು ನಿಮ್ಮ ಹೃದಯವನ್ನು ಕಠಿಣಮಾಡಿಕೊಳ್ಳಬೇಡಿರಿ.


ಆದರೆ ಅವರು ಬೇಗನೆ ಆತನ ಕೆಲಸಗಳನ್ನು ಮರೆತು ಆತನ ಸಂಕಲ್ಪವನ್ನು ಕಾದಿರದೆ


ತಬೇರಾ, ಮಸ್ಸಾ, ಕಿಬ್ರೋತ್‍ಹತಾವಾ ಎಂಬ ಸ್ಥಳಗಳಲ್ಲಿಯೂ ನೀವು ಯೆಹೋವನಿಗೆ ಕೋಪವನ್ನು ಹುಟ್ಟಿಸಿದಿರಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು